ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಹಾಗಾಗಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶಾದಿ ಶಗುನ್ ಯೋಜನೆಯ ಬಗ್ಗೆ ಪರ-ವಿರೋಧದ ಚರ್ಚೆಗಳಾಗುತ್ತಿದೆ. ಶಾದಿ ಶಗುನ್ ಯೋಜನೆ ಯಾರಿಗೆ ಅನ್ವಯವಾಗುತ್ತದೆ? “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಅಂದಿದ್ದ ಮೋದಿ ಸರಕಾರ ಒಂದು ಸಮುದಾಯಕ್ಕೆ ಯೋಜನೆಯನ್ನು ಮೀಸಲಿಟ್ಟಿದ್ದು ಸರೀನಾ ಇತ್ಯಾಧಿ ವಿಚಾರಗಳ ಕುರಿತು ಚರ್ಚೆಯಾಗುತ್ತಿದೆ. ಹಾಗಾದ್ರೆ ಈ ಯೋಜನೆಯ ರೂಪ ರೇಷೆ ಮಾತು ಇದರ ಆಶಯದ ಮಾಹಿತಿಗಳನ್ನು ತಿಳಿಯೋಣ.
ಯಾರೂ ಅರ್ಹರು…
ಶಾದಿ ಶಗುನ್ ಯೋಜನೆ ಪ್ರಕಾರ, ಪದವೀಧರ ಮುಸ್ಲಿಂ ಮಹಿಳೆಯರು ಈ ಯೋಜನೆ ಫಲಾನುಭವಿಗಳಾಗಬಹುದು. ಯೋಜನೆ ಪ್ರಕಾರ, ವಿವಾಹದ ವೇಳೆ 51 ಸಾವಿರ ರೂ. ನೀಡಲಾಗುತ್ತದೆ.
ಶಾದಿ ಶಗುನ್ ಯೋಜನೆ ಕೇಂದ್ರ ಸರ್ಕಾರದಿಂದಲೇ ನೇರವಾಗಿ ಜನತೆಗೆ ನೀಡುವ ಯೋಜನೆಯಲ್ಲ. ಅದು ಮೌಲಾನ ಆಜಾದ್ ಎಜುಕೇಶನ್ ಫೌಂಡೇಶನ್ ಎಂಬ ಸರ್ಕಾರಿ ಅನುದಾನಿತ ಟ್ರಸ್ಟ್’ನಿಂದ ಕೊಡಲ್ಪಡುವ ಯೋಜನೆ. ಸ್ನಾತಕೋತ್ತರ ಪದವಿ ಪೂರೈಸಿದ ಮುಸ್ಲಿಂ ಮಹಿಳೆಯರು ಮಾತ್ರ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಅಂಥಹ ಯುವತಿಯರಿಗೆ ತಮ್ಮ ಮದುವೆಯ ಸಂದರ್ಭ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು Rs.51000/- ಯನ್ನು ನೀಡುತ್ತದೆ.
ಈ ಯೋಜನೆಗೆ ಆಯ್ಕೆಯಾಗುವ ಮಹಿಳೆಯರು ಮೊದಲು ಫೌಂಡೇಶನ್ ನೀಡುವ ವಿದ್ಯಾರ್ಥಿ ಸ್ಕಾಲರ್’ಶಿಪ್’ಗೆ ಆಯ್ಕೆಯಾಗಿರಬೇಕು. ವಿದ್ಯಾರ್ಥಿ ಸ್ಕಾಲರ್ಶಿಪ್’ಗೆ ಆಯ್ಕೆಯಾಗದ ಯುವತಿಯರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ.
ಈ ಯೋಜನೆಯ ಉದ್ದೇಶ…
ಈ ಯೋಜನೆಯ ಉದ್ದೇಶ ಮುಸ್ಲಿಂ ಮಹಿಳೆಯರನ್ನು ಉನ್ನತ ವ್ಯಾಸಂಗಕ್ಕೆ ಪ್ರೇರೇಪಿಸುವುದಾಗಿದೆ. ಮುಸ್ಲಿಂ ಮಹಿಳೆಯರು ಮತ್ತು ಅವರ ಪೋಷಕರು ಕಾಲೇಜು ಮೆಟ್ಟಿಲೇರಲು ಅಥವಾ ಉನ್ನತ ಶಿಕ್ಷಣಕ್ಕೆ ತಮ್ಮ ಸಂಪೂರ್ಣ ಸಂಪಾದನೆ ವ್ಯಯಿಸುತ್ತಾರೆ. ಅಂತಹವರಿಗೆ ಇದು ವರದಾನವಾಗಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯ ತಿಳಿಸಿದೆ. ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ಯೋಜನೆಯ ವಿವರಗಳನ್ನು ಮೌಲಾನಾ ಆಜಾದ್ ಎಜುಕೇಶನಲ್ ಫೌಂಡೇಶನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಈ ಯೋಜನೆಯ ಹಿಂದಿನ ಉದ್ದೇಶ ಏನು ಎಂಬುವುದನ್ನು ತಿಳಿದುಕೊಂಡರೆ ಉತ್ತಮ. ಇನ್ನು ಉನ್ನತ ವ್ಯಾಸಂಗ ವಂಚಿತ ಯುವತಿಯರು ಎಲ್ಲಾ ಸಮುದಾಯದಲ್ಲೂ ಇರುತ್ತಾರೆ ಎನ್ನುವವರಿಗೆ ಆಯಾಯ ಸಮುದಾಯಕ್ಕೆ ಬೇಕಾದ ಅನೇಕ ನಿಗಮ-ಮಂಡಳಿಗಳು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಆ ನಿಗಮ ಮಂಡಳಿಗಳಲ್ಲಿ ವಿದ್ಯಾರ್ಥಿನಿಯರಿಗೆ ಉಪಯೋಗವಾಗುವ ವಿದ್ಯಾರ್ಥಿ ವೇತನಗಳು ಲಭ್ಯವಿದೆ. ಅವುಗಳ ಸದುಪಯೋಗ ಪಡಿಸಿಕೊಳ್ಳಬಹುದು.
ಹಾಗಾದ್ರೆ ಸಿಎಂ ಸಿದ್ದರಾಮಯ್ಯರವರ ಕರ್ನಾಟಕದ ಶಾದಿ ಭಾಗ್ಯ ಏನು?
2013 ಅಕ್ಟೋಬರ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ತಂದ ಯೋಜನೆ. ಇದು ಎಲ್ಲ ಅಲ್ಪಸಂಖ್ಯಾತ ಸಮುದಾಯದ ಹೆಣ್ಮಕ್ಕಳಿಗೆ ಅನ್ವಯ. ಅವರ ವಿವಾಹದ ವೇಳೆ 50 ಸಾವಿರ ರೂ. ಕೊಡುಗೆ ನೀಡಲಾಗುತ್ತದೆ.
ಕರ್ನಾಟಕ ವಕ್ಫ್ ಖಾತೆ ಮೂಲಕ ಹಣ ನೀಡಲಾಗುತ್ತದೆ. ಈ ಪ್ರಯೋಜನ ಪಡೆಯಲು ಮದುಮಗಳಿಗೆ 18 ವರ್ಷ, ಮದುಮಗನಿಗೆ 21 ವರ್ಷ ವಯಸ್ಸಾಗಿರಬೇಕು. ವಾರ್ಷಿಕ ಆದಾಯ 1.5 ಲಕ್ಷ ರೂ. ಒಳಗೆ ಇರಬೇಕು. ಒಂದೇ ಬಾರಿ ಈ ಯೋಜನೆ ಫಲಾನುಭವಿಯಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು. ಬೆಳೆ ಮೊಳಕೆಯೊಡೆದು ಈಗ ನೆಲ…
ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…
ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್ಜಿಟಿಗೆ…
ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ .
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…