News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇವರು-ಧರ್ಮ

ಯುಗಾದಿಯ ಹಬ್ಬದ ಮಹತ್ವವೇನು.?ಸಾಂಪ್ರದಾಯಿಕವಾಗಿ ಆಚರಿಸುವುದು ಹೇಗೆ.?ಹಬ್ಬದ ಹಿಂದಿರುವ ಪುರಾಣ ಕತೆ ಏನು.?ತಿಳಿಯಲು ಈ ಲೇಖನಿ ಓದಿ ಮರೆಯದೇ ಶೇರ್ ಮಾಡಿ…

2408

ಯುಗ ಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ  ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ..

ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು…

ಯುಗಾದಿ ಅಂದ್ರೆ ಏನು…

ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.

ಹಿಂದೂಗಳ ಹೊಸ ವರ್ಷ…

ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ.’ ಜನವರಿ 1ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧವಾಗಿ, ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.

ಯುಗಾದಿಯ ಬಗ್ಗೆ ಪುರಾಣ ಹೇಳುವುದೇನು..?

*ಬ್ರಹ್ಮಪುರಾಣಕ್ಕನುಸಾರ ಈಶ್ವರನು ಈ ದಿನದಂದು ವಿಶ್ವದ ನಿರ್ಮಿತಿ ಮಾಡಿದನು. ಶ್ರೀರಾಮಚಂದ್ರನು 14 ವರ್ಷಗಳ ವನವಾಸದ ನಂತರ ರಾವಣನನ್ನು ಕೊನೆ ಗಾಣಿಸಿ ಚೈತ್ರ ಶುಕ್ಲ ಪಕ್ಷ ಪ್ರತಿಪದೆಗೆ ಅಯೋಧ್ಯೆಗೆ ಮರಳಿದನು; ಆದ್ದರಿಂದ ಆ ದಿನದಂದು ಬ್ರಹ್ಮಧ್ವಜಗಳನ್ನು, ತೋರಣಗಳನ್ನು ಕಟ್ಟಿ ಆನಂದದಿಂದ ಅವನನ್ನು ಸ್ವಾಗತಿಸಲಾಯಿತು. ಆ ದಿನದಿಂದ ರಾಮನ ನವರಾತ್ರಿ ಪ್ರಾರಂಭವಾಗುತ್ತದೆ. ಪೈಠಣದ ಸಾತವಾಹನ (ಶಾಲಿವಾಹನ) ವಂಶದ ಗೌಮತಿಪುತ್ರ ಮತ್ತು ಪುಸುಯಾರ್ಮಿ ಈ ಪರಾಕ್ರಮಿ ರಾಜರು ಶತ್ರುಗಳನ್ನು ಪರಾಭವಗೊಳಿಸಿ ವಿಜಯ ಪಡೆದ ಸ್ಮರಣೆಗಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ.

*ಇಂದಿನ ದಿನವೇ ವಿಷ್ಣುವು ಮತ್ಸ್ಯಾವತಾರವನ್ನು ತಳೆದದ್ದೆಂದೂ, ಶಾಲಿವಾಹನ ವಿಕ್ರಮಾದಿತ್ಯನನ್ನು ಜಯಿಸಿ ಶಾಲಿವಾಹನ ಶಕೆ ಎಂದೂ ನವಭಾರತವನ್ನು ನಿರ್ಮಿಸಿದರೆಂದೂ ಚರಿತ್ರೆಯಲ್ಲಿ ನಮೂದಿಸಿರುವರು.

*ಈ ದಿನವೇ ಬ್ರಹ್ಮದೇವನು ಸೃಷ್ಟಿಯನ್ನು ನಿರ್ಮಿಸಿದನು, ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ. ಇದು ಈ ದಿನ ವರ್ಷಾರಂಭ ಮಾಡುವ ಹಿಂದಿನ ಆಧ್ಯಾತ್ಮಿಕ ಕಾರಣವಾಗಿದೆ.

ಸಾಂಪ್ರದಾಯಿಕವಾಗಿ ಯುಗಾದಿಯನ್ನು ಆಚರಿಸುವುದು ಹೇಗೆ…

  • ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆಗಳಲ್ಲಿ ಕೆಲವೆಂದರೆ ಸೂರ್ಯ ನಮಸ್ಕಾರ, ಪಂಚಾಂಗದಪೂಜೆ, ಹಾಗೂ ಸರ್ವೇ-ಸಾಮಾನ್ಯವಾಗಿ “ಬೇವು-ಬೆಲ್ಲ.” ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ. ಯುಗಾದಿಯೆಂದರೆ ಹೊಸವರ್ಷದ ಆರಂಭದ ದಿನವಾದರೂ ಭಾರತದಲ್ಲಿ ಈ ದಿನವನ್ನು ನಿರ್ಧರಿಸುವ ರೀತಿ ಹಲವಾರಿವೆ.
  • ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಪ್ರಭೇದಗಳಿದ್ದು, ಹಿಂದೂ ಧರ್ಮದವೇದಾಂಗ ಜ್ಯೋತಿಷ ಶಾಸ್ತ್ರದಿಂದ ನಿರ್ಣಯಗೊಳ್ಳುತ್ತವೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಾಂದ್ರಮಾನ ಹಾಗೂ ಸೂರ್ಯನ ಗತಿಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತಾರೆ. ಕರ್ನಾಟಕದಲ್ಲಿ ಚಾಂದ್ರಮಾನಪದ್ಧತಿ ಮೊದಲಿನಿಂದ ರೂಢಿಯಲ್ಲಿದೆ.
  • ಭೂಮಿಯಿಂದನೋಡಿದಾಗ, ಸೂರ್ಯ, ಚಂದ್ರ, ಗ್ರಹಗಳು ನಕ್ಷತ್ರಮಂಡಲದಿಂದಾದ ರಾಶಿಚಕ್ರದಲ್ಲಿ ದಿನೇ ದಿನೇ ಸ್ವಲ್ಪ ಸ್ವಲ್ಪವಾಗಿ ಸಂಚರಿಸಿದಂತೆ ಕಾಣುತ್ತವೆ. ವೇದಾಂಗ ಜ್ಯೋತಿಷದಂತೆ, ಮೊದಲ ನಕ್ಷತ್ರ ಅಶ್ವಿನಿ – ಅಂದರೆ ಮೇಷ ರಾಶಿಯ ೦ – ೧೩:೨೦ ಭಾಗ (ಡಿಗ್ರಿ). ಅಲ್ಲಿ ಸೂರ್ಯನಿದ್ದಾಗ ಭೂಮಿಯ ಉತ್ತರಾರ್ಧಗೋಳದಲ್ಲಿ ಸಸ್ಯಗಳಲ್ಲಿ ಚಿಗುರು ಕಾಣುತ್ತದೆ; ಅಂದರೆ ಹೊಸಹುಟ್ಟು.
  • ಆದ್ದರಿಂದ ಅಶ್ವಿನೀ ನಕ್ಷತ್ರಕ್ಕೆ ರವಿಯು ಪ್ರವೇಶಿಸುವ ಕಾಲವನ್ನು ಹೊಸವರ್ಷ ಎಂದು ಪರಿಗಣಿಸುತ್ತಾರೆ. ಇದೇ ಸೌರಮಾನ ಯುಗಾದಿ. ಸಾಮಾನ್ಯವಾಗಿ ಈಗ ಇದುಏಪ್ರಿಲ್ 14 ಅಥವಾ 15 ನೇ ತಾರೀಖಿಗೆ ಬೀಳುತ್ತದೆ. ಆದರೆ ಚಂದ್ರನ ಗತಿ ಅತಿವೇಗವಾದ್ದರಿಂದ ಪ್ರತಿ ಪ್ರದಕ್ಷಿಣೆಗೂ ಒಂದೊಂದು ತಿಂಗಳಾಗಿ, ಹನ್ನೆರಡು ಪ್ರದಕ್ಷಿಣೆಗಳಿಗೆ ಸರಿಯಾಗಿ ಒಂದು ಚಾಂದ್ರಮಾನ ಸಂವತ್ಸರವಾಗುತ್ತದೆ.
  • ರವಿಚಂದ್ರರ ಗತಿಯನ್ನವಲಂಬಿಸಿ, 11 ರಿಂದ 13 ಪೂರ್ಣಿಮೆ/ಅಮಾವಾಸ್ಯೆಗಳಿಗೊಂದು ಚಾಂದ್ರಮಾನ ಯುಗಾದಿಯಾಗುತ್ತದೆ. ಈ ಯುಗಾದಿನಿರ್ಣಯದ ಹಿಂದೆ ವೇದಾಂಗ ಜ್ಯೋತಿಷದ ಮಹತ್ತರ ಸಾಧನೆಗಳೇ ಅಡಗಿವೆ; ಅದರಿಂದ ನಮ್ಮ ಪೂರ್ವಿಕರ ಖಗೋಲಗಣಿತದ ಅಪಾರ ಜ್ಞಾನ ವ್ಯಕ್ತವಾಗುತ್ತದೆ.

ಯುಗಾದಿ ಆಚರಣೆಯ ವಿಧಾನ..

  • ಈ ಹಬ್ಬವನ್ನು ಹೆಚ್ಚಾಗಿ ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಡ್ವ. ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಡ್ವ – ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ ‘ಗುಡಿ’ ಎಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತ.
  • ಆಂಧ್ರ ಪ್ರದೇಶದಲ್ಲಿ ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೆಣಸು, ಬೇವು ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಸೇವಿಸುವರು. ಅಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುವುದು.
  • ತಳಿರು ತೋರಣವನ್ನು (ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು) ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು.

  • ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನಿಡುವರು. ಮುಂಜಾನೆ ಬೇಗನೆದ್ದು ಅಭ್ಯಂಜನ (ಎಣ್ಣೆ ಸೀಗೇಕಾಯಿಯಿಂದ ತಲೆಯನ್ನು ತೊಳೆದುಕೊಳ್ಳುವುದು) ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು. ನಂತರ ಹೊಸ ಬಟ್ಟೆ ಧರಿಸಿ ಪಂಚಾಂಗವನ್ನು ಮನೆಯ ಹಿರಿಯರು ಓದುವರು ಮತ್ತೆಲ್ಲರೂ ಅದನ್ನು ಕೇಳುವರು.
  • ಪಂಚಾಂಗ ಹಿಂದೂ ಸಂಪ್ರದಾಯದ ಕ್ಯಾಲೆಂಡರ್. ಇದು ದಿನಸೂಚಿಯಷ್ಟೆ ಅಲ್ಲದೇ ಆ ವರುಷದಲ್ಲಿ ಮಳೆ ಬೆಳೆ ಹೇಗಿದೆ, ರಾಶಿಫಲ, ಮದುವೆ ಉಪನಯನಗಳಿಗೆ ಒಳ್ಳೆಯ ಮುಹೂರ್ತಗಳು, ಒಟ್ಟರೆ ಜನಜೀವನದ ಸ್ಥಿತಿಯನ್ನು ಸೂಚಿಸಿರುವುದು. ಅಂದು ಹಿರಿಯ ಕಿರಿಯರೆಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ ಸಂತೋಷದಿಂದ ಹಾಡಿ ನಲಿವರು.

ಯುಗಾದಿಯ ವಿಶೇಷ ತಿನಿಸು…

  • ಒಬ್ಬಟ್ಟು ಅಥವಾಹೋಳಿಗೆ. ತೆಂಗಿನಕಾಯಿಹೂರಣದಲ್ಲಿ ಮಾಡಿದ ಹೋಳಿಗೆ ಬಹಳ ದಿನ ಇರದೇ ಕೆಡುವುದೆಂದು ಬೇಳೆಯ ಹೂರಣದಲ್ಲಿ ಮಾಡುವರು. *ಇದನ್ನೇ ಮರಾಠಿಯಲ್ಲಿ ಪೂರಣ ಪೋಳಿ ಎಂದು ಕರೆವರು. ಸಂಜೆಯ ವೇಳೆಯಲ್ಲಿ ಗುರು ಹಿರಿಯರ ಮನೆಗಳಿಗೆ ಹೋಗಿ ಅವರಿಗೆ ಕಾಲುಮುಟ್ಟಿ ನಮಸ್ಕರಿಸಿ ಅವರ ಆಶೀರ್ವಾದ ಪಡೆವರು.
  • ಈಗೀಗ ಟಿವಿಯಲ್ಲಿ ಕವಿಗೋಷ್ಠಿಯೂ ಪ್ರಸಾರ ಮಾಡುವರು. ಇನ್ನೊಂದು ವಿಶೇಷ ವೆಂದರೆ ಇದೇ ಸಮಯದಲ್ಲಿ ಮಕ್ಕಳಿಗೆ ಪರೀಕ್ಷೆಗಳಿರುವುದರಿಂದ, ಈ ನೆಪದಲ್ಲಾದರೂ ಹಿರಿಯರಿಗೆ ಬಗ್ಗಿ ನಮಸ್ಕರಿಸಿ ಅವರಿಂದ ಒಳ್ಳೆಯದಾಗಲೆಂಬ ಮಾತುಗಳನ್ನು ಸ್ವೀಕರಿಸುವ ಸಂದರ್ಭ ಒದಗಿಬರುವುದು. ಮನೆಯ ಹೆಂಗಸರು ಹೊಸದಾಗಿ ಬರುವ ಮಾವಿನಕಾಯಿಯಿಂದ ಉಪ್ಪಿನಕಾಯಿಯನ್ನು ಮಾಡುವರು.

ಬೇವು-ಬೆಲ್ಲದ ಮಹತ್ವ…

ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ. ಮೂಲ 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Animals

    ಕೋಲಾರದಲ್ಲಿಆನೆಗಳ ಆರೈಕೆ ಕೇಂದ್ರ ಸ್ಥಾಪನೆ!

    ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…

  • ಜಯಂತಿಗಳು

    ಇಂದು ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ…ಗಾಂಧಿ ಜಯಂತಿ ಸ್ವಾತಂತ್ರಕ್ಕೆ ಮುಂಚೆ ಆಚರಿಸಲಾಗಿತ್ತು!ಯಾವಾಗ ಗೊತ್ತಾ..?

    ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.

  • ಸುದ್ದಿ

    ಎಲೆಕ್ಷನ್ ಮುಗಿದ ನಂತರ, ಸುಮಲತಾ ಅಂಬರೀಶ್ ಊರು ಖಾಲಿ ಮಾಡುತ್ತಾರೆ ಎಂದ ರೇವಣ್ಣ..?

    ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಎಲ್ಲಾ ಕಾಲದಲ್ಲೂ ನಿಮ್ಮ ಮಾತೇ ಅಂತಿಮ ಎನ್ನುವ ಧೋರಣೆ ಬಿಡಿ. ಇತರರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    ಫ್ರೆಂಡ್​ಶಿಪ್ ಡೇಗೆ ಸ್ನೇಹಿತರೊಂದಿಗೆ ಪವರ್ ​ಸ್ಟಾರ್ ಪುನೀತ್ ಜಾಲಿ ಟ್ರಿಪ್…!

    ಪವರ್​ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್​ನಲ್ಲೇ ಆ್ಯಕ್ಷನ್. ಪವರ್​ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್​ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್​ಕುಮಾರ್ ಅವರು ಹಾಕಿರುವ ಈ…

  • ಸೌಂದರ್ಯ

    ಸೌತೆಕಾಯಿಯಲ್ಲಿದೆ ತೇವಾಂಶಭರಿತವಾದ ತ್ವಚೆಯ ಗುಟ್ಟು.! ತಿಳಿಯಲು ಈ ಲೇಖನ ಓದಿ..

    ಸೌತೆ ಕಾಯಿ ತೇವಾಂಶಭರಿತವಾದದ್ದು ಇದು ಎಲ್ಲಾರಿಗೂ ತಿಳಿದಿರುವ ವಿಷಯ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಹೆವಿಸುವುದು ಒಳ್ಳೆಯದು ಏಕೆಂದರೆ ಇದು ದೇಹದ ಉಷ್ಣಾಂಶವನ್ನ ಕಡಿಮೆ ಮಾಡುತ್ತದೆ. ಇದನ್ನ ಚಳಿಗಾಲದಲ್ಲಿ ತಿಂದರೆ ಶೀತವಾಗುತ್ತದೆ ಎಂದು ಎಲ್ಲರು ನಂಬುತ್ತಾರೆ, ಆದರೆ ಇದು ಚಳಿಗಾಲದಲ್ಲಿ ನಮ್ಮ ತ್ವಚೆಯಣ್ಣ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.