News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇವರು-ಧರ್ಮ

ಯುಗಾದಿಯ ಹಬ್ಬದ ಮಹತ್ವವೇನು.?ಸಾಂಪ್ರದಾಯಿಕವಾಗಿ ಆಚರಿಸುವುದು ಹೇಗೆ.?ಹಬ್ಬದ ಹಿಂದಿರುವ ಪುರಾಣ ಕತೆ ಏನು.?ತಿಳಿಯಲು ಈ ಲೇಖನಿ ಓದಿ ಮರೆಯದೇ ಶೇರ್ ಮಾಡಿ…

2406

ಯುಗ ಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ  ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ..

ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು…

ಯುಗಾದಿ ಅಂದ್ರೆ ಏನು…

ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.

ಹಿಂದೂಗಳ ಹೊಸ ವರ್ಷ…

ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ.’ ಜನವರಿ 1ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧವಾಗಿ, ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.

ಯುಗಾದಿಯ ಬಗ್ಗೆ ಪುರಾಣ ಹೇಳುವುದೇನು..?

*ಬ್ರಹ್ಮಪುರಾಣಕ್ಕನುಸಾರ ಈಶ್ವರನು ಈ ದಿನದಂದು ವಿಶ್ವದ ನಿರ್ಮಿತಿ ಮಾಡಿದನು. ಶ್ರೀರಾಮಚಂದ್ರನು 14 ವರ್ಷಗಳ ವನವಾಸದ ನಂತರ ರಾವಣನನ್ನು ಕೊನೆ ಗಾಣಿಸಿ ಚೈತ್ರ ಶುಕ್ಲ ಪಕ್ಷ ಪ್ರತಿಪದೆಗೆ ಅಯೋಧ್ಯೆಗೆ ಮರಳಿದನು; ಆದ್ದರಿಂದ ಆ ದಿನದಂದು ಬ್ರಹ್ಮಧ್ವಜಗಳನ್ನು, ತೋರಣಗಳನ್ನು ಕಟ್ಟಿ ಆನಂದದಿಂದ ಅವನನ್ನು ಸ್ವಾಗತಿಸಲಾಯಿತು. ಆ ದಿನದಿಂದ ರಾಮನ ನವರಾತ್ರಿ ಪ್ರಾರಂಭವಾಗುತ್ತದೆ. ಪೈಠಣದ ಸಾತವಾಹನ (ಶಾಲಿವಾಹನ) ವಂಶದ ಗೌಮತಿಪುತ್ರ ಮತ್ತು ಪುಸುಯಾರ್ಮಿ ಈ ಪರಾಕ್ರಮಿ ರಾಜರು ಶತ್ರುಗಳನ್ನು ಪರಾಭವಗೊಳಿಸಿ ವಿಜಯ ಪಡೆದ ಸ್ಮರಣೆಗಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ.

*ಇಂದಿನ ದಿನವೇ ವಿಷ್ಣುವು ಮತ್ಸ್ಯಾವತಾರವನ್ನು ತಳೆದದ್ದೆಂದೂ, ಶಾಲಿವಾಹನ ವಿಕ್ರಮಾದಿತ್ಯನನ್ನು ಜಯಿಸಿ ಶಾಲಿವಾಹನ ಶಕೆ ಎಂದೂ ನವಭಾರತವನ್ನು ನಿರ್ಮಿಸಿದರೆಂದೂ ಚರಿತ್ರೆಯಲ್ಲಿ ನಮೂದಿಸಿರುವರು.

*ಈ ದಿನವೇ ಬ್ರಹ್ಮದೇವನು ಸೃಷ್ಟಿಯನ್ನು ನಿರ್ಮಿಸಿದನು, ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ. ಇದು ಈ ದಿನ ವರ್ಷಾರಂಭ ಮಾಡುವ ಹಿಂದಿನ ಆಧ್ಯಾತ್ಮಿಕ ಕಾರಣವಾಗಿದೆ.

ಸಾಂಪ್ರದಾಯಿಕವಾಗಿ ಯುಗಾದಿಯನ್ನು ಆಚರಿಸುವುದು ಹೇಗೆ…

  • ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆಗಳಲ್ಲಿ ಕೆಲವೆಂದರೆ ಸೂರ್ಯ ನಮಸ್ಕಾರ, ಪಂಚಾಂಗದಪೂಜೆ, ಹಾಗೂ ಸರ್ವೇ-ಸಾಮಾನ್ಯವಾಗಿ “ಬೇವು-ಬೆಲ್ಲ.” ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ. ಯುಗಾದಿಯೆಂದರೆ ಹೊಸವರ್ಷದ ಆರಂಭದ ದಿನವಾದರೂ ಭಾರತದಲ್ಲಿ ಈ ದಿನವನ್ನು ನಿರ್ಧರಿಸುವ ರೀತಿ ಹಲವಾರಿವೆ.
  • ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಪ್ರಭೇದಗಳಿದ್ದು, ಹಿಂದೂ ಧರ್ಮದವೇದಾಂಗ ಜ್ಯೋತಿಷ ಶಾಸ್ತ್ರದಿಂದ ನಿರ್ಣಯಗೊಳ್ಳುತ್ತವೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಾಂದ್ರಮಾನ ಹಾಗೂ ಸೂರ್ಯನ ಗತಿಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತಾರೆ. ಕರ್ನಾಟಕದಲ್ಲಿ ಚಾಂದ್ರಮಾನಪದ್ಧತಿ ಮೊದಲಿನಿಂದ ರೂಢಿಯಲ್ಲಿದೆ.
  • ಭೂಮಿಯಿಂದನೋಡಿದಾಗ, ಸೂರ್ಯ, ಚಂದ್ರ, ಗ್ರಹಗಳು ನಕ್ಷತ್ರಮಂಡಲದಿಂದಾದ ರಾಶಿಚಕ್ರದಲ್ಲಿ ದಿನೇ ದಿನೇ ಸ್ವಲ್ಪ ಸ್ವಲ್ಪವಾಗಿ ಸಂಚರಿಸಿದಂತೆ ಕಾಣುತ್ತವೆ. ವೇದಾಂಗ ಜ್ಯೋತಿಷದಂತೆ, ಮೊದಲ ನಕ್ಷತ್ರ ಅಶ್ವಿನಿ – ಅಂದರೆ ಮೇಷ ರಾಶಿಯ ೦ – ೧೩:೨೦ ಭಾಗ (ಡಿಗ್ರಿ). ಅಲ್ಲಿ ಸೂರ್ಯನಿದ್ದಾಗ ಭೂಮಿಯ ಉತ್ತರಾರ್ಧಗೋಳದಲ್ಲಿ ಸಸ್ಯಗಳಲ್ಲಿ ಚಿಗುರು ಕಾಣುತ್ತದೆ; ಅಂದರೆ ಹೊಸಹುಟ್ಟು.
  • ಆದ್ದರಿಂದ ಅಶ್ವಿನೀ ನಕ್ಷತ್ರಕ್ಕೆ ರವಿಯು ಪ್ರವೇಶಿಸುವ ಕಾಲವನ್ನು ಹೊಸವರ್ಷ ಎಂದು ಪರಿಗಣಿಸುತ್ತಾರೆ. ಇದೇ ಸೌರಮಾನ ಯುಗಾದಿ. ಸಾಮಾನ್ಯವಾಗಿ ಈಗ ಇದುಏಪ್ರಿಲ್ 14 ಅಥವಾ 15 ನೇ ತಾರೀಖಿಗೆ ಬೀಳುತ್ತದೆ. ಆದರೆ ಚಂದ್ರನ ಗತಿ ಅತಿವೇಗವಾದ್ದರಿಂದ ಪ್ರತಿ ಪ್ರದಕ್ಷಿಣೆಗೂ ಒಂದೊಂದು ತಿಂಗಳಾಗಿ, ಹನ್ನೆರಡು ಪ್ರದಕ್ಷಿಣೆಗಳಿಗೆ ಸರಿಯಾಗಿ ಒಂದು ಚಾಂದ್ರಮಾನ ಸಂವತ್ಸರವಾಗುತ್ತದೆ.
  • ರವಿಚಂದ್ರರ ಗತಿಯನ್ನವಲಂಬಿಸಿ, 11 ರಿಂದ 13 ಪೂರ್ಣಿಮೆ/ಅಮಾವಾಸ್ಯೆಗಳಿಗೊಂದು ಚಾಂದ್ರಮಾನ ಯುಗಾದಿಯಾಗುತ್ತದೆ. ಈ ಯುಗಾದಿನಿರ್ಣಯದ ಹಿಂದೆ ವೇದಾಂಗ ಜ್ಯೋತಿಷದ ಮಹತ್ತರ ಸಾಧನೆಗಳೇ ಅಡಗಿವೆ; ಅದರಿಂದ ನಮ್ಮ ಪೂರ್ವಿಕರ ಖಗೋಲಗಣಿತದ ಅಪಾರ ಜ್ಞಾನ ವ್ಯಕ್ತವಾಗುತ್ತದೆ.

ಯುಗಾದಿ ಆಚರಣೆಯ ವಿಧಾನ..

  • ಈ ಹಬ್ಬವನ್ನು ಹೆಚ್ಚಾಗಿ ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಡ್ವ. ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಡ್ವ – ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ ‘ಗುಡಿ’ ಎಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತ.
  • ಆಂಧ್ರ ಪ್ರದೇಶದಲ್ಲಿ ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೆಣಸು, ಬೇವು ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಸೇವಿಸುವರು. ಅಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುವುದು.
  • ತಳಿರು ತೋರಣವನ್ನು (ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು) ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು.

  • ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನಿಡುವರು. ಮುಂಜಾನೆ ಬೇಗನೆದ್ದು ಅಭ್ಯಂಜನ (ಎಣ್ಣೆ ಸೀಗೇಕಾಯಿಯಿಂದ ತಲೆಯನ್ನು ತೊಳೆದುಕೊಳ್ಳುವುದು) ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು. ನಂತರ ಹೊಸ ಬಟ್ಟೆ ಧರಿಸಿ ಪಂಚಾಂಗವನ್ನು ಮನೆಯ ಹಿರಿಯರು ಓದುವರು ಮತ್ತೆಲ್ಲರೂ ಅದನ್ನು ಕೇಳುವರು.
  • ಪಂಚಾಂಗ ಹಿಂದೂ ಸಂಪ್ರದಾಯದ ಕ್ಯಾಲೆಂಡರ್. ಇದು ದಿನಸೂಚಿಯಷ್ಟೆ ಅಲ್ಲದೇ ಆ ವರುಷದಲ್ಲಿ ಮಳೆ ಬೆಳೆ ಹೇಗಿದೆ, ರಾಶಿಫಲ, ಮದುವೆ ಉಪನಯನಗಳಿಗೆ ಒಳ್ಳೆಯ ಮುಹೂರ್ತಗಳು, ಒಟ್ಟರೆ ಜನಜೀವನದ ಸ್ಥಿತಿಯನ್ನು ಸೂಚಿಸಿರುವುದು. ಅಂದು ಹಿರಿಯ ಕಿರಿಯರೆಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ ಸಂತೋಷದಿಂದ ಹಾಡಿ ನಲಿವರು.

ಯುಗಾದಿಯ ವಿಶೇಷ ತಿನಿಸು…

  • ಒಬ್ಬಟ್ಟು ಅಥವಾಹೋಳಿಗೆ. ತೆಂಗಿನಕಾಯಿಹೂರಣದಲ್ಲಿ ಮಾಡಿದ ಹೋಳಿಗೆ ಬಹಳ ದಿನ ಇರದೇ ಕೆಡುವುದೆಂದು ಬೇಳೆಯ ಹೂರಣದಲ್ಲಿ ಮಾಡುವರು. *ಇದನ್ನೇ ಮರಾಠಿಯಲ್ಲಿ ಪೂರಣ ಪೋಳಿ ಎಂದು ಕರೆವರು. ಸಂಜೆಯ ವೇಳೆಯಲ್ಲಿ ಗುರು ಹಿರಿಯರ ಮನೆಗಳಿಗೆ ಹೋಗಿ ಅವರಿಗೆ ಕಾಲುಮುಟ್ಟಿ ನಮಸ್ಕರಿಸಿ ಅವರ ಆಶೀರ್ವಾದ ಪಡೆವರು.
  • ಈಗೀಗ ಟಿವಿಯಲ್ಲಿ ಕವಿಗೋಷ್ಠಿಯೂ ಪ್ರಸಾರ ಮಾಡುವರು. ಇನ್ನೊಂದು ವಿಶೇಷ ವೆಂದರೆ ಇದೇ ಸಮಯದಲ್ಲಿ ಮಕ್ಕಳಿಗೆ ಪರೀಕ್ಷೆಗಳಿರುವುದರಿಂದ, ಈ ನೆಪದಲ್ಲಾದರೂ ಹಿರಿಯರಿಗೆ ಬಗ್ಗಿ ನಮಸ್ಕರಿಸಿ ಅವರಿಂದ ಒಳ್ಳೆಯದಾಗಲೆಂಬ ಮಾತುಗಳನ್ನು ಸ್ವೀಕರಿಸುವ ಸಂದರ್ಭ ಒದಗಿಬರುವುದು. ಮನೆಯ ಹೆಂಗಸರು ಹೊಸದಾಗಿ ಬರುವ ಮಾವಿನಕಾಯಿಯಿಂದ ಉಪ್ಪಿನಕಾಯಿಯನ್ನು ಮಾಡುವರು.

ಬೇವು-ಬೆಲ್ಲದ ಮಹತ್ವ…

ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ. ಮೂಲ 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸಾಲು ಸಾಲು ರಜೆ – 11 ದಿನ ಬ್ಯಾಂಕ್ ಬಾಗಿಲು ಬಂದ್ : ಬ್ಯಾಂಕ್ ಗ್ರಾಹಕರಿಗೊಂದು ಮುಖ್ಯ ಮಾಹಿತಿ….!

    ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…

  • ಸುದ್ದಿ

    ತೆಲಂಗಾಣದಲ್ಲಿ 27 ವಿದ್ಯಾರ್ಥಿಗಳ ಆತ್ಮಹತ್ಯೆ,ವರದಿ ಕೇಳಿದ ರಾಷ್ಟ್ರಪತಿ., ಕಾರಣ.?

    ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್‌ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…

  • ಸುದ್ದಿ

    ನೀವು ಹುಟ್ಟಿದ ದಿನಾಂಕವನ್ನು ಬಳಸಿ ನೀವು ಲವ್ ಮ್ಯಾರೇಜ್ ಅಥವಾ ಅರೇಂಜ್ ಮ್ಯಾರೇಜ್ ಆಗುವಿರಾ ಎಂದು ತಿಳಿಯಲು ಇದನ್ನು ಓದಿ…!

     ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಬ್ಬ ವ್ಯಕ್ತಿಯ ಹುಟ್ಟಿದ ದಿನಾಂಕದ ಆಧಾರದ ಮೇಲೆ ಜೀವನದ ಗುಟ್ಟನ್ನು ಕಂಡು ಹಿಡಿಯಬಹುದು ವ್ಯಕ್ತಿಗಳ ಜನ್ಮ ದಿನಾಂಕ ಆಧರಿಸಿ ಅವರು ಲವ್ ಮ್ಯಾರೇಜ್ ಆಗುತ್ತರಾ ಅಥವಾ ಅರೇಂಜ್ ಮ್ಯಾರೇಜ್ ಆಗುತ್ತಾರೆ ಎನ್ನುವುದನ್ನು ತಿಳಿಯಬಹುದು. ಸಂಖ್ಯೆ 1. ಒಂದನೇ ಸಂಖ್ಯೆಯನ್ನು ಸೂರ್ಯ ಎಂದು ಹೇಳಲಾಗುತ್ತದೆ. ಒಂದು ನಂಬರ್ ಅವರು ತುಂಬಾ ನಾಚಿಕೆ ಸ್ವಭಾವದವರು ಆಗಿರುತ್ತಾರೆ ಇವರು ಯಾವತ್ತೂ ಪ್ರೀತಿಯನ್ನು ತಿಳಿಸುವುದಿಲ್ಲ ಇದರಿಂದಾಗಿ ಪ್ರೇಮ ವಿವಾಹದಿಂದ ಇವರು ದೂರ ಇರುತ್ತಾರೆ. ಸಂಖ್ಯೆ 2. ಸಂಖ್ಯೆ 2…

  • ಸುದ್ದಿ

    ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡು ರಸ್ತೆ ಮಧ್ಯದಲ್ಲಿ ಅಮಾನವೀಯ ರೀತಿ ವರ್ತಿಸಿದ ಮಹಿಳೆ.

    ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…

  • ಸುದ್ದಿ

    ಕಸ ತಂದುಕೊಟ್ಟು, ಊಟ ತಿಂಡಿ ಉಚಿತವಾಗಿ ಪಡೆಯಿರಿ:ಇದು ಗಾರ್ಬೇಜ್ ಹೋಟೆಲ್ ನ ವಿಶೇಷತೆ….!

    ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್‌ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್​ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್‌ ತ್ಯಾಜ್ಯ ಬಳಸಿ ನಗರದಲ್ಲಿ…

  • ಜ್ಯೋತಿಷ್ಯ

    ಗಂಡನನ್ನು ಹೆಚ್ಚಾಗಿ ಪ್ರೀತಿಸುವ ವಿಚಾರದಲ್ಲಿ ಈ ರಾಶಿಗಳ ಹುಡುಗಿಯರು ತುಂಬಾ ಮುಂದು…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪ್ರತಿಯೊಬ್ಬರ ನಡವಳಿಕೆಯನ್ನು ಅವ್ರ ರಾಶಿ ಆಧಾರದ ಮೇಲೆ ಹೇಳಬಹುದು. ವ್ಯಕ್ತಿ ವರ್ತನೆಗೂ ರಾಶಿಗೂ ಸಂಬಂಧವಿದೆ. ಯಾವ ವ್ಯಕ್ತಿ ಕೋಪಿಷ್ಟ? ಯಾವ ವ್ಯಕ್ತಿ ಅದೃಷ್ಟವಂತ ಎಂಬುದನ್ನು ರಾಶಿ ನೋಡಿಯೇ ಪಂಡಿತರು ಹೇಳ್ತಾರೆ. ರಾಶಿ ಹಾಗೂ ಪ್ರಣಯಕ್ಕೂ ಸಂಬಂಧವಿದೆ. ಯಾವ ಹುಡುಗಿಯರು ಮದುವೆಯಾದ್ಮೇಲೆ ಸಂಗಾತಿಯನ್ನು ಅತಿ ಹೆಚ್ಚು ತೃಪ್ತಿಪಡಿಸ್ತಾರೆ? ಸಂಗಾತಿ ಜೊತೆ ಉತ್ತಮ ಸಂಬಂಧ ಹೊಂದಿರುತ್ತಾರೆ ಎಂಬುದನ್ನು ರಾಶಿ ಮೂಲಕವೇ ಹೇಳಬಹುದು. ಮಕರ ರಾಶಿಯ ಹುಡುಗಿಯರು ಪ್ರೀತಿ ವಿಚಾರದಲ್ಲಿ ಎಂದೂ ಮೋಸ ಮಾಡುವುದಿಲ್ಲವಂತೆ. ಪತಿಯನ್ನು ನಿಷ್ಠೆಯಿಂದ ಪ್ರೀತಿ ಮಾಡುತ್ತಾರಂತೆ. ಮದುವೆಯಾದ್ಮೇಲೆ…