ಸುದ್ದಿ

ಮೆಡಿಸಿನ್ ಫ್ಯಾಕ್ಟರಿಯಲ್ಲಿ ರಿಯಾಕ್ಟರ್ ಬ್ಲಾಸ್ಟ್- ವಿಷಾಪೂರಿತ ಅನಿಲ ಸೋರಿಕೆಯಿಂದ ಗ್ರಾಮಸ್ಥರು ಕಂಗಾಲು……!

106

ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್‍ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ ಮೇಲೆ ಬಿದ್ದಿದೆ. ಇದರಿಂದ ಗ್ರಾಮದ ನಾಲ್ವರು ಗಾಯಗೊಂಡಿದ್ದಾರೆ.

ಬಾಯ್ಲರ್ ನಿಂದ ವಿಷಾನಿಲ ಸೋರಿಕೆಯಾಗಿ ಸುತ್ತಮುತ್ತಲ ಜನರ ಉಸಿರಾಟಕ್ಕೆ ತೊಂದರೆಯಾಗಿದೆ. ಹಾಗೆಯೇ ಘಟನೆಯಿಂದ ಸುಮಾರು ಮೂರು ಕಿಮೀ ದೂರದಷ್ಟು ಸ್ಫೋಟದ ತೀವ್ರತೆಗೆ ಭೂಮಿ ನಡುಗಿದ ಅನುಭವವಾಗಿದೆ ಎನ್ನಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ಶಾಸಕ ಜ್ಯೋತಿಗಣೇಶ್ ಸೇರಿದಂತೆ ಎಲ್ಲಾ ಅಧಿಕಾರಿಗಳು ಆಗಮಿಸಿದ್ದಾರೆ.ಅವಘಡ ಸಂಭವಿಸುವ ವೇಳೆ ಫ್ಯಾಕ್ಟರಿಯಲ್ಲಿ ಯಾವ ಸಿಬ್ಬಂದಿಯೂ ಇರಲಿಲ್ಲ. ಬೆಳಗ್ಗಿನ ಸಮಯವಾಗಿದ್ದರಿಂದ ತಿಂಡಿಗೆ ಸಿಬ್ಬಂದಿ ತೆರಳಿದ್ದರು. ಹೀಗಾಗಿ ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.

ಅಲ್ಲದೆ ಈ ಹಿಂದೆ ಕೂಡ ಈ ರೀತಿ ಬಾಯ್ಲರ್ ಸ್ಫೋಟಗೊಂಡಿತ್ತು. ಆಗ ಕೂಡ ವಿಷಾನಿಲ ಸೋರಿಕೆಯಾಗಿ ಗ್ರಾಮಸ್ಥರು ಉಸಿರಾಡಲು ಕಷ್ಟಪಟ್ಟಿದ್ದರು. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಖಾನೆಗಳಿಂದ ಈ ಭಾಗದ ಸುತ್ತಮುತ್ತ ವಾಸಿಸುತ್ತಿರುವ ಜನರು ತೊಂದರೆ ಅನುಭವಿಸುವಂತಗಿದೆ. ಅನಾರೋಗ್ಯದಿಂದ ಬಳಲುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.ಸದ್ಯ ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೇಗೆ ಸ್ಫೋಟ ಸಂಭವಿಸಿತು ಎನ್ನುವ ಬಗ್ಗೆ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    3 ಕೋಟಿ ರೂಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡಿದ, ಕಾರಣ ಮಾತ್ರ ಶಾಕಿಂಗ್.

    ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ಸುದ್ದಿ

    ಭಾರತದೊಂದಿಗೆ ಪಾಕ್ ವ್ಯಾಪಾರ ಬಂದ್…..!

    ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…

  • ಆರೋಗ್ಯ

    ಹಣೆಗೆ ತಿಲಕವಿಡುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.

  • ಸಿನಿಮಾ

    ಕನ್ನಡ ಚಿತ್ರಗಳ ಹಿಂದಿನ ಎಲ್ಲಾ ದಾಖಲೆಗಳು ದೂಳಿಪಟ!ಕೆಜಿಎಫ್ ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

    ಕನ್ನಡ ಚಿತ್ರರಂಗ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದ ಗಮನ ಸೆಳೆದಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕೆಜಿಎಫ್ ಶುಕ್ರವಾರದಂದು ವಿಶ್ವದಾದ್ಯಂತ ತೆರೆಕಂಡಿದ್ದು, ಸಿನಿ ಪ್ರೇಕ್ಷಕರಿಂದ ಫುಲ್ ಮಾರ್ಕ್ಸ್ ಪಡೆದಿದೆ. ಕನ್ನಡ ಚಿತ್ರವೊಂದು ಇದೇ ಮೊದಲ ಬಾರಿಗೆ ಐದು ಭಾಷೆಗಳಲ್ಲಿ ಎರಡು ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಈ ಚಿತ್ರದ ಮೊದಲ ದಿನದ ಕಲೆಕ್ಷನ್ ಬರೋಬ್ಬರಿ 25 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ. ಕೆಜಿಎಫ್ ಚಿತ್ರ 100 ಕೋಟಿ ಕ್ಲಬ್ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲವೆಂದು ಚಿತ್ರ…

  • ಉಪಯುಕ್ತ ಮಾಹಿತಿ

    ನಿಮ್ಮ ಉಡುದಾರದ ಬಗ್ಗೆ ನಿಮಗೇ ಗೊತ್ತೇ ಇಲ್ದೇ ಇರೋ ಮಾಹಿತಿ.!ತಿಳಿಯಲು ಮುಂದೆ ಓದಿ ಯಾರ್ ಕಟ್ಟಿಲ್ವೋ, ಅವ್ರಿಗೆ ಶೇರ್ ಮಾಡ್ರಪ್ಪೋ…

    ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…