News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಮೋದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಟ ಜಗ್ಗೇಶ್, ಉಪಾಸನಾ ಕೊನಿಡೆಲಾ ಇನ್ನು ಅನೇಕ ಸ್ಟಾರ್​ಗಳು,..ಇದಕ್ಕೆ ಕಾರಣ.?ಇಲ್ಲಿದೆ ನೋಡಿ….

42

ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ  ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು  ಎಲ್ಲರ  ಟ್ವೀಟ್​ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ.

ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ಬಿಜೆಪಿ ನಾಯಕ ಹಾಗೂ ನಟ ಜಗ್ಗೇಶ್ ಕೂಡ ಪ್ರತಿಕ್ರಿಯೆ ನೀಡಿ ತಮ್ಮ ಬೇಸರವನ್ನು ಹೊರಹಾಕಿದ್ದಾರೆ. ಭಾರತೀಯ ಚಿತ್ರರಂಗವೆಂದರೆ ಖಾನ್​ಗಳು ಮಾತ್ರವಲ್ಲ ಎಂದು ಜಗ್ಗೇಶ್ ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಕನ್ನಡಿಗರು ಇಂದು ಬಹುತೇಕ ಪರಭಾಷೆ ಸ್ಟಾರ್​ಗಳಿಗೆ ಚಪ್ಪಾಳೆ ಹೊಡೆದ ತಪ್ಪಿಗೆ ನಾವು ಕನ್ನಡಿಗರು ದಾರಿ ತಪ್ಪಿದವರಂತೆ ಆಗಿದ್ದೇವೆ! ಪ್ರಧಾನಿ ನರೇಂದ್ರ ಮೋದಿ ಅವರೇ, ಉತ್ತರ ಭಾರತದ ನಟ-ನಟಿಯರಿಗಿಂತ ನಾವು ಯಾವುದರಲ್ಲೂ ಕಡಿಮೆಯಿಲ್ಲ. ಶಾರೂಖ್, ಅಮೀರ್ ಖಾನ್ ಮಾತ್ರ ಕಲಾರಂಗಕ್ಕೆ ಒಡೆಯರಲ್ಲ! ನಮ್ಮ ಕನ್ನಡದ ಕಲಿಗಳು ಅನೇಕರಿದ್ದಾರೆ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಮತ್ತು ಉಪಾಸನಾ  ಕೊನಿಡೆಲಾ  ಅವರು ಸಹ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಹಾಕುವ ಮೂಲಕ ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಪ್ರೀತಿಯ ನರೇಂದ್ರ ಮೋದಿಜೀ ನಾವು ದಕ್ಷಿಣ ಭಾರತದವರು. ನಿಮ್ಮನ್ನು ನಾವು ಪ್ರಧಾನಿಯನ್ನಾಗಿ ಪಡೆದಿದ್ದಕ್ಕಾಗಿ ಹೆಮ್ಮೆ ಪಡುತ್ತೇವೆ. ಪ್ರಮುಖ ಮತ್ತು ಸಾಂಸ್ಕೃತಿಕ ವ್ಯಕ್ತಿಗಳು ಬರೀ ಹಿಂದಿ ಚಿತ್ರರಂಗಕ್ಕೆ ಮಾತ್ರ ಸೀಮಿತವೇ. ದಕ್ಷಿಣ ಭಾರತವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಮಾಡಲಾಗಿದೆ ಎಂದು ನಾನು ಭಾವಿಸುತ್ತೇನೆ. ಇಲ್ಲಿ ನನ್ನ ಭಾವನೆಗಳನ್ನು ಮಾತ್ರ ನೋವಿನಿಂದ ವ್ಯಕಪಡಿಸುತ್ತಿದ್ದೇನೆ. ಹೀಗಾಗಿ ನೀವು ನನ್ನ ಅಭಿಪ್ರಾಯವನ್ನು ಸರಿಯಾದ ಮನೋಭಾವದಿಂದ ತೆಗೆದುಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದರ ಜೊತೆಗೆ ಇನ್ನೊಂದು ಟ್ವೀಟ್ ಕೂಡ ಮಾಡಿರುವ ನಟ ಜಗ್ಗೇಶ್, ‘ಇಂದು ಕರ್ನಾಟಕದಲ್ಲಿ ಹೆಚ್ಚು ಮನರಂಜನಾ ತೆರಿಗೆ ಸಂಗ್ರಹವಾಗುತ್ತಿರುವುದು ಕನ್ನಡದ ಚಿತ್ರರಂಗದಿಂದ, ನಟರಿಂದ ಎಂಬುದನ್ನು ನೆನಪಿಡಿ! ಈ ದೇಶದ ಚಿತ್ರರಂಗ ಬಹುಭಾಷಾ ಭಾವನೆಯಿಂದ ಉಳಿದಿದೆ ವಿನಃ ಹಿಂದಿ ಚಿತ್ರರಂಗದಿಂದ ಅಲ್ಲ. ಈ ವಿಷಯ ಮನವರಿಕೆ ಮಾಡುವ ಕನ್ನಡ ಮನಸ್ಸುಗಳು ಇಲ್ಲವೆ ರಾಷ್ಟ್ರಕ್ಕೆ? ಎಂದು ತುಂಬಾ ದುಃಖವಾಯಿತು. ಖಾನ್​ಗಳು ಮಾತ್ರ ಚಿತ್ರರಂಗವಲ್ಲ’ ಎಂದು ಖಾರವಾಗಿ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.  ಕೇಂದ್ರ ಸರ್ಕಾರ ದಕ್ಷಿಣ ಭಾರತವನ್ನು ಮತ್ತು ಇಲ್ಲಿನ ಸ್ಯಾಂಡಲ್​ವುಡ್, ಕಾಲಿವುಡ್, ಟಾಲಿವುಡ್, ಮಾಲಿವುಡ್ ಚಿತ್ರರಂಗವನ್ನು ನಿರ್ಲಕ್ಷ್ಯ ಮಾಡುತ್ತಿರುವುದಕ್ಕೆ ಇನ್ನೂ ಅನೇಕ ಸ್ಟಾರ್​ಗಳು ವಿರೋಧ ವ್ಯಕ್ತಪಡಿಸಿದ್ದಾರೆ. ನಟಿ ಖುಷ್ಬು ಕೂಡ ಮೋದಿ ಅವರ ನಡೆಯ ಬಗ್ಗೆ ಟ್ವಿಟ್ಟರ್​ನಲ್ಲಿ ಅಸಮಾಧಾನ ಹೊರಹಾಕಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಇನ್ಮುಂದೆ ಈ ರೂಲ್ಸ್ ತಿರಸ್ಕರಿಸಿದ ತಕ್ಷಣವೆ ನಿಮ್ಮ ಫೇಸ್ಬುಕ್ ಬ್ಲಾಕ್….!

    ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್‌ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್‌ಬುಕ್‌ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್‌ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್‌ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್‌ಗಳನ್ನು ಅಪ್ ಲೋಡ್…

  • ಸಿನಿಮಾ

    ಆ್ಯಕ್ಷನ್ ಪ್ರಿನ್ಸ್ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡುತ್ತಿರುವುದೇಕೆ ಗೊತ್ತಾ?ಆ ಬಂಗಲೆಯ ಬಾಡಿಗೆ ಎಷ್ಟು ಗೊತ್ತಾ!

    ಇನ್ನೇನು ಸ್ವಲ್ಪ ದಿನಗಳಲ್ಲೇ ತನ್ನ ಬಹುಕಾಲದ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್, ಸಿನಿಮಾದಲ್ಲಿ ವಿಲನ್ ಗಳ ಎದುರು ಖಡಕ್ ಆಗಿಯೇ ಡೈಲಾಗ್ ಹೇಳುವ ನಟ ಈಗ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್‍ವುಡ್‍ನಲ್ಲಿ ಹರಿದಾಡುತ್ತಿದೆ. ಡಿಸೆಂಬರ್ 9ರ ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದ್ದು, ಈಗ ನಟ ಧ್ರುವ ಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು. ಈಗ ವಾಸ್ತು ದೋಷದಿಂದ ಬನಶಂಕರಿಯ…

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • ಆರೋಗ್ಯ

    ನಿಂಬೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೆ, ನೀವ್ ಉಪಯೋಗಿಸದೆ ಸುಮ್ನೆ ಇರಲ್ಲ..!

    ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

  • ಸುದ್ದಿ

    ಜಗತ್ತಿನಲ್ಲೇ ಅತಿ ದುಬಾರಿ ಡೈವೋರ್ಸ್; ಪತ್ನಿಗೆ 2.4 ಲಕ್ಷ ಕೋಟಿ ರೂ ಪರಿಹಾರ ಕೊಟ್ಟಿದ್ದು ಯಾರು ಗೊತ್ತೇ.??

    ವಿಶ್ವದ ಅತೀದೊಡ್ಡ  ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್​​​​ ಸಂಸ್ಥಾಪಕ ಹಾಗೂ ಸಿಇಒ ಜೆಫ್​​​ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್​​​ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್​​ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್​​​ ಸಹ ಸಂಸ್ಥಾಪಕ ಬಿಲ್​​ ಗೇಟ್ಸ್​ ಅಲಂಕರಿಸಿದ್ದಾರೆ. ಫೋರ್ಬ್ಸ್​​​ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…

  • ಆಧ್ಯಾತ್ಮ

    ಭಗವಂತನನ್ನು ಕಾಣಲು ವೇದಾನುಭವಗಳಿಂದ ಪ್ರಾಚೀನ ಋಷಿಗಳು ಕಂಡುಕೊಂಡ ಕೆಲವು ಮೂಲಸೂತ್ರಗಳು.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…