ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.

ವಿಧಾನಸೌಧದ ವಜ್ರ ಮಹೋತ್ಸವದ ಅಂಗವಾಗಿ ಬುಧವಾರ ಜಂಟಿ ಅಧಿ ವೇಶನ ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, “ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಟಿಪ್ಪು ಸುಲ್ತಾನ್’ ಎಂದು ಶ್ಲಾ ಸಿದ್ದಾರೆ.

ಇದಷ್ಟೇ ಅಲ್ಲ, ಮೈಸೂರು ರಾಕೆಟ್ ತಂತ್ರಜ್ಞಾನ ಅಭಿವೃದ್ಧಿಪಡಿಸಿ ಯುದ್ಧ ಭೂಮಿಯಲ್ಲಿ ಮೊದಲ ಬಾರಿಗೆ ಬಳಕೆ ಮಾಡಿದ ಕೀರ್ತಿಯೂ ಟಿಪ್ಪು ಸುಲ್ತಾನ್ಗೆ ಸಲ್ಲುತ್ತದೆ ಎಂದು ಕೋವಿಂದ್ ಅವರು ಟಿಪ್ಪು ಸಾಧನೆಯನ್ನು ಕೊಂಡಾಡಿದ್ದಾರೆ. ಟಿಪ್ಪು ಬಳಸಿದ ಮೇಲಷ್ಟೇ ಐರೋಪ್ಯ ದೇಶಗಳಲ್ಲಿ ಈ ತಂತ್ರಜ್ಞಾನ ಬಳಕೆ ಮಾಡಲಾಯಿತು ಎಂದೂ ಹೇಳಿದರು.
ರಾಷ್ಟ್ರಪತಿ ಮಾತಿನಿಂದ ಖುಷಿ ಗೊಂಡ ಕಾಂಗ್ರೆಸ್, ಜೆಡಿಎಸ್ ಸದ ಸ್ಯರು ಮೇಜು ಕುಟ್ಟಿ ಸ್ವಾಗತಿಸಿದರೆ, ಅನಿ ರೀಕ್ಷಿತವಾಗಿ ಎದುರಾದ “ಟಿಪ್ಪು ಬಣ್ಣನೆ’ ಬಿಜೆಪಿ ಸದಸ್ಯರಿಗೆ ಶಾಕ್ ನೀಡಿತು.
ಇದರ ಜತೆಗೆ ಸದ್ಯ ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಇನ್ನೊಂದು ವಿವಾದ “ಲಿಂಗಾಯತ’ದ ಬಗ್ಗೆಯೂ ಮಾತನಾಡಿದ ಕೋವಿಂದ್, ಸಮಾಜ ಸುಧಾರಣೆಯ “ಲಿಂಗಾಯತ’ ಚಳವಳಿ ಬಸವಾಚಾರ್ಯರ ನೇತೃತ್ವದಲ್ಲಿ ನಡೆದದ್ದು ಕರ್ನಾಟಕದಲ್ಲೇ. ಈ ಎಲ್ಲವೂ ದೇಶ ನಿರ್ಮಾಣಕ್ಕೆ ನೀಡಿದ ಕೊಡುಗೆಗಳೇ ಎಂದು ಬಣ್ಣಿಸಿದರು.

ಮಹಾವೀರ ಜೈನ, ಗೌತಮ ಬುದ್ಧ ಸ್ವೀಕರಿಸಿದ ನಾಡಿದು. ಶೃಂಗೇರಿಯಲ್ಲಿ ಆದಿ ಶಂಕರಾಚಾರ್ಯರು ಮಠ ಸ್ಥಾಪಿ ಸಿದ್ದು, ಕಲಬುರಗಿ ಸೂಪಿ ಸಂಸ್ಕೃತಿಯ ಕೇಂದ್ರವಾಗಿರುವುದು ಈ ನಾಡಿನ ವೈಶಿಷ್ಟ é ಎಂದು ಕೊಂಡಾಡಿದರು.

ರಾಷ್ಟ್ರಪತಿಯವರು ತಮ್ಮ ಭಾಷಣ ದಲ್ಲಿ ವಿಜಯನಗರ ಸಾಮ್ರಾಜ್ಯ ಆಳಿದ ಶ್ರೀಕೃಷ್ಣದೇವರಾಯ, ಬೆಂಗಳೂರು ನಿರ್ಮಾತೃ ಕೆಂಪೇಗೌಡ, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ ಅವರನ್ನು ಸ್ಮರಿಸಿಕೊಂಡರು. ಸೇನಾ ಮುಖ್ಯಸ್ಥರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ಕೆ.ಎಸ್. ತಿಮ್ಮಯ್ಯ ಅವರು ಕರ್ನಾಟಕದ ಮಕ್ಕಳು ಎಂದು ಬಣ್ಣಿಸಿದರು.
ಹೆಮ್ಮೆಯ ಕ್ಷಣ: ಕರ್ನಾಟಕ ವಿಧಾನಸಭೆ, ವಿಧಾನಪರಿಷತ್ ಬಗ್ಗೆಯೂ ಮೆಚ್ಚುಗೆ ಸೂಚಿಸಿದ ರಾಷ್ಟ್ರಪತಿ ಯವರು ನಾನು ರಾಷ್ಟ್ರಪತಿಯಾದ ಅನಂತರ ಮೊದಲ ಭೇಟಿ ಇದಾಗಿದ್ದು, ವಿಧಾನಸೌಧ ವಜ್ರ ಮಹೋತ್ಸವದಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡು ತ್ತಿರುವುದು ಹೆಮ್ಮೆ ಎಂದರು.

1956ರ ಅಕ್ಟೋಬರ್ನಲ್ಲಿ ದೇಶದ ಮೊದಲ ರಾಷ್ಟ್ರಪತಿ ಡಾ| ರಾಜೇಂದ್ರ ಪ್ರಸಾದ್ ಅವರು ಉದ್ಘಾಟಿಸಿದ್ದ ವಿಧಾನಸೌಧದಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮಕ್ಕೆ ಬಂದಿರುವುದು ನನಗೆ ಸಂತಸ ತಂದಿದೆ. ನಾನು ರಾಜೇಂದ್ರ ಪ್ರಸಾದ್ ಅವರ ಮಾರ್ಗದಲ್ಲೇ ಸಾಗುತ್ತೇನೆ ಎಂದರು.
ದೇವೇಗೌಡರ ಹೆಸರೇ ಇಲ್ಲ: ಭಾಷಣ ಸಂದರ್ಭ ವಿಧಾನ ಸೌಧ ನಿರ್ಮಾಣಕ್ಕೆ ಕಾರಣರಾದವರು, ರಾಜ್ಯಕ್ಕೆ ವಿಶೇಷ ಕೊಡುಗೆ ನೀಡಿದ ಮುಖ್ಯಮಂತ್ರಿಗಳ ಹೆಸರನ್ನೂ ರಾಷ್ಟ್ರಪತಿ ಕೋವಿಂದ್ ನೆನಪಿಸಿಕೊಂಡರು.

ಆದರೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹೆಸರೇ ಕಣ್ಮರೆಯಾಗಿದ್ದುದು ಜೆಡಿಎಸ್ ಸದಸ್ಯರ ಆಕ್ರೋ ಶಕ್ಕೂ ಕಾರಣವಾಯಿತು. ಬಳಿಕ ಅವರೇ ನೆನಪಿಸಿ ಕೊಂಡು, ನನ್ನ ಸ್ನೇಹಿತರೂ ಆಗಿರುವ ದೇವೇಗೌಡರನ್ನು ಮರೆಯುವು ದುಂಟೇ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…
ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…
ಸ್ಯಾಂಡಲ್ವುಡ್ ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಎಂದರೆ ನಮ್ಮೆಲ್ಲರ ಅಚ್ಚುಮೆಚ್ಚಿನ ಜೋಡಿ. ರಾಧಿಕಾ ಪಂಡಿತ್ ಅವರು ಇಂದು ಮುಂಜಾನೆ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಈ ವೇಳೆ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ರಾಕಿಂಗ್ ಕುಟುಂಬದವರು ತಿಳಿಸಿದ್ದಾರೆ. ಸದ್ಯ ಮನೆಯಲ್ಲಿ ಜೂನಿಯರ್ ಯಶ್ ಆಗಮನದಿಂದ ಯಶ್ ಮನೆಯವರು ಮತ್ತು ರಾಕಿಂಗ್ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅಭಿಮಾನಿಗಳು ತುಂಬಾ ಖುಷಿಯಾಗಿದ್ದಾರೆ. ಇತ್ತೀಚೆಗೆ ರಾಧಿಕಾ ಪಂಡಿತ್…
ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್ಸಿ ಕಾರ್ಡ್ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್ಸಿ ಕಾರ್ಡ್ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ, ಆಗಸ್ಟ್ 1 ರಿಂದ ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್ ಪೊಲೀಸರು ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…
ಮಹಿಳೆಯೊಬ್ಬಳು ಏರ್ ಪೋರ್ಟ್ ಒಂದರಲ್ಲಿ ಬೆತ್ತಲೆಯಾಗಿ ಓಡಾಡಿದ್ದು, ಏರ್ ಪೋರ್ಟ್’ನಲ್ಲಿ ಇದ್ದವರಿಗೆ ಮುಜುಗರವಾಗುವಂತೆ ಮಾಡಿದೆ. ಹೌದು, ಇದು ನಡೆದಿದ್ದು ಕೊರಿಯಾದ ಏರ್ ಪೋರ್ಟ್ ಒಂದರಲ್ಲಿ.ಸಾಮಾನ್ಯವಾಗಿ ಏರ್ ಪೋರ್ಟ್’ನಲ್ಲಿ ಅಧಿಕಾರಿಗಳು ಎಲ್ಲರನ್ನೂ ಚೆಕ್ ಮಾಡಿಯೇ ಮುಂದೆ ಕಳುಹಿಸುತ್ತಾರೆ.ಆದರೆ ಅಧಿಕಾರಿಗಳು ಇಲ್ಲೊಬ್ಬ ಚೀನಿ ಮಹಿಳೆಗೆ ಚೆಕ್ ಮಾಡುವ ವೇಳೆ ಅವಳ ಬಟ್ಟೆ ಬರೆಗಳನ್ನೆಲ್ಲಾ ಬಿಚ್ಚಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ… ಅಧಿಕಾರಿಗಳ ಈ ವರ್ತನೆಯಿಂದ ಕೋಪಗೊಂಡ ಆ ಮಹಿಳೆ, ಮೈ ಮೇಲೆ ಒಂದು ತುಂಡು ಬಟ್ಟೆ ಇಲ್ಲದಂತೆ, ಇಡೀ ಏರ್…
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…