ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.

ವಿಧಾನಸೌಧದ ವಜ್ರ ಮಹೋತ್ಸವದ ಅಂಗವಾಗಿ ಬುಧವಾರ ಜಂಟಿ ಅಧಿ ವೇಶನ ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ, “ಬ್ರಿಟಿಷರ ವಿರುದ್ಧ ಹೋರಾಡಿ ವೀರಮರಣವನ್ನಪ್ಪಿದ ಟಿಪ್ಪು ಸುಲ್ತಾನ್’ ಎಂದು ಶ್ಲಾ ಸಿದ್ದಾರೆ.

ಇದಷ್ಟೇ ಅಲ್ಲ, ಮೈಸೂರು ರಾಕೆಟ್ ತಂತ್ರಜ್ಞಾನ ಅಭಿವೃದ್ಧಿಪಡಿಸಿ ಯುದ್ಧ ಭೂಮಿಯಲ್ಲಿ ಮೊದಲ ಬಾರಿಗೆ ಬಳಕೆ ಮಾಡಿದ ಕೀರ್ತಿಯೂ ಟಿಪ್ಪು ಸುಲ್ತಾನ್ಗೆ ಸಲ್ಲುತ್ತದೆ ಎಂದು ಕೋವಿಂದ್ ಅವರು ಟಿಪ್ಪು ಸಾಧನೆಯನ್ನು ಕೊಂಡಾಡಿದ್ದಾರೆ. ಟಿಪ್ಪು ಬಳಸಿದ ಮೇಲಷ್ಟೇ ಐರೋಪ್ಯ ದೇಶಗಳಲ್ಲಿ ಈ ತಂತ್ರಜ್ಞಾನ ಬಳಕೆ ಮಾಡಲಾಯಿತು ಎಂದೂ ಹೇಳಿದರು.
ರಾಷ್ಟ್ರಪತಿ ಮಾತಿನಿಂದ ಖುಷಿ ಗೊಂಡ ಕಾಂಗ್ರೆಸ್, ಜೆಡಿಎಸ್ ಸದ ಸ್ಯರು ಮೇಜು ಕುಟ್ಟಿ ಸ್ವಾಗತಿಸಿದರೆ, ಅನಿ ರೀಕ್ಷಿತವಾಗಿ ಎದುರಾದ “ಟಿಪ್ಪು ಬಣ್ಣನೆ’ ಬಿಜೆಪಿ ಸದಸ್ಯರಿಗೆ ಶಾಕ್ ನೀಡಿತು.
ಇದರ ಜತೆಗೆ ಸದ್ಯ ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಇನ್ನೊಂದು ವಿವಾದ “ಲಿಂಗಾಯತ’ದ ಬಗ್ಗೆಯೂ ಮಾತನಾಡಿದ ಕೋವಿಂದ್, ಸಮಾಜ ಸುಧಾರಣೆಯ “ಲಿಂಗಾಯತ’ ಚಳವಳಿ ಬಸವಾಚಾರ್ಯರ ನೇತೃತ್ವದಲ್ಲಿ ನಡೆದದ್ದು ಕರ್ನಾಟಕದಲ್ಲೇ. ಈ ಎಲ್ಲವೂ ದೇಶ ನಿರ್ಮಾಣಕ್ಕೆ ನೀಡಿದ ಕೊಡುಗೆಗಳೇ ಎಂದು ಬಣ್ಣಿಸಿದರು.

ಮಹಾವೀರ ಜೈನ, ಗೌತಮ ಬುದ್ಧ ಸ್ವೀಕರಿಸಿದ ನಾಡಿದು. ಶೃಂಗೇರಿಯಲ್ಲಿ ಆದಿ ಶಂಕರಾಚಾರ್ಯರು ಮಠ ಸ್ಥಾಪಿ ಸಿದ್ದು, ಕಲಬುರಗಿ ಸೂಪಿ ಸಂಸ್ಕೃತಿಯ ಕೇಂದ್ರವಾಗಿರುವುದು ಈ ನಾಡಿನ ವೈಶಿಷ್ಟ é ಎಂದು ಕೊಂಡಾಡಿದರು.

ರಾಷ್ಟ್ರಪತಿಯವರು ತಮ್ಮ ಭಾಷಣ ದಲ್ಲಿ ವಿಜಯನಗರ ಸಾಮ್ರಾಜ್ಯ ಆಳಿದ ಶ್ರೀಕೃಷ್ಣದೇವರಾಯ, ಬೆಂಗಳೂರು ನಿರ್ಮಾತೃ ಕೆಂಪೇಗೌಡ, ಕಿತ್ತೂರು ರಾಣಿ ಚೆನ್ನಮ್ಮ, ರಾಣಿ ಅಬ್ಬಕ್ಕ ಅವರನ್ನು ಸ್ಮರಿಸಿಕೊಂಡರು. ಸೇನಾ ಮುಖ್ಯಸ್ಥರಾಗಿದ್ದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ಕೆ.ಎಸ್. ತಿಮ್ಮಯ್ಯ ಅವರು ಕರ್ನಾಟಕದ ಮಕ್ಕಳು ಎಂದು ಬಣ್ಣಿಸಿದರು.
ಹೆಮ್ಮೆಯ ಕ್ಷಣ: ಕರ್ನಾಟಕ ವಿಧಾನಸಭೆ, ವಿಧಾನಪರಿಷತ್ ಬಗ್ಗೆಯೂ ಮೆಚ್ಚುಗೆ ಸೂಚಿಸಿದ ರಾಷ್ಟ್ರಪತಿ ಯವರು ನಾನು ರಾಷ್ಟ್ರಪತಿಯಾದ ಅನಂತರ ಮೊದಲ ಭೇಟಿ ಇದಾಗಿದ್ದು, ವಿಧಾನಸೌಧ ವಜ್ರ ಮಹೋತ್ಸವದಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡು ತ್ತಿರುವುದು ಹೆಮ್ಮೆ ಎಂದರು.

1956ರ ಅಕ್ಟೋಬರ್ನಲ್ಲಿ ದೇಶದ ಮೊದಲ ರಾಷ್ಟ್ರಪತಿ ಡಾ| ರಾಜೇಂದ್ರ ಪ್ರಸಾದ್ ಅವರು ಉದ್ಘಾಟಿಸಿದ್ದ ವಿಧಾನಸೌಧದಲ್ಲಿ ವಜ್ರ ಮಹೋತ್ಸವ ಕಾರ್ಯಕ್ರಮಕ್ಕೆ ಬಂದಿರುವುದು ನನಗೆ ಸಂತಸ ತಂದಿದೆ. ನಾನು ರಾಜೇಂದ್ರ ಪ್ರಸಾದ್ ಅವರ ಮಾರ್ಗದಲ್ಲೇ ಸಾಗುತ್ತೇನೆ ಎಂದರು.
ದೇವೇಗೌಡರ ಹೆಸರೇ ಇಲ್ಲ: ಭಾಷಣ ಸಂದರ್ಭ ವಿಧಾನ ಸೌಧ ನಿರ್ಮಾಣಕ್ಕೆ ಕಾರಣರಾದವರು, ರಾಜ್ಯಕ್ಕೆ ವಿಶೇಷ ಕೊಡುಗೆ ನೀಡಿದ ಮುಖ್ಯಮಂತ್ರಿಗಳ ಹೆಸರನ್ನೂ ರಾಷ್ಟ್ರಪತಿ ಕೋವಿಂದ್ ನೆನಪಿಸಿಕೊಂಡರು.

ಆದರೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಹೆಸರೇ ಕಣ್ಮರೆಯಾಗಿದ್ದುದು ಜೆಡಿಎಸ್ ಸದಸ್ಯರ ಆಕ್ರೋ ಶಕ್ಕೂ ಕಾರಣವಾಯಿತು. ಬಳಿಕ ಅವರೇ ನೆನಪಿಸಿ ಕೊಂಡು, ನನ್ನ ಸ್ನೇಹಿತರೂ ಆಗಿರುವ ದೇವೇಗೌಡರನ್ನು ಮರೆಯುವು ದುಂಟೇ ಎಂದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ…
ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…
ಹಾವುಗಳನ್ನು ಕಂಡ್ರೆ ಎಂತಹವರಿಗೂ ಎದೆ ಜಲ್ ಅನ್ನುವ ಅನುಭವ ಆಗ್ತದೆ. ಆಗಂತ ಹಾವಿಗೆ ಭಯ ಇಲ್ದೆ ಇರಲ್ಲ. ಆದ್ರೆ ಹಾವನ್ನು ಸಾಯಿಸಬೇಕಾದ್ರೆ ಅರ್ಧ ಪ್ರಾಣ ಹೋಗಿ ಅರ್ಧ ಪ್ರಾಣ ಉಳಿಯುವಂತೆ ಸಾಯಿಸಬೇಡಿ ಅಂತ ಹೇಳುವುದು ವಾಡಿಕೆ. ಯಾಕಂದ್ರೆ ಅಂತಹವರನ್ನು ಏಟು ತಿಂದ ಹಾವುಗಳು ಸುಮ್ಮನ್ನೇ ಬಿಡೋದಿಲ್ಲ ಅಂತ ಹೇಳ್ತಾರೆ.
ತನ್ನ ಪ್ರಿಯತಮೆಯೇ ನನಗೆ ವಿಷ ಕೊಟ್ಟಳು ಎಂದು ಸೆಲ್ಫಿ ವೀಡಿಯೋ ಮಾಡಿಟ್ಟು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನಲ್ಲಿ ನಡೆದಿದೆ.ನಂಜನಗೂಡಿನ ಕಸುವಿನಹಳ್ಳಿ ಗ್ರಾಮ ನಿವಾಸಿ ಸಿದ್ದರಾಜು (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಯುವಕ.ಈತ ಬೆಳವಾಡಿಯ ಬೇಕರಿಯೊಂದರಲ್ಲಿ ಕೆಲಸ ಮಾಡುವವನಾಗಿದ್ದು ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸಿದ್ದರಾಜು ಬೆಳವಾಡಿ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದು ಆಕೆಯ ಪೋಷಕರು ಈ ಇಬ್ಬರ ಪ್ರೀತಿಗೆ ಒಪ್ಪಿರಲಿಲ್ಲ. ಅಲ್ಲದೆ ಯುವತಿ ಸಹ ಇತ್ತೀಚೆಗೆ ಆತನಿಂದ ದೂರಾಗಿ ಪೋಷಕರು ತೋರೊಸೊದ್ದ ಇನ್ನೊಬ್ಬ…
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.
ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…