ಆಧ್ಯಾತ್ಮ

ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಮಾಡಿದ್ರೆ ಹೆಚ್ಚು ಫಲ ಸಿಗುತ್ತೆ ಗೊತ್ತಾ ನಿಮ್ಗೆ?

2476

ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.

ಪೂಜೆಯ ಬಳಿಕ ಪ್ರಸಾದದ ರೂಪದಲ್ಲಿ ಹೂವುಗಳ ಪಕಳೆಗಳನ್ನೂ ನೀಡಲಾಗುತ್ತದೆ. ಹೂವುಗಳು ಭಕ್ತ ಮತ್ತು ದೇವರ ನಡುವಿನ ಸಂವಹನ ಮಾಧ್ಯಮ ಎಂದೂ ಭಾವಿಸಲಾಗುತ್ತದೆ. ಲಕ್ಷ್ಮಿ ಸರಸ್ವತಿ ಮೊದಲಾದ ದೇವತೆಯರನ್ನು ಕಮಲದ ಹೂವಿನಲ್ಲಿ ಕುಳಿತಿರುವಂತೆಯೇ ಕವಿಗಳು ಮತ್ತು ಚಿತ್ರಕಾರರು ವರ್ಣಿಸಿದ್ದಾರೆ.ದೇವಾಲಯದ ಪವಿತ್ರ ವಾತಾವರಣದಲ್ಲಿ ಹೂವುಗಳ ಸುವಾಸನೆ ಭಕ್ತರ ಪರವಶತೆಯನ್ನು ಹೆಚ್ಚಿಸುತ್ತದೆ.

ಹೂವುಗಳನ್ನು ದೇವರಿಗೆ ಕಾಣಿಕೆಯ ರೂಪದಲ್ಲಿ ಅರ್ಪಿಸಿದಾಗ ಹೊರಹೊಮ್ಮುವ ಧನಾತ್ಮಕ ಶಕ್ತಿ ನೆರದವರಲ್ಲಿ ಹಾಗೂ ಸುತ್ತಲ ವಾತಾವರಣದಲ್ಲಿ ದೈವಿಕ ಶಕ್ತಿಯನ್ನು ಮೂಡಿಸುತ್ತದೆ.

ಸದಾ ಆಗಸವನ್ನು ನೋಡುವ ಹೂವುಗಳು ಆಗಸದಿಂದ ಧನಾತ್ಮಕ ಶಕ್ತಿಯನ್ನು ಸೆಳೆದು ಕೆಳಮುಖವಾಗಿರುವ ಪಕಳೆಗಳ ಮೂಲಕ ನೆಲದಲ್ಲಿ ಅಡ್ಡಲಾಗಿ ಪ್ರವಹಿಸುವಂತೆ ಮಾಡುತ್ತವೆ. ಹಿಂದೂ ಧರ್ಮದಲ್ಲಿ ವಿವಿಧ ದೇವರುಗಳಿಗೆ ವಿವಿಧ ಹೂವುಗಳಿಂದ ಪೂಜೆ ಸಲ್ಲಿಸುವುದು ಶ್ರೇಯಸ್ಕರ ಎಂಬ ಭಾವನೆ ಮತ್ತು ನಂಬಿಕೆಯಿದೆ. ಬನ್ನಿ, ಈ ನಂಬಿಕೆಯಂತೆ ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಸಲ್ಲಿಸಿದರೆ ಹೆಚ್ಚು ಫಲಕಾರಿ ಎಂಬುದನ್ನು ನೋಡೊಣ…

ಶಿವ ಅಥವಾ ಈಶ್ವರನಿಗೆ ಬಿಲ್ವಾಪತ್ರೆ ಅತ್ಯಂತ ಇಷ್ಟವಾದ ಎಲೆಗಳು ಎಂದು ಶಿವನ ಭಕ್ತರು ನಂಬುತ್ತಾರೆ. ಇದರ ಹೊರತಾಗಿ ತುಂಬೆ ಹೂವು, ನೇರಳೆ ಆರ್ಕಿಡ್ ಅಥವಾ ಮಂದಾರ ಪುಷ್ಪವೂ ಶಿವನಿಗೆ ಇಷ್ಟವಾಗಿದ್ದು ಈ ಹೂವುಗಳನ್ನು ಶಿವಪೂಜೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇದರ ಜೊತೆಗೇ ಸಂಪಿಗೆ ಮತ್ತು ಕಿರೀಟ ಹೂ  ಸಹಾ ಶಿವನ ಅನುಗ್ರಹ ಪಡೆಯಲು ನೆರವಾಗುವ ಹೂವುಗಳಾಗಿವೆ.

ಈಶ್ವರನ ಪತ್ನಿ ಪಾರ್ವತೀದೇವಿಗೆ ಸಲ್ಲಿಸುವ ವಿಶೇಷ ಪಾರ್ಥನೆಯಾದ ಲಲಿತಾ ಸಹಸ್ರನಾಮದಲ್ಲಿ ಹಲವು ಹೂವುಗಳನ್ನು ಉಲ್ಲೇಖಿಸಲಾಗಿದೆ. ಕದಂಬ ವನ ಪಾರ್ವತಿ ಹೆಚ್ಚು ಇಷ್ಟವೆಂದು ಹಲವೆಡೆ ತಿಳಿಸಲಾಗಿದ್ದು ಇದೇ ಕಾರಣಕ್ಕೆ ಆಕೆಗೆ ಕದಂಬವನವಾಸಿನಿ ಎಂಬ ಹೆಸರೂ ಇದೆ.

ಈ ವನದಲ್ಲಿ ಸಿಗುತ್ತದೆ ಎಂಬ ಕಾರಣದಿಂದ ಕದಂಬ ಹೂ ಸಂಪಿಗೆ, ದಾಸವಾಳ, ಕೆಂಡಸಂಪಿಗೆ, ಮಲ್ಲಿಗೆ ಮೊದಲಾದ ಹೂವುಗಳನ್ನು ಪಾರ್ವತಿ ದೇವಿಯ ಪೂಜೆಯಲ್ಲಿ ಬಳಸಲಾಗುತ್ತದೆ.

ಕಾಳಿಯ ಅವತಾರವಾದ ದುರ್ಗಾಮಾತೆಯ ಪೂಜೆಯಲ್ಲಿ ಸಾಮಾನ್ಯವಾಗಿ ಕೆಂಪು ಬಣ್ಣದ ಹೂವುಗಳನ್ನೇ ಬಳಸಲಾಗುತ್ತದೆ. ದಾಸವಾಳ, ಗುಡ್ಡೆ ಹೂ, ಕಣಗಿಲ ಮೊದಲಾದ ಕೆಂಪು ಹೂವುಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ.

ಲಕ್ಷ್ಮಿ ದೇವತೆಗೆ ಕಮಲದ ಹೂವು ಅತಿ ಹೆಚ್ಚು ಇಷ್ಟವಾದ ಹೂವಾಗಿದ್ದು ಲಕ್ಷ್ಮೀಪೂಜೆಯಲ್ಲಿ ಕಮಲವನ್ನೇ ಹೆಚ್ಚು ಉಪಯೋಗಿಸಲಾಗುತ್ತದೆ. ಇನ್ನುಳಿದಂತೆ ಕೇದಿಗೆ, ಸಂಪಿಗೆ, ಸೇವಂತಿಗೆ, ಗೊಂಡೆ ಹೂವುಗಳು ಸಹಾ ಪೂಜೆಗೆ ಅರ್ಹವಾಗಿವೆ.

ಕಮಲ ಮತ್ತು ಕಣಗಿಲೆ ಹೂವುಗಳು ಸುಬ್ರಹ್ಮಣ್ಯನ ಪೂಜೆಗೆ ಅತಿ ಅರ್ಹವಾದ ಹೂವುಗಳಾಗಿವೆ.

ಸರಸ್ವತಿ ದೇವಿಯನ್ನು ವಿದ್ಯಾದೇವತೆ ಎಂದು ನಂಬಲಾಗಿದ್ದು ಬಿಳಿಯ ಕಮಲದ ಹೂವು ಅತಿ ಹೆಚ್ಚು ಪ್ರಿಯ ಎಂದು ಭಕ್ತರು ನಂಬುತ್ತಾರೆ. ಅಂತೆಯೇ ಬಿಳಿಕಮಲ ಹಾಗೂ ಪಾರಿಜಾತ ಹೂವುಗಳನ್ನು ಸರಸ್ವತಿ ಪೂಜೆಯಲ್ಲಿ ಹೆಚ್ಚು ಬಳಸಲಾಗುತ್ತದೆ.

ಹನುಮಂತನಿಗೆ ಸಲ್ಲಿಸುವ ಪೂಜೆಯಲ್ಲಿ ತುಳಸಿ ಎಲೆಗಳು ಮತ್ತು ಅಡಿಕೆಯ ಹಿಂಗಾರದ ಹೂವಿನ ಹಾರವನ್ನು ಅರ್ಪಿಸಲಾಗುತ್ತದೆ. ಈ ಹೂವುಗಳನ್ನು ಪೂಜೆಯಲ್ಲಿ ಅರ್ಪಿಸುವ ಮೂಲಕ ವಿವಿಧ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು.

ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…

  • ಸುದ್ದಿ

    ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.

    ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…

  • ಆರೋಗ್ಯ

    ಕಾಲುಗಳ ಸೆಳೆತದಿಂದ ನಿಮ್ಮ ನಿದ್ದೆ ಹಾಳಾಗಿದೆಯೇ..? ಪರಿಹಾರ ತಿಳಿಯಲು ಈ ಲೇಖನ ಓದಿ ..

    ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು.

  • ಉಪಯುಕ್ತ ಮಾಹಿತಿ

    ಕೆಟ್ಟ ದೃಷ್ಟಿ ಇದ್ದರೆ ತಪ್ಪದೆ ವಿಳ್ಳೆದೆಲೆಯಿಂದ ಹೀಗೆ ಮಾಡಿ ಸಾಕು.

    ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…

  • govt, ಕರ್ನಾಟಕ

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನದಲ್ಲಿ KSRTC ವೋಲ್ವೊ ಬಸ್‌ಗೆ ಪ್ರಶಸ್ತಿ, ಯಾಕೆ ಗೊತ್ತಾ.?

    ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್‌ಆರ್‌ಟಿಸಿ) ವೋಲ್ವೊ ಬಸ್‌ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್‌  ಕ್ಲಬ್‌ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್‌ಗಳು ಹೆಚ್ಚಿನ ಮೈಲೇಜ್‌ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್‌ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್‌…

  • ಸುದ್ದಿ

    40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

    ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…