News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ

ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಮಾಡಿದ್ರೆ ಹೆಚ್ಚು ಫಲ ಸಿಗುತ್ತೆ ಗೊತ್ತಾ ನಿಮ್ಗೆ?

2502

ಹಿಂದೂ ಧರ್ಮದಲ್ಲಿ ದೇವರ ವಿಗ್ರಹಕ್ಕೆ ಮಾಡುವ ಪೂಜೆಗೆ ಹೆಚ್ಚಿನ ಮಹತ್ವವಿದೆ. ಈ ಪೂಜೆಯಲ್ಲಿ ಹಲವು ಸಾಮಾಗ್ರಿಗಳ ಅಗತ್ಯವಿದ್ದು ತಾಜಾ ಹೂವುಗಳು ಅವಿಭಾಜ್ಯ ಅಂಗವಾಗಿದೆ. ಮನೆಯಲ್ಲಿಯೇ ಆಗಲಿ, ದೇವಸ್ಥಾನಗಳಲ್ಲಿಯೇ ಆಗಲಿ, ಪೂಜೆಯಲ್ಲಿ ಹಲವು ವಿಧದ ಹೂವುಗಳನ್ನು ಇರಿಸಲಾಗಿರಿಸುತ್ತದೆ.

ಪೂಜೆಯ ಬಳಿಕ ಪ್ರಸಾದದ ರೂಪದಲ್ಲಿ ಹೂವುಗಳ ಪಕಳೆಗಳನ್ನೂ ನೀಡಲಾಗುತ್ತದೆ. ಹೂವುಗಳು ಭಕ್ತ ಮತ್ತು ದೇವರ ನಡುವಿನ ಸಂವಹನ ಮಾಧ್ಯಮ ಎಂದೂ ಭಾವಿಸಲಾಗುತ್ತದೆ. ಲಕ್ಷ್ಮಿ ಸರಸ್ವತಿ ಮೊದಲಾದ ದೇವತೆಯರನ್ನು ಕಮಲದ ಹೂವಿನಲ್ಲಿ ಕುಳಿತಿರುವಂತೆಯೇ ಕವಿಗಳು ಮತ್ತು ಚಿತ್ರಕಾರರು ವರ್ಣಿಸಿದ್ದಾರೆ.ದೇವಾಲಯದ ಪವಿತ್ರ ವಾತಾವರಣದಲ್ಲಿ ಹೂವುಗಳ ಸುವಾಸನೆ ಭಕ್ತರ ಪರವಶತೆಯನ್ನು ಹೆಚ್ಚಿಸುತ್ತದೆ.

ಹೂವುಗಳನ್ನು ದೇವರಿಗೆ ಕಾಣಿಕೆಯ ರೂಪದಲ್ಲಿ ಅರ್ಪಿಸಿದಾಗ ಹೊರಹೊಮ್ಮುವ ಧನಾತ್ಮಕ ಶಕ್ತಿ ನೆರದವರಲ್ಲಿ ಹಾಗೂ ಸುತ್ತಲ ವಾತಾವರಣದಲ್ಲಿ ದೈವಿಕ ಶಕ್ತಿಯನ್ನು ಮೂಡಿಸುತ್ತದೆ.

ಸದಾ ಆಗಸವನ್ನು ನೋಡುವ ಹೂವುಗಳು ಆಗಸದಿಂದ ಧನಾತ್ಮಕ ಶಕ್ತಿಯನ್ನು ಸೆಳೆದು ಕೆಳಮುಖವಾಗಿರುವ ಪಕಳೆಗಳ ಮೂಲಕ ನೆಲದಲ್ಲಿ ಅಡ್ಡಲಾಗಿ ಪ್ರವಹಿಸುವಂತೆ ಮಾಡುತ್ತವೆ. ಹಿಂದೂ ಧರ್ಮದಲ್ಲಿ ವಿವಿಧ ದೇವರುಗಳಿಗೆ ವಿವಿಧ ಹೂವುಗಳಿಂದ ಪೂಜೆ ಸಲ್ಲಿಸುವುದು ಶ್ರೇಯಸ್ಕರ ಎಂಬ ಭಾವನೆ ಮತ್ತು ನಂಬಿಕೆಯಿದೆ. ಬನ್ನಿ, ಈ ನಂಬಿಕೆಯಂತೆ ಯಾವ ದೇವರಿಗೆ ಯಾವ ಹೂವಿನ ಮೂಲಕ ಪೂಜೆ ಸಲ್ಲಿಸಿದರೆ ಹೆಚ್ಚು ಫಲಕಾರಿ ಎಂಬುದನ್ನು ನೋಡೊಣ…

ಶಿವ ಅಥವಾ ಈಶ್ವರನಿಗೆ ಬಿಲ್ವಾಪತ್ರೆ ಅತ್ಯಂತ ಇಷ್ಟವಾದ ಎಲೆಗಳು ಎಂದು ಶಿವನ ಭಕ್ತರು ನಂಬುತ್ತಾರೆ. ಇದರ ಹೊರತಾಗಿ ತುಂಬೆ ಹೂವು, ನೇರಳೆ ಆರ್ಕಿಡ್ ಅಥವಾ ಮಂದಾರ ಪುಷ್ಪವೂ ಶಿವನಿಗೆ ಇಷ್ಟವಾಗಿದ್ದು ಈ ಹೂವುಗಳನ್ನು ಶಿವಪೂಜೆಯಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಇದರ ಜೊತೆಗೇ ಸಂಪಿಗೆ ಮತ್ತು ಕಿರೀಟ ಹೂ  ಸಹಾ ಶಿವನ ಅನುಗ್ರಹ ಪಡೆಯಲು ನೆರವಾಗುವ ಹೂವುಗಳಾಗಿವೆ.

ಈಶ್ವರನ ಪತ್ನಿ ಪಾರ್ವತೀದೇವಿಗೆ ಸಲ್ಲಿಸುವ ವಿಶೇಷ ಪಾರ್ಥನೆಯಾದ ಲಲಿತಾ ಸಹಸ್ರನಾಮದಲ್ಲಿ ಹಲವು ಹೂವುಗಳನ್ನು ಉಲ್ಲೇಖಿಸಲಾಗಿದೆ. ಕದಂಬ ವನ ಪಾರ್ವತಿ ಹೆಚ್ಚು ಇಷ್ಟವೆಂದು ಹಲವೆಡೆ ತಿಳಿಸಲಾಗಿದ್ದು ಇದೇ ಕಾರಣಕ್ಕೆ ಆಕೆಗೆ ಕದಂಬವನವಾಸಿನಿ ಎಂಬ ಹೆಸರೂ ಇದೆ.

ಈ ವನದಲ್ಲಿ ಸಿಗುತ್ತದೆ ಎಂಬ ಕಾರಣದಿಂದ ಕದಂಬ ಹೂ ಸಂಪಿಗೆ, ದಾಸವಾಳ, ಕೆಂಡಸಂಪಿಗೆ, ಮಲ್ಲಿಗೆ ಮೊದಲಾದ ಹೂವುಗಳನ್ನು ಪಾರ್ವತಿ ದೇವಿಯ ಪೂಜೆಯಲ್ಲಿ ಬಳಸಲಾಗುತ್ತದೆ.

ಕಾಳಿಯ ಅವತಾರವಾದ ದುರ್ಗಾಮಾತೆಯ ಪೂಜೆಯಲ್ಲಿ ಸಾಮಾನ್ಯವಾಗಿ ಕೆಂಪು ಬಣ್ಣದ ಹೂವುಗಳನ್ನೇ ಬಳಸಲಾಗುತ್ತದೆ. ದಾಸವಾಳ, ಗುಡ್ಡೆ ಹೂ, ಕಣಗಿಲ ಮೊದಲಾದ ಕೆಂಪು ಹೂವುಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ.

ಲಕ್ಷ್ಮಿ ದೇವತೆಗೆ ಕಮಲದ ಹೂವು ಅತಿ ಹೆಚ್ಚು ಇಷ್ಟವಾದ ಹೂವಾಗಿದ್ದು ಲಕ್ಷ್ಮೀಪೂಜೆಯಲ್ಲಿ ಕಮಲವನ್ನೇ ಹೆಚ್ಚು ಉಪಯೋಗಿಸಲಾಗುತ್ತದೆ. ಇನ್ನುಳಿದಂತೆ ಕೇದಿಗೆ, ಸಂಪಿಗೆ, ಸೇವಂತಿಗೆ, ಗೊಂಡೆ ಹೂವುಗಳು ಸಹಾ ಪೂಜೆಗೆ ಅರ್ಹವಾಗಿವೆ.

ಕಮಲ ಮತ್ತು ಕಣಗಿಲೆ ಹೂವುಗಳು ಸುಬ್ರಹ್ಮಣ್ಯನ ಪೂಜೆಗೆ ಅತಿ ಅರ್ಹವಾದ ಹೂವುಗಳಾಗಿವೆ.

ಸರಸ್ವತಿ ದೇವಿಯನ್ನು ವಿದ್ಯಾದೇವತೆ ಎಂದು ನಂಬಲಾಗಿದ್ದು ಬಿಳಿಯ ಕಮಲದ ಹೂವು ಅತಿ ಹೆಚ್ಚು ಪ್ರಿಯ ಎಂದು ಭಕ್ತರು ನಂಬುತ್ತಾರೆ. ಅಂತೆಯೇ ಬಿಳಿಕಮಲ ಹಾಗೂ ಪಾರಿಜಾತ ಹೂವುಗಳನ್ನು ಸರಸ್ವತಿ ಪೂಜೆಯಲ್ಲಿ ಹೆಚ್ಚು ಬಳಸಲಾಗುತ್ತದೆ.

ಹನುಮಂತನಿಗೆ ಸಲ್ಲಿಸುವ ಪೂಜೆಯಲ್ಲಿ ತುಳಸಿ ಎಲೆಗಳು ಮತ್ತು ಅಡಿಕೆಯ ಹಿಂಗಾರದ ಹೂವಿನ ಹಾರವನ್ನು ಅರ್ಪಿಸಲಾಗುತ್ತದೆ. ಈ ಹೂವುಗಳನ್ನು ಪೂಜೆಯಲ್ಲಿ ಅರ್ಪಿಸುವ ಮೂಲಕ ವಿವಿಧ ದೇವರ ಅನುಗ್ರಹಕ್ಕೆ ಪಾತ್ರರಾಗಬಹುದು.

ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬರೋಬ್ಬರಿ 40 ಕೋಟಿ ಆಫರ್ ರಿಜೆಕ್ಟ್ ಮಾಡಿದ ವಿಜಯ್ ದೇವರಕೊಂಡ…!

    ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…

  • ಕರ್ನಾಟಕ

    ರಾಜ್ಯದ 6000 ಶಿಕ್ಷಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ..!

    ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

  • ರಾಜಕೀಯ

    ಮುಂದಿನ ಬಾರಿಯ ಎಲೆಕ್ಷನ್ ನಲ್ಲೂ ಮೋದಿದೆ ಹವಾ…..! ಹೇಗಂತ ತಿಳಿಯಲು ಈ ಲೇಖನ ಓದಿ…

    ಟೈಮ್ಸ್ ನೌ ಮತ್ತು ವಿಎಂಆರ್ ನಡೆಸಿದ ಮತದಾರರ ಅಭಿಪ್ರಾಯ ಸಮೀಕ್ಷೆಯಲ್ಲಿ ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿಯೂ ಭಾರತೀಯ ಜನತಾ ಪಕ್ಷ ಜಯಭೇರಿ ಬಾರಿಸುವ ಮೂಲಕ 6ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿ ದಾಖಲೆ ನಿರ್ಮಿಸಲಿದೆ ಎಂದು ತಿಳಿಸಿದೆ.

  • ಸಿನಿಮಾ

    ಕನ್ನಡಕ್ಕೆ ಬಾಹುಬಲಿಯ “ಬಲ್ಲಾಳದೇವ”

    ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

  • ಸುದ್ದಿ

    ‘ಹುಷಾರ್’ ಹೆತ್ತವರನ್ನು ನಿರ್ಲಕ್ಷಿಸಿದರೆ ಜೈಲು ಪಾಲು ಗ್ಯಾರಂಟಿ..ಎಚ್ಚರ..!

    ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….

  • ಸಂಬಂಧ

    ವರದಕ್ಷಿಣೆ ಬೇಡಿಕೆ ನೀಡಿದ ವರನ ಕುಟುಂಬದವರಿಗೆ ,ಮದುವೆಯಲ್ಲಿ ‘ವಧು’ ನೀಡಿದ ಶಾಕ್ ಏನು ಗೊತ್ತಾ..?ತಿಳಿಯಲು ಇದನ್ನು ಓದಿ..

    ಮದುವೆಯ ದಿನ ವರನ ಕುಟುಂಬದವರು ನಗದು, ಒಡವೆ ಸೇರಿದಂತೆ ಒಂದು ಕೋಟಿ ಮೌಲ್ಯದ ವರದಕ್ಷಿಣೆಗೆ ಬೇಡಿಕೆಯಿಟ್ಟಿದ್ದರಿಂದ ಯುವತಿಯೊಬ್ಬಳು, ವೈದ್ಯನೊಂದಿಗೆ ನಿಗದಿಯಾಗಿದ್ದ ತನ್ನ ಮದುವೆಯನ್ನೇ ಸ್ಥಗಿತಗೊಳಿಸಿದ್ದಾಳೆ. ಡಾ. ರಾಶಿ ವರದಕ್ಷಿಣೆ ವಿರುದ್ಧ ಹೀಗೆ ಸಿಡಿದೆದ್ದ ವಧು.