News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಮಾಡಿದ್ರೆ ಹೆಚ್ಚು ಫಲ ಸಿಗುತ್ತೆ ಗೊತ್ತಾ ನಿಮ್ಗೆ?

2503

ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.

ಪೂಜೆಯ ಬಳಿಕ ಪ್ರಸಾದದ ರೂಪದಲ್ಲಿ ಹೂವುಗಳ ಪಕಳೆಗಳನ್ನೂ ನೀಡಲಾಗುತ್ತದೆ. ಹೂವುಗಳು ಭಕ್ತ ಮತ್ತು ದೇವರ ನಡುವಿನ ಸಂವಹನ ಮಾಧ್ಯಮ ಎಂದೂ ಭಾವಿಸಲಾಗುತ್ತದೆ. ಲಕ್ಷ್ಮಿ ಸರಸ್ವತಿ ಮೊದಲಾದ ದೇವತೆಯರನ್ನು ಕಮಲದ ಹೂವಿನಲ್ಲಿ ಕುಳಿತಿರುವಂತೆಯೇ ಕವಿಗಳು ಮತ್ತು ಚಿತ್ರಕಾರರು ವರ್ಣಿಸಿದ್ದಾರೆ.ದೇವಾಲಯದ ಪವಿತ್ರ ವಾತಾವರಣದಲ್ಲಿ ಹೂವುಗಳ ಸುವಾಸನೆ ಭಕ್ತರ ಪರವಶತೆಯನ್ನು ಹೆಚ್ಚಿಸುತ್ತದೆ.

ಹೂವುಗಳನ್ನು ದೇವರಿಗೆ ಕಾಣಿಕೆಯ ರೂಪದಲ್ಲಿ ಅರ್ಪಿಸಿದಾಗ ಹೊರಹೊಮ್ಮುವ ಧನಾತ್ಮಕ ಶಕ್ತಿ ನೆರದವರಲ್ಲಿ ಹಾಗೂ ಸುತ್ತಲ ವಾತಾವರಣದಲ್ಲಿ ದೈವಿಕ ಶಕ್ತಿಯನ್ನು ಮೂಡಿಸುತ್ತದೆ.

ಸದಾ ಆಗಸವನ್ನು ನೋಡುವ ಹೂವುಗಳು ಆಗಸದಿಂದ ಧನಾತ್ಮಕ ಶಕ್ತಿಯನ್ನು ಸೆಳೆದು ಕೆಳಮುಖವಾಗಿರುವ ಪಕಳೆಗಳ ಮೂಲಕ ನೆಲದಲ್ಲಿ ಅಡ್ಡಲಾಗಿ ಪ್ರವಹಿಸುವಂತೆ ಮಾಡುತ್ತವೆ. ಹಿಂದೂ ಧರ್ಮದಲ್ಲಿ ವಿವಿಧ ದೇವರುಗಳಿಗೆ ವಿವಿಧ ಹೂವುಗಳಿಂದ ಪೂಜೆ ಸಲ್ಲಿಸುವುದು ಶ್ರೇಯಸ್ಕರ ಎಂಬ ಭಾವನೆ ಮತ್ತು ನಂಬಿಕೆಯಿದೆ. ಬನ್ನಿ, ಈ ನಂಬಿಕೆಯಂತೆ ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಸಲ್ಲಿಸಿದರೆ ಹೆಚ್ಚು ಫಲಕಾರಿ ಎಂಬುದನ್ನು ನೋಡೊಣ…

ಶಿವ ಅಥವಾ ಈಶ್ವರನಿಗೆ ಬಿಲ್ವಾಪತ್ರೆ ಅತ್ಯಂತ ಇಷ್ಟವಾದ ಎಲೆಗಳು ಎಂದು ಶಿವನ ಭಕ್ತರು ನಂಬುತ್ತಾರೆ. ಇದರ ಹೊರತಾಗಿ ತುಂಬೆ ಹೂವು, ನೇರಳೆ ಆರ್ಕಿಡ್ ಅಥವಾ ಮಂದಾರ ಪುಷ್ಪವೂ ಶಿವನಿಗೆ ಇಷ್ಟವಾಗಿದ್ದು ಈ ಹೂವುಗಳನ್ನು ಶಿವಪೂಜೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇದರ ಜೊತೆಗೇ ಸಂಪಿಗೆ ಮತ್ತು ಕಿರೀಟ ಹೂ  ಸಹಾ ಶಿವನ ಅನುಗ್ರಹ ಪಡೆಯಲು ನೆರವಾಗುವ ಹೂವುಗಳಾಗಿವೆ.

ಈಶ್ವರನ ಪತ್ನಿ ಪಾರ್ವತೀದೇವಿಗೆ ಸಲ್ಲಿಸುವ ವಿಶೇಷ ಪಾರ್ಥನೆಯಾದ ಲಲಿತಾ ಸಹಸ್ರನಾಮದಲ್ಲಿ ಹಲವು ಹೂವುಗಳನ್ನು ಉಲ್ಲೇಖಿಸಲಾಗಿದೆ. ಕದಂಬ ವನ ಪಾರ್ವತಿ ಹೆಚ್ಚು ಇಷ್ಟವೆಂದು ಹಲವೆಡೆ ತಿಳಿಸಲಾಗಿದ್ದು ಇದೇ ಕಾರಣಕ್ಕೆ ಆಕೆಗೆ ಕದಂಬವನವಾಸಿನಿ ಎಂಬ ಹೆಸರೂ ಇದೆ.

ಈ ವನದಲ್ಲಿ ಸಿಗುತ್ತದೆ ಎಂಬ ಕಾರಣದಿಂದ ಕದಂಬ ಹೂ ಸಂಪಿಗೆ, ದಾಸವಾಳ, ಕೆಂಡಸಂಪಿಗೆ, ಮಲ್ಲಿಗೆ ಮೊದಲಾದ ಹೂವುಗಳನ್ನು ಪಾರ್ವತಿ ದೇವಿಯ ಪೂಜೆಯಲ್ಲಿ ಬಳಸಲಾಗುತ್ತದೆ.

ಕಾಳಿಯ ಅವತಾರವಾದ ದುರ್ಗಾಮಾತೆಯ ಪೂಜೆಯಲ್ಲಿ ಸಾಮಾನ್ಯವಾಗಿ ಕೆಂಪು ಬಣ್ಣದ ಹೂವುಗಳನ್ನೇ ಬಳಸಲಾಗುತ್ತದೆ. ದಾಸವಾಳ, ಗುಡ್ಡೆ ಹೂ, ಕಣಗಿಲ ಮೊದಲಾದ ಕೆಂಪು ಹೂವುಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ.

ಲಕ್ಷ್ಮಿ ದೇವತೆಗೆ ಕಮಲದ ಹೂವು ಅತಿ ಹೆಚ್ಚು ಇಷ್ಟವಾದ ಹೂವಾಗಿದ್ದು ಲಕ್ಷ್ಮೀಪೂಜೆಯಲ್ಲಿ ಕಮಲವನ್ನೇ ಹೆಚ್ಚು ಉಪಯೋಗಿಸಲಾಗುತ್ತದೆ. ಇನ್ನುಳಿದಂತೆ ಕೇದಿಗೆ, ಸಂಪಿಗೆ, ಸೇವಂತಿಗೆ, ಗೊಂಡೆ ಹೂವುಗಳು ಸಹಾ ಪೂಜೆಗೆ ಅರ್ಹವಾಗಿವೆ.

ಕಮಲ ಮತ್ತು ಕಣಗಿಲೆ ಹೂವುಗಳು ಸುಬ್ರಹ್ಮಣ್ಯನ ಪೂಜೆಗೆ ಅತಿ ಅರ್ಹವಾದ ಹೂವುಗಳಾಗಿವೆ.

ಸರಸ್ವತಿ ದೇವಿಯನ್ನು ವಿದ್ಯಾದೇವತೆ ಎಂದು ನಂಬಲಾಗಿದ್ದು ಬಿಳಿಯ ಕಮಲದ ಹೂವು ಅತಿ ಹೆಚ್ಚು ಪ್ರಿಯ ಎಂದು ಭಕ್ತರು ನಂಬುತ್ತಾರೆ. ಅಂತೆಯೇ ಬಿಳಿಕಮಲ ಹಾಗೂ ಪಾರಿಜಾತ ಹೂವುಗಳನ್ನು ಸರಸ್ವತಿ ಪೂಜೆಯಲ್ಲಿ ಹೆಚ್ಚು ಬಳಸಲಾಗುತ್ತದೆ.

ಹನುಮಂತನಿಗೆ ಸಲ್ಲಿಸುವ ಪೂಜೆಯಲ್ಲಿ ತುಳಸಿ ಎಲೆಗಳು ಮತ್ತು ಅಡಿಕೆಯ ಹಿಂಗಾರದ ಹೂವಿನ ಹಾರವನ್ನು ಅರ್ಪಿಸಲಾಗುತ್ತದೆ. ಈ ಹೂವುಗಳನ್ನು ಪೂಜೆಯಲ್ಲಿ ಅರ್ಪಿಸುವ ಮೂಲಕ ವಿವಿಧ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು.

ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರೈಲಿನಲ್ಲಿ ಮೃತ ಆತ್ಮಗಳಿಗೂ ಆಗುತ್ತದೆ ಟಿಕೆಟ್ ಬುಕ್ಕಿಂಗ್ …!

    ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….

  • ಸ್ಪೂರ್ತಿ

    ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಕೆ ಪಿಎಚ್‍ಡಿ ಮಾಡಿದ್ದಾರೆ..!ತಿಳಿಯಲು ಇದನ್ನು ಓದಿ..

    ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್‌ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್‍ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್‌ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್‌ಗೆ ಟ್ರಾನ್ಸ್‌ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…

  • ರಾಜಕೀಯ

    ಆತಂಕದ ಭೀತಿಯಲ್ಲಿ ಜೆಡಿಎಸ್ ನ ಬಂಡಾಯ ಶಾಸಕರು..!ಅಸಲಿಗೆ ಆಗಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಇಷ್ಟ ಆದ್ರೆ ಶೇರ್ ಮಾಡಿ…

    ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್‌.ಸಿ.ಬಾಲಕೃಷ್ಣ, ಜಮೀರ್‌ ಅಹ್ಮದ್‌ ಖಾನ್‌, ರಮೇಶ್‌ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್‌ ಅನ್ಸಾರಿ ಮತ್ತು ಭೀಮಾ ನಾಯ್ಕ್‌ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್​ನ ಶ್ರವಣಬೆಳಗೊಳದ ಶಾಸಕ ಸಿ.ಎನ್​. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…

  • ಸುದ್ದಿ

    ಯಡಿಯೂರಪ್ಪನವರ ಕಡೆಯಿಂದ ರಾಜ್ಯದ ವಾಹನ ಸವಾರರಿಗೆ ಸಿಹಿಸುದ್ದಿ.! ಏನದು ಗೊತ್ತೇ..??

    ಕರ್ನಾಟಕದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗುಜರಾತ್ ಮಾದರಿಯಲ್ಲಿ ಇದೀಗ ಕರ್ನಾಕಟವೂ ದುಬಾರಿ ಟ್ರಾಫಿಕ್ ದಂಡದ ಮೊತ್ತವನ್ನು ಕಡಿತಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ.ಕೇಂದ್ರ ಸರ್ಕಾರ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ದಂಡದ ಮೊತ್ತವನ್ನು10 ಪಟ್ಟು ಹೆಚ್ಚಿಸಲಾಗಿತ್ತು. ಇದೀಗ ಕರ್ನಾಟಕ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಹಾಗಾದರೆ ಕರ್ನಾಟಕ ಸರ್ಕಾರ ಟ್ರಾಫಿಕ್ ದಂಡವನ್ನು ಎಷ್ಟು ಕಡಿತಗೊಳಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಮಾತನಾಡಿದ ಅವರು, ಸಂಚಾರ ನಿಯಮ ಉಲ್ಲಂಘಿಸಿದರೆ…

  • ಹಣ ಕಾಸು

    1595ನೇ ಇಸವಿಯಲ್ಲಿ ನಾವು ದಿನನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ

    ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.