ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.

ವಿಧಾನಸೌಧದ ವಜ್ರ ಮಹೋತ್ಸವದ ಅಂಗವಾಗಿ ಬುಧವಾರ ಜಂಟಿ ಅಧಿ ವೇಶನ ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, “ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಟಿಪ್ಪು ಸುಲ್ತಾನ್’ ಎಂದು ಶ್ಲಾ ಸಿದ್ದಾರೆ.

ಇದಷ್ಟೇ ಅಲ್ಲ, ಮೈಸೂರು ರಾಕೆಟ್ ತಂತ್ರಜ್ಞಾನ ಅಭಿವೃದ್ಧಿಪಡಿಸಿ ಯುದ್ಧ ಭೂಮಿಯಲ್ಲಿ ಮೊದಲ ಬಾರಿಗೆ ಬಳಕೆ ಮಾಡಿದ ಕೀರ್ತಿಯೂ ಟಿಪ್ಪು ಸುಲ್ತಾನ್ಗೆ ಸಲ್ಲುತ್ತದೆ ಎಂದು ಕೋವಿಂದ್ ಅವರು ಟಿಪ್ಪು ಸಾಧನೆಯನ್ನು ಕೊಂಡಾಡಿದ್ದಾರೆ. ಟಿಪ್ಪು ಬಳಸಿದ ಮೇಲಷ್ಟೇ ಐರೋಪ್ಯ ದೇಶಗಳಲ್ಲಿ ಈ ತಂತ್ರಜ್ಞಾನ ಬಳಕೆ ಮಾಡಲಾಯಿತು ಎಂದೂ ಹೇಳಿದರು.
ರಾಷ್ಟ್ರಪತಿ ಮಾತಿನಿಂದ ಖುಷಿ ಗೊಂಡ ಕಾಂಗ್ರೆಸ್, ಜೆಡಿಎಸ್ ಸದ ಸ್ಯರು ಮೇಜು ಕುಟ್ಟಿ ಸ್ವಾಗತಿಸಿದರೆ, ಅನಿ ರೀಕ್ಷಿತವಾಗಿ ಎದುರಾದ “ಟಿಪ್ಪು ಬಣ್ಣನೆ’ ಬಿಜೆಪಿ ಸದಸ್ಯರಿಗೆ ಶಾಕ್ ನೀಡಿತು.
ಇದರ ಜತೆಗೆ ಸದ್ಯ ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಇನ್ನೊಂದು ವಿವಾದ “ಲಿಂಗಾಯತ’ದ ಬಗ್ಗೆಯೂ ಮಾತನಾಡಿದ ಕೋವಿಂದ್, ಸಮಾಜ ಸುಧಾರಣೆಯ “ಲಿಂಗಾಯತ’ ಚಳವಳಿ ಬಸವಾಚಾರ್ಯರ ನೇತೃತ್ವದಲ್ಲಿ ನಡೆದದ್ದು ಕರ್ನಾಟಕದಲ್ಲೇ. ಈ ಎಲ್ಲವೂ ದೇಶ ನಿರ್ಮಾಣಕ್ಕೆ ನೀಡಿದ ಕೊಡುಗೆಗಳೇ ಎಂದು ಬಣ್ಣಿಸಿದರು.

ಮಹಾವೀರ ಜೈನ, ಗೌತಮ ಬುದ್ಧ ಸ್ವೀಕರಿಸಿದ ನಾಡಿದು. ಶೃಂಗೇರಿಯಲ್ಲಿ ಆದಿ ಶಂಕರಾಚಾರ್ಯರು ಮಠ ಸ್ಥಾಪಿ ಸಿದ್ದು, ಕಲಬುರಗಿ ಸೂಪಿ ಸಂಸ್ಕೃತಿಯ ಕೇಂದ್ರವಾಗಿರುವುದು ಈ ನಾಡಿನ ವೈಶಿಷ್ಟ é ಎಂದು ಕೊಂಡಾಡಿದರು.

ರಾಷ್ಟ್ರಪತಿಯವರು ತಮ್ಮ ಭಾಷಣ ದಲ್ಲಿ ವಿಜಯನಗರ ಸಾಮ್ರಾಜ್ಯ ಆಳಿದ ಶ್ರೀಕೃಷ್ಣದೇವರಾಯ, ಬೆಂಗಳೂರು ನಿರ್ಮಾತೃ ಕೆಂಪೇಗೌಡ, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ ಅವರನ್ನು ಸ್ಮರಿಸಿಕೊಂಡರು. ಸೇನಾ ಮುಖ್ಯಸ್ಥರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ಕೆ.ಎಸ್. ತಿಮ್ಮಯ್ಯ ಅವರು ಕರ್ನಾಟಕದ ಮಕ್ಕಳು ಎಂದು ಬಣ್ಣಿಸಿದರು.
ಹೆಮ್ಮೆಯ ಕ್ಷಣ: ಕರ್ನಾಟಕ ವಿಧಾನಸಭೆ, ವಿಧಾನಪರಿಷತ್ ಬಗ್ಗೆಯೂ ಮೆಚ್ಚುಗೆ ಸೂಚಿಸಿದ ರಾಷ್ಟ್ರಪತಿ ಯವರು ನಾನು ರಾಷ್ಟ್ರಪತಿಯಾದ ಅನಂತರ ಮೊದಲ ಭೇಟಿ ಇದಾಗಿದ್ದು, ವಿಧಾನಸೌಧ ವಜ್ರ ಮಹೋತ್ಸವದಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡು ತ್ತಿರುವುದು ಹೆಮ್ಮೆ ಎಂದರು.

1956ರ ಅಕ್ಟೋಬರ್ನಲ್ಲಿ ದೇಶದ ಮೊದಲ ರಾಷ್ಟ್ರಪತಿ ಡಾ| ರಾಜೇಂದ್ರ ಪ್ರಸಾದ್ ಅವರು ಉದ್ಘಾಟಿಸಿದ್ದ ವಿಧಾನಸೌಧದಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮಕ್ಕೆ ಬಂದಿರುವುದು ನನಗೆ ಸಂತಸ ತಂದಿದೆ. ನಾನು ರಾಜೇಂದ್ರ ಪ್ರಸಾದ್ ಅವರ ಮಾರ್ಗದಲ್ಲೇ ಸಾಗುತ್ತೇನೆ ಎಂದರು.
ದೇವೇಗೌಡರ ಹೆಸರೇ ಇಲ್ಲ: ಭಾಷಣ ಸಂದರ್ಭ ವಿಧಾನ ಸೌಧ ನಿರ್ಮಾಣಕ್ಕೆ ಕಾರಣರಾದವರು, ರಾಜ್ಯಕ್ಕೆ ವಿಶೇಷ ಕೊಡುಗೆ ನೀಡಿದ ಮುಖ್ಯಮಂತ್ರಿಗಳ ಹೆಸರನ್ನೂ ರಾಷ್ಟ್ರಪತಿ ಕೋವಿಂದ್ ನೆನಪಿಸಿಕೊಂಡರು.

ಆದರೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹೆಸರೇ ಕಣ್ಮರೆಯಾಗಿದ್ದುದು ಜೆಡಿಎಸ್ ಸದಸ್ಯರ ಆಕ್ರೋ ಶಕ್ಕೂ ಕಾರಣವಾಯಿತು. ಬಳಿಕ ಅವರೇ ನೆನಪಿಸಿ ಕೊಂಡು, ನನ್ನ ಸ್ನೇಹಿತರೂ ಆಗಿರುವ ದೇವೇಗೌಡರನ್ನು ಮರೆಯುವು ದುಂಟೇ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…
ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.
ಈಗಿನ ಪರಿಸ್ಥಿತಿಯಲ್ಲಿ ಅದೆಷ್ಟೋ ಜನರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ ಮತ್ತು ಕೆಲವು ಜನರು ಸ್ವಂತ ಜಾಗ ಇಲ್ಲದೆ ಕೂಡ ಬಾಡಿಗೆ ಮನೆಯಲ್ಲಿ ವಾಸ ಇದ್ದಾರೆ, ಇನ್ನು ಈಗ ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸ ಇರುವವರಿಗೆ ಕೇಂದ್ರ ಸರ್ಕಾರವು ಮತ್ತೇ ಬಂಪರ್ ಕೊಡುಗೆಯನ್ನ ನೀಡಿದೆ. ಹಲವು ಜನರಿಗೆ ನಗರ ಪ್ರದೇಶದಲ್ಲಿ ಮನೆಯನ್ನ ಖರೀದಿ ಮಾಡಬೇಕು ಅನ್ನುವ ಆಸೆ ಇದ್ದೆ ಇರುತ್ತದೆ ಮತ್ತು ನಗರ ಪ್ರದೇಶದಲ್ಲಿ ಮನೆ ಖರೀದಿ ಮಾಡಬೇಕು ಅಂದು…
ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಆಧಾರ್ ಕಾರ್ಡ್ ನೊಂದಿಗೆ ಪಾನ್ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್ ಜೋಡಿಸಲು…