ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.

ವಿಧಾನಸೌಧದ ವಜ್ರ ಮಹೋತ್ಸವದ ಅಂಗವಾಗಿ ಬುಧವಾರ ಜಂಟಿ ಅಧಿ ವೇಶನ ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, “ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಟಿಪ್ಪು ಸುಲ್ತಾನ್’ ಎಂದು ಶ್ಲಾ ಸಿದ್ದಾರೆ.

ಇದಷ್ಟೇ ಅಲ್ಲ, ಮೈಸೂರು ರಾಕೆಟ್ ತಂತ್ರಜ್ಞಾನ ಅಭಿವೃದ್ಧಿಪಡಿಸಿ ಯುದ್ಧ ಭೂಮಿಯಲ್ಲಿ ಮೊದಲ ಬಾರಿಗೆ ಬಳಕೆ ಮಾಡಿದ ಕೀರ್ತಿಯೂ ಟಿಪ್ಪು ಸುಲ್ತಾನ್ಗೆ ಸಲ್ಲುತ್ತದೆ ಎಂದು ಕೋವಿಂದ್ ಅವರು ಟಿಪ್ಪು ಸಾಧನೆಯನ್ನು ಕೊಂಡಾಡಿದ್ದಾರೆ. ಟಿಪ್ಪು ಬಳಸಿದ ಮೇಲಷ್ಟೇ ಐರೋಪ್ಯ ದೇಶಗಳಲ್ಲಿ ಈ ತಂತ್ರಜ್ಞಾನ ಬಳಕೆ ಮಾಡಲಾಯಿತು ಎಂದೂ ಹೇಳಿದರು.
ರಾಷ್ಟ್ರಪತಿ ಮಾತಿನಿಂದ ಖುಷಿ ಗೊಂಡ ಕಾಂಗ್ರೆಸ್, ಜೆಡಿಎಸ್ ಸದ ಸ್ಯರು ಮೇಜು ಕುಟ್ಟಿ ಸ್ವಾಗತಿಸಿದರೆ, ಅನಿ ರೀಕ್ಷಿತವಾಗಿ ಎದುರಾದ “ಟಿಪ್ಪು ಬಣ್ಣನೆ’ ಬಿಜೆಪಿ ಸದಸ್ಯರಿಗೆ ಶಾಕ್ ನೀಡಿತು.
ಇದರ ಜತೆಗೆ ಸದ್ಯ ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಇನ್ನೊಂದು ವಿವಾದ “ಲಿಂಗಾಯತ’ದ ಬಗ್ಗೆಯೂ ಮಾತನಾಡಿದ ಕೋವಿಂದ್, ಸಮಾಜ ಸುಧಾರಣೆಯ “ಲಿಂಗಾಯತ’ ಚಳವಳಿ ಬಸವಾಚಾರ್ಯರ ನೇತೃತ್ವದಲ್ಲಿ ನಡೆದದ್ದು ಕರ್ನಾಟಕದಲ್ಲೇ. ಈ ಎಲ್ಲವೂ ದೇಶ ನಿರ್ಮಾಣಕ್ಕೆ ನೀಡಿದ ಕೊಡುಗೆಗಳೇ ಎಂದು ಬಣ್ಣಿಸಿದರು.

ಮಹಾವೀರ ಜೈನ, ಗೌತಮ ಬುದ್ಧ ಸ್ವೀಕರಿಸಿದ ನಾಡಿದು. ಶೃಂಗೇರಿಯಲ್ಲಿ ಆದಿ ಶಂಕರಾಚಾರ್ಯರು ಮಠ ಸ್ಥಾಪಿ ಸಿದ್ದು, ಕಲಬುರಗಿ ಸೂಪಿ ಸಂಸ್ಕೃತಿಯ ಕೇಂದ್ರವಾಗಿರುವುದು ಈ ನಾಡಿನ ವೈಶಿಷ್ಟ é ಎಂದು ಕೊಂಡಾಡಿದರು.

ರಾಷ್ಟ್ರಪತಿಯವರು ತಮ್ಮ ಭಾಷಣ ದಲ್ಲಿ ವಿಜಯನಗರ ಸಾಮ್ರಾಜ್ಯ ಆಳಿದ ಶ್ರೀಕೃಷ್ಣದೇವರಾಯ, ಬೆಂಗಳೂರು ನಿರ್ಮಾತೃ ಕೆಂಪೇಗೌಡ, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ ಅವರನ್ನು ಸ್ಮರಿಸಿಕೊಂಡರು. ಸೇನಾ ಮುಖ್ಯಸ್ಥರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ಕೆ.ಎಸ್. ತಿಮ್ಮಯ್ಯ ಅವರು ಕರ್ನಾಟಕದ ಮಕ್ಕಳು ಎಂದು ಬಣ್ಣಿಸಿದರು.
ಹೆಮ್ಮೆಯ ಕ್ಷಣ: ಕರ್ನಾಟಕ ವಿಧಾನಸಭೆ, ವಿಧಾನಪರಿಷತ್ ಬಗ್ಗೆಯೂ ಮೆಚ್ಚುಗೆ ಸೂಚಿಸಿದ ರಾಷ್ಟ್ರಪತಿ ಯವರು ನಾನು ರಾಷ್ಟ್ರಪತಿಯಾದ ಅನಂತರ ಮೊದಲ ಭೇಟಿ ಇದಾಗಿದ್ದು, ವಿಧಾನಸೌಧ ವಜ್ರ ಮಹೋತ್ಸವದಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡು ತ್ತಿರುವುದು ಹೆಮ್ಮೆ ಎಂದರು.

1956ರ ಅಕ್ಟೋಬರ್ನಲ್ಲಿ ದೇಶದ ಮೊದಲ ರಾಷ್ಟ್ರಪತಿ ಡಾ| ರಾಜೇಂದ್ರ ಪ್ರಸಾದ್ ಅವರು ಉದ್ಘಾಟಿಸಿದ್ದ ವಿಧಾನಸೌಧದಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮಕ್ಕೆ ಬಂದಿರುವುದು ನನಗೆ ಸಂತಸ ತಂದಿದೆ. ನಾನು ರಾಜೇಂದ್ರ ಪ್ರಸಾದ್ ಅವರ ಮಾರ್ಗದಲ್ಲೇ ಸಾಗುತ್ತೇನೆ ಎಂದರು.
ದೇವೇಗೌಡರ ಹೆಸರೇ ಇಲ್ಲ: ಭಾಷಣ ಸಂದರ್ಭ ವಿಧಾನ ಸೌಧ ನಿರ್ಮಾಣಕ್ಕೆ ಕಾರಣರಾದವರು, ರಾಜ್ಯಕ್ಕೆ ವಿಶೇಷ ಕೊಡುಗೆ ನೀಡಿದ ಮುಖ್ಯಮಂತ್ರಿಗಳ ಹೆಸರನ್ನೂ ರಾಷ್ಟ್ರಪತಿ ಕೋವಿಂದ್ ನೆನಪಿಸಿಕೊಂಡರು.

ಆದರೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹೆಸರೇ ಕಣ್ಮರೆಯಾಗಿದ್ದುದು ಜೆಡಿಎಸ್ ಸದಸ್ಯರ ಆಕ್ರೋ ಶಕ್ಕೂ ಕಾರಣವಾಯಿತು. ಬಳಿಕ ಅವರೇ ನೆನಪಿಸಿ ಕೊಂಡು, ನನ್ನ ಸ್ನೇಹಿತರೂ ಆಗಿರುವ ದೇವೇಗೌಡರನ್ನು ಮರೆಯುವು ದುಂಟೇ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…
ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…
ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ ಹಾರುತ್ತದೆ ಎಂದರೆ ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
ಇತಿಹಾಸ ಸೃಷ್ಟಿಸಿದ RRR ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಹಾಡುಗಳು ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್ಆರ್ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್ ಒರಿಜಿನಲ್ ಸಾಂಗ್’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…
ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್ಬಾಸ್ ನೀಡಿದ್ದರು. ಇದೀಗ ‘ಬಿಗ್ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…