News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಕರ್ನಾಟಕ

ರಾಷ್ಟ್ರಪತಿ ಕರ್ನಾಟಕದ ಬಗ್ಗೆ ಹಾಗೂ ಕರ್ನಾಟಕದ ಗಣ್ಯರ ಬಗ್ಗೆ ಹೊಗಳಿದ್ದಾರೆ…!ತಿಳಿಯಲು ಇದನ್ನು ಓದಿ..

432

ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.

ವಿಧಾನಸೌಧದ ವಜ್ರ ಮಹೋತ್ಸವದ ಅಂಗವಾಗಿ ಬುಧವಾರ ಜಂಟಿ ಅಧಿ ವೇಶನ ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, “ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಟಿಪ್ಪು ಸುಲ್ತಾನ್’ ಎಂದು ಶ್ಲಾ ಸಿದ್ದಾರೆ.

ಇದಷ್ಟೇ ಅಲ್ಲ, ಮೈಸೂರು ರಾಕೆಟ್ ತಂತ್ರಜ್ಞಾನ ಅಭಿವೃದ್ಧಿಪಡಿಸಿ ಯುದ್ಧ ಭೂಮಿಯಲ್ಲಿ ಮೊದಲ ಬಾರಿಗೆ ಬಳಕೆ ಮಾಡಿದ ಕೀರ್ತಿಯೂ ಟಿಪ್ಪು ಸುಲ್ತಾನ್ಗೆ ಸಲ್ಲುತ್ತದೆ ಎಂದು ಕೋವಿಂದ್ ಅವರು ಟಿಪ್ಪು ಸಾಧನೆಯನ್ನು ಕೊಂಡಾಡಿದ್ದಾರೆ. ಟಿಪ್ಪು ಬಳಸಿದ ಮೇಲಷ್ಟೇ ಐರೋಪ್ಯ ದೇಶಗಳಲ್ಲಿ ಈ ತಂತ್ರಜ್ಞಾನ ಬಳಕೆ ಮಾಡಲಾಯಿತು ಎಂದೂ ಹೇಳಿದರು.

ರಾಷ್ಟ್ರಪತಿ ಮಾತಿನಿಂದ ಖುಷಿ ಗೊಂಡ ಕಾಂಗ್ರೆಸ್, ಜೆಡಿಎಸ್ ಸದ ಸ್ಯರು ಮೇಜು ಕುಟ್ಟಿ ಸ್ವಾಗತಿಸಿದರೆ, ಅನಿ ರೀಕ್ಷಿತವಾಗಿ ಎದುರಾದ “ಟಿಪ್ಪು ಬಣ್ಣನೆ’ ಬಿಜೆಪಿ ಸದಸ್ಯರಿಗೆ ಶಾಕ್ ನೀಡಿತು.

ಇದರ ಜತೆಗೆ ಸದ್ಯ ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಇನ್ನೊಂದು ವಿವಾದ “ಲಿಂಗಾಯತ’ದ ಬಗ್ಗೆಯೂ ಮಾತನಾಡಿದ ಕೋವಿಂದ್, ಸಮಾಜ ಸುಧಾರಣೆಯ “ಲಿಂಗಾಯತ’ ಚಳವಳಿ ಬಸವಾಚಾರ್ಯರ ನೇತೃತ್ವದಲ್ಲಿ ನಡೆದದ್ದು ಕರ್ನಾಟಕದಲ್ಲೇ. ಈ ಎಲ್ಲವೂ ದೇಶ ನಿರ್ಮಾಣಕ್ಕೆ ನೀಡಿದ ಕೊಡುಗೆಗಳೇ ಎಂದು ಬಣ್ಣಿಸಿದರು.

ಮಹಾವೀರ ಜೈನ, ಗೌತಮ ಬುದ್ಧ ಸ್ವೀಕರಿಸಿದ ನಾಡಿದು. ಶೃಂಗೇರಿಯಲ್ಲಿ ಆದಿ ಶಂಕರಾಚಾರ್ಯರು ಮಠ ಸ್ಥಾಪಿ ಸಿದ್ದು, ಕಲಬುರಗಿ ಸೂಪಿ ಸಂಸ್ಕೃತಿಯ ಕೇಂದ್ರವಾಗಿರುವುದು ಈ ನಾಡಿನ ವೈಶಿಷ್ಟ é ಎಂದು ಕೊಂಡಾಡಿದರು.

ರಾಷ್ಟ್ರಪತಿಯವರು ತಮ್ಮ ಭಾಷಣ ದಲ್ಲಿ ವಿಜಯನಗರ ಸಾಮ್ರಾಜ್ಯ ಆಳಿದ ಶ್ರೀಕೃಷ್ಣದೇವರಾಯ, ಬೆಂಗಳೂರು ನಿರ್ಮಾತೃ ಕೆಂಪೇಗೌಡ, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ ಅವರನ್ನು ಸ್ಮರಿಸಿಕೊಂಡರು. ಸೇನಾ ಮುಖ್ಯಸ್ಥರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ಕೆ.ಎಸ್. ತಿಮ್ಮಯ್ಯ ಅವರು ಕರ್ನಾಟಕದ ಮಕ್ಕಳು ಎಂದು ಬಣ್ಣಿಸಿದರು.

ಹೆಮ್ಮೆಯ ಕ್ಷಣ: ಕರ್ನಾಟಕ ವಿಧಾನಸಭೆ, ವಿಧಾನಪರಿಷತ್ ಬಗ್ಗೆಯೂ ಮೆಚ್ಚುಗೆ ಸೂಚಿಸಿದ ರಾಷ್ಟ್ರಪತಿ ಯವರು ನಾನು ರಾಷ್ಟ್ರಪತಿಯಾದ ಅನಂತರ ಮೊದಲ ಭೇಟಿ ಇದಾಗಿದ್ದು, ವಿಧಾನಸೌಧ ವಜ್ರ ಮಹೋತ್ಸವದಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡು ತ್ತಿರುವುದು ಹೆಮ್ಮೆ ಎಂದರು.

1956ರ ಅಕ್ಟೋಬರ್ನಲ್ಲಿ ದೇಶದ ಮೊದಲ ರಾಷ್ಟ್ರಪತಿ ಡಾ| ರಾಜೇಂದ್ರ ಪ್ರಸಾದ್ ಅವರು ಉದ್ಘಾಟಿಸಿದ್ದ ವಿಧಾನಸೌಧದಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮಕ್ಕೆ ಬಂದಿರುವುದು ನನಗೆ ಸಂತಸ ತಂದಿದೆ. ನಾನು ರಾಜೇಂದ್ರ ಪ್ರಸಾದ್ ಅವರ ಮಾರ್ಗದಲ್ಲೇ ಸಾಗುತ್ತೇನೆ ಎಂದರು.

ದೇವೇಗೌಡರ ಹೆಸರೇ ಇಲ್ಲ: ಭಾಷಣ ಸಂದರ್ಭ ವಿಧಾನ ಸೌಧ ನಿರ್ಮಾಣಕ್ಕೆ ಕಾರಣರಾದವರು, ರಾಜ್ಯಕ್ಕೆ ವಿಶೇಷ ಕೊಡುಗೆ ನೀಡಿದ ಮುಖ್ಯಮಂತ್ರಿಗಳ ಹೆಸರನ್ನೂ ರಾಷ್ಟ್ರಪತಿ ಕೋವಿಂದ್ ನೆನಪಿಸಿಕೊಂಡರು.

ಆದರೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹೆಸರೇ ಕಣ್ಮರೆಯಾಗಿದ್ದುದು ಜೆಡಿಎಸ್ ಸದಸ್ಯರ ಆಕ್ರೋ ಶಕ್ಕೂ ಕಾರಣವಾಯಿತು. ಬಳಿಕ ಅವರೇ ನೆನಪಿಸಿ ಕೊಂಡು, ನನ್ನ ಸ್ನೇಹಿತರೂ ಆಗಿರುವ ದೇವೇಗೌಡರನ್ನು ಮರೆಯುವು ದುಂಟೇ ಎಂದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಶಿವಣ್ಣನ ಕಾರನ್ನು ಚೆಕ್ ಪೋಸ್ಟ್ ನಲ್ಲಿ ತಪಾಸಣೆ ಮಾಡಿದ ಚುನಾವಣಾ ಸಿಬ್ಬಂದಿ..ಕಾರಲ್ಲಿ ಸಿಕ್ಕಿದ್ದೇನು?

    ಲೋಕಸಭೆ ಚುನಾವಣೆ  ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ತಡೆಗೆ ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಗೌರಿಬಿದನೂರು ಬಳಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಇದ್ದ ಸಿಬ್ಬಂದಿಗೆ ಅಚ್ಚರಿಯಾಗಿದೆ. ಚುನಾವಣಾ ಸಿಬ್ಬಂದಿ ರಾಜ್ಯ ಹೆದ್ದಾರಿಯಲ್ಲಿ ಬಂದ ಕಾರು ತಡೆದು ಪರಿಶೀಲನೆ ನಡೆಸಲು ಮುಂದಾದಾಗ, ಕಾರಿನಲ್ಲಿ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಇರುವುದು ಕಂಡುಬಂದಿದೆ. ಕಾರು ನಿಲ್ಲಿಸಿದ ಕೂಡಲೇ…

  • Health

    ಮಂಡಿ ಮತ್ತು ಕೀಲು ನೋವು ಕಡಿಮೆ ಮಾಡುವ 9 ಆಹಾರಗಳು ಯಾವುದು ಗೊತ್ತಾ ,..!

    ಮಂಡಿನೋವು ಬಂದರೆ ಚಿಕಿತ್ಸೆ ಜತೆಗೆ ಆಹಾರಕ್ರಮದ ಬಗ್ಗೆ ಗಮನ ಹರಿಸಿದರೆ ಬೇಗನೆ ಗುಣಮುಖರಾಗಬಹುದು. ಇಲ್ಲಿ ಮಂಡಿ ನೋವು ಕಡಿಮೆ ಮಾಡುವ 9 ಆಹಾರಗಳ ಬಗ್ಗೆ ಹೇಳಿದ್ದೇವೆ, ಇವುಗಳನ್ನು ನಿಮ್ಮ ಡಯಟ್‌ನಲ್ಲಿ ಸೇರಿಸಿ ಆರೋಗ್ಯ ಮರಳಿ ಪಡೆಯಿರಿ.ಮಧ್ಯ ವಯಸ್ಸು ದಾಟುತ್ತಿದ್ದಂತೆ ಮಂಡಿ ನೋವು ಸಾಮಾನ್ಯವಾಗಿ ಕಂಡು ಬರುವ ಸಮಸ್ಯೆಯಾಗಿದೆ. ಡೆಂಗೆ, ಚಿಕನ್‌ಗುನ್ಯಾ ಈ ರೀತಿಯ ಕಾಯಿಲೆಗಳು ಬಂದಾಗ ಕೂಡ ಮಂಡಿ ನೋವಿನ ಸಮಸ್ಯೆ ಕಾಡುವುದು. ಮಂಡಿ ನೋವಿನ ಸಮಸ್ಯೆ ಬಂದಾಗ ಚಿಕಿತ್ಸೆ ಜತೆ ಡಯಟ್‌ ಕಡೆ ಗಮನ ನೀಡಿದರೆ…

  • Health

    ರೋಗಗಳನ್ನು ನಿವಾರಿಸುವ ಜೊತೆಗೆ, ದೇಹಕ್ಕೆ ತಂಪು ನೀಡುವ ಕರಬೂಜ ಹಣ್ಣಿನ ಉಪಯೋಗ ತಿಳಿಯಿರಿ .

    ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…

  • ಸುದ್ದಿ

    ಸ್ಟೇಷನ್‌ ಮಾಸ್ಟರ್‌ ನಿರ್ಲಕ್ಷ್ಯಕ್ಕೆ ರೈಲ್ವೇ ಸಿಬ್ಬಂದಿ ಬಲಿ…!

    ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್‌ಪ್ರೆಸ್‌ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…

  • ಸುದ್ದಿ

    ಈ ಪ್ರದೇಶದಲ್ಲಿ ಗಂಡಂದಿರು ತಮ್ಮ ಪತ್ನಿಯರನ್ನು ಬಾಡಿಗೆಗೆ ನೀಡುತ್ತಾರಂತೆ..!ಮುಂದೆ ಓದಿ ಶಾಕ್ ಆಗ್ತೀರಾ…

    ಹಸಿವು, ಬಡತನ ಅನ್ನೋದು ಯಾರಿಂದ ಎಂಥ ಕೆಲಸ ಬೇಕಾದರೂ ಮಾಡಿಸುತ್ತೆ. ಕೀನ್ಯಾ ದೇಶಲ್ಲಿ ಬಡತನದಿಂದಾಗಿ ಕೆಲವರು ತಂತಮ್ಮ ಪತ್ನಿಯರನ್ನೇ ಬಾಡಿಗೆಗೆ ನೀಡುವಂಥ ದುಃಸ್ಥಿತಿ ಅಲ್ಲಿದೆ. ಕೀನ್ಯಾದಲ್ಲಿ ಬಡತನದ ಪ್ರಮಾಣ ಎಷ್ಟಿದೆಯೆಂದರೆ ನಮ್ಮಲ್ಲಿ ಗಂಡ ಹಾಗೂ ಹೆಂಡತಿ ಕೆಲಸಕ್ಕೆಂದು ಆಫೀಸಿಗೆ ಹೋದಂತೆ ಅಲ್ಲಿ ಪ್ರವಾಸಿಗರಿಗೆ ಮೈಮಾರಿಕೊಳ್ಳಲು ಹೋಗುತ್ತಾರೆ. ಶ್ರೀಮಂತ ವಿದೇಶಿ ಪ್ರವಾಸಿಗರಿಂದ ಸಾಕಷ್ಟು ಹಣ ಪಡೆದು ಹೊಟ್ಟೆ ಬಟ್ಟೆ ಕಟ್ಟಿಕೊಳ್ಳುತ್ತಾರೆ.ದುಡಿದು ಗಳಿಸುವ ಹಣ ಊಟಕ್ಕೂ ಸಾಲುತ್ತಿಲ್ಲವಾದಾಗ ಗಂಡನೇ ಪತ್ನಿಯನ್ನು ಈ ದಂಧೆಗೆ ಕಳುಹಿಸುವುದು ಅಲ್ಲಿ ಕಾಮನ್. ಹಾಗೆಯೇ ಪತ್ನಿಗೂ ಬೇರೆ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…