ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್’ ಹೆಸರಿನ ಯೋಜನೆ ಘೋಷಿಸಿದೆ.
ಹಾಗಾಗಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಶಾದಿ ಶಗುನ್ ಯೋಜನೆಯ ಬಗ್ಗೆ ಪರ-ವಿರೋಧದ ಚರ್ಚೆಗಳಾಗುತ್ತಿದೆ. ಶಾದಿ ಶಗುನ್ ಯೋಜನೆ ಯಾರಿಗೆ ಅನ್ವಯವಾಗುತ್ತದೆ? “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಅಂದಿದ್ದ ಮೋದಿ ಸರಕಾರ ಒಂದು ಸಮುದಾಯಕ್ಕೆ ಯೋಜನೆಯನ್ನು ಮೀಸಲಿಟ್ಟಿದ್ದು ಸರೀನಾ ಇತ್ಯಾಧಿ ವಿಚಾರಗಳ ಕುರಿತು ಚರ್ಚೆಯಾಗುತ್ತಿದೆ. ಹಾಗಾದ್ರೆ ಈ ಯೋಜನೆಯ ರೂಪ ರೇಷೆ ಮಾತು ಇದರ ಆಶಯದ ಮಾಹಿತಿಗಳನ್ನು ತಿಳಿಯೋಣ.
ಯಾರೂ ಅರ್ಹರು…
ಶಾದಿ ಶಗುನ್ ಯೋಜನೆ ಪ್ರಕಾರ, ಪದವೀಧರ ಮುಸ್ಲಿಂ ಮಹಿಳೆಯರು ಈ ಯೋಜನೆ ಫಲಾನುಭವಿಗಳಾಗಬಹುದು. ಯೋಜನೆ ಪ್ರಕಾರ, ವಿವಾಹದ ವೇಳೆ 51 ಸಾವಿರ ರೂ. ನೀಡಲಾಗುತ್ತದೆ.
ಶಾದಿ ಶಗುನ್ ಯೋಜನೆ ಕೇಂದ್ರ ಸರ್ಕಾರದಿಂದಲೇ ನೇರವಾಗಿ ಜನತೆಗೆ ನೀಡುವ ಯೋಜನೆಯಲ್ಲ. ಅದು ಮೌಲಾನ ಆಜಾದ್ ಎಜುಕೇಶನ್ ಫೌಂಡೇಶನ್ ಎಂಬ ಸರ್ಕಾರಿ ಅನುದಾನಿತ ಟ್ರಸ್ಟ್’ನಿಂದ ಕೊಡಲ್ಪಡುವ ಯೋಜನೆ. ಸ್ನಾತಕೋತ್ತರ ಪದವಿ ಪೂರೈಸಿದ ಮುಸ್ಲಿಂ ಮಹಿಳೆಯರು ಮಾತ್ರ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಅಂಥಹ ಯುವತಿಯರಿಗೆ ತಮ್ಮ ಮದುವೆಯ ಸಂದರ್ಭ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವು Rs.51000/- ಯನ್ನು ನೀಡುತ್ತದೆ.
ಈ ಯೋಜನೆಗೆ ಆಯ್ಕೆಯಾಗುವ ಮಹಿಳೆಯರು ಮೊದಲು ಫೌಂಡೇಶನ್ ನೀಡುವ ವಿದ್ಯಾರ್ಥಿ ಸ್ಕಾಲರ್’ಶಿಪ್’ಗೆ ಆಯ್ಕೆಯಾಗಿರಬೇಕು. ವಿದ್ಯಾರ್ಥಿ ಸ್ಕಾಲರ್ಶಿಪ್’ಗೆ ಆಯ್ಕೆಯಾಗದ ಯುವತಿಯರು ಈ ಯೋಜನೆಯ ಫಲಾನುಭವಿಗಳಾಗಲು ಸಾಧ್ಯವಿಲ್ಲ.
ಈ ಯೋಜನೆಯ ಉದ್ದೇಶ…
ಈ ಯೋಜನೆಯ ಉದ್ದೇಶ ಮುಸ್ಲಿಂ ಮಹಿಳೆಯರನ್ನು ಉನ್ನತ ವ್ಯಾಸಂಗಕ್ಕೆ ಪ್ರೇರೇಪಿಸುವುದಾಗಿದೆ. ಮುಸ್ಲಿಂ ಮಹಿಳೆಯರು ಮತ್ತು ಅವರ ಪೋಷಕರು ಕಾಲೇಜು ಮೆಟ್ಟಿಲೇರಲು ಅಥವಾ ಉನ್ನತ ಶಿಕ್ಷಣಕ್ಕೆ ತಮ್ಮ ಸಂಪೂರ್ಣ ಸಂಪಾದನೆ ವ್ಯಯಿಸುತ್ತಾರೆ. ಅಂತಹವರಿಗೆ ಇದು ವರದಾನವಾಗಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯ ತಿಳಿಸಿದೆ. ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗ ಯೋಜನೆಯ ವಿವರಗಳನ್ನು ಮೌಲಾನಾ ಆಜಾದ್ ಎಜುಕೇಶನಲ್ ಫೌಂಡೇಶನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಈ ಯೋಜನೆಯ ಹಿಂದಿನ ಉದ್ದೇಶ ಏನು ಎಂಬುವುದನ್ನು ತಿಳಿದುಕೊಂಡರೆ ಉತ್ತಮ. ಇನ್ನು ಉನ್ನತ ವ್ಯಾಸಂಗ ವಂಚಿತ ಯುವತಿಯರು ಎಲ್ಲಾ ಸಮುದಾಯದಲ್ಲೂ ಇರುತ್ತಾರೆ ಎನ್ನುವವರಿಗೆ ಆಯಾಯ ಸಮುದಾಯಕ್ಕೆ ಬೇಕಾದ ಅನೇಕ ನಿಗಮ-ಮಂಡಳಿಗಳು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತದೆ. ಆ ನಿಗಮ ಮಂಡಳಿಗಳಲ್ಲಿ ವಿದ್ಯಾರ್ಥಿನಿಯರಿಗೆ ಉಪಯೋಗವಾಗುವ ವಿದ್ಯಾರ್ಥಿ ವೇತನಗಳು ಲಭ್ಯವಿದೆ. ಅವುಗಳ ಸದುಪಯೋಗ ಪಡಿಸಿಕೊಳ್ಳಬಹುದು.
ಹಾಗಾದ್ರೆ ಸಿಎಂ ಸಿದ್ದರಾಮಯ್ಯರವರ ಕರ್ನಾಟಕದ ಶಾದಿ ಭಾಗ್ಯ ಏನು?
2013 ಅಕ್ಟೋಬರ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸರ್ಕಾರ ತಂದ ಯೋಜನೆ. ಇದು ಎಲ್ಲ ಅಲ್ಪಸಂಖ್ಯಾತ ಸಮುದಾಯದ ಹೆಣ್ಮಕ್ಕಳಿಗೆ ಅನ್ವಯ. ಅವರ ವಿವಾಹದ ವೇಳೆ 50 ಸಾವಿರ ರೂ. ಕೊಡುಗೆ ನೀಡಲಾಗುತ್ತದೆ.
ಕರ್ನಾಟಕ ವಕ್ಫ್ ಖಾತೆ ಮೂಲಕ ಹಣ ನೀಡಲಾಗುತ್ತದೆ. ಈ ಪ್ರಯೋಜನ ಪಡೆಯಲು ಮದುಮಗಳಿಗೆ 18 ವರ್ಷ, ಮದುಮಗನಿಗೆ 21 ವರ್ಷ ವಯಸ್ಸಾಗಿರಬೇಕು. ವಾರ್ಷಿಕ ಆದಾಯ 1.5 ಲಕ್ಷ ರೂ. ಒಳಗೆ ಇರಬೇಕು. ಒಂದೇ ಬಾರಿ ಈ ಯೋಜನೆ ಫಲಾನುಭವಿಯಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿ ಬೆಲೆ ದುಬಾರಿಯಾಗಿ ಸರ್ಕಾರವೇ ಉರುಳಿರುವ ಉದಾಹರಣೆಗಳು ನಮ್ಮ ಇತಿಹಾಸದ ಪುಟಗಳಲ್ಲಿದೆ. ಈ ಘಟನೆಗಳಿಂದ ಎಚ್ಚೆತ್ತುಕೊಂಡಂತಿರುವ ದೆಹಲಿ ಸರ್ಕಾರ ಸಾಮಾನ್ಯ ಜನರಿಗೆ ಈರುಳ್ಳಿಯನ್ನು ಕಡಿಮೆ ಬೆಲೆಯಲ್ಲಿ ತಲುಪಿಸಲು ಮುಂದಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಕೆಜಿ ಈರುಳ್ಳಿಗೆ ನಲವತ್ತು ರೂಪಾಯಿಗಳಿಂದ ಎಪ್ಪತ್ತು ರೂಪಾಯಿವರೆಗೆ ಏರಿಕೆ ಕಂಡಿದೆ. ಈ ಬೆಳವಣಿಗೆ ಗ್ರಾಹಕರಿಗೆ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿನ ಸರಕಾರ ಈರುಳ್ಳಿಯನ್ನು ಮೊಬೈಲ್ ವ್ಯಾನ್ ಮೂಲಕ ಕಡಿಮೆ ದರದಲ್ಲಿ ಜನರಿಗೆ ತಲುಪಿಸಲು ಚಿಂತನೆ ನಡೆಸಿದೆ. ಪ್ರತಿ ಕೆಜಿಗೆ 24 ರೂಪಾಯಿಯಂತೆ ತಲುಪಿಸುವ…
ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.
ಮುಸ್ಲಿಂ ಬಾಂಧವರ ಪವಿತ್ರ ಹಬ್ಬವಾದ ಈದ್ ಮಿಲಾದ್ ಪ್ರಯುಕ್ತ ನವಂಬರ್ 10 ರಂದು ಬೆಂಗಳೂರಿನಾದ್ಯಂತ ಮದ್ಯಬಂದ್ ಮಾಡಿ ಪೊಲೀಸ್ ಆಯುಕ್ತ ಆದೇಶ ಹೊರಡಿಸಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಟ ನಿಷೇಧ ಮಾಡಿ ಆದೇಶ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಇಂದು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಇದರಿಂದ ಎಲ್ಲರು ಸಂತೋಷದಿಂದ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶವಷ್ಟೇ. ಇದೇ ನವೆಂಬರ್ 10 ರಂದು ಭಾನುವಾರ ಬೆಳಗ್ಗೆ 6 ರಿಂದ ಅದೇ ದಿನ ಮಧ್ಯರಾತ್ರಿ 12 ಗಂಟೆವರೆಗೂ ಮದ್ಯ…
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…
ವಿಶ್ವದಲ್ಲಿ ಅನೇಕ ಶಾಲೆಗಳು ತನ್ನದೇ ವೈಶಿಷ್ಟ್ಯತೆಯನ್ನು ಹೊಂದಿವೆ. ವಿದ್ಯಾಭ್ಯಾಸ ಹೇಳುವ ವಿಧಾನ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಶಾಲೆ ಹೆಸರು ಮಾಡಿರುತ್ತದೆ. ಆದ್ರೆ ಈ ಶಾಲೆ ಎಲ್ಲಕ್ಕಿಂತ ಭಿನ್ನವಾಗಿದೆ. ಇಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾಭ್ಯಾಸ ಹೇಳುವ ಜೊತೆಗೆ ಅವ್ರ ಮದುವೆ ಜವಾಬ್ದಾರಿಯನ್ನೂ ಶಾಲೆಯೇ ಹೊರುತ್ತದೆ. ಹೌದು, ಭಿನ್ನವಾಗಿರುವ ಈ ಶಾಲೆ ಗುಜರಾತಿನ ಅಹಮದಾಬಾದ್ ನಲ್ಲಿದೆ. ಈ ಶಾಲೆ ಹೆಸರು ‘ಬ್ಲೈಂಡ್ ಕನ್ಯಾ ಪ್ರಕಾಶ್ ಘರ್’. ನಾಲ್ಕು ಮಕ್ಕಳೊಂದಿಗೆ ಶಾಲೆ ತೆರೆಯಲಾಗಿತ್ತು. ಆದ್ರೀಗ ಶಾಲೆ ಹೆಸ್ರು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ದಿವ್ಯಾಂಗ…
ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.