ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.

ವಿಧಾನಸೌಧದ ವಜ್ರ ಮಹೋತ್ಸವದ ಅಂಗವಾಗಿ ಬುಧವಾರ ಜಂಟಿ ಅಧಿ ವೇಶನ ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, “ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಟಿಪ್ಪು ಸುಲ್ತಾನ್’ ಎಂದು ಶ್ಲಾ ಸಿದ್ದಾರೆ.

ಇದಷ್ಟೇ ಅಲ್ಲ, ಮೈಸೂರು ರಾಕೆಟ್ ತಂತ್ರಜ್ಞಾನ ಅಭಿವೃದ್ಧಿಪಡಿಸಿ ಯುದ್ಧ ಭೂಮಿಯಲ್ಲಿ ಮೊದಲ ಬಾರಿಗೆ ಬಳಕೆ ಮಾಡಿದ ಕೀರ್ತಿಯೂ ಟಿಪ್ಪು ಸುಲ್ತಾನ್ಗೆ ಸಲ್ಲುತ್ತದೆ ಎಂದು ಕೋವಿಂದ್ ಅವರು ಟಿಪ್ಪು ಸಾಧನೆಯನ್ನು ಕೊಂಡಾಡಿದ್ದಾರೆ. ಟಿಪ್ಪು ಬಳಸಿದ ಮೇಲಷ್ಟೇ ಐರೋಪ್ಯ ದೇಶಗಳಲ್ಲಿ ಈ ತಂತ್ರಜ್ಞಾನ ಬಳಕೆ ಮಾಡಲಾಯಿತು ಎಂದೂ ಹೇಳಿದರು.
ರಾಷ್ಟ್ರಪತಿ ಮಾತಿನಿಂದ ಖುಷಿ ಗೊಂಡ ಕಾಂಗ್ರೆಸ್, ಜೆಡಿಎಸ್ ಸದ ಸ್ಯರು ಮೇಜು ಕುಟ್ಟಿ ಸ್ವಾಗತಿಸಿದರೆ, ಅನಿ ರೀಕ್ಷಿತವಾಗಿ ಎದುರಾದ “ಟಿಪ್ಪು ಬಣ್ಣನೆ’ ಬಿಜೆಪಿ ಸದಸ್ಯರಿಗೆ ಶಾಕ್ ನೀಡಿತು.
ಇದರ ಜತೆಗೆ ಸದ್ಯ ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಇನ್ನೊಂದು ವಿವಾದ “ಲಿಂಗಾಯತ’ದ ಬಗ್ಗೆಯೂ ಮಾತನಾಡಿದ ಕೋವಿಂದ್, ಸಮಾಜ ಸುಧಾರಣೆಯ “ಲಿಂಗಾಯತ’ ಚಳವಳಿ ಬಸವಾಚಾರ್ಯರ ನೇತೃತ್ವದಲ್ಲಿ ನಡೆದದ್ದು ಕರ್ನಾಟಕದಲ್ಲೇ. ಈ ಎಲ್ಲವೂ ದೇಶ ನಿರ್ಮಾಣಕ್ಕೆ ನೀಡಿದ ಕೊಡುಗೆಗಳೇ ಎಂದು ಬಣ್ಣಿಸಿದರು.

ಮಹಾವೀರ ಜೈನ, ಗೌತಮ ಬುದ್ಧ ಸ್ವೀಕರಿಸಿದ ನಾಡಿದು. ಶೃಂಗೇರಿಯಲ್ಲಿ ಆದಿ ಶಂಕರಾಚಾರ್ಯರು ಮಠ ಸ್ಥಾಪಿ ಸಿದ್ದು, ಕಲಬುರಗಿ ಸೂಪಿ ಸಂಸ್ಕೃತಿಯ ಕೇಂದ್ರವಾಗಿರುವುದು ಈ ನಾಡಿನ ವೈಶಿಷ್ಟ é ಎಂದು ಕೊಂಡಾಡಿದರು.

ರಾಷ್ಟ್ರಪತಿಯವರು ತಮ್ಮ ಭಾಷಣ ದಲ್ಲಿ ವಿಜಯನಗರ ಸಾಮ್ರಾಜ್ಯ ಆಳಿದ ಶ್ರೀಕೃಷ್ಣದೇವರಾಯ, ಬೆಂಗಳೂರು ನಿರ್ಮಾತೃ ಕೆಂಪೇಗೌಡ, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ ಅವರನ್ನು ಸ್ಮರಿಸಿಕೊಂಡರು. ಸೇನಾ ಮುಖ್ಯಸ್ಥರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ಕೆ.ಎಸ್. ತಿಮ್ಮಯ್ಯ ಅವರು ಕರ್ನಾಟಕದ ಮಕ್ಕಳು ಎಂದು ಬಣ್ಣಿಸಿದರು.
ಹೆಮ್ಮೆಯ ಕ್ಷಣ: ಕರ್ನಾಟಕ ವಿಧಾನಸಭೆ, ವಿಧಾನಪರಿಷತ್ ಬಗ್ಗೆಯೂ ಮೆಚ್ಚುಗೆ ಸೂಚಿಸಿದ ರಾಷ್ಟ್ರಪತಿ ಯವರು ನಾನು ರಾಷ್ಟ್ರಪತಿಯಾದ ಅನಂತರ ಮೊದಲ ಭೇಟಿ ಇದಾಗಿದ್ದು, ವಿಧಾನಸೌಧ ವಜ್ರ ಮಹೋತ್ಸವದಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡು ತ್ತಿರುವುದು ಹೆಮ್ಮೆ ಎಂದರು.

1956ರ ಅಕ್ಟೋಬರ್ನಲ್ಲಿ ದೇಶದ ಮೊದಲ ರಾಷ್ಟ್ರಪತಿ ಡಾ| ರಾಜೇಂದ್ರ ಪ್ರಸಾದ್ ಅವರು ಉದ್ಘಾಟಿಸಿದ್ದ ವಿಧಾನಸೌಧದಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮಕ್ಕೆ ಬಂದಿರುವುದು ನನಗೆ ಸಂತಸ ತಂದಿದೆ. ನಾನು ರಾಜೇಂದ್ರ ಪ್ರಸಾದ್ ಅವರ ಮಾರ್ಗದಲ್ಲೇ ಸಾಗುತ್ತೇನೆ ಎಂದರು.
ದೇವೇಗೌಡರ ಹೆಸರೇ ಇಲ್ಲ: ಭಾಷಣ ಸಂದರ್ಭ ವಿಧಾನ ಸೌಧ ನಿರ್ಮಾಣಕ್ಕೆ ಕಾರಣರಾದವರು, ರಾಜ್ಯಕ್ಕೆ ವಿಶೇಷ ಕೊಡುಗೆ ನೀಡಿದ ಮುಖ್ಯಮಂತ್ರಿಗಳ ಹೆಸರನ್ನೂ ರಾಷ್ಟ್ರಪತಿ ಕೋವಿಂದ್ ನೆನಪಿಸಿಕೊಂಡರು.

ಆದರೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹೆಸರೇ ಕಣ್ಮರೆಯಾಗಿದ್ದುದು ಜೆಡಿಎಸ್ ಸದಸ್ಯರ ಆಕ್ರೋ ಶಕ್ಕೂ ಕಾರಣವಾಯಿತು. ಬಳಿಕ ಅವರೇ ನೆನಪಿಸಿ ಕೊಂಡು, ನನ್ನ ಸ್ನೇಹಿತರೂ ಆಗಿರುವ ದೇವೇಗೌಡರನ್ನು ಮರೆಯುವು ದುಂಟೇ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್’ ಎಂಬ ಹೆಸರಿನಲ್ಲಿ ಆರಂಭಿಸಿದೆ.
ದಿನಭವಿಷ್ಯ 21/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ನಾಲಗೆ ನಿಮ್ಮ ಅಜ್ಜ ಅಜ್ಜಿಯಂದಿರ ಭಾವನೆಗಳಿಗೆ ಘಾಸಿ ಮಾಡುವುದರಿಂದ ನಿಮ್ಮ ಭಾಷೆಯನ್ನು…
ಹಾರ್ಟ್ ಅಟ್ಯಾಕ್ ಇದು ಮನುಷ್ಯನಿಗೆ ದೊಡ್ಡ ಸವಾಲಾಗಿರುವ ಕಾಯಿಲೆ.ಯಾಕೆಂದ್ರೆ ಇದು ಬರುವ ಮುನ್ಸೂಚನೆ ಯಾರಿಗೂ ಗೊತ್ತಾಗೊದಿಲ್ಲಾ. ಹಾರ್ಟ್ ಅಟ್ಯಾಕ್ ಯಾವಾಗ ಇಲ್ಲಿ ಆಗುತ್ತೆ ಅಂತ ಹೇಳೋದಕ್ಕೆ ಬರೋದಿಲ್ಲ. ಆದ್ರೆ ಈ ಹಾರ್ಟ್ ಅಟ್ಯಾಕ್ ಬರೋ ಮುನ್ಸೂಚನೆ ಮೊದ್ಲೇ ನಮ್ಗೆ ಗೊತ್ತಾದ್ರೆ ಹೇಗಿರುತ್ತೆ ಗೊತ್ತಾ?
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….
ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…
ಕೆಮ್ಮು ವಾಸ್ತವವಾಗಿ ಒಂದು ಕಾಯಿಲೆಯಲ್ಲ, ಒಂದು ರೋಗ ನಿರೋಧಕ ವ್ಯವಸ್ಥೆ. ಗಂಟಲಿನ ತೇವದಲ್ಲಿ ವೈರಸ್ಸುಗಳು ಮನೆ ಮಾಡಿದಾಗ ಇದನ್ನು ಕೆರೆದು ಹೊರ ಹಾಕುವ ಕ್ರಿಯೆಯೇ ಕೆಮ್ಮು. ಈ ಕೆಮ್ಮನ್ನು ಎರಡೇ ದಿನದಲ್ಲಿ ನಿಯಂತ್ರಿಸುವ ಪವರ್ ಫುಲ್ ಮನೆಮದ್ದು ನೀವೆ ಸುಲಭವಾಗಿ ಮನೆಯಲ್ಲಿಯೇ ಸಿಗುವ ಸುಲಭ ಸಾಮಾಗ್ರಿಗಳಿಂದ ತಯಾರಿಸಬಹುದು. ಕೆಮ್ಮು ಮತ್ತು ಸಾವು ಯಾರನ್ನೂ ಕೇಳಿ ಬರುವುದಿಲ್ಲ ವಂತೆ. ಯಾವುದೋ ಮುಖ್ಯ ಕಾರ್ಯದಲ್ಲಿದ್ದಾಗ ಕೆಮ್ಮು ಕಾಡಿದರೆ ಆಗ ಎದು ರಾಗುವ ತಾಪತ್ರಯ ಒಂದೆರ ಡಲ್ಲ. ಅದರಲ್ಲೂ ಕೆಮ್ಮು ಸತತವಾದರೆ ಮುಖ್ಯ…