News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಯಾವ ದಿನ ಹುಟ್ಟಿದವರು, ಏನೆಲ್ಲಾ ಗುಣ ನಡೆತೆ ಹೊಂದಿರುತ್ತಾರೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1482

ಜ್ಯೋತಿಷ್ಯಾಸ್ತ್ರ ಬಹು ಪುರಾತನವಾಗಿದ್ದರೂ ಕೆಲವರು ಇಂದಿಗೂ ನಂಬುವುದಿಲ್ಲ. ಆದರೆ ನಮ್ಮ ಹುಟ್ಟಿನ ಕೆಲವು ಅಂಶಗಳು ನಮ್ಮ ಜೀವನದ ಮೇಲೆ ಪ್ರಭಾವ ಬೀರುತ್ತವೆ ಎಂಬುದು ಜ್ಯೋತಿಷ್ಯಾಸ್ತ್ರದಲ್ಲಿ ಹೇಳದೇ ಇದ್ದರೂ ವಾಸ್ತವಾಂಶಗಳನ್ನು ಗಮನಿಸಿ ನಿಜ ಎಂದು ಒಪ್ಪಿಕೊಳ್ಳಲೇಬೇಕಾಗುತ್ತದೆ.

ದೇಹದ ಮೇಲಿನ ಮಚ್ಚೆ, ನಿಮ್ಮ ಜಾತಕವನ್ನೇ ಬಿಚ್ಚಿಡುತ್ತದೆ! ಹುಟ್ಟಿದ ದಿನಾಂಕ, ಸಮಯ ಗೊತ್ತಾದರೆ ಜ್ಯೋತಿಷಿಗಳು ವ್ಯಕ್ತಿಯ ವ್ಯಕ್ತಿತ್ವ ಮತ್ತು ಇತರ ವಿಷಯಗಳ ಬಗ್ಗೆ ಸೂಕ್ತ ವಿವರ ನೀಡಬಲ್ಲರು. ಇಂದಿನ ಲೇಖನದಲ್ಲಿ ಹುಟ್ಟಿದ ದಿನ ವ್ಯಕ್ತಿಯ ವ್ಯಕ್ತಿತ್ವದ ಬಗ್ಗೆ ಏನು ಹೇಳುತ್ತದೆ ಎಂಬುದನ್ನು ನೋಡೋಣ: ಈ ವಿವರಗಳ ಬಗ್ಗೆ ಅರಿತರೆ ನಿಮ್ಮ ಅಥವಾ ನೀವು ತಿಳಿದುಕೊಳ್ಳಬೇಕಾದ ವ್ಯಕ್ತಿಯ ವ್ಯಕ್ತಿತ್ವ ಮತ್ತು ನಿಮ್ಮ ಗುಣಗಳು ಹೇಗೆ ಎಂಬುದನ್ನು ಕಂಡುಕೊಳ್ಳಬಹುದು.

ಸೋಮವಾರ:-

ಈ ದಿನದಂದು ಹುಟ್ಟಿದವರು ಸಾಮಾನ್ಯವಾಗಿ ಸ್ವಪ್ರಶಂಸಕರಾಗಿದ್ದು ಉಳಿದವರನ್ನೆಲ್ಲಾ ದ್ವೇಶಿಸುವ ಮನೋಭಾವ ಹೊಂದಿರುತ್ತಾರೆ. ಆದರೆ ಕೆಲವು ಅಪವಾದ ಎಂಬಂತೆ ಈ ದಿನ ಹುಟ್ಟಿರುವವರಲ್ಲಿ ಕೆಲವರು ಅತ್ಯಂತ ಪ್ರೇಮಮಯಿಗಳಾಗಿರುತ್ತಾರೆ.  ಇವರು ತಮ್ಮ ಕುಟುಂಬಕ್ಕೆ ಹೆಚ್ಚಿನ ಆದ್ಯತೆ ನೀಡುವವರೂ, ಕ್ರಿಯಾತ್ಮಕರೂ, ತಮ್ಮ ವಿಚಾರಗಳನ್ನು ತಮ್ಮೊಂದಿಗೇ ಇಟ್ಟುಕೊಳ್ಳುವವರೂ ಆಗಿರುತ್ತಾರೆ. ಇವರು ಯಸಸ್ಸನ್ನು ಹಿಂಬಾಲಿಸಿಕೊಂಡು ಹೋಗುವವರೂ, ನಾಯಕತ್ವದ ಗುಣಗಳನ್ನು ಹೊಂದಿರುವವರೂ ಆಗಿದ್ದಾರೆ.

ಮಂಗಳವಾರ:-

ಇವರು ಕುತೂಹಲಕಾರಿ ವ್ಯಕ್ತಿಗಳಾಗಿದ್ದು ತಮ್ಮ ಬಗ್ಗೆ ಬರುವ ಅಭಿಪ್ರಾಯಗಳನ್ನು ಅತಿ ಗಂಭೀರವಾಗಿ ಪರಿಗಣಿಸುವ ವ್ಯಕ್ತಿಗಳಾಗಿರುತ್ತಾರೆ. ಇವರು ಒಂದು ಗುರಿಯನ್ನು ಹೊಂದಿದ್ದು ಆ ಗುರಿಯನ್ನು ಪಡೆಯಲು ತಮ್ಮ ಪೂರ್ಣ ಸಾಮರ್ಥ್ಯವನ್ನು ಮುಡಿಪಾಗಿಸುತ್ತಾರೆ. ಸಂಬಂಧಗಳಿಗೆ ಹೆಚ್ಚು ಒಲವು ನೀಡುವ ಇವರು ಸಾಮಾನ್ಯವಾಗಿ ತಮ್ಮ ಕೆಲಸದ ಬಗ್ಗೆ ಹೆಚ್ಚು ಒತ್ತಡವನ್ನು ಅನುಭವಿಸುತ್ತಾರೆ.

ಬುಧವಾರ:-

ಈ ದಿನ ಹುಟ್ಟಿದವರು ತಮ್ಮ ಕೆಲಸವನ್ನು ಇಷ್ಟಪಟ್ಟರೂ ಆರಾಮವಾಗಿ ಮಗಿಸುವಂತಹವರಾಗಿದ್ದಾರೆ. ಇವರು ತಾವಾಗಿ ಕೆಲಸ ಮಾಡುವುದಕ್ಕಿಂತ ತಮ್ಮ ಕೈಕೆಳಗಿನ ವ್ಯಕ್ತಿಗಳಿಂದ ಪೂರ್ಣಪ್ರಮಾಣದ ಕೆಲಸವನ್ನು ಮಾಡಿಸಿಕೊಳ್ಳುವ ಗುಣ ಹೊಂದಿದ್ದು ಇದಕ್ಕಾಗಿ ತಮ್ಮ ಸ್ನೇಹ ಆದರಗಳನ್ನು ಬಳಸುತ್ತಾರೆ. ಇವರು ಸಮಾಜದ ವಿವಿಧ ಬಗೆಯ ವ್ಯಕ್ತಿಗಳೊಂದಿಗೆ ಇತರರಿಗಿಂತ ಸುಲಭವಾಗಿ ಸ್ನೇಹ ಸಂಪಾದಿಸಿಕೊಳ್ಳುತ್ತಾರೆ.

ಗುರುವಾರ:-

ಈ ದಿನ ಹುಟ್ಟಿದ ಜನರು ಸಾಮಾನ್ಯವಾಗಿ ಇತರರಿಂದ ಪ್ರಶಂಸೆ ಪಡೆಯುವವರಾಗಿರುತ್ತಾರೆ. ಇವರು ಆಕರ್ಷಕ ವ್ಯಕ್ತಿತ್ವ ಹೊಂದಿದ್ದು ಹುಟ್ಟಿನಿಂದಲೇ ನಾಯಕತ್ವದ ಗುಣ ಹೊಂದಿರುತ್ತಾರೆ. ಇವರು ಒಂಟಿಯಾಗಿ ಕೆಲಸ ಮಾಡಲು ಇಚ್ಛಿಸುವವರಾಗಿದ್ದು ಸದಾ ಆಶಾವಾದಿಗಳಾಗಿರುತ್ತಾರೆ. ಇವರು ತಮ್ಮ ಸುತ್ತಮುತ್ತಲಿನ ಜನರಿಗೆ ಅತಿ ಹೆಚ್ಚಿನ ಗೌರವ ನೀಡುತ್ತಾರೆ ಹಾಗೂ ಗೌರವ ಪಡೆಯಲು ಇಚ್ಛಿಸುತ್ತಾರೆ.

ಶುಕ್ರವಾರ:-

ಶುಕ್ರವಾರ ಜನಿಸಿದ ಜನರು ಕ್ರಿಯಾತ್ಮರಾಗಿರುತ್ತಾರೆ. ಇವರು ಅಪಾರ ಬುದ್ಧಿಮತ್ತೆಯುಳ್ಳವರಾಗಿದ್ದು ತಮ್ಮ ಸ್ನೇಹವೃಂದದಲ್ಲಿ ಪ್ರಮುಖ ಪಾತ್ರ ಪಡೆಯುತ್ತಾರೆ. ಇವರಿಗೆ ಅಪಾರವಾದ ದೂರದೃಷ್ಟಿ ಮತ್ತು ಒಳ ಅರಿವು ಸಹಾ ಜನ್ಮತಃ ಬಂದಿರುತ್ತದೆ.

ಶನಿವಾರ:-

ಈ ದಿನ ಹುಟ್ಟಿದವರು ಅತಿ ಹೆಚ್ಚಿನ ಆತ್ಮವಿಶ್ವಾಸವುಳ್ಳವರಾಗಿರುತ್ತಾರೆ. ಆದರೆ ಕೆಲವೊಮ್ಮೆ ಇವರು ಚಿಕ್ಕಪುಟ್ಟ ಸೋಲುಗಳಿಗೂ ತೀರಾ ಹತಾಶೆ ವ್ಯಕ್ತಪಡಿಸಿ ಹಿಮ್ಮೆಟ್ಟುತ್ತಾರೆ. ಇವರು ಸಾಮಾನ್ಯವಾಗಿ ಹೊಸ ವಿಚಾರಗಳಿಗೆ ಸ್ಪಂದಿಸದೇ ಬದಲಿಗೆ ಋಣಾತ್ಮಕ ಸಲಹೆಗಳನ್ನೇ ನೀಡುತ್ತಾರೆ. ಇವರು ತಮ್ಮ ರೂಪ ಲಾವಣ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು ಕೊಂಚ ಕುಟಿಲರೂ ಆಗಿರುತ್ತಾರೆ.

ಭಾನುವಾರ:-

ಈ ದಿನ ಹುಟ್ಟಿದ ವ್ಯಕ್ತಿಗಳು ಅತಿ ಆಶಾವಾದಿಗಳಾಗಿದ್ದು ಭಿನ್ನ ಸಂದರ್ಭಗಳಲ್ಲಿ ಭಿನ್ನವಾಗಿ ಪ್ರತಿಕ್ರಿಯಿಸುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜಕ್ಕೆ ಏನಾದರೂ ಕೊಡಬೇಕು ಎಂಬ ಚಿಂತನೆ ಹೊಂದಿದ್ದು ಸದಾ ನಗುತ್ತಲೇ ಇರುವ ವ್ಯಕ್ತಿತ್ವ ಹೊಂದಿರುತ್ತಾರೆ. ಇವರು ಸಮಾಜದಲ್ಲಿರಲು ಇಷ್ಟಪಡುವಂತೆಯೇ ಕೊಂಚ ಕಾಲ ಏಕಾಂತದಲ್ಲಿಯೂ ಇರಲು ಇಚ್ಛಿಸುತ್ತಾರೆ.

ನಿಮ್ಮ ಹುಟ್ಟಿದ ದಿನಾಂಕ ನಿಮ್ಮ ಭವಿಷ್ಯ ಹೇಳುತ್ತೆ…ತಿಳಿಯಲು ಕೆಳಗಿನ ಚಿತ್ರದ ಮೇಲೆ ಕ್ಲಿಕ್ ಮಾಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಜಿರಲೆಗಳ ಸೂಪರ್ ಸಂಸಾರ ನೋಡಿ ಬೆರಗಾದ ವೈದ್ಯರು..!ಯಾಕೆ ಗೊತ್ತಾ?ತಿಳಿದರೆ ನೀವು ಶಾಕ್ ಆಗುವುದು ಗ್ಯಾರಂಟಿ..

    ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…

  • ಉದ್ಯೋಗ

    ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿ ಇಂಜಿನಿಯರ್‌ ಹುದ್ದೆಗಳ ನೇಮಕ

    ; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಪ್ರಾಜೆಕ್ಟ್‌ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್‌ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್‌, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್‌ ಸೈನ್ಸ್‌, ಇಲೆಕ್ಟ್ರಾನಿಕ್ಸ್‌ ಕಂಮ್ಯೂನಿಕೇಷನ್‌ , ಇಲೆಕ್ಟ್ರಾನಿಕ್ಸ್‌ ಅಂಡ್‌ ಟೆಲಿಕಂಮ್ಯೂನಿಕೇಷನ್‌ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್‌ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…

  • ಸುದ್ದಿ

    ಕುಷ್ಠ ರೋಗಿಯ ಅನ್ನ, ಪಿಂಚಣಿ ಕಿತ್ತುಕೊಂಡ ಆಧಾರ್..! ಓದಿ ಈ ಮನಕಲುಕುವ ಸ್ಟೋರಿ…

    ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(23 ಡಿಸೆಂಬರ್, 2018) ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ನಿಮ್ಮನ್ನು ತನ್ನಜೀವಕ್ಕಿಂತಲೂ ಹೆಚ್ಚು…

  • ಕ್ರೀಡೆ, ಸಾಧನೆ, ಸುದ್ದಿ

    1500 ಮೀ. ಓಡಿ ಚಿನ್ನ ಗೆದ್ದು ಮೈದಾನದಲ್ಲೇ ಮೃತಪಟ್ಟ 78 ವರ್ಷದ ವೃದ್ಧ.

    78 ವರ್ಷದ ವೃದ್ಧರೊಬ್ಬರು 1500 ಮೀ. ಓಡಿ ಚಿನ್ನದ ಪದಕ ಗೆದ್ದು ಮೈದಾನದಲ್ಲೇ ಮೃತಪಟ್ಟ ಘಟನೆಯೊಂದು ಪಂಜಾಬ್‍ನ ಸಂಗ್ರೂರ್‍ನಲ್ಲಿ ನಡೆದಿದೆ. ಬಕ್ಷೀಶ್ ಸಿಂಗ್ ಮೃತಪಟ್ಟ ವ್ಯಕ್ತಿ. ಪಂಜಾಬ್ ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ವೃದ್ಧರಿಗೆ ಅಥ್ಲೆಟಿಕ್ ಮೀಟ್ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಬಕ್ಷೀಶ್ ಸಿಂಗ್ ಭಾಗವಹಿಸಿ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಬಳಿಕ ಮೈದಾನದಲ್ಲಿಯೇ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 1500 ಮೀ. ರೇಸ್ ಪೂರ್ಣಗೊಳಿಸಿದ ನಂತರ ಬಕ್ಷೀಶ್ ವಿಶ್ರಾಂತಿ ಪಡೆಯುತ್ತಿದ್ದರು. ಇದೇ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಸಿಂಗ್ರೂರ್ ನ…

  • ಉಪಯುಕ್ತ ಮಾಹಿತಿ

    ನಿಮ್ಮ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕೆ(RTE) ಈ ದಾಖಲೆಗಳು ಇದ್ರೆ ಮಾತ್ರ ಅರ್ಜಿ ಸಲ್ಲಿಸಲು ಸಾಧ್ಯ..!ನಿಮ್ಮ ಒಂದು ಶೇರ್ ಎಷ್ಟೋ ಬಡ-ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯವಾಗಬಲ್ಲದು…

    ಪ್ರತಿ ವರ್ಷದಂತೆ ಜನವರಿ ತಿಂಗಳಿನಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕಿನ ಅಡಿಯಲ್ಲಿ ಅರ್ಜಿ ಆಹ್ವಾನಿಸಲಿದ್ದಾರೆ