News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮೋದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ನಟ ಜಗ್ಗೇಶ್, ಉಪಾಸನಾ ಕೊನಿಡೆಲಾ ಇನ್ನು ಅನೇಕ ಸ್ಟಾರ್​ಗಳು,..ಇದಕ್ಕೆ ಕಾರಣ.?ಇಲ್ಲಿದೆ ನೋಡಿ….

44

ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ  ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು  ಎಲ್ಲರ  ಟ್ವೀಟ್​ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ.

ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ಬಿಜೆಪಿ ನಾಯಕ ಹಾಗೂ ನಟ ಜಗ್ಗೇಶ್ ಕೂಡ ಪ್ರತಿಕ್ರಿಯೆ ನೀಡಿ ತಮ್ಮ ಬೇಸರವನ್ನು ಹೊರಹಾಕಿದ್ದಾರೆ. ಭಾರತೀಯ ಚಿತ್ರರಂಗವೆಂದರೆ ಖಾನ್​ಗಳು ಮಾತ್ರವಲ್ಲ ಎಂದು ಜಗ್ಗೇಶ್ ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಕನ್ನಡಿಗರು ಇಂದು ಬಹುತೇಕ ಪರಭಾಷೆ ಸ್ಟಾರ್​ಗಳಿಗೆ ಚಪ್ಪಾಳೆ ಹೊಡೆದ ತಪ್ಪಿಗೆ ನಾವು ಕನ್ನಡಿಗರು ದಾರಿ ತಪ್ಪಿದವರಂತೆ ಆಗಿದ್ದೇವೆ! ಪ್ರಧಾನಿ ನರೇಂದ್ರ ಮೋದಿ ಅವರೇ, ಉತ್ತರ ಭಾರತದ ನಟ-ನಟಿಯರಿಗಿಂತ ನಾವು ಯಾವುದರಲ್ಲೂ ಕಡಿಮೆಯಿಲ್ಲ. ಶಾರೂಖ್, ಅಮೀರ್ ಖಾನ್ ಮಾತ್ರ ಕಲಾರಂಗಕ್ಕೆ ಒಡೆಯರಲ್ಲ! ನಮ್ಮ ಕನ್ನಡದ ಕಲಿಗಳು ಅನೇಕರಿದ್ದಾರೆ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಮತ್ತು ಉಪಾಸನಾ  ಕೊನಿಡೆಲಾ  ಅವರು ಸಹ ತಮ್ಮ ಇನ್‍ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಹಾಕುವ ಮೂಲಕ ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಪ್ರೀತಿಯ ನರೇಂದ್ರ ಮೋದಿಜೀ ನಾವು ದಕ್ಷಿಣ ಭಾರತದವರು. ನಿಮ್ಮನ್ನು ನಾವು ಪ್ರಧಾನಿಯನ್ನಾಗಿ ಪಡೆದಿದ್ದಕ್ಕಾಗಿ ಹೆಮ್ಮೆ ಪಡುತ್ತೇವೆ. ಪ್ರಮುಖ ಮತ್ತು ಸಾಂಸ್ಕೃತಿಕ ವ್ಯಕ್ತಿಗಳು ಬರೀ ಹಿಂದಿ ಚಿತ್ರರಂಗಕ್ಕೆ ಮಾತ್ರ ಸೀಮಿತವೇ. ದಕ್ಷಿಣ ಭಾರತವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಮಾಡಲಾಗಿದೆ ಎಂದು ನಾನು ಭಾವಿಸುತ್ತೇನೆ. ಇಲ್ಲಿ ನನ್ನ ಭಾವನೆಗಳನ್ನು ಮಾತ್ರ ನೋವಿನಿಂದ ವ್ಯಕಪಡಿಸುತ್ತಿದ್ದೇನೆ. ಹೀಗಾಗಿ ನೀವು ನನ್ನ ಅಭಿಪ್ರಾಯವನ್ನು ಸರಿಯಾದ ಮನೋಭಾವದಿಂದ ತೆಗೆದುಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದರ ಜೊತೆಗೆ ಇನ್ನೊಂದು ಟ್ವೀಟ್ ಕೂಡ ಮಾಡಿರುವ ನಟ ಜಗ್ಗೇಶ್, ‘ಇಂದು ಕರ್ನಾಟಕದಲ್ಲಿ ಹೆಚ್ಚು ಮನರಂಜನಾ ತೆರಿಗೆ ಸಂಗ್ರಹವಾಗುತ್ತಿರುವುದು ಕನ್ನಡದ ಚಿತ್ರರಂಗದಿಂದ, ನಟರಿಂದ ಎಂಬುದನ್ನು ನೆನಪಿಡಿ! ಈ ದೇಶದ ಚಿತ್ರರಂಗ ಬಹುಭಾಷಾ ಭಾವನೆಯಿಂದ ಉಳಿದಿದೆ ವಿನಃ ಹಿಂದಿ ಚಿತ್ರರಂಗದಿಂದ ಅಲ್ಲ. ಈ ವಿಷಯ ಮನವರಿಕೆ ಮಾಡುವ ಕನ್ನಡ ಮನಸ್ಸುಗಳು ಇಲ್ಲವೆ ರಾಷ್ಟ್ರಕ್ಕೆ? ಎಂದು ತುಂಬಾ ದುಃಖವಾಯಿತು. ಖಾನ್​ಗಳು ಮಾತ್ರ ಚಿತ್ರರಂಗವಲ್ಲ’ ಎಂದು ಖಾರವಾಗಿ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.  ಕೇಂದ್ರ ಸರ್ಕಾರ ದಕ್ಷಿಣ ಭಾರತವನ್ನು ಮತ್ತು ಇಲ್ಲಿನ ಸ್ಯಾಂಡಲ್​ವುಡ್, ಕಾಲಿವುಡ್, ಟಾಲಿವುಡ್, ಮಾಲಿವುಡ್ ಚಿತ್ರರಂಗವನ್ನು ನಿರ್ಲಕ್ಷ್ಯ ಮಾಡುತ್ತಿರುವುದಕ್ಕೆ ಇನ್ನೂ ಅನೇಕ ಸ್ಟಾರ್​ಗಳು ವಿರೋಧ ವ್ಯಕ್ತಪಡಿಸಿದ್ದಾರೆ. ನಟಿ ಖುಷ್ಬು ಕೂಡ ಮೋದಿ ಅವರ ನಡೆಯ ಬಗ್ಗೆ ಟ್ವಿಟ್ಟರ್​ನಲ್ಲಿ ಅಸಮಾಧಾನ ಹೊರಹಾಕಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    “4G ಜಿಯೋ” ಸಿಮ್ಅನ್ನು “3G ಮೊಬೈಲ್” ನಲ್ಲಿ ಉಪಯೋಗಿಸುವುದು ಹೇಗೆಂದು ತಿಳಿಯಬೇಕೇ??? ಹಾಗಾದರೆ ಈ ಲೇಖನವನ್ನು ಓದಿ

    ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.

  • ಸುದ್ದಿ

    12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್‍ನಲ್ಲಿ 400 ಮೀಟರ್ ಸ್ಕೇಟಿಂಗ್..ಗಿನ್ನಿಸ್ ದಾಖಲೆಯಲ್ಲಿ ಮಿಂಚುತ್ತಿರುವ ಹುಬ್ಬಳ್ಳಿ ಬಾಲೆ..!

    ಮಕ್ಕಳ ದಿನಾಚರಣೆ ಅಂಗವಾಗಿ ಹುಬ್ಬಳ್ಳಿಯ 12 ವರ್ಷದ ಬಾಲಕಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೇವಲ 51 ಸೆಕೆಂಡ್‍ನಲ್ಲಿ 400 ಮೀಟರ್ ಸ್ಕೇಟಿಂಗ್ ಮಾಡುವ ಮೂಲಕ ಗಿನ್ನಿಸ್ ದಾಖಲೆ ಬರೆದಿದ್ದಾಳೆ. ಓಜಲ್ ಎಸ್ ನಲವಡಿ ಇಲ್ಲಿನ ಶಿರೂರು ಪಾರ್ಕ್ ಟೆಂಡರ್ ಶ್ಯೂರ್ ರಸ್ತೆಯಲ್ಲಿ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಯನ್ನು ನೋಡಿ ಗಿನ್ನಿಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಅಧಿಕಾರಿ ವಿಕ್ಟರ್ ಫೆನೆಸ್ ದಾಖಲಿಸಿಕೊಂಡರು. ಬೆಳ್ಳಂಬೆಳಗ್ಗೆ ನಡೆದ ಈ ದಾಖಲೆಗೆ ನೂರಾರು ಮಂದಿ ಸಾಕ್ಷಿಯಾದರು. ವಿಆರ್‌ಎಲ್‌ ಕಂಪನಿಯ ಸಿಎಫ್‍ಒ…

  • ಸುದ್ದಿ

    ರಾಯಲ್ ಆಗಿದೆ ‘Bigg Boss House’; ಇದನ್ನೊಮ್ಮೆ ನೋಡಿ,.!

    ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…

  • ಉಪಯುಕ್ತ ಮಾಹಿತಿ

    ಕೇವಲ ಮನೆಯಲ್ಲಿರುವ ಈ ವಸ್ತುವಿನಿಂದ ಹೀಗೆ ಮಾಡಿ ಜಿರಳೆ ಮತ್ತೆ ಬರೊದಿಲ್ಲ.!

    ಮನೆಯಲ್ಲಿರುವ  ಜಿರಳೆ  ಶಾಶ್ವತವಾಗಿ ತೊಲಗಿಸಲು ಸರಳ ಮನೆಮದ್ದು. ಮನೆ ಮಳಿಗೆ ಎಂದ ಮೇಲೆ ಕೀಟಗಳ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ ಇದು ಸಾಮಾನ್ಯ ಸಮಸ್ಯೆಯಂತು ಅಲ್ಲ. ಏಕೆಂದರೆ ಮನೆ ಎಷ್ಟೇ ಸ್ವಚ್ಛಂದವಾಗಿದ್ದರೂ ಅತಿಥಿಗಳ ಬಂದಾಗ ಒಂದು ಜಿರಲೆ ಕಾಣಿಸಿಕೊಂಡರೂ ಮುಜುಗರಕ್ಕೀಡಾಗುತ್ತೀರಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕೂಡ ಇಲಿ ಜಿರಳೆ ಇರುತ್ತದೆ ಇವುಗಳು ನಾನು ರೀತಿಯ ಸಾಂಕ್ರಮಿಕ ರೋಗಗಳು ತರಿಸುವಂತಹ ಕ್ರಿಮಿಗಳು ಇದ್ದೇ ಇರುತ್ತದೆ ಮನೆಯಲ್ಲಿರುವ ವಸ್ತುಗಳನ್ನು ಹಾಳುಮಾಡುವುದು ಆಹಾರ ಪದಾರ್ಥವನ್ನು ನಾಶಮಾಡುವುದು ಜಿರಳೆಗಳ ಕೆಲಸವಾಗಿದೆ. ಹಾಗೆಯೇ ಅಡುಗೆ ಕೋಣೆಯಲ್ಲಿ ಜಿರಳೆಗಳು ಹೆಚ್ಚಾದಂತೆ…

  • ಆಧ್ಯಾತ್ಮ, ಜ್ಯೋತಿಷ್ಯ

    ಸಾಯಂಕಾಲದ ವೇಳೆ ದೇವರಿಗೆ ದೀಪ ಹಚ್ಚುವುದರಿಂದ ಏನಾಗುತ್ತೆ ಗೊತ್ತಾ..!

    ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ. ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ. ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು  ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ…

  • ಸುದ್ದಿ

    ಆದಿವಾಸಿಗಳ ಪಾಲಿಗೆ ಮರಣ ಶಾಸನವಾದ ನೂತನ ಅರಣ್ಯ ಕಾಯ್ದೆ,.ಇದನ್ನೊಮ್ಮೆ ಓದಿ …!

    ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…