News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ರಾಜ್ಯದಲ್ಲಿ ಲೋಕಸಭಾ ಫಲಿತಾಂಶ 4 ಗಂಟೆ ವಿಳಂಬ!

358

ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು.


ಹಿಂದೆ 12 ಗಂಟೆಗೆ ಮುಗಿಯುತ್ತಿತ್ತು. ಆದರೆ ಈಗ ಒಂದು ರೌಂಡ್ ಎಣಿಕೆಗೆ 45 ನಿಮಿಷ ಬೇಕಾಗುತ್ತದೆ. 57 ಅಭ್ಯರ್ಥಿಗಳು ಬೆಳಗಾವಿ ಕ್ಷೇತ್ರದಲ್ಲಿ ಇದ್ದಾರೆ. ಅಲ್ಲದೆ ನಾವು ಬೇಗ ಎಣಿಕೆ ಮಾಡಲು ಸಾಧ್ಯವಿಲ್ಲ. ಬೇಗ ಎಣಿಕೆ ಮುಗಿಸುವ ಪ್ರಯತ್ನ ಮಾಡುತ್ತೇವೆ. ಆದರೆ ಸ್ವಲ್ಪ ತಡ ಆಗಬಹುದು. 3 ಗಂಟೆಯ ಒಳಗೆ ಬಹುತೇಕ ರಿಸಲ್ಟ್ ಕೊಡುತ್ತೇವೆ. ಸಂಜೆ 6 ಗಂಟೆ ಒಳಗೆ 28 ಕ್ಷೇತ್ರಗಳ ರಿಸಲ್ಟ್ ಕೊಡಲಾಗುತ್ತದೆ ಎಂದು ಹೇಳಿದರು.ಇದೂವರೆಗೆ 98, 606 ಪೋಸ್ಟಲ್ ಬ್ಯಾಲೆಟ್ ಬಂದಿದೆ. 25, 768 ಸರ್ವಿಸ್ ವೋಟರ್ಸ್ ಪೋಸ್ಟಲ್ ಬ್ಯಾಲೆಟ್ ಬಂದಿದೆ. 5 ವಿವಿ ಪ್ಯಾಟ್ ಗಳನ್ನು ವೇಗವಾಗಿ ಎಣಿಕೆ ಮಾಡಲಾಗುತ್ತದೆ ಎಂದರು.


ಎಣಿಕೆ ಕಾರ್ಯ: ಅಧಿಕೃತ ಪಾಸ್ ಇದ್ದವರಿಗೆ ಮಾತ್ರ ಎಣಿಕಾ ಕೇಂದ್ರಕ್ಕೆ ಪ್ರವೇಶ ಕೊಡಲಾಗುವುದು. ಪೊಲೀಸ್ ಸಿದ್ಧತೆ ಮಾಡಲಾಗಿದೆ. ಕೌಂಟರ್ ಸೆಂಟರ್ ಗೆ ವೀಕ್ಷಕರಿಗೆ ಹೊರತುಪಡಿಸಿ ಯಾರೂ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ. 18 ರಿಂದ 33 ರೌಂಡ್ಸ್ ಎಣಿಕೆ ನಡೆಯುತ್ತದೆ. ಮತದಾರರ ಸಂಖ್ಯೆ ಆಧಾರದಲ್ಲಿ ಎಷ್ಟು ರೌಂಡ್ಸ್ ಅನ್ನೋದು ಡಿಸೈಡ್ ಆಗುತ್ತದೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಅತೀ ಹೆಚ್ಚು ರೌಂಡ್ಸ್ ಮತ ಎಣಿಕೆ ನಡೆಯುತ್ತದೆ ಎಂದು ಅವರು ಮಾಹಿತಿ ನೀಡಿದರು.

ಕೌಂಟಿಂಗ್ ಟೇಬಲ್ ಅಳವಡಿಕೆ: ಮತ ಎಣಿಕೆಗೆ 28 ಕ್ಷೇತ್ರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಡಿಷನಲ್ ಎಆರ್ ಓ- 180 ಮಂದಿ ಇರಲಿದ್ದಾರೆ. 28 ಲೋಕಸಭಾ ಹಾಗೂ 2 ಕ್ಷೇತ್ರಗಳ ಬೈ ಎಲೆಕ್ಷನ್ ಮತ ಎಣಿಕೆ 23ರಂದು ಬೆಳಗ್ಗೆ 8 ಗಂಟೆಗೆ ನಡೆಯುತ್ತದೆ. ಶೇ. 80.23 ಅತೀ ಹೆಚ್ಚು ಮತದಾನ ಮಂಡ್ಯದಲ್ಲಿ ಆಗಿದೆ. ದಕ್ಷಿಣ ಕನ್ನಡದಲ್ಲಿ ಶೇ. 77.90, ತುಮಕೂರಿನಲ್ಲಿ ಶೇ.77.90 ಮತದಾನವಾಗಿತ್ತು. ಶೇ.53.47 ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನವಾಗಿದೆ. 28 ಕ್ಷೇತ್ರಗಳಲ್ಲಿ 461 ಮಂದಿ ಕಣದಲ್ಲಿದ್ದಾರೆ. 3224 ಕೌಂಟಿಂಗ್ ಟೇಬಲ್ ಗಳನ್ನ ಅಳವಡಿಸಲಾಗಿದೆ ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ತಾನು’ಮುಟ್ಟಾಳ ಅಲ್ಲ’ಎಂದು ಸಾಬೀತು ಪಡಿಸಿದ ಮನೋಜ್..! ಮನೋಜ್ ಗೆದ್ದ ಮೊತ್ತ ಎಷ್ಟು.?

    ಕುಟುಂಬದ ಆರ್ಥಿಕ ಸಂಕಷ್ಟವನ್ನು ತೀರಿಸಿಕೊಳ್ಳಲು ಕೆಲವರು ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮಕ್ಕೆ ಬರುತ್ತಾರೆ. ಸಮಾಜಕ್ಕೆ ಏನಾದರೂ ಒಳಿತು ಮಾಡುವ ಉದ್ದೇಶದಿಂದ ಕೆಲವರು ಹಾಟ್ ಸೀಟ್ಮೇಲೆ ಕೂರುತ್ತಾರೆ. ವಿದ್ಯಾಭ್ಯಾಸಕ್ಕೆ ಸಹಾಯ ಆಗಲಿ ಎಂದೂ ಕೆಲವರು ಪುನೀತ್ ರಾಜ್ ಕುಮಾರ್  ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಂಥದ್ರಲ್ಲಿ, ಇವರೆಲ್ಲರಿಗಿಂತಲೂ ಕೊಂಚ ವಿಭಿನ್ನವಾಗಿ ಕಂಡಿದ್ದು ಮನೋಜ್ ಎಂಬ ಯುವಕ. ‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಗೆದ್ದ ಹಣದಿಂದ ತಂದೆಗೆ ಸಹಾಯ ಮಾಡಬೇಕು ಎಂಬ ಇಚ್ಛೆಏನೋ ಮನೋಜ್ ಗಿದೆ. ಆದ್ರೆ,ಅದಕ್ಕಿಂತ ಹೆಚ್ಚಾಗಿ ತಾನು ಮುಟ್ಟಾಳ ಅಲ್ಲ ಎಂಬುದನ್ನ…

  • ಸುದ್ದಿ

    ಶೀಘ್ರದಲ್ಲೆ ‘ಆಯುಷ್ಮಾನ್ ಭವ’ ರಿಲೀಸ್;ಶಿವಣ್ಣ ಅಭಿಮಾನಿಗಳಿಗೆ ಶುಭ ಸುದ್ದಿ..!

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….

  • Animals

    ಹೆಚ್ಚು ಬುದ್ಧಿಶಾಲಿಯಾಗಿರುವ ಜರ್ಮನ್ ಶೆಫರ್ಡ್

    ಜರ್ಮನ್ ಶೆಫರ್ಡ್: ಜರ್ಮನಿಯಲ್ಲಿ ಹುಟ್ಟಿದ ಮಧ್ಯಮದಿಂದ ದೊಡ್ಡ ಗಾತ್ರದ ಕೆಲಸ ಮಾಡುವ ನಾಯಿಯ ತಳಿಯಾಗಿದೆ. ಇಂಗ್ಲಿಷ್ ಭಾಷೆಯಲ್ಲಿ, ತಳಿಯ ಅಧಿಕೃತವಾಗಿ ಗುರುತಿಸಲ್ಪಟ್ಟ ಹೆಸರು ಜರ್ಮನ್ ಶೆಫರ್ಡ್ ಡಾಗ್ (ಜಿಎಸ್ಡಿ). ಈ ತಳಿಯನ್ನು ಅಧಿಕೃತವಾಗಿ ಯುಕೆ ನಲ್ಲಿ ಅಲ್ಸಟಿಯನ್ ಎಂದು ಕರೆಯಲಾಗುತ್ತಿತ್ತು, ಮೊದಲ ವಿಶ್ವಯುದ್ಧದ ನಂತರ 1977 ರವರೆಗೆ ಅದರ ಹೆಸರನ್ನು ಜರ್ಮನ್ ಶೆಫರ್ಡ್ ಎಂದು ಬದಲಾಯಿಸಲಾಯಿತು. ಅದರ ಪ್ರಾಚೀನ, ತೋಳದ ತರಹದ ನೋಟದ ಹೊರತಾಗಿಯೂ, ಜರ್ಮನ್ ಶೆಫರ್ಡ್ ತುಲನಾತ್ಮಕವಾಗಿ ಆಧುನಿಕ ತಳಿಯ ನಾಯಿಯಾಗಿದ್ದು, ಅವುಗಳ ಮೂಲವು 1899…

  • ಸುದ್ದಿ

    ಆರ್ಥಿಕ ಕುಸಿತ ಎದುರಿಸುವುದು ಹೇಗೆ ಎಂದು ಮೋದಿಗೆ ಆರು ಸಲಹೆ ನೀಡಿದ ಮನಮೋಹನ್ ಸಿಂಗ್,.!

    ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್‌ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್‌ಗಳನ್ನು…

  • ಸುದ್ದಿ

    11 ಶಿಪ್ ಕಂಟೇನರ್​ಗಳಲ್ಲಿ ನಿರ್ಮಾಣವಾಗಿರುವ 3 ಅಂತಸ್ತಿನ ಮನೆ ಹೇಗಿದೆ ಗೊತ್ತಾ,ನೋಡಿದರೆ ಅಚ್ಚರಿ ಪಡುವುದು ಗ್ಯಾರಂಟಿ,.!

    ಜೀವನದಲ್ಲಿ ಎಲ್ಲರೂ  ತಮಗೆ ಸ್ವಂತ  ಮನೆಯನ್ನು  ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ.  ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು….

  • ಸುದ್ದಿ

    ವಿಚ್ಛೇದನ ನೀಡಿ ಎರಡನೇ ಮದುವೆ ಆದ್ರೂ, ಈ ಮಹಿಳೆ ತನ್ನ ಎರಡನೇ ಗಂಡನ ಜೊತೆಗೇ, ಮೊದಲ ಪತಿಯ ಸೇವೆ ಮಾಡುತ್ತಿದ್ದಾಳೆ..!ಏಕೆ?ತಿಳಿಯಲು ಈ ಲೇಖನ ಓದಿ…

    ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.