News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇವರು-ಧರ್ಮ

ಯುಗಾದಿಯ ಹಬ್ಬದ ಮಹತ್ವವೇನು.?ಸಾಂಪ್ರದಾಯಿಕವಾಗಿ ಆಚರಿಸುವುದು ಹೇಗೆ.?ಹಬ್ಬದ ಹಿಂದಿರುವ ಪುರಾಣ ಕತೆ ಏನು.?ತಿಳಿಯಲು ಈ ಲೇಖನಿ ಓದಿ ಮರೆಯದೇ ಶೇರ್ ಮಾಡಿ…

2406

ಯುಗ ಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ  ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ..

ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು…

ಯುಗಾದಿ ಅಂದ್ರೆ ಏನು…

ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.

ಹಿಂದೂಗಳ ಹೊಸ ವರ್ಷ…

ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ.’ ಜನವರಿ 1ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧವಾಗಿ, ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.

ಯುಗಾದಿಯ ಬಗ್ಗೆ ಪುರಾಣ ಹೇಳುವುದೇನು..?

*ಬ್ರಹ್ಮಪುರಾಣಕ್ಕನುಸಾರ ಈಶ್ವರನು ಈ ದಿನದಂದು ವಿಶ್ವದ ನಿರ್ಮಿತಿ ಮಾಡಿದನು. ಶ್ರೀರಾಮಚಂದ್ರನು 14 ವರ್ಷಗಳ ವನವಾಸದ ನಂತರ ರಾವಣನನ್ನು ಕೊನೆ ಗಾಣಿಸಿ ಚೈತ್ರ ಶುಕ್ಲ ಪಕ್ಷ ಪ್ರತಿಪದೆಗೆ ಅಯೋಧ್ಯೆಗೆ ಮರಳಿದನು; ಆದ್ದರಿಂದ ಆ ದಿನದಂದು ಬ್ರಹ್ಮಧ್ವಜಗಳನ್ನು, ತೋರಣಗಳನ್ನು ಕಟ್ಟಿ ಆನಂದದಿಂದ ಅವನನ್ನು ಸ್ವಾಗತಿಸಲಾಯಿತು. ಆ ದಿನದಿಂದ ರಾಮನ ನವರಾತ್ರಿ ಪ್ರಾರಂಭವಾಗುತ್ತದೆ. ಪೈಠಣದ ಸಾತವಾಹನ (ಶಾಲಿವಾಹನ) ವಂಶದ ಗೌಮತಿಪುತ್ರ ಮತ್ತು ಪುಸುಯಾರ್ಮಿ ಈ ಪರಾಕ್ರಮಿ ರಾಜರು ಶತ್ರುಗಳನ್ನು ಪರಾಭವಗೊಳಿಸಿ ವಿಜಯ ಪಡೆದ ಸ್ಮರಣೆಗಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ.

*ಇಂದಿನ ದಿನವೇ ವಿಷ್ಣುವು ಮತ್ಸ್ಯಾವತಾರವನ್ನು ತಳೆದದ್ದೆಂದೂ, ಶಾಲಿವಾಹನ ವಿಕ್ರಮಾದಿತ್ಯನನ್ನು ಜಯಿಸಿ ಶಾಲಿವಾಹನ ಶಕೆ ಎಂದೂ ನವಭಾರತವನ್ನು ನಿರ್ಮಿಸಿದರೆಂದೂ ಚರಿತ್ರೆಯಲ್ಲಿ ನಮೂದಿಸಿರುವರು.

*ಈ ದಿನವೇ ಬ್ರಹ್ಮದೇವನು ಸೃಷ್ಟಿಯನ್ನು ನಿರ್ಮಿಸಿದನು, ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ. ಇದು ಈ ದಿನ ವರ್ಷಾರಂಭ ಮಾಡುವ ಹಿಂದಿನ ಆಧ್ಯಾತ್ಮಿಕ ಕಾರಣವಾಗಿದೆ.

ಸಾಂಪ್ರದಾಯಿಕವಾಗಿ ಯುಗಾದಿಯನ್ನು ಆಚರಿಸುವುದು ಹೇಗೆ…

  • ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆಗಳಲ್ಲಿ ಕೆಲವೆಂದರೆ ಸೂರ್ಯ ನಮಸ್ಕಾರ, ಪಂಚಾಂಗದಪೂಜೆ, ಹಾಗೂ ಸರ್ವೇ-ಸಾಮಾನ್ಯವಾಗಿ “ಬೇವು-ಬೆಲ್ಲ.” ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ. ಯುಗಾದಿಯೆಂದರೆ ಹೊಸವರ್ಷದ ಆರಂಭದ ದಿನವಾದರೂ ಭಾರತದಲ್ಲಿ ಈ ದಿನವನ್ನು ನಿರ್ಧರಿಸುವ ರೀತಿ ಹಲವಾರಿವೆ.
  • ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಪ್ರಭೇದಗಳಿದ್ದು, ಹಿಂದೂ ಧರ್ಮದವೇದಾಂಗ ಜ್ಯೋತಿಷ ಶಾಸ್ತ್ರದಿಂದ ನಿರ್ಣಯಗೊಳ್ಳುತ್ತವೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಾಂದ್ರಮಾನ ಹಾಗೂ ಸೂರ್ಯನ ಗತಿಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತಾರೆ. ಕರ್ನಾಟಕದಲ್ಲಿ ಚಾಂದ್ರಮಾನಪದ್ಧತಿ ಮೊದಲಿನಿಂದ ರೂಢಿಯಲ್ಲಿದೆ.
  • ಭೂಮಿಯಿಂದನೋಡಿದಾಗ, ಸೂರ್ಯ, ಚಂದ್ರ, ಗ್ರಹಗಳು ನಕ್ಷತ್ರಮಂಡಲದಿಂದಾದ ರಾಶಿಚಕ್ರದಲ್ಲಿ ದಿನೇ ದಿನೇ ಸ್ವಲ್ಪ ಸ್ವಲ್ಪವಾಗಿ ಸಂಚರಿಸಿದಂತೆ ಕಾಣುತ್ತವೆ. ವೇದಾಂಗ ಜ್ಯೋತಿಷದಂತೆ, ಮೊದಲ ನಕ್ಷತ್ರ ಅಶ್ವಿನಿ – ಅಂದರೆ ಮೇಷ ರಾಶಿಯ ೦ – ೧೩:೨೦ ಭಾಗ (ಡಿಗ್ರಿ). ಅಲ್ಲಿ ಸೂರ್ಯನಿದ್ದಾಗ ಭೂಮಿಯ ಉತ್ತರಾರ್ಧಗೋಳದಲ್ಲಿ ಸಸ್ಯಗಳಲ್ಲಿ ಚಿಗುರು ಕಾಣುತ್ತದೆ; ಅಂದರೆ ಹೊಸಹುಟ್ಟು.
  • ಆದ್ದರಿಂದ ಅಶ್ವಿನೀ ನಕ್ಷತ್ರಕ್ಕೆ ರವಿಯು ಪ್ರವೇಶಿಸುವ ಕಾಲವನ್ನು ಹೊಸವರ್ಷ ಎಂದು ಪರಿಗಣಿಸುತ್ತಾರೆ. ಇದೇ ಸೌರಮಾನ ಯುಗಾದಿ. ಸಾಮಾನ್ಯವಾಗಿ ಈಗ ಇದುಏಪ್ರಿಲ್ 14 ಅಥವಾ 15 ನೇ ತಾರೀಖಿಗೆ ಬೀಳುತ್ತದೆ. ಆದರೆ ಚಂದ್ರನ ಗತಿ ಅತಿವೇಗವಾದ್ದರಿಂದ ಪ್ರತಿ ಪ್ರದಕ್ಷಿಣೆಗೂ ಒಂದೊಂದು ತಿಂಗಳಾಗಿ, ಹನ್ನೆರಡು ಪ್ರದಕ್ಷಿಣೆಗಳಿಗೆ ಸರಿಯಾಗಿ ಒಂದು ಚಾಂದ್ರಮಾನ ಸಂವತ್ಸರವಾಗುತ್ತದೆ.
  • ರವಿಚಂದ್ರರ ಗತಿಯನ್ನವಲಂಬಿಸಿ, 11 ರಿಂದ 13 ಪೂರ್ಣಿಮೆ/ಅಮಾವಾಸ್ಯೆಗಳಿಗೊಂದು ಚಾಂದ್ರಮಾನ ಯುಗಾದಿಯಾಗುತ್ತದೆ. ಈ ಯುಗಾದಿನಿರ್ಣಯದ ಹಿಂದೆ ವೇದಾಂಗ ಜ್ಯೋತಿಷದ ಮಹತ್ತರ ಸಾಧನೆಗಳೇ ಅಡಗಿವೆ; ಅದರಿಂದ ನಮ್ಮ ಪೂರ್ವಿಕರ ಖಗೋಲಗಣಿತದ ಅಪಾರ ಜ್ಞಾನ ವ್ಯಕ್ತವಾಗುತ್ತದೆ.

ಯುಗಾದಿ ಆಚರಣೆಯ ವಿಧಾನ..

  • ಈ ಹಬ್ಬವನ್ನು ಹೆಚ್ಚಾಗಿ ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಡ್ವ. ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಡ್ವ – ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ ‘ಗುಡಿ’ ಎಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತ.
  • ಆಂಧ್ರ ಪ್ರದೇಶದಲ್ಲಿ ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೆಣಸು, ಬೇವು ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಸೇವಿಸುವರು. ಅಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುವುದು.
  • ತಳಿರು ತೋರಣವನ್ನು (ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು) ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು.

  • ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನಿಡುವರು. ಮುಂಜಾನೆ ಬೇಗನೆದ್ದು ಅಭ್ಯಂಜನ (ಎಣ್ಣೆ ಸೀಗೇಕಾಯಿಯಿಂದ ತಲೆಯನ್ನು ತೊಳೆದುಕೊಳ್ಳುವುದು) ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು. ನಂತರ ಹೊಸ ಬಟ್ಟೆ ಧರಿಸಿ ಪಂಚಾಂಗವನ್ನು ಮನೆಯ ಹಿರಿಯರು ಓದುವರು ಮತ್ತೆಲ್ಲರೂ ಅದನ್ನು ಕೇಳುವರು.
  • ಪಂಚಾಂಗ ಹಿಂದೂ ಸಂಪ್ರದಾಯದ ಕ್ಯಾಲೆಂಡರ್. ಇದು ದಿನಸೂಚಿಯಷ್ಟೆ ಅಲ್ಲದೇ ಆ ವರುಷದಲ್ಲಿ ಮಳೆ ಬೆಳೆ ಹೇಗಿದೆ, ರಾಶಿಫಲ, ಮದುವೆ ಉಪನಯನಗಳಿಗೆ ಒಳ್ಳೆಯ ಮುಹೂರ್ತಗಳು, ಒಟ್ಟರೆ ಜನಜೀವನದ ಸ್ಥಿತಿಯನ್ನು ಸೂಚಿಸಿರುವುದು. ಅಂದು ಹಿರಿಯ ಕಿರಿಯರೆಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ ಸಂತೋಷದಿಂದ ಹಾಡಿ ನಲಿವರು.

ಯುಗಾದಿಯ ವಿಶೇಷ ತಿನಿಸು…

  • ಒಬ್ಬಟ್ಟು ಅಥವಾಹೋಳಿಗೆ. ತೆಂಗಿನಕಾಯಿಹೂರಣದಲ್ಲಿ ಮಾಡಿದ ಹೋಳಿಗೆ ಬಹಳ ದಿನ ಇರದೇ ಕೆಡುವುದೆಂದು ಬೇಳೆಯ ಹೂರಣದಲ್ಲಿ ಮಾಡುವರು. *ಇದನ್ನೇ ಮರಾಠಿಯಲ್ಲಿ ಪೂರಣ ಪೋಳಿ ಎಂದು ಕರೆವರು. ಸಂಜೆಯ ವೇಳೆಯಲ್ಲಿ ಗುರು ಹಿರಿಯರ ಮನೆಗಳಿಗೆ ಹೋಗಿ ಅವರಿಗೆ ಕಾಲುಮುಟ್ಟಿ ನಮಸ್ಕರಿಸಿ ಅವರ ಆಶೀರ್ವಾದ ಪಡೆವರು.
  • ಈಗೀಗ ಟಿವಿಯಲ್ಲಿ ಕವಿಗೋಷ್ಠಿಯೂ ಪ್ರಸಾರ ಮಾಡುವರು. ಇನ್ನೊಂದು ವಿಶೇಷ ವೆಂದರೆ ಇದೇ ಸಮಯದಲ್ಲಿ ಮಕ್ಕಳಿಗೆ ಪರೀಕ್ಷೆಗಳಿರುವುದರಿಂದ, ಈ ನೆಪದಲ್ಲಾದರೂ ಹಿರಿಯರಿಗೆ ಬಗ್ಗಿ ನಮಸ್ಕರಿಸಿ ಅವರಿಂದ ಒಳ್ಳೆಯದಾಗಲೆಂಬ ಮಾತುಗಳನ್ನು ಸ್ವೀಕರಿಸುವ ಸಂದರ್ಭ ಒದಗಿಬರುವುದು. ಮನೆಯ ಹೆಂಗಸರು ಹೊಸದಾಗಿ ಬರುವ ಮಾವಿನಕಾಯಿಯಿಂದ ಉಪ್ಪಿನಕಾಯಿಯನ್ನು ಮಾಡುವರು.

ಬೇವು-ಬೆಲ್ಲದ ಮಹತ್ವ…

ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ. ಮೂಲ 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

    ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.

  • ಸುದ್ದಿ

    ನೆನಪಿಡಿ ಊಟದ ನಂತರ ಅಪ್ಪಿತಪ್ಪಿಯೂ ಸಹ ಇಂತಹ ತಪ್ಪುಗಳನ್ನು ಮಾಡದೆ ಹೆಚ್ಚರವಹಿಸಿ,.!

    ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…

  • ಸಿನಿಮಾ

    ಶಿವಣ್ಣನ ಕಾರನ್ನು ಚೆಕ್ ಪೋಸ್ಟ್ ನಲ್ಲಿ ತಪಾಸಣೆ ಮಾಡಿದ ಚುನಾವಣಾ ಸಿಬ್ಬಂದಿ..ಕಾರಲ್ಲಿ ಸಿಕ್ಕಿದ್ದೇನು?

    ಲೋಕಸಭೆ ಚುನಾವಣೆ  ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ತಡೆಗೆ ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಗೌರಿಬಿದನೂರು ಬಳಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಇದ್ದ ಸಿಬ್ಬಂದಿಗೆ ಅಚ್ಚರಿಯಾಗಿದೆ. ಚುನಾವಣಾ ಸಿಬ್ಬಂದಿ ರಾಜ್ಯ ಹೆದ್ದಾರಿಯಲ್ಲಿ ಬಂದ ಕಾರು ತಡೆದು ಪರಿಶೀಲನೆ ನಡೆಸಲು ಮುಂದಾದಾಗ, ಕಾರಿನಲ್ಲಿ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಇರುವುದು ಕಂಡುಬಂದಿದೆ. ಕಾರು ನಿಲ್ಲಿಸಿದ ಕೂಡಲೇ…

  • ಸುದ್ದಿ

    ಮೋದಿ ಹುಟ್ಟುಹಬ್ಬಕ್ಕೆ ಜೆಡಿಎಸ್ ಶಾಸಕರಿಂದ ವಿಶೇಷ ಪೂಜೆ….!

    ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…

  • ಆರೋಗ್ಯ

    ನೀವು ಬಸ್ಸಿನಲ್ಲಿ ಪ್ರಯಾಣಿಸುವಾಗ ವಾಕರಿಕೆ ಬರುತ್ತಿದಿಯಾ..? ಹಾಗದ್ರೆ ಇಲ್ಲಿದೆ ಸುಲಭವಾದ ಮನೆ ಮದ್ದು ..!

    ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್‌ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(31 ಮಾರ್ಚ್, 2019) ಮಾನಸಿಕ ಒತ್ತಡ ತರುವ ಸುಪ್ತ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೀವು ತ್ವರಿತ ಹಣ ಪಡೆಯುವ…