ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.

ವಿಧಾನಸೌಧದ ವಜ್ರ ಮಹೋತ್ಸವದ ಅಂಗವಾಗಿ ಬುಧವಾರ ಜಂಟಿ ಅಧಿ ವೇಶನ ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, “ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಟಿಪ್ಪು ಸುಲ್ತಾನ್’ ಎಂದು ಶ್ಲಾ ಸಿದ್ದಾರೆ.

ಇದಷ್ಟೇ ಅಲ್ಲ, ಮೈಸೂರು ರಾಕೆಟ್ ತಂತ್ರಜ್ಞಾನ ಅಭಿವೃದ್ಧಿಪಡಿಸಿ ಯುದ್ಧ ಭೂಮಿಯಲ್ಲಿ ಮೊದಲ ಬಾರಿಗೆ ಬಳಕೆ ಮಾಡಿದ ಕೀರ್ತಿಯೂ ಟಿಪ್ಪು ಸುಲ್ತಾನ್ಗೆ ಸಲ್ಲುತ್ತದೆ ಎಂದು ಕೋವಿಂದ್ ಅವರು ಟಿಪ್ಪು ಸಾಧನೆಯನ್ನು ಕೊಂಡಾಡಿದ್ದಾರೆ. ಟಿಪ್ಪು ಬಳಸಿದ ಮೇಲಷ್ಟೇ ಐರೋಪ್ಯ ದೇಶಗಳಲ್ಲಿ ಈ ತಂತ್ರಜ್ಞಾನ ಬಳಕೆ ಮಾಡಲಾಯಿತು ಎಂದೂ ಹೇಳಿದರು.
ರಾಷ್ಟ್ರಪತಿ ಮಾತಿನಿಂದ ಖುಷಿ ಗೊಂಡ ಕಾಂಗ್ರೆಸ್, ಜೆಡಿಎಸ್ ಸದ ಸ್ಯರು ಮೇಜು ಕುಟ್ಟಿ ಸ್ವಾಗತಿಸಿದರೆ, ಅನಿ ರೀಕ್ಷಿತವಾಗಿ ಎದುರಾದ “ಟಿಪ್ಪು ಬಣ್ಣನೆ’ ಬಿಜೆಪಿ ಸದಸ್ಯರಿಗೆ ಶಾಕ್ ನೀಡಿತು.
ಇದರ ಜತೆಗೆ ಸದ್ಯ ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಇನ್ನೊಂದು ವಿವಾದ “ಲಿಂಗಾಯತ’ದ ಬಗ್ಗೆಯೂ ಮಾತನಾಡಿದ ಕೋವಿಂದ್, ಸಮಾಜ ಸುಧಾರಣೆಯ “ಲಿಂಗಾಯತ’ ಚಳವಳಿ ಬಸವಾಚಾರ್ಯರ ನೇತೃತ್ವದಲ್ಲಿ ನಡೆದದ್ದು ಕರ್ನಾಟಕದಲ್ಲೇ. ಈ ಎಲ್ಲವೂ ದೇಶ ನಿರ್ಮಾಣಕ್ಕೆ ನೀಡಿದ ಕೊಡುಗೆಗಳೇ ಎಂದು ಬಣ್ಣಿಸಿದರು.

ಮಹಾವೀರ ಜೈನ, ಗೌತಮ ಬುದ್ಧ ಸ್ವೀಕರಿಸಿದ ನಾಡಿದು. ಶೃಂಗೇರಿಯಲ್ಲಿ ಆದಿ ಶಂಕರಾಚಾರ್ಯರು ಮಠ ಸ್ಥಾಪಿ ಸಿದ್ದು, ಕಲಬುರಗಿ ಸೂಪಿ ಸಂಸ್ಕೃತಿಯ ಕೇಂದ್ರವಾಗಿರುವುದು ಈ ನಾಡಿನ ವೈಶಿಷ್ಟ é ಎಂದು ಕೊಂಡಾಡಿದರು.

ರಾಷ್ಟ್ರಪತಿಯವರು ತಮ್ಮ ಭಾಷಣ ದಲ್ಲಿ ವಿಜಯನಗರ ಸಾಮ್ರಾಜ್ಯ ಆಳಿದ ಶ್ರೀಕೃಷ್ಣದೇವರಾಯ, ಬೆಂಗಳೂರು ನಿರ್ಮಾತೃ ಕೆಂಪೇಗೌಡ, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ ಅವರನ್ನು ಸ್ಮರಿಸಿಕೊಂಡರು. ಸೇನಾ ಮುಖ್ಯಸ್ಥರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ಕೆ.ಎಸ್. ತಿಮ್ಮಯ್ಯ ಅವರು ಕರ್ನಾಟಕದ ಮಕ್ಕಳು ಎಂದು ಬಣ್ಣಿಸಿದರು.
ಹೆಮ್ಮೆಯ ಕ್ಷಣ: ಕರ್ನಾಟಕ ವಿಧಾನಸಭೆ, ವಿಧಾನಪರಿಷತ್ ಬಗ್ಗೆಯೂ ಮೆಚ್ಚುಗೆ ಸೂಚಿಸಿದ ರಾಷ್ಟ್ರಪತಿ ಯವರು ನಾನು ರಾಷ್ಟ್ರಪತಿಯಾದ ಅನಂತರ ಮೊದಲ ಭೇಟಿ ಇದಾಗಿದ್ದು, ವಿಧಾನಸೌಧ ವಜ್ರ ಮಹೋತ್ಸವದಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡು ತ್ತಿರುವುದು ಹೆಮ್ಮೆ ಎಂದರು.

1956ರ ಅಕ್ಟೋಬರ್ನಲ್ಲಿ ದೇಶದ ಮೊದಲ ರಾಷ್ಟ್ರಪತಿ ಡಾ| ರಾಜೇಂದ್ರ ಪ್ರಸಾದ್ ಅವರು ಉದ್ಘಾಟಿಸಿದ್ದ ವಿಧಾನಸೌಧದಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮಕ್ಕೆ ಬಂದಿರುವುದು ನನಗೆ ಸಂತಸ ತಂದಿದೆ. ನಾನು ರಾಜೇಂದ್ರ ಪ್ರಸಾದ್ ಅವರ ಮಾರ್ಗದಲ್ಲೇ ಸಾಗುತ್ತೇನೆ ಎಂದರು.
ದೇವೇಗೌಡರ ಹೆಸರೇ ಇಲ್ಲ: ಭಾಷಣ ಸಂದರ್ಭ ವಿಧಾನ ಸೌಧ ನಿರ್ಮಾಣಕ್ಕೆ ಕಾರಣರಾದವರು, ರಾಜ್ಯಕ್ಕೆ ವಿಶೇಷ ಕೊಡುಗೆ ನೀಡಿದ ಮುಖ್ಯಮಂತ್ರಿಗಳ ಹೆಸರನ್ನೂ ರಾಷ್ಟ್ರಪತಿ ಕೋವಿಂದ್ ನೆನಪಿಸಿಕೊಂಡರು.

ಆದರೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹೆಸರೇ ಕಣ್ಮರೆಯಾಗಿದ್ದುದು ಜೆಡಿಎಸ್ ಸದಸ್ಯರ ಆಕ್ರೋ ಶಕ್ಕೂ ಕಾರಣವಾಯಿತು. ಬಳಿಕ ಅವರೇ ನೆನಪಿಸಿ ಕೊಂಡು, ನನ್ನ ಸ್ನೇಹಿತರೂ ಆಗಿರುವ ದೇವೇಗೌಡರನ್ನು ಮರೆಯುವು ದುಂಟೇ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳ ಬೀಜಗಳಲ್ಲಿ ಪೋಷಕಗಳಿರುತ್ತವೆ ಎಂದು ಎಲ್ಲಾ ಹಣ್ಣಿನ ಬೀಜಗಳನ್ನು ತಿನ್ನುವುದು ಸರಿಯಲ್ಲ. ಏಕೆಂದರೆ ಕೆಲ ಹಣ್ಣಿನ ಬೀಜಗಳು ಪ್ರಯೋಜನಕ್ಕೆ ಬರುವುದಿಲ್ಲ. ಅದರಲ್ಲೂ ಸೇಬು ಹಣ್ಣಿನ ಬೀಜಗಳನ್ನು ಮರೆತೂ ತಿನ್ನಬಾರದು. ಒಂದು ವೇಳೆ ಹಲ್ಲಿಗೆ ಸಿಕ್ಕಿಹಾಕಿಕೊಂಡರೆ ಗಾಬರಿ ಪಡದೆ ತಕ್ಷಣವೇ ಬಿಸಾಡಬೇಕು. ಏಕೆಂದರೆ ಈ ಬೀಜಗಳಲ್ಲಿ ಅಮೈಡಾಲಿನ್ ಎಂಬ ಪದಾರ್ಥ ಇರುತ್ತದೆ. ಇದು ದೇಹಕ್ಕೆ ಒಳ್ಳೆಯದಲ್ಲ. ಹೀಗಾಗಿ ಈ ಬೀಜಗಳನ್ನು ತಿಂದರೆ ಉಸಿರಾಟದ ತೊಂದರೆ ಎದುರಿಸಬೇಕಾಗುತ್ತದೆ. ಅಷ್ಟೇ ಅಲ್ಲ ತಲೆನೋವು, ವಾಂತಿ, ಬಲಹೀನತೆ, ತಲೆಸುತ್ತು ಇತ್ಯಾದಿ ಲಕ್ಷಣಗಳು ಉಂಟಾಗಬಹುದು….
ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…
ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…
ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ…
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.