ದೇವರು-ಧರ್ಮ

ಯುಗಾದಿಯ ಹಬ್ಬದ ಮಹತ್ವವೇನು.?ಸಾಂಪ್ರದಾಯಿಕವಾಗಿ ಆಚರಿಸುವುದು ಹೇಗೆ.?ಹಬ್ಬದ ಹಿಂದಿರುವ ಪುರಾಣ ಕತೆ ಏನು.?ತಿಳಿಯಲು ಈ ಲೇಖನಿ ಓದಿ ಮರೆಯದೇ ಶೇರ್ ಮಾಡಿ…

2357

ಯುಗ ಯುಗಾದಿ ಕಳೆದರೂ
ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ
ಹೊಸತು ಹೊಸತು ತರುತಿದೆ  ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ..

ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು…

ಯುಗಾದಿ ಅಂದ್ರೆ ಏನು…

ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು.

ಹಿಂದೂಗಳ ಹೊಸ ವರ್ಷ…

ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ.’ ಜನವರಿ 1ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧವಾಗಿ, ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.

ಯುಗಾದಿಯ ಬಗ್ಗೆ ಪುರಾಣ ಹೇಳುವುದೇನು..?

*ಬ್ರಹ್ಮಪುರಾಣಕ್ಕನುಸಾರ ಈಶ್ವರನು ಈ ದಿನದಂದು ವಿಶ್ವದ ನಿರ್ಮಿತಿ ಮಾಡಿದನು. ಶ್ರೀರಾಮಚಂದ್ರನು 14 ವರ್ಷಗಳ ವನವಾಸದ ನಂತರ ರಾವಣನನ್ನು ಕೊನೆ ಗಾಣಿಸಿ ಚೈತ್ರ ಶುಕ್ಲ ಪಕ್ಷ ಪ್ರತಿಪದೆಗೆ ಅಯೋಧ್ಯೆಗೆ ಮರಳಿದನು; ಆದ್ದರಿಂದ ಆ ದಿನದಂದು ಬ್ರಹ್ಮಧ್ವಜಗಳನ್ನು, ತೋರಣಗಳನ್ನು ಕಟ್ಟಿ ಆನಂದದಿಂದ ಅವನನ್ನು ಸ್ವಾಗತಿಸಲಾಯಿತು. ಆ ದಿನದಿಂದ ರಾಮನ ನವರಾತ್ರಿ ಪ್ರಾರಂಭವಾಗುತ್ತದೆ. ಪೈಠಣದ ಸಾತವಾಹನ (ಶಾಲಿವಾಹನ) ವಂಶದ ಗೌಮತಿಪುತ್ರ ಮತ್ತು ಪುಸುಯಾರ್ಮಿ ಈ ಪರಾಕ್ರಮಿ ರಾಜರು ಶತ್ರುಗಳನ್ನು ಪರಾಭವಗೊಳಿಸಿ ವಿಜಯ ಪಡೆದ ಸ್ಮರಣೆಗಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ.

*ಇಂದಿನ ದಿನವೇ ವಿಷ್ಣುವು ಮತ್ಸ್ಯಾವತಾರವನ್ನು ತಳೆದದ್ದೆಂದೂ, ಶಾಲಿವಾಹನ ವಿಕ್ರಮಾದಿತ್ಯನನ್ನು ಜಯಿಸಿ ಶಾಲಿವಾಹನ ಶಕೆ ಎಂದೂ ನವಭಾರತವನ್ನು ನಿರ್ಮಿಸಿದರೆಂದೂ ಚರಿತ್ರೆಯಲ್ಲಿ ನಮೂದಿಸಿರುವರು.

*ಈ ದಿನವೇ ಬ್ರಹ್ಮದೇವನು ಸೃಷ್ಟಿಯನ್ನು ನಿರ್ಮಿಸಿದನು, ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ. ಇದು ಈ ದಿನ ವರ್ಷಾರಂಭ ಮಾಡುವ ಹಿಂದಿನ ಆಧ್ಯಾತ್ಮಿಕ ಕಾರಣವಾಗಿದೆ.

ಸಾಂಪ್ರದಾಯಿಕವಾಗಿ ಯುಗಾದಿಯನ್ನು ಆಚರಿಸುವುದು ಹೇಗೆ…

  • ಯುಗಾದಿ ಹಬ್ಬದ ಸಾಂಪ್ರದಾಯಿಕ ಆಚರಣೆಗಳಲ್ಲಿ ಕೆಲವೆಂದರೆ ಸೂರ್ಯ ನಮಸ್ಕಾರ, ಪಂಚಾಂಗದಪೂಜೆ, ಹಾಗೂ ಸರ್ವೇ-ಸಾಮಾನ್ಯವಾಗಿ “ಬೇವು-ಬೆಲ್ಲ.” ಜೀವನದ ಸಿಹಿ-ಕಹಿಗಳೆರಡನ್ನೂ ಪಡೆಯಬೇಕೆಂದು ನೆನಪಿಸಲು ಬೇವು-ಬೆಲ್ಲಗಳ ಮಿಶ್ರಣವನ್ನು ತಿನ್ನಲಾಗುತ್ತದೆ. ಯುಗಾದಿಯೆಂದರೆ ಹೊಸವರ್ಷದ ಆರಂಭದ ದಿನವಾದರೂ ಭಾರತದಲ್ಲಿ ಈ ದಿನವನ್ನು ನಿರ್ಧರಿಸುವ ರೀತಿ ಹಲವಾರಿವೆ.
  • ಮುಖ್ಯವಾಗಿ ಚಾಂದ್ರಮಾನ ಹಾಗೂ ಸೌರಮಾನ ಎಂಬ ಎರಡು ಪ್ರಭೇದಗಳಿದ್ದು, ಹಿಂದೂ ಧರ್ಮದವೇದಾಂಗ ಜ್ಯೋತಿಷ ಶಾಸ್ತ್ರದಿಂದ ನಿರ್ಣಯಗೊಳ್ಳುತ್ತವೆ. ಚಂದ್ರನ ಚಲನೆಯನ್ನಾಧರಿಸಿ, ದಿನಗಣನೆ ಮಾಡುವುದನ್ನು ಚಾಂದ್ರಮಾನ ಹಾಗೂ ಸೂರ್ಯನ ಗತಿಯಿಂದ ಎಣಿಕೆ ಮಾಡುವುದನ್ನು ಸೌರಮಾನ ಎನ್ನುತ್ತಾರೆ. ಕರ್ನಾಟಕದಲ್ಲಿ ಚಾಂದ್ರಮಾನಪದ್ಧತಿ ಮೊದಲಿನಿಂದ ರೂಢಿಯಲ್ಲಿದೆ.
  • ಭೂಮಿಯಿಂದನೋಡಿದಾಗ, ಸೂರ್ಯ, ಚಂದ್ರ, ಗ್ರಹಗಳು ನಕ್ಷತ್ರಮಂಡಲದಿಂದಾದ ರಾಶಿಚಕ್ರದಲ್ಲಿ ದಿನೇ ದಿನೇ ಸ್ವಲ್ಪ ಸ್ವಲ್ಪವಾಗಿ ಸಂಚರಿಸಿದಂತೆ ಕಾಣುತ್ತವೆ. ವೇದಾಂಗ ಜ್ಯೋತಿಷದಂತೆ, ಮೊದಲ ನಕ್ಷತ್ರ ಅಶ್ವಿನಿ – ಅಂದರೆ ಮೇಷ ರಾಶಿಯ ೦ – ೧೩:೨೦ ಭಾಗ (ಡಿಗ್ರಿ). ಅಲ್ಲಿ ಸೂರ್ಯನಿದ್ದಾಗ ಭೂಮಿಯ ಉತ್ತರಾರ್ಧಗೋಳದಲ್ಲಿ ಸಸ್ಯಗಳಲ್ಲಿ ಚಿಗುರು ಕಾಣುತ್ತದೆ; ಅಂದರೆ ಹೊಸಹುಟ್ಟು.
  • ಆದ್ದರಿಂದ ಅಶ್ವಿನೀ ನಕ್ಷತ್ರಕ್ಕೆ ರವಿಯು ಪ್ರವೇಶಿಸುವ ಕಾಲವನ್ನು ಹೊಸವರ್ಷ ಎಂದು ಪರಿಗಣಿಸುತ್ತಾರೆ. ಇದೇ ಸೌರಮಾನ ಯುಗಾದಿ. ಸಾಮಾನ್ಯವಾಗಿ ಈಗ ಇದುಏಪ್ರಿಲ್ 14 ಅಥವಾ 15 ನೇ ತಾರೀಖಿಗೆ ಬೀಳುತ್ತದೆ. ಆದರೆ ಚಂದ್ರನ ಗತಿ ಅತಿವೇಗವಾದ್ದರಿಂದ ಪ್ರತಿ ಪ್ರದಕ್ಷಿಣೆಗೂ ಒಂದೊಂದು ತಿಂಗಳಾಗಿ, ಹನ್ನೆರಡು ಪ್ರದಕ್ಷಿಣೆಗಳಿಗೆ ಸರಿಯಾಗಿ ಒಂದು ಚಾಂದ್ರಮಾನ ಸಂವತ್ಸರವಾಗುತ್ತದೆ.
  • ರವಿಚಂದ್ರರ ಗತಿಯನ್ನವಲಂಬಿಸಿ, 11 ರಿಂದ 13 ಪೂರ್ಣಿಮೆ/ಅಮಾವಾಸ್ಯೆಗಳಿಗೊಂದು ಚಾಂದ್ರಮಾನ ಯುಗಾದಿಯಾಗುತ್ತದೆ. ಈ ಯುಗಾದಿನಿರ್ಣಯದ ಹಿಂದೆ ವೇದಾಂಗ ಜ್ಯೋತಿಷದ ಮಹತ್ತರ ಸಾಧನೆಗಳೇ ಅಡಗಿವೆ; ಅದರಿಂದ ನಮ್ಮ ಪೂರ್ವಿಕರ ಖಗೋಲಗಣಿತದ ಅಪಾರ ಜ್ಞಾನ ವ್ಯಕ್ತವಾಗುತ್ತದೆ.

ಯುಗಾದಿ ಆಚರಣೆಯ ವಿಧಾನ..

  • ಈ ಹಬ್ಬವನ್ನು ಹೆಚ್ಚಾಗಿ ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರಗಳಲ್ಲಿ ಆಚರಿಸುವರು. ಆಂಧ್ರ ಮತ್ತು ಕರ್ನಾಟಕಗಳಲ್ಲಿ ಇದು ಯುಗಾದಿಯಾದರೆ, ಮಹಾರಾಷ್ಟ್ರದಲ್ಲಿ ಗುಡಿಪಡ್ವ. ಪಾಡ್ಯಮಿ ದಿವಸ ಗುಡಿಯನ್ನು ಏರಿಸುವುದೇ ಗುಡಿಪಡ್ವ – ಒಂದು ಕೋಲಿಗೆ ವಸ್ತ್ರವನ್ನು ಕಟ್ಟಿ, ಹೂವಿನ ಹಾರವನ್ನು ಏರಿಸಿ ‘ಗುಡಿ’ ಎಂದು ಮೂಲೆಯಲ್ಲಿ ಇರಿಸುವರು. ಇದು ಹೊಸ ವರುಷದ ಆಗಮನಕ್ಕೆ ಬಾವುಟವನ್ನು ಹಾರಿಸುವುದರ ಸಂಕೇತ.
  • ಆಂಧ್ರ ಪ್ರದೇಶದಲ್ಲಿ ಹುಣಿಸೇಹಣ್ಣು, ಬೆಲ್ಲ, ಮಾವಿನಕಾಯಿ, ಉಪ್ಪು, ಮೆಣಸು, ಬೇವು ಇತ್ಯಾದಿಗಳ ಮಿಶ್ರಣ ಮಾಡಿ ಯುಗಾದಿ ಪಚ್ಚಡಿ ಎಂಬ ಹೆಸರಿನ ಪದಾರ್ಥವನ್ನು ಸೇವಿಸುವರು. ಅಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಇರುವುದು.
  • ತಳಿರು ತೋರಣವನ್ನು (ಎಳೆಯ ಹಸಿರು ಮಾವಿನೆಲೆ ಮಧ್ಯೆ ಮಧ್ಯೆ ಬೇವಿನ ಎಲೆ ಹೂಗಳ ಗೊಂಚಲು) ಮನೆಗಳ ಮುಂಬಾಗಿಲಿಗೆ ಮತ್ತು ದೇವರ ಮನೆಯ ಬಾಗಿಲಿಗೆ ತಳಿರು ತೋರಣವಾಗಿ ಕಟ್ಟುವರು.

  • ಮನೆಯ ಮುಂದೆ ಬಣ್ಣ ಬಣ್ಣದ ರಂಗೋಲಿಯನ್ನಿಡುವರು. ಮುಂಜಾನೆ ಬೇಗನೆದ್ದು ಅಭ್ಯಂಜನ (ಎಣ್ಣೆ ಸೀಗೇಕಾಯಿಯಿಂದ ತಲೆಯನ್ನು ತೊಳೆದುಕೊಳ್ಳುವುದು) ಮಾಡಿ ಪುಣ್ಯಾಹ ಮಂತ್ರಗಳನ್ನು ಉಚ್ಚರಿಸಿ ಮಾವಿನೆಲೆಯಿಂದ ಮನೆಯ ಎಲ್ಲ ಕಡೆ ಕಳಶದ ನೀರನ್ನು ಸಿಂಪಡಿಸುವರು. ನಂತರ ಹೊಸ ಬಟ್ಟೆ ಧರಿಸಿ ಪಂಚಾಂಗವನ್ನು ಮನೆಯ ಹಿರಿಯರು ಓದುವರು ಮತ್ತೆಲ್ಲರೂ ಅದನ್ನು ಕೇಳುವರು.
  • ಪಂಚಾಂಗ ಹಿಂದೂ ಸಂಪ್ರದಾಯದ ಕ್ಯಾಲೆಂಡರ್. ಇದು ದಿನಸೂಚಿಯಷ್ಟೆ ಅಲ್ಲದೇ ಆ ವರುಷದಲ್ಲಿ ಮಳೆ ಬೆಳೆ ಹೇಗಿದೆ, ರಾಶಿಫಲ, ಮದುವೆ ಉಪನಯನಗಳಿಗೆ ಒಳ್ಳೆಯ ಮುಹೂರ್ತಗಳು, ಒಟ್ಟರೆ ಜನಜೀವನದ ಸ್ಥಿತಿಯನ್ನು ಸೂಚಿಸಿರುವುದು. ಅಂದು ಹಿರಿಯ ಕಿರಿಯರೆಲ್ಲರೂ ಹೊಸ ಬಟ್ಟೆಗಳನ್ನು ಧರಿಸಿ ಸಂತೋಷದಿಂದ ಹಾಡಿ ನಲಿವರು.

ಯುಗಾದಿಯ ವಿಶೇಷ ತಿನಿಸು…

  • ಒಬ್ಬಟ್ಟು ಅಥವಾಹೋಳಿಗೆ. ತೆಂಗಿನಕಾಯಿಹೂರಣದಲ್ಲಿ ಮಾಡಿದ ಹೋಳಿಗೆ ಬಹಳ ದಿನ ಇರದೇ ಕೆಡುವುದೆಂದು ಬೇಳೆಯ ಹೂರಣದಲ್ಲಿ ಮಾಡುವರು. *ಇದನ್ನೇ ಮರಾಠಿಯಲ್ಲಿ ಪೂರಣ ಪೋಳಿ ಎಂದು ಕರೆವರು. ಸಂಜೆಯ ವೇಳೆಯಲ್ಲಿ ಗುರು ಹಿರಿಯರ ಮನೆಗಳಿಗೆ ಹೋಗಿ ಅವರಿಗೆ ಕಾಲುಮುಟ್ಟಿ ನಮಸ್ಕರಿಸಿ ಅವರ ಆಶೀರ್ವಾದ ಪಡೆವರು.
  • ಈಗೀಗ ಟಿವಿಯಲ್ಲಿ ಕವಿಗೋಷ್ಠಿಯೂ ಪ್ರಸಾರ ಮಾಡುವರು. ಇನ್ನೊಂದು ವಿಶೇಷ ವೆಂದರೆ ಇದೇ ಸಮಯದಲ್ಲಿ ಮಕ್ಕಳಿಗೆ ಪರೀಕ್ಷೆಗಳಿರುವುದರಿಂದ, ಈ ನೆಪದಲ್ಲಾದರೂ ಹಿರಿಯರಿಗೆ ಬಗ್ಗಿ ನಮಸ್ಕರಿಸಿ ಅವರಿಂದ ಒಳ್ಳೆಯದಾಗಲೆಂಬ ಮಾತುಗಳನ್ನು ಸ್ವೀಕರಿಸುವ ಸಂದರ್ಭ ಒದಗಿಬರುವುದು. ಮನೆಯ ಹೆಂಗಸರು ಹೊಸದಾಗಿ ಬರುವ ಮಾವಿನಕಾಯಿಯಿಂದ ಉಪ್ಪಿನಕಾಯಿಯನ್ನು ಮಾಡುವರು.

ಬೇವು-ಬೆಲ್ಲದ ಮಹತ್ವ…

ಯುಗಾದಿಯ ದಿನ ಸುಖದ ಸಂಕೇತವಾದ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾದ ಬೇವನ್ನೂ ಸಮನಾಗಿ ಸ್ವೀಕರಿಸುವರು. ತಿಂದ ಮೇಲೆ ಬೆಲ್ಲವು ಹೊಟ್ಟೆಯೊಳಗೆ ಉರಿಯ ಅಥವಾ ಶಾಖವನ್ನು ಉಂಟು ಮಾಡಿದರೆ ಬೇವು ಆ ಉರಿಯ ಶಮನಕಾರಿ. ಮೂಲ 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ನಿಮ್ಗೆ ತುಂಬಾ ಬೇಸರವಾಗ್ತಿದೆಯೇ?ಸುಮ್ಮನಿರಬೇಡಿ…ಈ 8 ಕೆಲಸಗಳನ್ನು ಮಾಡಿ ನೋಡಿ..!

    ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.

  • ದೇವರು-ಧರ್ಮ

    ಮೈಸೂರು ರಾಜವಂಶಸ್ತರಿಗೆ ಇದ್ದ ಅಲಮೇಲಮ್ಮನ ಶಾಪ ಮುಕ್ತವಾಯಿತ..?ತಿಳಿಯಲು ಈ ಲೇಖನ ಓದಿ..

    ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.

  • ಸುದ್ದಿ

    ‘ಪಾರ್ಲೆ’ ಉದ್ಯೋಗಿಗಳ ಕೆಲಸಕ್ಕೆ ಕುತ್ತು : 10 ಸಾವಿರ ಕಾರ್ಮಿಕರಿಗೆ ಸಂಕಷ್ಟ……!

     ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ. ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ. ಜಿಎಸ್ ಟಿ ಕಡಿತಗೊಳಿಸುವಂತೆ ನಾವು…

  • ಆರೋಗ್ಯ

    9 ಕ್ಯಾನ್ಸರ್‌ ಔಷಧಗಳ ಬೆಲೆ ಇಳಿಕೆ

    ಮಾರ್ಚ್‌ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್‌ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್‌ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್‌ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್‌ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್‌ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್‌,…

  • ಸುದ್ದಿ

    ನಮ್ಮ ನಿಮ್ಮ ಎಲ್ಲ ಪ್ರಶ್ನೆಗೆ ಉತ್ತರಿಸೋ ಗೂಗಲ್ ನ ವಯಸ್ಸು ಎಷ್ಟು ಎಂದು ನಿಮಗೆ ಗೊತ್ತಾ.? ಇಲ್ಲಿದೆ ನೋಡಿ ಡಿಟೇಲ್ಸ್…!!

    ನಿಮಗೆ ಯಾವುದಾದರೂ ಕಾಯಿಲೆ ಬಗ್ಗೆ ಮಾಹಿತಿ ಬೇಕಾ? ಯಾವುದಾದರೂ ಸ್ಥಳದ ವಿಶೇಷತೆ ಹುಡುಕಬೇಕಾ? ವಿಶೇಷ ವ್ಯಕ್ತಿಯ ಬಗ್ಗೆ ಮಾಹಿತಿ ಬೇಕಾ? ಹೀಗೆ ನಿಮ್ಮ ಯಾವುದೇ ಅಗತ್ಯಕ್ಕೆ ತಕ್ಷಣ‌ ಉತ್ತರ ಒದಗಿಸಬಲ್ಲ ಬೆರಳಂಚಿನ ಮಾಂತ್ರಿಕ ಗೂಗಲ್ ಸರ್ಚ್ ಇಂಜಿನ್. ಬಹುಷಃ ಗೂಗಲ್ ಬರೋದಿಕ್ಕೆ ಮೊದಲು ನಮ್ಮ ಪಾಡು ಹೇಗಿತ್ತು ಎಂಬುದನ್ನು ಊಹಿಸಲೂ ಸಾಧ್ಯವಾಗದಷ್ಟು ದಟ್ಟವಾಗಿ ಗೂಗಲ್ ನಮ್ಮನ್ನು ಆವರಿಸಿದೆ. ಇಂತಹ ಗೂಗಲ್ ಸರ್ಚ್ ಇಂಜಿನ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ.ಅದಕ್ಕೆ ಗೂಗಲ್ ವಿನೂತನ ಡೂಡಲ್ ಮೂಲಕ ಗೌರವ‌‌ ಸಮರ್ಪಿಸಿದೆ….