ರಾಜಕೀಯ

ರಾಜ್ಯದಲ್ಲಿ ಲೋಕಸಭಾ ಫಲಿತಾಂಶ 4 ಗಂಟೆ ವಿಳಂಬ!

356

ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು.


ಹಿಂದೆ 12 ಗಂಟೆಗೆ ಮುಗಿಯುತ್ತಿತ್ತು. ಆದರೆ ಈಗ ಒಂದು ರೌಂಡ್ ಎಣಿಕೆಗೆ 45 ನಿಮಿಷ ಬೇಕಾಗುತ್ತದೆ. 57 ಅಭ್ಯರ್ಥಿಗಳು ಬೆಳಗಾವಿ ಕ್ಷೇತ್ರದಲ್ಲಿ ಇದ್ದಾರೆ. ಅಲ್ಲದೆ ನಾವು ಬೇಗ ಎಣಿಕೆ ಮಾಡಲು ಸಾಧ್ಯವಿಲ್ಲ. ಬೇಗ ಎಣಿಕೆ ಮುಗಿಸುವ ಪ್ರಯತ್ನ ಮಾಡುತ್ತೇವೆ. ಆದರೆ ಸ್ವಲ್ಪ ತಡ ಆಗಬಹುದು. 3 ಗಂಟೆಯ ಒಳಗೆ ಬಹುತೇಕ ರಿಸಲ್ಟ್ ಕೊಡುತ್ತೇವೆ. ಸಂಜೆ 6 ಗಂಟೆ ಒಳಗೆ 28 ಕ್ಷೇತ್ರಗಳ ರಿಸಲ್ಟ್ ಕೊಡಲಾಗುತ್ತದೆ ಎಂದು ಹೇಳಿದರು.ಇದೂವರೆಗೆ 98, 606 ಪೋಸ್ಟಲ್ ಬ್ಯಾಲೆಟ್ ಬಂದಿದೆ. 25, 768 ಸರ್ವಿಸ್ ವೋಟರ್ಸ್ ಪೋಸ್ಟಲ್ ಬ್ಯಾಲೆಟ್ ಬಂದಿದೆ. 5 ವಿವಿ ಪ್ಯಾಟ್ ಗಳನ್ನು ವೇಗವಾಗಿ ಎಣಿಕೆ ಮಾಡಲಾಗುತ್ತದೆ ಎಂದರು.


ಎಣಿಕೆ ಕಾರ್ಯ: ಅಧಿಕೃತ ಪಾಸ್ ಇದ್ದವರಿಗೆ ಮಾತ್ರ ಎಣಿಕಾ ಕೇಂದ್ರಕ್ಕೆ ಪ್ರವೇಶ ಕೊಡಲಾಗುವುದು. ಪೊಲೀಸ್ ಸಿದ್ಧತೆ ಮಾಡಲಾಗಿದೆ. ಕೌಂಟರ್ ಸೆಂಟರ್ ಗೆ ವೀಕ್ಷಕರಿಗೆ ಹೊರತುಪಡಿಸಿ ಯಾರೂ ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ. 18 ರಿಂದ 33 ರೌಂಡ್ಸ್ ಎಣಿಕೆ ನಡೆಯುತ್ತದೆ. ಮತದಾರರ ಸಂಖ್ಯೆ ಆಧಾರದಲ್ಲಿ ಎಷ್ಟು ರೌಂಡ್ಸ್ ಅನ್ನೋದು ಡಿಸೈಡ್ ಆಗುತ್ತದೆ. ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ ಅತೀ ಹೆಚ್ಚು ರೌಂಡ್ಸ್ ಮತ ಎಣಿಕೆ ನಡೆಯುತ್ತದೆ ಎಂದು ಅವರು ಮಾಹಿತಿ ನೀಡಿದರು.

ಕೌಂಟಿಂಗ್ ಟೇಬಲ್ ಅಳವಡಿಕೆ: ಮತ ಎಣಿಕೆಗೆ 28 ಕ್ಷೇತ್ರಗಳಲ್ಲಿ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಅಡಿಷನಲ್ ಎಆರ್ ಓ- 180 ಮಂದಿ ಇರಲಿದ್ದಾರೆ. 28 ಲೋಕಸಭಾ ಹಾಗೂ 2 ಕ್ಷೇತ್ರಗಳ ಬೈ ಎಲೆಕ್ಷನ್ ಮತ ಎಣಿಕೆ 23ರಂದು ಬೆಳಗ್ಗೆ 8 ಗಂಟೆಗೆ ನಡೆಯುತ್ತದೆ. ಶೇ. 80.23 ಅತೀ ಹೆಚ್ಚು ಮತದಾನ ಮಂಡ್ಯದಲ್ಲಿ ಆಗಿದೆ. ದಕ್ಷಿಣ ಕನ್ನಡದಲ್ಲಿ ಶೇ. 77.90, ತುಮಕೂರಿನಲ್ಲಿ ಶೇ.77.90 ಮತದಾನವಾಗಿತ್ತು. ಶೇ.53.47 ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಅತೀ ಕಡಿಮೆ ಮತದಾನವಾಗಿದೆ. 28 ಕ್ಷೇತ್ರಗಳಲ್ಲಿ 461 ಮಂದಿ ಕಣದಲ್ಲಿದ್ದಾರೆ. 3224 ಕೌಂಟಿಂಗ್ ಟೇಬಲ್ ಗಳನ್ನ ಅಳವಡಿಸಲಾಗಿದೆ ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವೀಡಿಯೊ ಗ್ಯಾಲರಿ

    ಈ ವಿಚಿತ್ರ ಜೀವಿಯನ್ನು ನೋಡಿದ್ದೀರಾ..?ನೋಡಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ… ಆ ವಿಚಿತ್ರ ಜೀವಿ ಹೇಗಿದೆ ಗೊತ್ತಾ.?ಈ ವಿಡಿಯೋ ನೋಡಿ..

  • ಆರೋಗ್ಯ, ಉಪಯುಕ್ತ ಮಾಹಿತಿ

    ಪದೇ ಪದೇ ನಿಮ್ಮ ಕಿವಿ ನೋವು ಕಾಡುತ್ತಿದೆಯೇ.? ಹಾಗಿದ್ದರೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…

  • ಜ್ಯೋತಿಷ್ಯ

    ನಿಮ್ಮ ಮಂಗಳವಾರ ರಾಶಿ ಭವಿಷ್ಯ ಶುಭವೋ ಅಶುಭವೋ ಈ ಲೇಖನ ನೋಡಿ ತಿಳಿಯಿರಿ…

    ಮಂಗಳವಾರ, 03/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಾಕಾಂಕ್ಷಿಗಳಿಗೆ ಸದವಕಾಶ ಒದಗಿ ಬರಲಿದೆ. ಕೂಲವಾದೀತು. ವೃತ್ತಿರಂಗದಲ್ಲಿ ನಿಮ್ಮ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳುವುದು ಅಗತ್ಯವಿದೆ. ವಿಶ್ವಾಸದ ದುರುಪಯೋಗವಾಗುತ್ತದೆ. ಆಗಾಗ ಅಡಚಣೆಗಳಿಂದಲೇ ಕಾರ್ಯಾನು ವೈಯಕ್ತಿಕ ಸಮಸ್ಯೆಗಳು ಬಗೆಹರಿದು ಮನೋಲ್ಲಾಸ ಮೂಡಲಿದೆ. ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ವೃಷಭ:- ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ತಂದೀತು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬದ ಬಾಧ್ಯತೆಗಳ ನಿರ್ವಹಣೆ ಸರಾಗ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ. ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ತೆರೆದುಕೊಳ್ಳಲಿವೆ. ಆರೋಗ್ಯದ…

  • ಹಣ ಕಾಸು

    10 ರೂಪಾಯಿ ನಾಣ್ಯವನ್ನು ಹೊಂದಿರುವವರಿಗೆ ಇಲ್ಲಿದೆ ಗುಡ್ ನ್ಯೂಸ್..!ತಿಳಿಯಲು ಈ ಲೇಖನ ಓದಿ..

    10 ರೂಪಾಯಿ ನಾಣ್ಯವನ್ನು ರದ್ದು ಮಾಡಿರದಿದ್ದರೂ, ಅನೇಕ ಕಡೆಗಳಲ್ಲಿ ವರ್ತಕರು, ಜನ ಸಾಮಾನ್ಯರು ಇವುಗಳನ್ನು ಸ್ವೀಕರಿಸಲು ಹಿಂದೇಟು ಹಾಕ್ತಾರೆ.ಇವೇ ಮೊದಲಾದ ಕಾರಣಗಳಿಂದಾಗಿ ಬ್ಯಾಂಕ್ ಗಳಲ್ಲಿ ನಾಣ್ಯ ಮೇಳ ನಡೆಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್(ಆರ್.ಬಿ.ಐ.) ವಾಣಿಜ್ಯ ಬ್ಯಾಂಕ್ ಗಳಿಗೆ ಸೂಚನೆ ನೀಡಿದೆ.

  • ಕಾನೂನು

    ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಶಿಕ್ಷೆ

    ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…

  • ಸಿನಿಮಾ, ಸುದ್ದಿ, ಸ್ಪೂರ್ತಿ

    ಡಿ-ಬಾಸ್ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಭಿಮಾನಿಗಳು.

     ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…