ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ಚಿಪ್ಪು ತಿನ್ನಲು ಯೋಗ್ಯವಲ್ಲ. ಆದರೆ ಚಿಪ್ಪಿನಿಂದ ಕೆಲವರು ಕಲಾಕೃತಿಗಳನ್ನು ತಯಾರಿಸುತ್ತಾರೆ. ಇನ್ನು ಕೆಲವರು ಮನೆಗೆ ಹಾವುಗಳು ಬರುವುದು ಬೇಡ ಎಂದು ಹೂವಿನ ಗಿಡಗಳಲ್ಲಿ ಮೊಟ್ಟೆ ಚಿಪ್ಪನ್ನುಇಟ್ಟಿರುತ್ತಾರೆ.
ಆದರೆ ಮೊಟ್ಟೆ ಚಿಪ್ಪಿನಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ ನಿಮ್ಗೆ…ಮುಂದೆ ಓದಿ…
ಈ ಲೇಖನದಲ್ಲಿ ಮೊಟ್ಟೆ ಚಿಪ್ಪಿನಿಂದ ಚರ್ಮಕ್ಕೆ ಆಗುವ ಲಾಭಗಳ ಬಗ್ಗೆ ನಿಮಗೆ ತಿಳಿಸಿಕೊಡಲಾಗುವುದು. ಹೌದು, ಮೊಟ್ಟೆ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಆಮ್ಲವು ಚರ್ಮವನ್ನು ಸ್ವಚ್ಛಗೊಳಿಸಿ ಕಾಂತಿಯನ್ನು ನೀಡುವುದು. ಇದರಿಂದ ಮುಂದಿನ ಸಲ ನೀವು ಆಮ್ಲೆಟ್ ಮಾಡುವಾಗ ಮೊಟ್ಟೆಯ ಚಿಪ್ಪನ್ನು ಬಿಸಾಡಬೇಡಿ. ಅದನ್ನು ಬಳಸುವುದು ಹೇಗೆಂದು ತಿಳಿಯಲು ಓದುತ್ತಾ ಸಾಗಿ….
ಚರ್ಮದ ರಂಧ್ರಗಳಲ್ಲಿ ಸ್ವಚ್ಛಗೊಳಿಸುವುದು:-
ಮೊಟ್ಟೆಯ ಚಿಪ್ಪನ್ನು ಬಳಸುವುದರಿಂದ ಚರ್ಮದ ರಂಧ್ರಗಳು, ಚರ್ಮವು ಸ್ವಚ್ಛವಾಗುವುದು. ಇದರಿಂದ ಆರೋಗ್ಯಕರ ಹಾಗೂ ಸುಂದರ ಚರ್ಮವು ನಿಮ್ಮದಾಗುವುದು. ಮೊಟ್ಟೆಯ ಚಿಪ್ಪಿನ ಹುಡಿಯನ್ನು ಸ್ವಲ್ಪ ಲಿಂಬೆ ರಸ ಹಾಗೂ ಜೇನುತುಪ್ಪದೊಂದಿಗೆ ಬೆರೆಸಿಕೊಂಡು ದಪ್ಪಗಿನ ಪೇಸ್ಟ್ ಮಾಡಿಕೊಳ್ಳಿ. ಇದನ್ನು ಮುಖಕ್ಕೆ ಹಚ್ಚಿಕೊಂಡು ಸ್ವಲ್ಪ ಸಮಯ ಬಿಟ್ಟು ತೊಳೆಯಿರಿ. ಇದು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ಕಾಂತಿಯುತ ಚರ್ಮ ನೀಡುವುದು.
ಚರ್ಮ ಹೊಳೆಯುತ್ತೆ :-
ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ನೈಸರ್ಗಿಕ ಪ್ರೋಟೀನ್ ಮತ್ತು ವಿಟಮಿನ್ಗಳು ತ್ವಚೆಯನ್ನು ಯುವಕರಂತೆ ಹಾಗೂ ಹೊಳೆಯುವಂತೆ ಮಾಡುವುದು. ಎರಡು ಚಮಚ ಮೊಟ್ಟೆಯ ಚಿಪ್ಪಿನ ಹುಡಿಗೆ ಜೇನುತುಪ್ಪ ಮತ್ತು ಸ್ವಲ್ಪ ಕಡಲೆ ಹಿಟ್ಟು ಹಾಕಿ ಬೆರೆಸಿಕೊಳ್ಳಿ. ಈ ಮಾಸ್ಕ್ ಅನ್ನು ಮುಖಕ್ಕೆ ಹಚ್ಚಿಕೊಂಡು 15 ನಿಮಿಷ ಬಿಟ್ಟು ಮುಖ ತೊಳೆಯಿರಿ. ವಾರದಲ್ಲಿ ಎರಡರಿಂದ ಮೂರು ಸಲ ಈ ಮಾಸ್ಕ್ ಅನ್ನು ಬಳಸಿದರೆ ಯುವ ಹಾಗೂ ಕಾಂತಿಯುತ ತ್ವಚೆಯು ನಿಮ್ಮದಾಗುವುದು.
ಚರ್ಮವನ್ನು ಆಳವಾಗಿ ಸ್ವಚ್ಛಗೊಳಿಸುವುದು :-
ಮೊಟ್ಟೆಯ ಚಿಪ್ಪು ಚರ್ಮದ ರಂಧ್ರಗಳನ್ನು ಸ್ವಚ್ಛಗೊಳಿಸಿ ತ್ವಚೆಯನ್ನು ಆಳವಾಗಿ ಸ್ವಚ್ಛ ಮಾಡುವುದು. ಮೊಟ್ಟೆಯ ಚಿಪ್ಪಿನ ಮಾಸ್ಕ್ನಿಂದ ಚರ್ಮದ ರಂಧ್ರದಲ್ಲಿ ಸೇರಿರುವಂತಹ ಧೂಳು ಹಾಗೂ ಇತರ ಕಲ್ಮಶಗಳನ್ನು ದೂರ ಮಾಡಬಹುದು. ಇದರಿಂದ ರಂಧ್ರ ತುಂಬಿಕೊಳ್ಳುವುದು ತಪ್ಪುತ್ತದೆ. ಮೊಟ್ಟೆಯ ಚಿಪ್ಪು ಚರ್ಮಕ್ಕೆ ತುಂಬಾ ಲಾಭದಾಯಕ ಮತ್ತು ಮೊಡವೆಗಳು ಬರದಂತೆ ತಡೆಯುತ್ತದೆ.
ಚರ್ಮದ ಬಣ್ಣ ಹೆಚ್ಚಿಸುವುದು :-
ಮೊಟ್ಟೆಯ ಚಿಪ್ಪು ನೈಸರ್ಗಿಕವಾಗಿ ಚರ್ಮದ ಬಣ್ಣವನ್ನು ಹಗುರಗೊಳಿಸುವುದು ಮತ್ತು ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ಚರ್ಮವು ಹೊಳೆಯುವಂತೆ ಮಾಡುವುದು. ಸ್ವಲ್ಪ ಮೊಟ್ಟೆಯ ಚಿಪ್ಪಿನ ಹುಡಿಗೆ ಲಿಂಬೆರಸ ಮತ್ತು ಇದ್ದಿಲಿನ ಹುಡಿಯನ್ನು ಹಾಕಿಕೊಳ್ಳಿ. ಚರ್ಮದ ಬಣ್ಣ ಹೆಚ್ಚಿಸುವುದು ಇನ್ನು ಇದನ್ನು ಮುಖಕ್ಕೆ ಹಚ್ಚಿಕೊಂಡು ಸುಮಾರು 30 ನಿಮಿಷ ಬಿಟ್ಟು ತಣ್ಣೀರಿನಿಂದ ತೊಳೆಯಿರಿ. ಮೊಟ್ಟೆಯ ಚಿಪ್ಪಿನಲ್ಲಿ ಇರುವಂತಹ ಬ್ಲೀಚಿಂಗ್ ಮತ್ತು ಬಣ್ಣವನ್ನು ಹಗುರಗೊಳಿಸುವ ಗುಣವು ಸುಂದರ ಹಾಗೂ ಯೌವನಯುತ ಚರ್ಮವನ್ನು ನಿಮ್ಮದಾಗಿಸುವುದು.
ಇಷ್ಟೆಲ್ಲಾ ಓದಿದ ಮೇಲೆ ಮೊಟ್ಟೆ ಚಿಪ್ಪನ್ನು ಬಿಸಾಡುತ್ತೀರೋ, ಏನು ಮಾಡುತ್ತೀರೋ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..
ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….
ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…
ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…