ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ.

ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ಬಿಜೆಪಿ ನಾಯಕ ಹಾಗೂ ನಟ ಜಗ್ಗೇಶ್ ಕೂಡ ಪ್ರತಿಕ್ರಿಯೆ ನೀಡಿ ತಮ್ಮ ಬೇಸರವನ್ನು ಹೊರಹಾಕಿದ್ದಾರೆ. ಭಾರತೀಯ ಚಿತ್ರರಂಗವೆಂದರೆ ಖಾನ್ಗಳು ಮಾತ್ರವಲ್ಲ ಎಂದು ಜಗ್ಗೇಶ್ ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಕನ್ನಡಿಗರು ಇಂದು ಬಹುತೇಕ ಪರಭಾಷೆ ಸ್ಟಾರ್ಗಳಿಗೆ ಚಪ್ಪಾಳೆ ಹೊಡೆದ ತಪ್ಪಿಗೆ ನಾವು ಕನ್ನಡಿಗರು ದಾರಿ ತಪ್ಪಿದವರಂತೆ ಆಗಿದ್ದೇವೆ! ಪ್ರಧಾನಿ ನರೇಂದ್ರ ಮೋದಿ ಅವರೇ, ಉತ್ತರ ಭಾರತದ ನಟ-ನಟಿಯರಿಗಿಂತ ನಾವು ಯಾವುದರಲ್ಲೂ ಕಡಿಮೆಯಿಲ್ಲ. ಶಾರೂಖ್, ಅಮೀರ್ ಖಾನ್ ಮಾತ್ರ ಕಲಾರಂಗಕ್ಕೆ ಒಡೆಯರಲ್ಲ! ನಮ್ಮ ಕನ್ನಡದ ಕಲಿಗಳು ಅನೇಕರಿದ್ದಾರೆ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಮತ್ತು ಉಪಾಸನಾ ಕೊನಿಡೆಲಾ ಅವರು ಸಹ ತಮ್ಮ ಇನ್ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಹಾಕುವ ಮೂಲಕ ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಪ್ರೀತಿಯ ನರೇಂದ್ರ ಮೋದಿಜೀ ನಾವು ದಕ್ಷಿಣ ಭಾರತದವರು. ನಿಮ್ಮನ್ನು ನಾವು ಪ್ರಧಾನಿಯನ್ನಾಗಿ ಪಡೆದಿದ್ದಕ್ಕಾಗಿ ಹೆಮ್ಮೆ ಪಡುತ್ತೇವೆ. ಪ್ರಮುಖ ಮತ್ತು ಸಾಂಸ್ಕೃತಿಕ ವ್ಯಕ್ತಿಗಳು ಬರೀ ಹಿಂದಿ ಚಿತ್ರರಂಗಕ್ಕೆ ಮಾತ್ರ ಸೀಮಿತವೇ. ದಕ್ಷಿಣ ಭಾರತವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಮಾಡಲಾಗಿದೆ ಎಂದು ನಾನು ಭಾವಿಸುತ್ತೇನೆ. ಇಲ್ಲಿ ನನ್ನ ಭಾವನೆಗಳನ್ನು ಮಾತ್ರ ನೋವಿನಿಂದ ವ್ಯಕಪಡಿಸುತ್ತಿದ್ದೇನೆ. ಹೀಗಾಗಿ ನೀವು ನನ್ನ ಅಭಿಪ್ರಾಯವನ್ನು ಸರಿಯಾದ ಮನೋಭಾವದಿಂದ ತೆಗೆದುಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದರ ಜೊತೆಗೆ ಇನ್ನೊಂದು ಟ್ವೀಟ್ ಕೂಡ ಮಾಡಿರುವ ನಟ ಜಗ್ಗೇಶ್, ‘ಇಂದು ಕರ್ನಾಟಕದಲ್ಲಿ ಹೆಚ್ಚು ಮನರಂಜನಾ ತೆರಿಗೆ ಸಂಗ್ರಹವಾಗುತ್ತಿರುವುದು ಕನ್ನಡದ ಚಿತ್ರರಂಗದಿಂದ, ನಟರಿಂದ ಎಂಬುದನ್ನು ನೆನಪಿಡಿ! ಈ ದೇಶದ ಚಿತ್ರರಂಗ ಬಹುಭಾಷಾ ಭಾವನೆಯಿಂದ ಉಳಿದಿದೆ ವಿನಃ ಹಿಂದಿ ಚಿತ್ರರಂಗದಿಂದ ಅಲ್ಲ. ಈ ವಿಷಯ ಮನವರಿಕೆ ಮಾಡುವ ಕನ್ನಡ ಮನಸ್ಸುಗಳು ಇಲ್ಲವೆ ರಾಷ್ಟ್ರಕ್ಕೆ? ಎಂದು ತುಂಬಾ ದುಃಖವಾಯಿತು. ಖಾನ್ಗಳು ಮಾತ್ರ ಚಿತ್ರರಂಗವಲ್ಲ’ ಎಂದು ಖಾರವಾಗಿ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಕೇಂದ್ರ ಸರ್ಕಾರ ದಕ್ಷಿಣ ಭಾರತವನ್ನು ಮತ್ತು ಇಲ್ಲಿನ ಸ್ಯಾಂಡಲ್ವುಡ್, ಕಾಲಿವುಡ್, ಟಾಲಿವುಡ್, ಮಾಲಿವುಡ್ ಚಿತ್ರರಂಗವನ್ನು ನಿರ್ಲಕ್ಷ್ಯ ಮಾಡುತ್ತಿರುವುದಕ್ಕೆ ಇನ್ನೂ ಅನೇಕ ಸ್ಟಾರ್ಗಳು ವಿರೋಧ ವ್ಯಕ್ತಪಡಿಸಿದ್ದಾರೆ. ನಟಿ ಖುಷ್ಬು ಕೂಡ ಮೋದಿ ಅವರ ನಡೆಯ ಬಗ್ಗೆ ಟ್ವಿಟ್ಟರ್ನಲ್ಲಿ ಅಸಮಾಧಾನ ಹೊರಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳಂಬೆಳಗ್ಗೆ ತಿಂಡಿ ಏನ್ಮಾಡೋದಪ್ಪಾ ಅಂತಾ ಯೋಚಿಸ್ತಿದ್ದೀರಾ? ಈಗ ಸೀಸನ್ ಚೇಂಜ್ ಆಗ್ತಿದೆ. ಕಫ ನೆಗಡಿ ಸಮಸ್ಯೆ ಇದ್ದದ್ದೇ. ಈಗಿನ ಬದಲಾಗುತ್ತಿರುವ ಹವಾಗುಣಕ್ಕೆ ಬೆಳಗಿನ ತಿಂಡಿಗೆ ಇದನ್ನು ಮಾಡಿ ಮನೆಮಂದಿಯ ಆರೋಗ್ಯ ಕಾಪಾಡಿ. ಹುರುಳಿಕಾಳು ಈ ಹವಾಗುಣಕ್ಕೆ ಹೇಳಿಮಾಡಿಸಿದ ಧಾನ್ಯ. ಕಫ ಹೆಚ್ಚಾಗಿ ಮೂಗು ಕಟ್ಟಿ ಕೆಮ್ಮು ಇದ್ದರೆ ಹುರುಳಿ ಕಾಳಿನ ಸೂಪ್ ಸೇವಿಸಿ. ಇದರಿಂದ ಕಫ ಬೇಗ ಕರಗುತ್ತದೆ ಮತ್ತು ಕೆಮ್ಮು ಶಮನವಾಗುತ್ತದೆ. ನೆನೆಸಿದ ಹುರುಳಿಕಾಳನ್ನು ಬೆಳಗ್ಗೆ ಖಾಲಿ ಹೊಟ್ಟೆಗೆ ಬೇಯಿಸದೆ ಹಾಗೆ ಸೇವಿಸಿದರೆ ಮಲವಿಸರ್ಜನೆ ಸುಲಭವಾಗುತ್ತದೆ….
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…
ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ…
ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…