ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲುಕಿನ ಒಂದು ಕುಗ್ರಾಮ, ಮಲ್ಲದ ಗುಡ್ಡ ಗ್ರಾಮದ ಒಂದು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ ಹುಡುಗ ರವಿ ಗೌಡ. ಇವರ ತಂದೆ ವೀರ ಭದ್ರಗೌಡ ಜೀವನಕ್ಕಾಗಿ ಕೃಷಿಯನ್ನು ಅವಲಂಬಿಸಿದ್ದಾರೆ.
ಹಳ್ಳಿ ಯುವಕ ರವಿ ಗೌಡರವರು ಸಣ್ಣ ರೈತ ಕುಟುಂಬದಲ್ಲಿ ಜನಿಸಿದ್ದರೂ, ಜೀವನದಲ್ಲಿ ಏನಾದ್ರೂ ಸಾಧನೆ ಮಾಡಬೇಕೆಂಬ ಹಂಬಲದಿಂದ, ಏನು ಮಾಡಬೇಕೆಂದು ಯೋಚಿಸುತ್ತಿದ್ದರು. ಇಂತಹ ಸಮಯದಲ್ಲಿ, ರವಿ ಗೌಡರ ಮಾವನವರಾದ ಚನ್ನನ ಗೌಡರವರು ಸಾಂಪ್ರದಾಯಿಕ ಪದ್ದತಿಯಲ್ಲಿ ಸಂಗ್ರಾಣಿ ಕಲ್ಲು ಎತ್ತುವುದನ್ನು ಅದೇ ಊರಿನ ಗರಡಿ ಮನೆಯಲ್ಲಿ ಅಭ್ಯಾಸ ಮಾಡುತ್ತಿದ್ದರು.
ಇದನ್ನು ಗಮನಿಸಿದ ರವಿಗೌಡ ತಾವು ಇದರಲ್ಲಿ ಏಕೆ ಸಾಧನೆ ಮಾಡಬಾರದೆಂದು ಯೋಚಿಸಿ, ಅಂದಿನಿಂದ ಅಂದರೆ ಅವರು 7ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದಾಗಲೇ ಸಂಗ್ರಾಣಿ ಕಲ್ಲು ಎತ್ತುವ ಅಭ್ಯಾಸ ಶುರು ಮಾಡಿದ್ದಾರೆ. ಇದಕ್ಕೆ ಅವರ ಮಾವನವರು ಮತ್ತು ಸ್ನೇಹಿತರು ಹಾಗೂ ಗರಡಿ ಮನೆಯವರು ಪ್ರೋತ್ಸಾಹ ಕೊಟ್ಟಿದ್ದಾರೆ.
ಇದರಿಂದ ಹೆಚ್ಚು ಪ್ರೆರಿಪಿತಗೊಂಡ ರವಿಗೌಡ ತಾವು 9ನೇ ತರಗತಿಯಲ್ಲಿದ್ದಾಗ ಸ್ಪರ್ಧೆಯಲ್ಲಿ ಭಾಗವಹಿಸಲು ಮುಂದಾಗಿ ವಿಜಯಿಯಾಗಿದ್ದಾರೆ.
ಇವರು ತಮ್ಮ 19 ನೇ ವಯಸ್ಸಿಗೆ ಕರ್ನಾಟಕದ ಎಲ್ಲಾ ಜಿಲ್ಲೆ ಹಾಗೂ ಎಲ್ಲಾ ಊರಿನ ಜಾತ್ರೆ ಮತ್ತು ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸೈ ಎನಿಸಿಕೊಂಡಿದ್ದಾರೆ.
ಕಲ್ಲು ಎತ್ತುವ ಸ್ಪರ್ಧೆ ಇಟ್ಟಾಗ ಘಟಾನು ಘಟಿಘಳ ಜೊತೆ ಭಾಗವಹಿಸಿ ಅವರಿಗೆ ಪೈ ಪೋಟಿ ಕೊಟ್ಟು ಪ್ರಥಮ ಸ್ಥಾನ ದ್ವೀತಿಯ ಸ್ಥಾನ ಹಾಗೂ ತೃತೀಯ ಸ್ಥಾನಗಳನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ಆದ್ರೆ ಈ ಹಳ್ಳಿ ಹುಡುಗ ತಮ್ಮ ಸಾಧನೆಯ ಹಾದಿಯಲ್ಲಿದ್ದಾಗ, ದುರಾದ್ರಷ್ಟವಶಾತ್ ಅವರ ತಲೆಗೆ ಅಗಾಧವಾದ ಪೆಟ್ಟು ತಾಗಿ, ವೈದ್ಯರು ಇನ್ನೂ 4 ವರ್ಷಗಳ ಕಾಲ, ನೀನು ಈ ಕಲ್ಲನ್ನು ಎತ್ತುವುದು ಬೇಡ ಎಂದು ಸಲಹೆ ಕೊಟ್ಟಿದ್ದಾರೆ.
ಇದರಿಂದ ಬಹಳ ನಿರಾಶೆ ಅನುಭವಿಸಿದ್ದಾರೆ ಯುವಕ ರವಿಗೌಡ. ಆದ್ರೆ ತಮ್ಮ ಚಿಕ್ಕ ವಯಸ್ಸಿನಲ್ಲೇ ಬಹಳ ದೊಡ್ಡ ಸಾಧನೆ ಮಾಡಿದ ಈ ಯುವಕನ ಹೆಸರು ಜನರ ಮನಸ್ಸಿನಲ್ಲಿ ಮಾಸದೆ ಇನ್ನು ಉಳಿದಿದ್ದು, ಇವರನ್ನು ಜನ ಚಿಕ್ಕ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ ಯುವಕ ಎಂದು ಈಗಲೂ ಹೊಗಳುತ್ತಿದ್ದಾರೆ.
ಇವರ ಸಾಧನೆಯನ್ನು ಅರಸಿ ಬೆಳ್ಳಿ ಕಡಗ ಸೇರಿದಂತೆ ಹಲವಾರು ಪ್ರಶಸ್ತಿ ಪದಕಗಳು ಇವರಿಗೆ ಬಂದಿವೆ. ಹಲವು ಕಾರ್ಯಕ್ರಮಗಳಲ್ಲಿ ಇವರ ಸಾಧನೆಯನ್ನು ಮೆಚ್ಚಿ ಸನ್ಮಾನಿಸಲಾಗಿದೆ.
ಇಂತಹ ಸಾಧನೆಯನ್ನು ಮಾಡಿರುವ ಈ ಯುವಕ ಈಗ ಮತ್ತೆ ಸಂಗ್ರಾಣಿ ಕಲ್ಲು ಎತ್ತುವುದನ್ನು ಶುರು ಮಾಡಿದ್ದಾರೆ. ಆರ್ಥಿಕ ಸಂಕಷ್ಟದಲ್ಲಿರುವ ಇಂತಹ ಹಳ್ಳಿ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ಕೊಟ್ಟು ಅವರಿಗೆ ಅವರ ಸಾಧನೆಯಲ್ಲಿ ಮುಂದುವರೆಯಲು ಸಹಾಯ ಮಾಡಿ ಎಂದು ಹಳ್ಳಿ ಹುಡುಗರ ತಂಡವು ಕೇಳಿಕೊಳ್ಳುತ್ತದೆ.
ಹಳ್ಳಿ ಹುಡುಗರ ತಂಡವು ನಿಮ್ಮಲ್ಲಿ ವಿನಂತಿಸಿಕೊಲ್ಲುವುದೆನೆಂದರೆ, ನಿಮ್ಮ ಜಿಲ್ಲೆ ಹಾಗೂ ಹಳ್ಳಿಗಳಲ್ಲಿ ನಡೆಯುವ ಯಾವುದೇ ಕಾರ್ಯಕ್ರಮ, ಜಾತ್ರೆಗಳಲ್ಲಿ ಇವರಿಗೆ ತಮ್ಮ ಪ್ರತಿಭೆಯನ್ನು ತೋರಿಸಲು ಅವಕಾಶ ಮಾಡಿಕೊಟ್ಟು ಇಂತಹ ಹಳ್ಳಿ ಯುವಕರನ್ನು ಬೆಳೆಸಿ ಪ್ರೋತ್ಸಾಹಿಸಿ.
ಇದರಿಂದ ನಮ್ಮ ಹಳ್ಳಿ ಸಾಂಪ್ರದಾಯಿಕ ಆಟಗಳು ಮುಂದಿನ ಪೀಳಿಗೆಗೆ ಉಳಿಯುವುದಲ್ಲದೆ ಬೇರೆ ಇಂತಹ ಹಳ್ಳಿ ಪ್ರತಿಭೆಗಳು ಮುಂದೆ ಬರಲು ಅವಕಾಶ ಮಾಡಿಕೊಟ್ಟಂತಾಗುತ್ತದೆ.
ಈ ಪ್ರತಿಭಾವಂತ ಹಳ್ಳಿ ಯುವಕ ರವಿ ಗೌಡ ಯಾರೂ ಗೊತ್ತಾ?
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.
ಕೊಯಮತ್ತೂರು ಜಿಲ್ಲೆಯ ಪೊಲ್ಲಾಚಿ ತಾಲೂಕಿನ ಶಾಲೆಯ ಶಿಕ್ಷಕಿಯೊಬ್ಬರು ದಲಿತ ಮಕ್ಕಳನ್ನು ಮೈನಸ್ ಎಂದು ಮೇಲ್ ಜಾತಿಯ ಮಕ್ಕಳನ್ನು ಪ್ಲಸ್ ಎಂದು ಕರೆದಿರುವುದು ಸಹ ಇದೀಗ ರಾಷ್ಟ್ರದಾದ್ಯಂತ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ ಜಾತಿವಿಷವನ್ನುಬೇರುಮಟ್ಟದಿಂದತೊಲಗಿಸಬೇಕುಎಂದುರಾಷ್ಟ್ರಾದಾದ್ಯಂತಎಲ್ಲಾರಾಜ್ಯಗಳಶಿಕ್ಷಣಇಲಾಖೆಗಳುಸಾಕಷ್ಟುಪ್ರಯತ್ನಪಡುತ್ತಿವೆ. ಆದರೆ, ಇಂತಹಸಂದರ್ಭದಲ್ಲಿತಮಿಳುನಾಡಿನಮಧುರೈಜಿಲ್ಲೆಯಹಲವುಖಾಸಗಿಶಾಲೆಗಳಲ್ಲಿಮಕ್ಕಳವಿದ್ಯಾರ್ಥಿಜೀವನದಿಂದಲೇಈವಿಷವನ್ನುಮತ್ತಷ್ಟುಬಲವಾಗಿಮನಸ್ಸಿನಆಳಕ್ಕೆಇಳಿಸುವಪ್ರಯತ್ನನಡೆಸಲಾಗುತ್ತಿದೆ. ಇಲ್ಲಿಶಿಶುವಿಹಾರದಿಂದಲೇಮಕ್ಕಳುಕಡ್ಡಾಯವಾಗಿಅವರರವರಜಾತಿಯನ್ನುಸೂಚಿಸುವಬಣ್ಣಬಣ್ಣದಪಟ್ಟಿಯನ್ನುಕೈಗೆಕಟ್ಟಿಕೊಂಡುಬರಬೇಕುಎಂಬಕೆಟ್ಟಸಂಪ್ರದಾಯವನ್ನುಆಚರಿಸಲಾಗುತ್ತಿದೆಎಂಬಆಘಾತಕಾರಿವಿಚಾರವರದಿಯಾಗಿದೆ. ವಿದ್ಯಾರ್ಥಿಗಳುಶಾಲೆಗೆಬರುವಾಗಕೆಂಪು, ಹಳದಿ, ಹಸಿರುಹಾಗೂಬಿಳಿಬಣ್ಣದಪಟ್ಟಿಗಳನ್ನುಕಟ್ಟಿಕೊಂಡುಬರುತ್ತಾರೆ. ಈಮೂಲಕಅವರುಯಾವಜಾತಿಯವರುಎಂಬುದುಶಿಕ್ಷಕರಿಗೆಖಚಿತವಾಗುತ್ತದೆ. ಹೀಗೆದಲಿತರನ್ನುಮೇಲ್ವರ್ಗದವಿದ್ಯಾರ್ಥಿಗಳಿಂದಬೇರ್ಪಡಿಸಿಕೂರಿಸುವಹಾಗೂತಾರತಮ್ಯದಶಿಕ್ಷಣನೀಡುವಮೂಲಕವಿದ್ಯಾರ್ಥಿಜೀವನದಿಂದಲೇಮಕ್ಕಳಮನಸ್ಸಿನಲ್ಲಿಜಾತಿಎಂಬಸಂಕೋಲೆಯನ್ನುಬೆಳೆಸಲಾಗುತ್ತಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಯಾವುದು ಎದುರಿಗಿಲ್ಲವೋ ಅದರ ಬಗ್ಗೆ ಚಿಂತೆ ಮಾಡುವುದು ತರವಲ್ಲ. ಸದ್ಯಕ್ಕೆ ನಿಮ್ಮ ಎದುರಿರುವ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿ. ಇದರಿಂದ ನಿಮಗೆ ಸಮಾಜದಲ್ಲಿ ಗೌರವ ಮನ್ನಣೆ ದೊರೆಯುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…
ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ…
ಜೀ-ಕನ್ನಡದಲ್ಲಿ ಆರಂಭವಾಗಿರುವ ‘ಸರಿಗಮಪ’ 14ನೇ ಆವೃತ್ತಿ ಈಗಾಗಲೇ ಕರುನಾಡ ಜನರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.ಪ್ರತಿಭಾನ್ವಿತ ಮಕ್ಕಳಿಗೆ ಅವಕಾಶ ನೀಡುವ ಮೂಲಕ ಜೀ-ವಾಹಿನಿ ಮತ್ತೆ ಪ್ರೇಕ್ಷಕರ ಮೆಚ್ಚುಗೆ ಗಳಿಸಿದೆ. ಮಕ್ಕಳ ಸಿಂಗಿಂಗ್ ಶೋ ಎಷ್ಟೋ ಜನರಿಗೆ ವೀಕೆಂಡ್ ನಲ್ಲಿ ಮನರಂಜನೆಯ ಜೊತೆಗೆ ಮನಸ್ಸಿಗೆ ನೆಮ್ಮದಿಯನ್ನು ತರುತ್ತದೆ.. ಅದರಲ್ಲೂ ಕೆಲವು ಸ್ಪರ್ಧಿಗಳು ನಮ್ಮ ಮನೆಯ ಸದಸ್ಯರಂತಾಗುತ್ತಾರೆ.ಜೀ ಕನ್ನಡ ಟಿವಿ ರಿಯಾಲಿಟಿ ಸಿಂಗಿಂಗ್ ಸರಿಗಮಪ ಶೋ ನ ಲಕ್ಷ್ಮೀ ಕೂಡ ಇದಕ್ಕೆ ಹೊರತಾಗಿಲ್ಲ.. ಹಳ್ಳಿಯಿಂದ ಬಂದ ಪ್ರತಿಭಾನ್ವಿತ ಕಲಾವಿದೆ ಈ ಲಕ್ಷ್ಮಿರಾಮಪ್ಪ.ಇವರ…