News

ಆಧ್ಯಾತ್ಮ

ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಮಾಡಿದ್ರೆ ಹೆಚ್ಚು ಫಲ ಸಿಗುತ್ತೆ ಗೊತ್ತಾ ನಿಮ್ಗೆ?

2485

ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.

ಪೂಜೆಯ ಬಳಿಕ ಪ್ರಸಾದದ ರೂಪದಲ್ಲಿ ಹೂವುಗಳ ಪಕಳೆಗಳನ್ನೂ ನೀಡಲಾಗುತ್ತದೆ. ಹೂವುಗಳು ಭಕ್ತ ಮತ್ತು ದೇವರ ನಡುವಿನ ಸಂವಹನ ಮಾಧ್ಯಮ ಎಂದೂ ಭಾವಿಸಲಾಗುತ್ತದೆ. ಲಕ್ಷ್ಮಿ ಸರಸ್ವತಿ ಮೊದಲಾದ ದೇವತೆಯರನ್ನು ಕಮಲದ ಹೂವಿನಲ್ಲಿ ಕುಳಿತಿರುವಂತೆಯೇ ಕವಿಗಳು ಮತ್ತು ಚಿತ್ರಕಾರರು ವರ್ಣಿಸಿದ್ದಾರೆ.ದೇವಾಲಯದ ಪವಿತ್ರ ವಾತಾವರಣದಲ್ಲಿ ಹೂವುಗಳ ಸುವಾಸನೆ ಭಕ್ತರ ಪರವಶತೆಯನ್ನು ಹೆಚ್ಚಿಸುತ್ತದೆ.

ಹೂವುಗಳನ್ನು ದೇವರಿಗೆ ಕಾಣಿಕೆಯ ರೂಪದಲ್ಲಿ ಅರ್ಪಿಸಿದಾಗ ಹೊರಹೊಮ್ಮುವ ಧನಾತ್ಮಕ ಶಕ್ತಿ ನೆರದವರಲ್ಲಿ ಹಾಗೂ ಸುತ್ತಲ ವಾತಾವರಣದಲ್ಲಿ ದೈವಿಕ ಶಕ್ತಿಯನ್ನು ಮೂಡಿಸುತ್ತದೆ.

ಸದಾ ಆಗಸವನ್ನು ನೋಡುವ ಹೂವುಗಳು ಆಗಸದಿಂದ ಧನಾತ್ಮಕ ಶಕ್ತಿಯನ್ನು ಸೆಳೆದು ಕೆಳಮುಖವಾಗಿರುವ ಪಕಳೆಗಳ ಮೂಲಕ ನೆಲದಲ್ಲಿ ಅಡ್ಡಲಾಗಿ ಪ್ರವಹಿಸುವಂತೆ ಮಾಡುತ್ತವೆ. ಹಿಂದೂ ಧರ್ಮದಲ್ಲಿ ವಿವಿಧ ದೇವರುಗಳಿಗೆ ವಿವಿಧ ಹೂವುಗಳಿಂದ ಪೂಜೆ ಸಲ್ಲಿಸುವುದು ಶ್ರೇಯಸ್ಕರ ಎಂಬ ಭಾವನೆ ಮತ್ತು ನಂಬಿಕೆಯಿದೆ. ಬನ್ನಿ, ಈ ನಂಬಿಕೆಯಂತೆ ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಸಲ್ಲಿಸಿದರೆ ಹೆಚ್ಚು ಫಲಕಾರಿ ಎಂಬುದನ್ನು ನೋಡೊಣ…

ಶಿವ ಅಥವಾ ಈಶ್ವರನಿಗೆ ಬಿಲ್ವಾಪತ್ರೆ ಅತ್ಯಂತ ಇಷ್ಟವಾದ ಎಲೆಗಳು ಎಂದು ಶಿವನ ಭಕ್ತರು ನಂಬುತ್ತಾರೆ. ಇದರ ಹೊರತಾಗಿ ತುಂಬೆ ಹೂವು, ನೇರಳೆ ಆರ್ಕಿಡ್ ಅಥವಾ ಮಂದಾರ ಪುಷ್ಪವೂ ಶಿವನಿಗೆ ಇಷ್ಟವಾಗಿದ್ದು ಈ ಹೂವುಗಳನ್ನು ಶಿವಪೂಜೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇದರ ಜೊತೆಗೇ ಸಂಪಿಗೆ ಮತ್ತು ಕಿರೀಟ ಹೂ  ಸಹಾ ಶಿವನ ಅನುಗ್ರಹ ಪಡೆಯಲು ನೆರವಾಗುವ ಹೂವುಗಳಾಗಿವೆ.

ಈಶ್ವರನ ಪತ್ನಿ ಪಾರ್ವತೀದೇವಿಗೆ ಸಲ್ಲಿಸುವ ವಿಶೇಷ ಪಾರ್ಥನೆಯಾದ ಲಲಿತಾ ಸಹಸ್ರನಾಮದಲ್ಲಿ ಹಲವು ಹೂವುಗಳನ್ನು ಉಲ್ಲೇಖಿಸಲಾಗಿದೆ. ಕದಂಬ ವನ ಪಾರ್ವತಿ ಹೆಚ್ಚು ಇಷ್ಟವೆಂದು ಹಲವೆಡೆ ತಿಳಿಸಲಾಗಿದ್ದು ಇದೇ ಕಾರಣಕ್ಕೆ ಆಕೆಗೆ ಕದಂಬವನವಾಸಿನಿ ಎಂಬ ಹೆಸರೂ ಇದೆ.

ಈ ವನದಲ್ಲಿ ಸಿಗುತ್ತದೆ ಎಂಬ ಕಾರಣದಿಂದ ಕದಂಬ ಹೂ ಸಂಪಿಗೆ, ದಾಸವಾಳ, ಕೆಂಡಸಂಪಿಗೆ, ಮಲ್ಲಿಗೆ ಮೊದಲಾದ ಹೂವುಗಳನ್ನು ಪಾರ್ವತಿ ದೇವಿಯ ಪೂಜೆಯಲ್ಲಿ ಬಳಸಲಾಗುತ್ತದೆ.

ಕಾಳಿಯ ಅವತಾರವಾದ ದುರ್ಗಾಮಾತೆಯ ಪೂಜೆಯಲ್ಲಿ ಸಾಮಾನ್ಯವಾಗಿ ಕೆಂಪು ಬಣ್ಣದ ಹೂವುಗಳನ್ನೇ ಬಳಸಲಾಗುತ್ತದೆ. ದಾಸವಾಳ, ಗುಡ್ಡೆ ಹೂ, ಕಣಗಿಲ ಮೊದಲಾದ ಕೆಂಪು ಹೂವುಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ.

ಲಕ್ಷ್ಮಿ ದೇವತೆಗೆ ಕಮಲದ ಹೂವು ಅತಿ ಹೆಚ್ಚು ಇಷ್ಟವಾದ ಹೂವಾಗಿದ್ದು ಲಕ್ಷ್ಮೀಪೂಜೆಯಲ್ಲಿ ಕಮಲವನ್ನೇ ಹೆಚ್ಚು ಉಪಯೋಗಿಸಲಾಗುತ್ತದೆ. ಇನ್ನುಳಿದಂತೆ ಕೇದಿಗೆ, ಸಂಪಿಗೆ, ಸೇವಂತಿಗೆ, ಗೊಂಡೆ ಹೂವುಗಳು ಸಹಾ ಪೂಜೆಗೆ ಅರ್ಹವಾಗಿವೆ.

ಕಮಲ ಮತ್ತು ಕಣಗಿಲೆ ಹೂವುಗಳು ಸುಬ್ರಹ್ಮಣ್ಯನ ಪೂಜೆಗೆ ಅತಿ ಅರ್ಹವಾದ ಹೂವುಗಳಾಗಿವೆ.

ಸರಸ್ವತಿ ದೇವಿಯನ್ನು ವಿದ್ಯಾದೇವತೆ ಎಂದು ನಂಬಲಾಗಿದ್ದು ಬಿಳಿಯ ಕಮಲದ ಹೂವು ಅತಿ ಹೆಚ್ಚು ಪ್ರಿಯ ಎಂದು ಭಕ್ತರು ನಂಬುತ್ತಾರೆ. ಅಂತೆಯೇ ಬಿಳಿಕಮಲ ಹಾಗೂ ಪಾರಿಜಾತ ಹೂವುಗಳನ್ನು ಸರಸ್ವತಿ ಪೂಜೆಯಲ್ಲಿ ಹೆಚ್ಚು ಬಳಸಲಾಗುತ್ತದೆ.

ಹನುಮಂತನಿಗೆ ಸಲ್ಲಿಸುವ ಪೂಜೆಯಲ್ಲಿ ತುಳಸಿ ಎಲೆಗಳು ಮತ್ತು ಅಡಿಕೆಯ ಹಿಂಗಾರದ ಹೂವಿನ ಹಾರವನ್ನು ಅರ್ಪಿಸಲಾಗುತ್ತದೆ. ಈ ಹೂವುಗಳನ್ನು ಪೂಜೆಯಲ್ಲಿ ಅರ್ಪಿಸುವ ಮೂಲಕ ವಿವಿಧ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು.

ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸರ್ಕಾರದಿಂದ ಗುಡ್ ನ್ಯೂಸ್. ಸ್ವಂತ ಮನೆ ಮತ್ತು ಜಾಗ ಇಲ್ಲದವರಿಗೆ ಬಂದಿದೆ ಹೊಸ ಮನೆಗಳು.

    ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು…

  • ಆಧ್ಯಾತ್ಮ, ದೇವರು, ದೇವರು-ಧರ್ಮ

    ಇಲ್ಲಿದೆ ಪಂಚಮುಖಿ ಆಂಜನೇಯನ ಅವತಾರದ ಕತೆ..!ಹನುಮಂತನ 5 ತಲೆಗಳಿಗಿದೆ ಒಂದೊಂದು ವಿಶೇಷತೆ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…

  • ಗ್ಯಾಜೆಟ್

    ಜಿಯೋ ಪ್ರೈಮ್ ಮೆಂಬರ್’ಶಿಪ್ ಮಾರ್ಚ್ 31ಕ್ಕೆ ಮುಗಿಯುತ್ತಿದೆ, ಎನ್ನುವವರಿಗೆ ಇಲ್ಲಿದೆ ಸಿಹಿಸುದ್ದಿ.!ತಿಳಿಯಲು ಇದನ್ನು ಓದಿ ಶೇರ್ ಮಾಡಿ…

    ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…

  • ಜ್ಯೋತಿಷ್ಯ

    ವೈಕುಂಠ ಏಕಾದಶಿಯ ಈ ಶುಭದಿನದಂದು ನಿಮ್ಮ ರಾಶಿಗಳ ಮೇಲೆ ತಿರುಪತಿ ತಿಮ್ಮಪ್ಪನ ಆಶೀರ್ವಾದ ಇದೆಯೇ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(18 ಡಿಸೆಂಬರ್, 2018) ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ನಿಮ್ಮ ಪತ್ನಿಯ ಕೆಲಸವನ್ನು ಕಡಿಮೆ…

  • ಸುದ್ದಿ

    ಪ್ಲಾಸ್ಟಿಕ್‌ನಿಂದ ತಯಾರಿಗೊಂಡ ಈ ಪೆಟ್ರೋಲ್ ದರವನ್ನು ಕೇಳಿದರೆ ನೀವು ಅಚ್ಚರಿಪಡುವುದು ಕಂಡಿತ

    ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್‌ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್‌ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….

  • ಆರೋಗ್ಯ

    ತೂಕ ಇಳಿಸಲು ಬಯಸುವವರು ಸೀಬೇಕಾಯಿ ಸೇವಿಸಬಹುದು..!ತಿಳಿಯಲು ಈ ಲೇಖನ ಓದಿ..

    ಹೆಚ್ಚಿನವರಿಗೆ ನೈಸರ್ಗಿಕವಾಗಿ ತೂಕ ಇಳಿಸುವ ಚಿಂತೆ. ಹೀಗೆ ತೂಕ ಇಳಿಸುವವರು ಯಾವುದೆಲ್ಲಾ ಹಣ್ಣು ಸೇವಿಸಬಹುದು ಎಂಬ ಜಿಜ್ಞಾಸೆಗೆ ಬೀಳುತ್ತಾರೆ. ಅಸಲಿಗೆ ಸೀಬೇಕಾಯಿ ತೂಕ ಹೆಚ್ಚಿಸಲು ಸಹಕಾರಿಯೇ ಎಂಬುದು ಹಲವರ ಪ್ರಶ್ನೆ.