ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಾತ್ಮ ಗಾಂಧೀಜಿ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿ ‘ನಮ್ಮೊಳಗೆ ಬದಲಾವಣೆ’ (ಚೇಂಜ್ ವಿಥಿನ್) ಹೆಸರಿನಲ್ಲಿ ಬಾಲಿವುಡ್ ಸೆಲಬ್ರಿಟಿಗಳನ್ನು ಭೇಟಿಯಾಗಿದ್ದರು. ಬಾಲಿವುಡ್ ನಟರೊಂದಿಗಿನ ಮೋದಿ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ಆಗಿದ್ದವು. ಮತ್ತು ಎಲ್ಲರ ಟ್ವೀಟ್ಗಳಿಗೂ ಉತ್ತರಿಸಿರುವ ಮೋದಿಕೂಡ ಚಿತ್ರರಂಗದ ದಿಗ್ಗಜರೊಂದಿಗೆ ಶನಿವಾರದ ಸಂಜೆಯನ್ನು ಕಳೆದಿರುವುದುಖುಷಿ ನೀಡಿದೆ ಎಂದು ಉತ್ತರಿಸಿದ್ದಾರೆ.

ಆದರೆ, ಬಾಲಿವುಡ್ ಚಿತ್ರರಂಗವನ್ನು ಮಾತ್ರ ಭಾರತೀಯ ಚಿತ್ರರಂಗವೆಂದು ಪರಿಗಣಿಸುತ್ತಿರುವುದಕ್ಕೆ ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಬಗ್ಗೆ ಬಿಜೆಪಿ ನಾಯಕ ಹಾಗೂ ನಟ ಜಗ್ಗೇಶ್ ಕೂಡ ಪ್ರತಿಕ್ರಿಯೆ ನೀಡಿ ತಮ್ಮ ಬೇಸರವನ್ನು ಹೊರಹಾಕಿದ್ದಾರೆ. ಭಾರತೀಯ ಚಿತ್ರರಂಗವೆಂದರೆ ಖಾನ್ಗಳು ಮಾತ್ರವಲ್ಲ ಎಂದು ಜಗ್ಗೇಶ್ ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಕನ್ನಡಿಗರು ಇಂದು ಬಹುತೇಕ ಪರಭಾಷೆ ಸ್ಟಾರ್ಗಳಿಗೆ ಚಪ್ಪಾಳೆ ಹೊಡೆದ ತಪ್ಪಿಗೆ ನಾವು ಕನ್ನಡಿಗರು ದಾರಿ ತಪ್ಪಿದವರಂತೆ ಆಗಿದ್ದೇವೆ! ಪ್ರಧಾನಿ ನರೇಂದ್ರ ಮೋದಿ ಅವರೇ, ಉತ್ತರ ಭಾರತದ ನಟ-ನಟಿಯರಿಗಿಂತ ನಾವು ಯಾವುದರಲ್ಲೂ ಕಡಿಮೆಯಿಲ್ಲ. ಶಾರೂಖ್, ಅಮೀರ್ ಖಾನ್ ಮಾತ್ರ ಕಲಾರಂಗಕ್ಕೆ ಒಡೆಯರಲ್ಲ! ನಮ್ಮ ಕನ್ನಡದ ಕಲಿಗಳು ಅನೇಕರಿದ್ದಾರೆ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಮತ್ತು ಉಪಾಸನಾ ಕೊನಿಡೆಲಾ ಅವರು ಸಹ ತಮ್ಮ ಇನ್ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಹಾಕುವ ಮೂಲಕ ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಪ್ರೀತಿಯ ನರೇಂದ್ರ ಮೋದಿಜೀ ನಾವು ದಕ್ಷಿಣ ಭಾರತದವರು. ನಿಮ್ಮನ್ನು ನಾವು ಪ್ರಧಾನಿಯನ್ನಾಗಿ ಪಡೆದಿದ್ದಕ್ಕಾಗಿ ಹೆಮ್ಮೆ ಪಡುತ್ತೇವೆ. ಪ್ರಮುಖ ಮತ್ತು ಸಾಂಸ್ಕೃತಿಕ ವ್ಯಕ್ತಿಗಳು ಬರೀ ಹಿಂದಿ ಚಿತ್ರರಂಗಕ್ಕೆ ಮಾತ್ರ ಸೀಮಿತವೇ. ದಕ್ಷಿಣ ಭಾರತವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯಮಾಡಲಾಗಿದೆ ಎಂದು ನಾನು ಭಾವಿಸುತ್ತೇನೆ. ಇಲ್ಲಿ ನನ್ನ ಭಾವನೆಗಳನ್ನು ಮಾತ್ರ ನೋವಿನಿಂದ ವ್ಯಕಪಡಿಸುತ್ತಿದ್ದೇನೆ. ಹೀಗಾಗಿ ನೀವು ನನ್ನ ಅಭಿಪ್ರಾಯವನ್ನು ಸರಿಯಾದ ಮನೋಭಾವದಿಂದ ತೆಗೆದುಕೊಳ್ಳುತ್ತೀರಿ ಎಂದು ನಾನು ಭಾವಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದರ ಜೊತೆಗೆ ಇನ್ನೊಂದು ಟ್ವೀಟ್ ಕೂಡ ಮಾಡಿರುವ ನಟ ಜಗ್ಗೇಶ್, ‘ಇಂದು ಕರ್ನಾಟಕದಲ್ಲಿ ಹೆಚ್ಚು ಮನರಂಜನಾ ತೆರಿಗೆ ಸಂಗ್ರಹವಾಗುತ್ತಿರುವುದು ಕನ್ನಡದ ಚಿತ್ರರಂಗದಿಂದ, ನಟರಿಂದ ಎಂಬುದನ್ನು ನೆನಪಿಡಿ! ಈ ದೇಶದ ಚಿತ್ರರಂಗ ಬಹುಭಾಷಾ ಭಾವನೆಯಿಂದ ಉಳಿದಿದೆ ವಿನಃ ಹಿಂದಿ ಚಿತ್ರರಂಗದಿಂದ ಅಲ್ಲ. ಈ ವಿಷಯ ಮನವರಿಕೆ ಮಾಡುವ ಕನ್ನಡ ಮನಸ್ಸುಗಳು ಇಲ್ಲವೆ ರಾಷ್ಟ್ರಕ್ಕೆ? ಎಂದು ತುಂಬಾ ದುಃಖವಾಯಿತು. ಖಾನ್ಗಳು ಮಾತ್ರ ಚಿತ್ರರಂಗವಲ್ಲ’ ಎಂದು ಖಾರವಾಗಿ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಕೇಂದ್ರ ಸರ್ಕಾರ ದಕ್ಷಿಣ ಭಾರತವನ್ನು ಮತ್ತು ಇಲ್ಲಿನ ಸ್ಯಾಂಡಲ್ವುಡ್, ಕಾಲಿವುಡ್, ಟಾಲಿವುಡ್, ಮಾಲಿವುಡ್ ಚಿತ್ರರಂಗವನ್ನು ನಿರ್ಲಕ್ಷ್ಯ ಮಾಡುತ್ತಿರುವುದಕ್ಕೆ ಇನ್ನೂ ಅನೇಕ ಸ್ಟಾರ್ಗಳು ವಿರೋಧ ವ್ಯಕ್ತಪಡಿಸಿದ್ದಾರೆ. ನಟಿ ಖುಷ್ಬು ಕೂಡ ಮೋದಿ ಅವರ ನಡೆಯ ಬಗ್ಗೆ ಟ್ವಿಟ್ಟರ್ನಲ್ಲಿ ಅಸಮಾಧಾನ ಹೊರಹಾಕಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…
ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್ಬುಕ್ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ. ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್ಗಳನ್ನು ಅಪ್ ಲೋಡ್…
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…