ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.
ಪೂಜೆಯ ಬಳಿಕ ಪ್ರಸಾದದ ರೂಪದಲ್ಲಿ ಹೂವುಗಳ ಪಕಳೆಗಳನ್ನೂ ನೀಡಲಾಗುತ್ತದೆ. ಹೂವುಗಳು ಭಕ್ತ ಮತ್ತು ದೇವರ ನಡುವಿನ ಸಂವಹನ ಮಾಧ್ಯಮ ಎಂದೂ ಭಾವಿಸಲಾಗುತ್ತದೆ. ಲಕ್ಷ್ಮಿ ಸರಸ್ವತಿ ಮೊದಲಾದ ದೇವತೆಯರನ್ನು ಕಮಲದ ಹೂವಿನಲ್ಲಿ ಕುಳಿತಿರುವಂತೆಯೇ ಕವಿಗಳು ಮತ್ತು ಚಿತ್ರಕಾರರು ವರ್ಣಿಸಿದ್ದಾರೆ.ದೇವಾಲಯದ ಪವಿತ್ರ ವಾತಾವರಣದಲ್ಲಿ ಹೂವುಗಳ ಸುವಾಸನೆ ಭಕ್ತರ ಪರವಶತೆಯನ್ನು ಹೆಚ್ಚಿಸುತ್ತದೆ.
ಹೂವುಗಳನ್ನು ದೇವರಿಗೆ ಕಾಣಿಕೆಯ ರೂಪದಲ್ಲಿ ಅರ್ಪಿಸಿದಾಗ ಹೊರಹೊಮ್ಮುವ ಧನಾತ್ಮಕ ಶಕ್ತಿ ನೆರದವರಲ್ಲಿ ಹಾಗೂ ಸುತ್ತಲ ವಾತಾವರಣದಲ್ಲಿ ದೈವಿಕ ಶಕ್ತಿಯನ್ನು ಮೂಡಿಸುತ್ತದೆ.
ಸದಾ ಆಗಸವನ್ನು ನೋಡುವ ಹೂವುಗಳು ಆಗಸದಿಂದ ಧನಾತ್ಮಕ ಶಕ್ತಿಯನ್ನು ಸೆಳೆದು ಕೆಳಮುಖವಾಗಿರುವ ಪಕಳೆಗಳ ಮೂಲಕ ನೆಲದಲ್ಲಿ ಅಡ್ಡಲಾಗಿ ಪ್ರವಹಿಸುವಂತೆ ಮಾಡುತ್ತವೆ. ಹಿಂದೂ ಧರ್ಮದಲ್ಲಿ ವಿವಿಧ ದೇವರುಗಳಿಗೆ ವಿವಿಧ ಹೂವುಗಳಿಂದ ಪೂಜೆ ಸಲ್ಲಿಸುವುದು ಶ್ರೇಯಸ್ಕರ ಎಂಬ ಭಾವನೆ ಮತ್ತು ನಂಬಿಕೆಯಿದೆ. ಬನ್ನಿ, ಈ ನಂಬಿಕೆಯಂತೆ ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಸಲ್ಲಿಸಿದರೆ ಹೆಚ್ಚು ಫಲಕಾರಿ ಎಂಬುದನ್ನು ನೋಡೊಣ…
ಶಿವ ಅಥವಾ ಈಶ್ವರನಿಗೆ ಬಿಲ್ವಾಪತ್ರೆ ಅತ್ಯಂತ ಇಷ್ಟವಾದ ಎಲೆಗಳು ಎಂದು ಶಿವನ ಭಕ್ತರು ನಂಬುತ್ತಾರೆ. ಇದರ ಹೊರತಾಗಿ ತುಂಬೆ ಹೂವು, ನೇರಳೆ ಆರ್ಕಿಡ್ ಅಥವಾ ಮಂದಾರ ಪುಷ್ಪವೂ ಶಿವನಿಗೆ ಇಷ್ಟವಾಗಿದ್ದು ಈ ಹೂವುಗಳನ್ನು ಶಿವಪೂಜೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇದರ ಜೊತೆಗೇ ಸಂಪಿಗೆ ಮತ್ತು ಕಿರೀಟ ಹೂ ಸಹಾ ಶಿವನ ಅನುಗ್ರಹ ಪಡೆಯಲು ನೆರವಾಗುವ ಹೂವುಗಳಾಗಿವೆ.
ಈಶ್ವರನ ಪತ್ನಿ ಪಾರ್ವತೀದೇವಿಗೆ ಸಲ್ಲಿಸುವ ವಿಶೇಷ ಪಾರ್ಥನೆಯಾದ ಲಲಿತಾ ಸಹಸ್ರನಾಮದಲ್ಲಿ ಹಲವು ಹೂವುಗಳನ್ನು ಉಲ್ಲೇಖಿಸಲಾಗಿದೆ. ಕದಂಬ ವನ ಪಾರ್ವತಿ ಹೆಚ್ಚು ಇಷ್ಟವೆಂದು ಹಲವೆಡೆ ತಿಳಿಸಲಾಗಿದ್ದು ಇದೇ ಕಾರಣಕ್ಕೆ ಆಕೆಗೆ ಕದಂಬವನವಾಸಿನಿ ಎಂಬ ಹೆಸರೂ ಇದೆ.
ಈ ವನದಲ್ಲಿ ಸಿಗುತ್ತದೆ ಎಂಬ ಕಾರಣದಿಂದ ಕದಂಬ ಹೂ ಸಂಪಿಗೆ, ದಾಸವಾಳ, ಕೆಂಡಸಂಪಿಗೆ, ಮಲ್ಲಿಗೆ ಮೊದಲಾದ ಹೂವುಗಳನ್ನು ಪಾರ್ವತಿ ದೇವಿಯ ಪೂಜೆಯಲ್ಲಿ ಬಳಸಲಾಗುತ್ತದೆ.
ಕಾಳಿಯ ಅವತಾರವಾದ ದುರ್ಗಾಮಾತೆಯ ಪೂಜೆಯಲ್ಲಿ ಸಾಮಾನ್ಯವಾಗಿ ಕೆಂಪು ಬಣ್ಣದ ಹೂವುಗಳನ್ನೇ ಬಳಸಲಾಗುತ್ತದೆ. ದಾಸವಾಳ, ಗುಡ್ಡೆ ಹೂ, ಕಣಗಿಲ ಮೊದಲಾದ ಕೆಂಪು ಹೂವುಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ.
ಲಕ್ಷ್ಮಿ ದೇವತೆಗೆ ಕಮಲದ ಹೂವು ಅತಿ ಹೆಚ್ಚು ಇಷ್ಟವಾದ ಹೂವಾಗಿದ್ದು ಲಕ್ಷ್ಮೀಪೂಜೆಯಲ್ಲಿ ಕಮಲವನ್ನೇ ಹೆಚ್ಚು ಉಪಯೋಗಿಸಲಾಗುತ್ತದೆ. ಇನ್ನುಳಿದಂತೆ ಕೇದಿಗೆ, ಸಂಪಿಗೆ, ಸೇವಂತಿಗೆ, ಗೊಂಡೆ ಹೂವುಗಳು ಸಹಾ ಪೂಜೆಗೆ ಅರ್ಹವಾಗಿವೆ.
ಕಮಲ ಮತ್ತು ಕಣಗಿಲೆ ಹೂವುಗಳು ಸುಬ್ರಹ್ಮಣ್ಯನ ಪೂಜೆಗೆ ಅತಿ ಅರ್ಹವಾದ ಹೂವುಗಳಾಗಿವೆ.
ಸರಸ್ವತಿ ದೇವಿಯನ್ನು ವಿದ್ಯಾದೇವತೆ ಎಂದು ನಂಬಲಾಗಿದ್ದು ಬಿಳಿಯ ಕಮಲದ ಹೂವು ಅತಿ ಹೆಚ್ಚು ಪ್ರಿಯ ಎಂದು ಭಕ್ತರು ನಂಬುತ್ತಾರೆ. ಅಂತೆಯೇ ಬಿಳಿಕಮಲ ಹಾಗೂ ಪಾರಿಜಾತ ಹೂವುಗಳನ್ನು ಸರಸ್ವತಿ ಪೂಜೆಯಲ್ಲಿ ಹೆಚ್ಚು ಬಳಸಲಾಗುತ್ತದೆ.
ಹನುಮಂತನಿಗೆ ಸಲ್ಲಿಸುವ ಪೂಜೆಯಲ್ಲಿ ತುಳಸಿ ಎಲೆಗಳು ಮತ್ತು ಅಡಿಕೆಯ ಹಿಂಗಾರದ ಹೂವಿನ ಹಾರವನ್ನು ಅರ್ಪಿಸಲಾಗುತ್ತದೆ. ಈ ಹೂವುಗಳನ್ನು ಪೂಜೆಯಲ್ಲಿ ಅರ್ಪಿಸುವ ಮೂಲಕ ವಿವಿಧ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು.
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಾಸಕ ಆನಂದ್ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…
ನವದೆಹಲಿ, ಇಷ್ಟು ದಿನ ಮೊಟ್ಟೆ ಮಾಂಸಾಹಾರಿಯೋ,ಸಸ್ಯಾಹಾರಿಯೋ ಎಂಬ ವಾದ, ಪ್ರತಿವಾದಗಳು ಯಥೇಚ್ಚವಾಗಿ ನಡೆಯುತ್ತಿದ್ದವು. ಕೆಲವರು ಕೋಳಿಯ ಭ್ರೂಣವಾಗಿರುವುದರಿಂದ ಇದು ಮಾಂಸಾಹಾರ ಎಂದು ಹೇಳಿದರೆ, ಅದುಪೂರ್ತಿ ಕೋಳಿಯ ರೂಪು ಪಡೆದುಕೊಳ್ಳದ ಕಾರಣ ಅದು ಸಸ್ಯಾಹಾರಿ ಎಂದು ವಾದಿಸುವವರು ಅಧಿಕ ಸಂಖ್ಯೆಯಲ್ಲಿದ್ದರು. ಆದರೆ ಈಗ ಈ ಎಲ್ಲ ವಾದ ಪ್ರತಿವಾದಗಳಿಗೆ ಬ್ರೇಕ್ ಹಾಕುವ ಮೂಲಕ ಶುದ್ಧ ಸಸ್ಯ ಜನ್ಯ ಮೊಟ್ಟೆಯನ್ನು ಬೆಳೆಯಬಹುದಾಗಿದೆ! ದೆಹಲಿಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ಟೆಕ್ನಾಲಜಿಯ (ಐಐಟಿ) ಸಂಶೋಧಕರು ಗಿಡದಲ್ಲಿಮೊಟ್ಟೆಯನ್ನು ಬೆಳೆದಿದ್ದಾರೆ. ನಾನ್ ಸಾಯ್, ಗ್ಲುಟೆನ್ಮುಕ್ತವಾಗಿರುವ ಈ ಮೊಟ್ಟೆಯನ್ನು…
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…
ವೃತ್ತಿಪರ ಕೋರ್ಸ್ಗಳ ಸರ್ಕಾರಿ ಕೋಟದ ಸೀಟುಗಳಿಗೆ ಆನ್ಲೈನ್ ನೋಂದಣಿ, ಆಪ್ಶನ್ ಎಂಟ್ರಿ, ಶುಲ್ಕಪಾವತಿ ಮಾಡುವ ಅಭ್ಯರ್ಥಿಗಳು ಮುಂದಿನ ಸಾಲಿನಿಂದ ಸೈಬರ್ ಕೆಫೆ ಸೇರಿದಂತೆ ಕಂಪ್ಯೂಟರ್ ಮೊರೆ ಹೋಗುವ ಅಗತ್ಯವಿಲ್ಲ. ಇದನ್ನೆಲ್ಲಾ ಬೆರಳ ತುದಿಯಲ್ಲೇ ಮಾಡಿ ಮುಗಿಸಬಹುದು.
ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…