ಕರ್ನಾಟಕ

ರಾಜ್ಯದ 6000 ಶಿಕ್ಷಕರು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ..!

1529

ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆಯೊಂದು ರಾಜ್ಯದ ಶಿಕ್ಷಕರನ್ನು ಆತಂಕಕ್ಕೀಡು ಮಾಡಿದೆ. ಸರ್ಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳ ಸೇವೆಯಲ್ಲಿರುವ ಶಿಕ್ಷಕರು ಉತ್ತಮ ರೀತಿಯಲ್ಲಿ ವೃತ್ತಿ ತರಬೇತಿ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ, ಇಲ್ಲದಿದ್ದರೆ ಅವರನ್ನು ವಜಾಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಹೊರಡಿಸಿರುವ ಸೂಚನೆ ಏನು ಗೊತ್ತಾ?

ರಾಜ್ಯದಲ್ಲಿರುವ ಸುಮಾರು 6,000 ಶಿಕ್ಷಕರು ತಮ್ಮ ಸೇವೆಯಲ್ಲಿ ಮುಂದುವರಿಯಲು ಡಿಪ್ಲೊಮಾ ಇನ್ ಎಜುಕೇಷನ್ (ಡಿ.ಎಡ್) ಅರ್ಹತೆಯನ್ನು ಪೂರ್ಣಗೊಳಿಸಿಲ್ಲ ಎಂದು ಮೂಲಗಳು ತಿಳಿಸಿವೆ.

ಎಲ್ಲಾ ಶಿಕ್ಷಕರು ನ್ಯಾಷನಲ್ ಇನ್ಸ್‍ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್‍ಐಒಎಸ್) ಸಂಸ್ಥೆಯಿಂದ ಮುಕ್ತ ಮತ್ತು ದೂರಶಿಕ್ಷಣದ ಮೂಲಕ 31ನೇ ಮಾರ್ಚ್ 2019ರ ಒಳಗೆ ಈ ಕನಿಷ್ಠ ವಿದ್ಯಾರ್ಹತೆಯನ್ನು ಹೊಂದಬೇಕು ಎಂದು ಸಚಿವಾಲಯ ನಿರ್ದೇಶನ ನೀಡಿದೆ.

ನಿಗದಿತ ಅವಧಿಯೊಳಗೆ ಅಗತ್ಯ ತರಬೇತಿ ಪಡೆಯಲು ವಿಫಲವಾಗುವ ಯಾವುದೇ ಶಿಕ್ಷಕ, ಶಿಕ್ಷಕಿಯರನ್ನು ವಜಾಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಅಗತ್ಯ ಕನಿಷ್ಠ ವೃತ್ತಿಪರ ವಿದ್ಯಾರ್ಹತೆ ಪಡೆಯಲು ಇದು ಶಿಕ್ಷಕರಿಗೆ ನೀಡುತ್ತಿರುವ ಕೊನೆಯ ಅವಕಾಶವಾಗಿದೆ ಎಂದು ತಿಳಿಸಲಾಗಿದೆ.


ಸೇವೆಯಲ್ಲಿರುವ ಎಲ್ಲ ಶಿಕ್ಷಕರು ಡಿ.ಎಡ್ ವಿದ್ಯಾರ್ಹತೆ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರಗಳು ಶಾಲೆಗಳಿಗೆ ಅಂತಿಮ ಗಡುವಿನ ಬಗ್ಗೆ ಮಾಹಿತಿ ನೀಡಬೇಕು ಹಾಗೂ ಶಿಕ್ಷಕರು ಈ ವಿದ್ಯಾರ್ಹತೆ ಹೊಂದುವಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಅನಿತಾ ಕಾರ್ವಾಲ್ ತಿಳಿಸಿದ್ಧಾರೆ.

ನಾವು ಈ ಪ್ರಕ್ರಿಯೆಯನ್ನು ಆರಂಭಿಸಿದ್ದೇವೆ. ರಾಜ್ಯಾದ್ಯಂತ ಇರುವ ಎಲ್ಲ ಶಿಕ್ಷಕರಿಗೆ ಈ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ಧಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭಾರತದಲ್ಲಿ ಬಿಕಿನಿ ಏರ್ ಲೈನ್ಸ್..!ವಿಮಾನದಲ್ಲಿ ಬಿಕಿನಿ ಸುಂದರಿಯರು!?ಏನೆಲ್ಲಾ ಸೌಲಭ್ಯ ಇದೆ ಗೊತ್ತಾ.?ಮುಂದೆ ಓದಿ ಶಾಕ್ ಆಗ್ತೀರಾ..

    ವಿಯೆಟ್ನಾಂನ ವಿಯರ್ ಜೆಟ್ ಸದ್ಯದಲ್ಲೇ ಭಾರತಕ್ಕೂ ಬರುತ್ತಿದೆ. ಬಿಕಿನಿ ಏರ್ ಲೈನ್ ಅಂತಾನೇ ಇದು ಫೇಮಸ್ ಆಗಿದೆ. ಈ ವಿವಾದಾತ್ಮಕ ವಿಮಾನಯಾನ ಸಂಸ್ಥೆ ನವದೆಹಲಿಯಿಂದ ಹೊ ಚಿ ಮಿನ್ಹ್ ನಗರಕ್ಕೆ ವಿಮಾನ ಪ್ರಯಾಣ ಆರಂಭಿಸುವುದಾಗಿ ಘೋಷಿಸಿದೆ. ಈ ವಿಮಾನದಲ್ಲಿರೋ ಗಗನಸಖಿಯರೆಲ್ಲ ಕೇವಲ ಬಿಕಿನಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಈ ಬಿಕಿನಿ ಸುಂದರಿಯರು ಭಾರತಕ್ಕೂ ಬರುತ್ತಿದ್ದಾರೆ. ಬಿಕಿನಿ ಸುಂದರಿಯರು… ಈ ಬಿಕಿನಿ ಸುಂದರಿಯರೀಗ ಭಾರತಕ್ಕೂ ಆಗಮಿಸುತ್ತಿರುವುದು ಪ್ರಯಾಣಿಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.ವಾರದಲ್ಲಿ ನಾಲ್ಕು ದಿನಗಳ ಕಾಲ ಈ ವಿಮಾನ ಹಾರಾಟ…

  • ಸುದ್ದಿ

    ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

    ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಇಟ್ಟಗುರಿ ಬಿಟ್ಟಬಾಣ ನೇರವಾಗಿ ಇರಬೇಕು. ಆದರೆ ಗ್ರಹಗತಿಗಳು ನಿಮಗೆ ಸ್ವಲ್ಪ ಆಲಸ್ಯವನ್ನು ತುಂಬುವರು. ಹಾಗಾಗಿ ನಿರ್ದಿಷ್ಟ ಗುರಿಯನ್ನು ತಲುಪಲು ಸಾಧ್ಯವಿಲ್ಲ. ಕುಲದೇವತಾ ಸ್ಮರಣೆ ಮಾಡಿ.  .ನಿಮ್ಮ ಸಮಸ್ಯೆ.ಏನೇ .ಇರಲಿ…

  • ಉಪಯುಕ್ತ ಮಾಹಿತಿ

    ಜನಸಂಖ್ಯೆಯನ್ನು ನಿಯಂತ್ರಿಸಲು ಈ ಸಲಹೆ ನೀಡಿದ ಬಾಬಾ ರಾಮ್‌ ದೇವ್…!

    ದೇಶದಲ್ಲಿ ಹೊಸ ಸರ್ಕಾರ ರಚನೆಗೂ ಮುನ್ನ ಯೋಗ‌ ಗುರು ಬಾಬಾ ರಾಮ್‌ ದೇವ್ ದೇಶದ ಜನಸಂಖ್ಯೆ ನಿಯಂತ್ರಣದ ಬಗ್ಗೆ ಸಲಹೆಯೊಂದನ್ನು ನೀಡಿದ್ದಾರೆ. ದೇಶದ ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಗೆ ಬರಬೇಕೆಂದಿರುವ ಬಾಬಾ ರಾಮ್‌ ದೇವ್, ಎರಡು ಮಕ್ಕಳ ನಂತ್ರ ಮೂರನೇ ಮಗುವಿಗೆ ಮತದಾನದ ಹಕ್ಕು ನೀಡಬಾರದು. ಜೊತೆಗೆ ಯಾವುದೇ ಸರ್ಕಾರಿ ಸೌಲಭ್ಯವನ್ನು ನೀಡಬಾರದು ಎಂದು ಹೇಳಿದ್ದಾರೆ. ಹೆಚ್ಚಾಗುತ್ತಿರುವ ಜನಸಂಖ್ಯೆಗೆ ಭಾರತ ಸಿದ್ಧವಿಲ್ಲ. ಭಾರತದಲ್ಲಿ 150 ಕೋಟಿಗಿಂತ ಹೆಚ್ಚು ಜನಸಂಖ್ಯೆ ಇರಬಾರದು ಎಂದು ಯೋಗ ಗುರು ಹೇಳಿದ್ದಾರೆ. ಈ…

  • ಜಯಂತಿಗಳು

    ಇಂದು ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ…ಗಾಂಧಿ ಜಯಂತಿ ಸ್ವಾತಂತ್ರಕ್ಕೆ ಮುಂಚೆ ಆಚರಿಸಲಾಗಿತ್ತು!ಯಾವಾಗ ಗೊತ್ತಾ..?

    ಬ್ರಿಟೀಷರ ಅಟ್ಟಹಾಸ ತಾರಕಕ್ಕೇರಿದಾಗ, ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಲು ಜನಿಸಿದ ಶಾಂತಿ ಪ್ರವರ್ತಕ ಮಹಾತ್ಮಾ ಗಾಂಧಿ. ಗುಜರಾತ್ ನ ಪೋರ್ ಬಂದರ್ ನಲ್ಲಿ ಅಕ್ಟೋಬರ್ 2, 1869 ರಂದು ಮೋಹನ್ ದಾಸ್ ಕರಮ್ ಚಂದ್ ಗಾಂಧಿಯಾಗಿ ಜನಿಸಿ, ವಿದೇಶದಲ್ಲಿ ಕಾನೂನು ಪದವಿ ಪಡೆದು ದಕ್ಷಿಣ ಭಾರತದಲ್ಲೇ ಹೋರಾಟ ಆರಂಭಿಸಿ ಭಾರತಕ್ಕೆ ಬಂದರು.

  • ಮನರಂಜನೆ

    ಕಿರಿಕ್ ರಾಣಿ ತಾವೇನು ಜಾಕಿಚಾನ್ ತಂಗಿನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಕಿಕ್ ಕೊಟ್ರಾ..!

    ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.