ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ.

ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ಬಿಜೆಪಿ ನಾಯಕ ಹಾಗೂ ನಟ ಜಗ್ಗೇಶ್ ಕೂಡ ಪ್ರತಿಕ್ರಿಯೆ ನೀಡಿ ತಮ್ಮ ಬೇಸರವನ್ನು ಹೊರಹಾಕಿದ್ದಾರೆ. ಭಾರತೀಯ ಚಿತ್ರರಂಗವೆಂದರೆ ಖಾನ್ಗಳು ಮಾತ್ರವಲ್ಲ ಎಂದು ಜಗ್ಗೇಶ್ ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಕನ್ನಡಿಗರು ಇಂದು ಬಹುತೇಕ ಪರಭಾಷೆ ಸ್ಟಾರ್ಗಳಿಗೆ ಚಪ್ಪಾಳೆ ಹೊಡೆದ ತಪ್ಪಿಗೆ ನಾವು ಕನ್ನಡಿಗರು ದಾರಿ ತಪ್ಪಿದವರಂತೆ ಆಗಿದ್ದೇವೆ! ಪ್ರಧಾನಿ ನರೇಂದ್ರ ಮೋದಿ ಅವರೇ, ಉತ್ತರ ಭಾರತದ ನಟ-ನಟಿಯರಿಗಿಂತ ನಾವು ಯಾವುದರಲ್ಲೂ ಕಡಿಮೆಯಿಲ್ಲ. ಶಾರೂಖ್, ಅಮೀರ್ ಖಾನ್ ಮಾತ್ರ ಕಲಾರಂಗಕ್ಕೆ ಒಡೆಯರಲ್ಲ! ನಮ್ಮ ಕನ್ನಡದ ಕಲಿಗಳು ಅನೇಕರಿದ್ದಾರೆ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಮತ್ತು ಉಪಾಸನಾ ಕೊನಿಡೆಲಾ ಅವರು ಸಹ ತಮ್ಮ ಇನ್ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಹಾಕುವ ಮೂಲಕ ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಪ್ರೀತಿಯ ನರೇಂದ್ರ ಮೋದಿಜೀ ನಾವು ದಕ್ಷಿಣ ಭಾರತದವರು. ನಿಮ್ಮನ್ನು ನಾವು ಪ್ರಧಾನಿಯನ್ನಾಗಿ ಪಡೆದಿದ್ದಕ್ಕಾಗಿ ಹೆಮ್ಮೆ ಪಡುತ್ತೇವೆ. ಪ್ರಮುಖ ಮತ್ತು ಸಾಂಸ್ಕೃತಿಕ ವ್ಯಕ್ತಿಗಳು ಬರೀ ಹಿಂದಿ ಚಿತ್ರರಂಗಕ್ಕೆ ಮಾತ್ರ ಸೀಮಿತವೇ. ದಕ್ಷಿಣ ಭಾರತವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಮಾಡಲಾಗಿದೆ ಎಂದು ನಾನು ಭಾವಿಸುತ್ತೇನೆ. ಇಲ್ಲಿ ನನ್ನ ಭಾವನೆಗಳನ್ನು ಮಾತ್ರ ನೋವಿನಿಂದ ವ್ಯಕಪಡಿಸುತ್ತಿದ್ದೇನೆ. ಹೀಗಾಗಿ ನೀವು ನನ್ನ ಅಭಿಪ್ರಾಯವನ್ನು ಸರಿಯಾದ ಮನೋಭಾವದಿಂದ ತೆಗೆದುಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದರ ಜೊತೆಗೆ ಇನ್ನೊಂದು ಟ್ವೀಟ್ ಕೂಡ ಮಾಡಿರುವ ನಟ ಜಗ್ಗೇಶ್, ‘ಇಂದು ಕರ್ನಾಟಕದಲ್ಲಿ ಹೆಚ್ಚು ಮನರಂಜನಾ ತೆರಿಗೆ ಸಂಗ್ರಹವಾಗುತ್ತಿರುವುದು ಕನ್ನಡದ ಚಿತ್ರರಂಗದಿಂದ, ನಟರಿಂದ ಎಂಬುದನ್ನು ನೆನಪಿಡಿ! ಈ ದೇಶದ ಚಿತ್ರರಂಗ ಬಹುಭಾಷಾ ಭಾವನೆಯಿಂದ ಉಳಿದಿದೆ ವಿನಃ ಹಿಂದಿ ಚಿತ್ರರಂಗದಿಂದ ಅಲ್ಲ. ಈ ವಿಷಯ ಮನವರಿಕೆ ಮಾಡುವ ಕನ್ನಡ ಮನಸ್ಸುಗಳು ಇಲ್ಲವೆ ರಾಷ್ಟ್ರಕ್ಕೆ? ಎಂದು ತುಂಬಾ ದುಃಖವಾಯಿತು. ಖಾನ್ಗಳು ಮಾತ್ರ ಚಿತ್ರರಂಗವಲ್ಲ’ ಎಂದು ಖಾರವಾಗಿ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಕೇಂದ್ರ ಸರ್ಕಾರ ದಕ್ಷಿಣ ಭಾರತವನ್ನು ಮತ್ತು ಇಲ್ಲಿನ ಸ್ಯಾಂಡಲ್ವುಡ್, ಕಾಲಿವುಡ್, ಟಾಲಿವುಡ್, ಮಾಲಿವುಡ್ ಚಿತ್ರರಂಗವನ್ನು ನಿರ್ಲಕ್ಷ್ಯ ಮಾಡುತ್ತಿರುವುದಕ್ಕೆ ಇನ್ನೂ ಅನೇಕ ಸ್ಟಾರ್ಗಳು ವಿರೋಧ ವ್ಯಕ್ತಪಡಿಸಿದ್ದಾರೆ. ನಟಿ ಖುಷ್ಬು ಕೂಡ ಮೋದಿ ಅವರ ನಡೆಯ ಬಗ್ಗೆ ಟ್ವಿಟ್ಟರ್ನಲ್ಲಿ ಅಸಮಾಧಾನ ಹೊರಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು
ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ
ಉತ್ತಮ ಆರೋಗ್ಯಕ್ಕೆ ನೀರು ಅತ್ಯಾವಶ್ಯಕ ಅಂಶ.ನೀರಿನ ಆವಶ್ಯಕತೆಯ ಮಟ್ಟವು ಬೇರೆ ಬೇರೆ ವ್ಯಕ್ತಿಗಳಲ್ಲಿ ಭಿನ್ನವಾಗಿರಬಹುದು. ನೀವು ಸಾಕಷ್ಟು ದ್ರವಾಹಾರ ಸೇವಿಸುತ್ತಿರುವಿರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಈ ಲೇಖನವು ನಿಮಗೆ ಸಹಾಯ ಮಾಡಲಿದೆ.
ಪಬ್ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…
ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ. ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ,…
ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…