News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ದೇವರು-ಧರ್ಮ

ಯುಗಾದಿಯ ಹಬ್ಬದ ಮಹತ್ವವೇನು.?ಸಾಂಪ್ರದಾಯಿಕವಾಗಿ ಆಚರಿಸುವುದು ಹೇಗೆ.?ಹಬ್ಬದ ಹಿಂದಿರುವ ಪುರಾಣ ಕತೆ ಏನು.?ತಿಳಿಯಲು ಈ ಲೇಖನಿ ಓದಿ ಮರೆಯದೇ ಶೇರ್ ಮಾಡಿ…

2405

ಯುಗ ಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ  ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ..

ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು…

ಯುಗಾದಿ ಅಂದ್ರೆ ಏನು…

ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.

ಹಿಂದೂಗಳ ಹೊಸ ವರ್ಷ…

ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ.’ ಜನವರಿ 1ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧವಾಗಿ, ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.

ಯುಗಾದಿಯ ಬಗ್ಗೆ ಪುರಾಣ ಹೇಳುವುದೇನು..?

*ಬ್ರಹ್ಮಪುರಾಣಕ್ಕನುಸಾರ ಈಶ್ವರನು ಈ ದಿನದಂದು ವಿಶ್ವದ ನಿರ್ಮಿತಿ ಮಾಡಿದನು. ಶ್ರೀರಾಮಚಂದ್ರನು 14 ವರ್ಷಗಳ ವನವಾಸದ ನಂತರ ರಾವಣನನ್ನು ಕೊನೆ ಗಾಣಿಸಿ ಚೈತ್ರ ಶುಕ್ಲ ಪಕ್ಷ ಪ್ರತಿಪದೆಗೆ ಅಯೋಧ್ಯೆಗೆ ಮರಳಿದನು; ಆದ್ದರಿಂದ ಆ ದಿನದಂದು ಬ್ರಹ್ಮಧ್ವಜಗಳನ್ನು, ತೋರಣಗಳನ್ನು ಕಟ್ಟಿ ಆನಂದದಿಂದ ಅವನನ್ನು ಸ್ವಾಗತಿಸಲಾಯಿತು. ಆ ದಿನದಿಂದ ರಾಮನ ನವರಾತ್ರಿ ಪ್ರಾರಂಭವಾಗುತ್ತದೆ. ಪೈಠಣದ ಸಾತವಾಹನ (ಶಾಲಿವಾಹನ) ವಂಶದ ಗೌಮತಿಪುತ್ರ ಮತ್ತು ಪುಸುಯಾರ್ಮಿ ಈ ಪರಾಕ್ರಮಿ ರಾಜರು ಶತ್ರುಗಳನ್ನು ಪರಾಭವಗೊಳಿಸಿ ವಿಜಯ ಪಡೆದ ಸ್ಮರಣೆಗಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ.

*ಇಂದಿನ ದಿನವೇ ವಿಷ್ಣುವು ಮತ್ಸ್ಯಾವತಾರವನ್ನು ತಳೆದದ್ದೆಂದೂ, ಶಾಲಿವಾಹನ ವಿಕ್ರಮಾದಿತ್ಯನನ್ನು ಜಯಿಸಿ ಶಾಲಿವಾಹನ ಶಕೆ ಎಂದೂ ನವಭಾರತವನ್ನು ನಿರ್ಮಿಸಿದರೆಂದೂ ಚರಿತ್ರೆಯಲ್ಲಿ ನಮೂದಿಸಿರುವರು.

*ಈ ದಿನವೇ ಬ್ರಹ್ಮದೇವನು ಸೃಷ್ಟಿಯನ್ನು ನಿರ್ಮಿಸಿದನು, ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ. ಇದು ಈ ದಿನ ವರ್ಷಾರಂಭ ಮಾಡುವ ಹಿಂದಿನ ಆಧ್ಯಾತ್ಮಿಕ ಕಾರಣವಾಗಿದೆ.

ಸಾಂಪ್ರದಾಯಿಕವಾಗಿ ಯುಗಾದಿಯನ್ನು ಆಚರಿಸುವುದು ಹೇಗೆ…

  • ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆಗಳಲ್ಲಿ ಕೆಲವೆಂದರೆ ಸೂರ್ಯ ನಮಸ್ಕಾರ, ಪಂಚಾಂಗದಪೂಜೆ, ಹಾಗೂ ಸರ್ವೇ-ಸಾಮಾನ್ಯವಾಗಿ “ಬೇವು-ಬೆಲ್ಲ.” ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ. ಯುಗಾದಿಯೆಂದರೆ ಹೊಸವರ್ಷದ ಆರಂಭದ ದಿನವಾದರೂ ಭಾರತದಲ್ಲಿ ಈ ದಿನವನ್ನು ನಿರ್ಧರಿಸುವ ರೀತಿ ಹಲವಾರಿವೆ.
  • ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಪ್ರಭೇದಗಳಿದ್ದು, ಹಿಂದೂ ಧರ್ಮದವೇದಾಂಗ ಜ್ಯೋತಿಷ ಶಾಸ್ತ್ರದಿಂದ ನಿರ್ಣಯಗೊಳ್ಳುತ್ತವೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಾಂದ್ರಮಾನ ಹಾಗೂ ಸೂರ್ಯನ ಗತಿಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತಾರೆ. ಕರ್ನಾಟಕದಲ್ಲಿ ಚಾಂದ್ರಮಾನಪದ್ಧತಿ ಮೊದಲಿನಿಂದ ರೂಢಿಯಲ್ಲಿದೆ.
  • ಭೂಮಿಯಿಂದನೋಡಿದಾಗ, ಸೂರ್ಯ, ಚಂದ್ರ, ಗ್ರಹಗಳು ನಕ್ಷತ್ರಮಂಡಲದಿಂದಾದ ರಾಶಿಚಕ್ರದಲ್ಲಿ ದಿನೇ ದಿನೇ ಸ್ವಲ್ಪ ಸ್ವಲ್ಪವಾಗಿ ಸಂಚರಿಸಿದಂತೆ ಕಾಣುತ್ತವೆ. ವೇದಾಂಗ ಜ್ಯೋತಿಷದಂತೆ, ಮೊದಲ ನಕ್ಷತ್ರ ಅಶ್ವಿನಿ – ಅಂದರೆ ಮೇಷ ರಾಶಿಯ ೦ – ೧೩:೨೦ ಭಾಗ (ಡಿಗ್ರಿ). ಅಲ್ಲಿ ಸೂರ್ಯನಿದ್ದಾಗ ಭೂಮಿಯ ಉತ್ತರಾರ್ಧಗೋಳದಲ್ಲಿ ಸಸ್ಯಗಳಲ್ಲಿ ಚಿಗುರು ಕಾಣುತ್ತದೆ; ಅಂದರೆ ಹೊಸಹುಟ್ಟು.
  • ಆದ್ದರಿಂದ ಅಶ್ವಿನೀ ನಕ್ಷತ್ರಕ್ಕೆ ರವಿಯು ಪ್ರವೇಶಿಸುವ ಕಾಲವನ್ನು ಹೊಸವರ್ಷ ಎಂದು ಪರಿಗಣಿಸುತ್ತಾರೆ. ಇದೇ ಸೌರಮಾನ ಯುಗಾದಿ. ಸಾಮಾನ್ಯವಾಗಿ ಈಗ ಇದುಏಪ್ರಿಲ್ 14 ಅಥವಾ 15 ನೇ ತಾರೀಖಿಗೆ ಬೀಳುತ್ತದೆ. ಆದರೆ ಚಂದ್ರನ ಗತಿ ಅತಿವೇಗವಾದ್ದರಿಂದ ಪ್ರತಿ ಪ್ರದಕ್ಷಿಣೆಗೂ ಒಂದೊಂದು ತಿಂಗಳಾಗಿ, ಹನ್ನೆರಡು ಪ್ರದಕ್ಷಿಣೆಗಳಿಗೆ ಸರಿಯಾಗಿ ಒಂದು ಚಾಂದ್ರಮಾನ ಸಂವತ್ಸರವಾಗುತ್ತದೆ.
  • ರವಿಚಂದ್ರರ ಗತಿಯನ್ನವಲಂಬಿಸಿ, 11 ರಿಂದ 13 ಪೂರ್ಣಿಮೆ/ಅಮಾವಾಸ್ಯೆಗಳಿಗೊಂದು ಚಾಂದ್ರಮಾನ ಯುಗಾದಿಯಾಗುತ್ತದೆ. ಈ ಯುಗಾದಿನಿರ್ಣಯದ ಹಿಂದೆ ವೇದಾಂಗ ಜ್ಯೋತಿಷದ ಮಹತ್ತರ ಸಾಧನೆಗಳೇ ಅಡಗಿವೆ; ಅದರಿಂದ ನಮ್ಮ ಪೂರ್ವಿಕರ ಖಗೋಲಗಣಿತದ ಅಪಾರ ಜ್ಞಾನ ವ್ಯಕ್ತವಾಗುತ್ತದೆ.

ಯುಗಾದಿ ಆಚರಣೆಯ ವಿಧಾನ..

  • ಈ ಹಬ್ಬವನ್ನು ಹೆಚ್ಚಾಗಿ ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಡ್ವ. ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಡ್ವ – ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ ‘ಗುಡಿ’ ಎಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತ.
  • ಆಂಧ್ರ ಪ್ರದೇಶದಲ್ಲಿ ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೆಣಸು, ಬೇವು ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಸೇವಿಸುವರು. ಅಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುವುದು.
  • ತಳಿರು ತೋರಣವನ್ನು (ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು) ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು.

  • ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನಿಡುವರು. ಮುಂಜಾನೆ ಬೇಗನೆದ್ದು ಅಭ್ಯಂಜನ (ಎಣ್ಣೆ ಸೀಗೇಕಾಯಿಯಿಂದ ತಲೆಯನ್ನು ತೊಳೆದುಕೊಳ್ಳುವುದು) ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು. ನಂತರ ಹೊಸ ಬಟ್ಟೆ ಧರಿಸಿ ಪಂಚಾಂಗವನ್ನು ಮನೆಯ ಹಿರಿಯರು ಓದುವರು ಮತ್ತೆಲ್ಲರೂ ಅದನ್ನು ಕೇಳುವರು.
  • ಪಂಚಾಂಗ ಹಿಂದೂ ಸಂಪ್ರದಾಯದ ಕ್ಯಾಲೆಂಡರ್. ಇದು ದಿನಸೂಚಿಯಷ್ಟೆ ಅಲ್ಲದೇ ಆ ವರುಷದಲ್ಲಿ ಮಳೆ ಬೆಳೆ ಹೇಗಿದೆ, ರಾಶಿಫಲ, ಮದುವೆ ಉಪನಯನಗಳಿಗೆ ಒಳ್ಳೆಯ ಮುಹೂರ್ತಗಳು, ಒಟ್ಟರೆ ಜನಜೀವನದ ಸ್ಥಿತಿಯನ್ನು ಸೂಚಿಸಿರುವುದು. ಅಂದು ಹಿರಿಯ ಕಿರಿಯರೆಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ ಸಂತೋಷದಿಂದ ಹಾಡಿ ನಲಿವರು.

ಯುಗಾದಿಯ ವಿಶೇಷ ತಿನಿಸು…

  • ಒಬ್ಬಟ್ಟು ಅಥವಾಹೋಳಿಗೆ. ತೆಂಗಿನಕಾಯಿಹೂರಣದಲ್ಲಿ ಮಾಡಿದ ಹೋಳಿಗೆ ಬಹಳ ದಿನ ಇರದೇ ಕೆಡುವುದೆಂದು ಬೇಳೆಯ ಹೂರಣದಲ್ಲಿ ಮಾಡುವರು. *ಇದನ್ನೇ ಮರಾಠಿಯಲ್ಲಿ ಪೂರಣ ಪೋಳಿ ಎಂದು ಕರೆವರು. ಸಂಜೆಯ ವೇಳೆಯಲ್ಲಿ ಗುರು ಹಿರಿಯರ ಮನೆಗಳಿಗೆ ಹೋಗಿ ಅವರಿಗೆ ಕಾಲುಮುಟ್ಟಿ ನಮಸ್ಕರಿಸಿ ಅವರ ಆಶೀರ್ವಾದ ಪಡೆವರು.
  • ಈಗೀಗ ಟಿವಿಯಲ್ಲಿ ಕವಿಗೋಷ್ಠಿಯೂ ಪ್ರಸಾರ ಮಾಡುವರು. ಇನ್ನೊಂದು ವಿಶೇಷ ವೆಂದರೆ ಇದೇ ಸಮಯದಲ್ಲಿ ಮಕ್ಕಳಿಗೆ ಪರೀಕ್ಷೆಗಳಿರುವುದರಿಂದ, ಈ ನೆಪದಲ್ಲಾದರೂ ಹಿರಿಯರಿಗೆ ಬಗ್ಗಿ ನಮಸ್ಕರಿಸಿ ಅವರಿಂದ ಒಳ್ಳೆಯದಾಗಲೆಂಬ ಮಾತುಗಳನ್ನು ಸ್ವೀಕರಿಸುವ ಸಂದರ್ಭ ಒದಗಿಬರುವುದು. ಮನೆಯ ಹೆಂಗಸರು ಹೊಸದಾಗಿ ಬರುವ ಮಾವಿನಕಾಯಿಯಿಂದ ಉಪ್ಪಿನಕಾಯಿಯನ್ನು ಮಾಡುವರು.

ಬೇವು-ಬೆಲ್ಲದ ಮಹತ್ವ…

ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ. ಮೂಲ 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ

    ಒಂದು ಸಾಮಾನ್ಯ ಪುಟ್ಟ ಹಳ್ಳಿಯಿಂದ ಬಂದು ಕನಸನ್ನು ಕನಸಾಗಿ ಬಿಡದೆ ಸಾಧನೆ ಮಾಡಿದ ಮಹಿಳೆ!

    ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…

  • ಸಿನಿಮಾ

    ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

    9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…

  • ಜ್ಯೋತಿಷ್ಯ

    ದಿನ ಭವಿಷ್ಯ ….ಪಂಡಿತ್ ವಿಶ್ವರೂಪ ಆಚಾರ್ಯರವರಿಂದ ….ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ …ಶೇರ್ ಮಾಡಿ ….!

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ರಾಜಕೀಯ

    ಇಲ್ಲಿದೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ…ನಿಮ್ಮ ಕ್ಷೇತ್ರದ ಅಭ್ಯರ್ಥಿ ಯಾರು..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್‌, ಲಿಂಗಸುಗೂರು– ಮಾನಪ್ಪ ವಜ್ಜಲ್‌, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್‌ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…

  • ಜೀವನಶೈಲಿ

    ನೀವ್ ಈ ವಸ್ತುಗಳನ್ನು ಮುಟ್ಟಿದ್ರೆ,ದುರಾದೃಷ್ಟ ನಿಮ್ಮ ಬೆನ್ನು ಬೀಳುತ್ತೆ..!ಶಾಕ್ ಆಗ್ಬೇಡಿ!ಈ ಲೇಖನಿ ಓದಿ…

    ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಾನೂ ತುಂಬಾ ಎತ್ತರಕ್ಕೆ ಬೆಳೆಯಬೇಕು,ಎಲ್ಲರಂಚೆನ್ನಾಗಿ ಬದುಕಬೇಕು, ತಾವು ಶ್ರೀಮಂತರಾಗಬೇಕು ಎಂಬ ಆಸೆಯಿಂದ, ಎಲ್ಲರೂ ಕಷ್ಟಪಟ್ಟು ದುಡಿಯುತ್ತಾರೆ, ಆದ್ರೆ ತಾವು ಎಷ್ಟು ದುಡಿದ್ರೂ ಕೆಲವರಿಗೆ ಮುಂದೆ ಬರಲು ಸಾಧ್ಯವಾಗುವುದಿಲ್ಲ.ಇದಕ್ಕೆ ಹಲವಾರು ಕಾರಣಗಳಿವೆ.

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ,.!ಇಲ್ಲಿದೆ ನೋಡಿ ಮುಖ್ಯ ಮಾಹಿತಿ,.!!

    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…