ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ.

ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ಬಿಜೆಪಿ ನಾಯಕ ಹಾಗೂ ನಟ ಜಗ್ಗೇಶ್ ಕೂಡ ಪ್ರತಿಕ್ರಿಯೆ ನೀಡಿ ತಮ್ಮ ಬೇಸರವನ್ನು ಹೊರಹಾಕಿದ್ದಾರೆ. ಭಾರತೀಯ ಚಿತ್ರರಂಗವೆಂದರೆ ಖಾನ್ಗಳು ಮಾತ್ರವಲ್ಲ ಎಂದು ಜಗ್ಗೇಶ್ ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಕನ್ನಡಿಗರು ಇಂದು ಬಹುತೇಕ ಪರಭಾಷೆ ಸ್ಟಾರ್ಗಳಿಗೆ ಚಪ್ಪಾಳೆ ಹೊಡೆದ ತಪ್ಪಿಗೆ ನಾವು ಕನ್ನಡಿಗರು ದಾರಿ ತಪ್ಪಿದವರಂತೆ ಆಗಿದ್ದೇವೆ! ಪ್ರಧಾನಿ ನರೇಂದ್ರ ಮೋದಿ ಅವರೇ, ಉತ್ತರ ಭಾರತದ ನಟ-ನಟಿಯರಿಗಿಂತ ನಾವು ಯಾವುದರಲ್ಲೂ ಕಡಿಮೆಯಿಲ್ಲ. ಶಾರೂಖ್, ಅಮೀರ್ ಖಾನ್ ಮಾತ್ರ ಕಲಾರಂಗಕ್ಕೆ ಒಡೆಯರಲ್ಲ! ನಮ್ಮ ಕನ್ನಡದ ಕಲಿಗಳು ಅನೇಕರಿದ್ದಾರೆ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಮತ್ತು ಉಪಾಸನಾ ಕೊನಿಡೆಲಾ ಅವರು ಸಹ ತಮ್ಮ ಇನ್ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಹಾಕುವ ಮೂಲಕ ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಪ್ರೀತಿಯ ನರೇಂದ್ರ ಮೋದಿಜೀ ನಾವು ದಕ್ಷಿಣ ಭಾರತದವರು. ನಿಮ್ಮನ್ನು ನಾವು ಪ್ರಧಾನಿಯನ್ನಾಗಿ ಪಡೆದಿದ್ದಕ್ಕಾಗಿ ಹೆಮ್ಮೆ ಪಡುತ್ತೇವೆ. ಪ್ರಮುಖ ಮತ್ತು ಸಾಂಸ್ಕೃತಿಕ ವ್ಯಕ್ತಿಗಳು ಬರೀ ಹಿಂದಿ ಚಿತ್ರರಂಗಕ್ಕೆ ಮಾತ್ರ ಸೀಮಿತವೇ. ದಕ್ಷಿಣ ಭಾರತವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಮಾಡಲಾಗಿದೆ ಎಂದು ನಾನು ಭಾವಿಸುತ್ತೇನೆ. ಇಲ್ಲಿ ನನ್ನ ಭಾವನೆಗಳನ್ನು ಮಾತ್ರ ನೋವಿನಿಂದ ವ್ಯಕಪಡಿಸುತ್ತಿದ್ದೇನೆ. ಹೀಗಾಗಿ ನೀವು ನನ್ನ ಅಭಿಪ್ರಾಯವನ್ನು ಸರಿಯಾದ ಮನೋಭಾವದಿಂದ ತೆಗೆದುಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದರ ಜೊತೆಗೆ ಇನ್ನೊಂದು ಟ್ವೀಟ್ ಕೂಡ ಮಾಡಿರುವ ನಟ ಜಗ್ಗೇಶ್, ‘ಇಂದು ಕರ್ನಾಟಕದಲ್ಲಿ ಹೆಚ್ಚು ಮನರಂಜನಾ ತೆರಿಗೆ ಸಂಗ್ರಹವಾಗುತ್ತಿರುವುದು ಕನ್ನಡದ ಚಿತ್ರರಂಗದಿಂದ, ನಟರಿಂದ ಎಂಬುದನ್ನು ನೆನಪಿಡಿ! ಈ ದೇಶದ ಚಿತ್ರರಂಗ ಬಹುಭಾಷಾ ಭಾವನೆಯಿಂದ ಉಳಿದಿದೆ ವಿನಃ ಹಿಂದಿ ಚಿತ್ರರಂಗದಿಂದ ಅಲ್ಲ. ಈ ವಿಷಯ ಮನವರಿಕೆ ಮಾಡುವ ಕನ್ನಡ ಮನಸ್ಸುಗಳು ಇಲ್ಲವೆ ರಾಷ್ಟ್ರಕ್ಕೆ? ಎಂದು ತುಂಬಾ ದುಃಖವಾಯಿತು. ಖಾನ್ಗಳು ಮಾತ್ರ ಚಿತ್ರರಂಗವಲ್ಲ’ ಎಂದು ಖಾರವಾಗಿ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಕೇಂದ್ರ ಸರ್ಕಾರ ದಕ್ಷಿಣ ಭಾರತವನ್ನು ಮತ್ತು ಇಲ್ಲಿನ ಸ್ಯಾಂಡಲ್ವುಡ್, ಕಾಲಿವುಡ್, ಟಾಲಿವುಡ್, ಮಾಲಿವುಡ್ ಚಿತ್ರರಂಗವನ್ನು ನಿರ್ಲಕ್ಷ್ಯ ಮಾಡುತ್ತಿರುವುದಕ್ಕೆ ಇನ್ನೂ ಅನೇಕ ಸ್ಟಾರ್ಗಳು ವಿರೋಧ ವ್ಯಕ್ತಪಡಿಸಿದ್ದಾರೆ. ನಟಿ ಖುಷ್ಬು ಕೂಡ ಮೋದಿ ಅವರ ನಡೆಯ ಬಗ್ಗೆ ಟ್ವಿಟ್ಟರ್ನಲ್ಲಿ ಅಸಮಾಧಾನ ಹೊರಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.
ಕನ್ನಡ ಚಿತ್ರ ರಂಗದ ನವರಸನಾಯಕ ನಟ ಮತ್ತು ರಾಜಕಾರಣಿ ಜಗ್ಗೇಶ್’ರವರು ಮಾಡಿದ ಒಂದು ಟ್ವೀಟ್ ಕಾರಣದಿಂದಾಗಿ ವಿವಾದದಲ್ಲಿ ಸಿಲುಕಿದ್ದು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ರಾಜ್ಯ ರಾಜಧಾನಿಯ ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಲ್ದಾಣದಲ್ಲಿದ್ದ ರೈಲಿನಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ.ಇಂದು ಮೆಜೆಸ್ಟಿಕ್ ರೈಲ್ವೇ ನಿಲ್ದಾಣಕ್ಕೆ ದುಷ್ಕರ್ಮಿಗಳು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆಯನ್ನು ಮಾಡಿದ್ದರು. ಇದೇ ವೇಳೆ ನಿಲ್ದಾಣದಲ್ಲಿದ್ದ ಪಾಟ್ನಾ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಲ್ಲಿ ಅನುಮಾನಾಸ್ಪದ ಬ್ಯಾಗೊಂದು ಪತ್ತೆಯಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಪ್ರಯಾಣಿಕರು ಭಯಭೀತರಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಹಾಗೂ ಪೊಲೀಸರು ಬಂದು ಬ್ಯಾಗ್ ಪರಿಶೀಲನೆ ಮಾಡಿದ್ದಾರೆ. ಬಾಂಬ್ ಬೆದರಿಕೆ ಕರೆ…
ಹೌದು ಹುಟ್ಟಿದ ಮಕ್ಕಳಿಗೆ ಒಂದು ತಿಂಗಳಿನಿಂದ ವಿಳ್ಯೆದೆಲೆಯನ್ನು ಹೊಟ್ಟೆಗೆ ಅಂಟಿಸುತ್ತಾರೆ.. ಇದನ್ನು ಸಾಮಾನ್ಯವಾಗಿ 1 ವರ್ಷದವರೆಗೂ ಮುಂದುವರೆಸುತ್ತಾರೆ.. ಇದಕ್ಕೆ ಕಾರಣ ಮತ್ತು ಉಪಯೋಗ ಇಲ್ಲಿದೆ ನೋಡಿ.. ಹುಟ್ಟಿದ ಮಕ್ಕಳು ಸೂಕ್ಷ್ಮವಾಗಿರುತ್ತವೆ.. ಜೊತೆಗೆ ಗರ್ಭದಿಂದ ಹೊರ ಬಂದು ವಾತಾವರಣಕ್ಕೆ ಹೊಂದಿಕೊಳ್ಳಬೇಕು.. ಪುಟ್ಟ ಮಕ್ಕಳಿಗೆ ಆರೋಗ್ಯ ಕೆಟ್ಟರೆ ಚೇತರಿಸಿಕೊಳ್ಳುವುದು ಬಲು ಕಷ್ಟ.. ಅದಕ್ಕಾಗಿಯೇ ಮಕ್ಕಳ ಆರೋಗ್ಯ ಕೆಡದೇ ಇರುವ ರೀತಿಯಲ್ಲಿ ನೋಡಿಕೊಳ್ಳಬೇಕು. ಸಾಮಾನ್ಯವಾಗಿ ಅಜೀರ್ಣದ ಸಮಸ್ಯೆ ಮಕ್ಕಳಲ್ಲಿ ಬೇಗ ಕಾಣಿಸಿಕೊಳ್ಳುತ್ತವೆ. ಮಲ ಮೂತ್ರ ವಿಸರ್ಜಿಸಲು ತುಂಬಾ ಕಷ್ಟ ಪಡುತ್ತವೆ.. ಇದಕ್ಕಾಗಿಯೇ…
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಮಾರು ವೇಷದಲ್ಲಿ ಥಿಯೇಟರ್ಗೆ ಹೋಗಿ ಕೆಜಿಎಫ್ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…