News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ರಾಷ್ಟ್ರೀಯ ಮಟ್ಟದ ಡಾ.ರಾಜ್ ಕುಮಾರ್ ಬಾಕ್ಸಿಂಗ್ ಕಪ್ ಚಾಂಪಿಯನ್ ಶಿಪ್’ಗೆ ಬೆನ್ನೆಲುಬಾಗಿ ನಿಂತ ಮಲ್ಲೇಶ್ವರಂ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್’ರವರು..

246

ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು ತಮ್ಮ ಮಲ್ಲೇಶ್ಬರಂ ಸ್ಪೋರ್ಟ್ಸ್ ಫೌಂಡೇಷನ್ ಮೂಲಕ ಕೈ ಜೋಡಿಸಿದ್ದಾರೆ.. ಇವರಿಗೆ ಸಾಥ್ ನೀಡಿದ್ದಾರೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ನವರಸ ನಾಯಕ ಜಗ್ಗೇಶ್ ರವರು..

ಡಾ.ಸಿ ಎನ್ ಅಶ್ವತ್ಥ್ ನಾರಾಯಣ್..

ಮಲ್ಲೇಶ್ವರಂನ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಯಾಣ್ ರವರು ಪ್ರತಿಭೆಗಳನ್ನು ಪ್ರೋತ್ಸಾಹಿಸುವುದರಲ್ಲಿ ಸದಾ ಮುಂದು.. ಈಗಾಗಲೇ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡಿರುವ, ಮಾಡುತ್ತಿರುವ ಇವರು ಇತ್ತೀಚೆಗೆ ರಾಜು ಕನ್ನಡ ಮೀಡಿಯಂ ಚಿತ್ರವನ್ನು ನೋಡಿ ಪ್ರೋತ್ಸಾಹಿಸಿದ್ದನ್ನು ಕೂಡ ನಾವಿಲ್ಲಿ ನೆನೆಯಬಹುದು..‌ ಅದೇ ರೀತಿಯಾಗಿ ಈಗ ಬಾಕ್ಸಿಂಗ್ ಚಾಂಪಿಯನ್ ಶಿಪ್ ಗೆ ಕೈ ಜೋಡಿಸುವುದರ ಮೂಲಕ ಅನೇಕ ಕ್ರೀಡಾಪಟುಗಳ ಪ್ರತಿಭೆ ಹೊರಬರಲು ಕಾರಣರಾಗಿದ್ದಾರೆ..

ಬಾಕ್ಸಿಂಗ್ ಪಂದ್ಯಾವಳಿಯ ಪರಿಚಯ :-

ಅಂತರಾಷ್ಟ್ರೀಯ ಮಟ್ಟದ ಬಾಕ್ಸರ್ ಗಳು ಬಾಗಿಯಾಗುವ ಈ ಚಾಂಪಿಯನ್ ಶಿಪ್ ಬಹಳ ವಿಶೇಷವೆನ್ನಬಹುದು.. ಹೌದು ಬೆಂಗಳೂರಿನಲ್ಲಿ ನಡೆಯುತ್ತಿರುವ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ವೈಯಾಲಿ ಕಾವಲ್ ಕೋದಂಡ ರಾಮಪುರ ಕಬಡ್ಡಿ ಮೈದಾನದಲ್ಲಿ ಜನವರಿ 24 ರಿಂದ 28 ನೇ ತಾರೀಖಿನ ವರೆಗೆ ಜರುಗುತ್ತಿದೆ.. ಒಟ್ಟು 10 ಕ್ಯಾಟಗರಿಯಲ್ಲಿ ನಡೆಯುತ್ತಿರುವ ಪಂದ್ಯಾವಳಿಯ ಫೈನಲ್ ಮ್ಯಾಚ್ ಇದೇ 28 ರಂದು ನಡೆಯಲಿದೆ ಎಂದು ಬಾಕ್ಸಿಂಗ್ ಮಂಡಳಿ ತಿಳಿಸಿದೆ..

ದೇಶದಾದ್ಯಂತ ಒಟ್ಟು 30 ರಾಜ್ಯಗಳಿಂದಲೂ ತಂಡಗಳು ಆಗಮಿಸಿರುವುದರ ಜೊತೆಗೆ ನಮ್ಮ ಆರ್ಮಿಯ ಎರಡು ತಂಡಗಳು ಕೂಡ ಇದರಲ್ಲಿ ಭಾಗವಹಿಸಿವೆ..

ಈ ದೊಡ್ಡ ಮಟ್ಟದ ಚಾಂಪಿಯನ್ ಶಿಪ್ ಗೆ ನಮ್ಮ ಕನ್ನಡದ ಕಣ್ಮಣಿ ಡಾ.ರಾಜ್ ಕುಮಾರ್ ರವರ ಹೆಸರಿಟ್ಟಿರುವುದು ವಿಶೇಷವಾಗಿದೆ..

ಡಾ ರಾಜ್ ಕುಮಾರ್ ಕಪ್ ಪಂದ್ಯಾವಳಿಯ ಕಾರ್ಯಕ್ರಮದಲ್ಲಿ ಖ್ಯಾತ ನಟರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಮಲ್ಲೇಶ್ವರಂ ಶಾಸಕರಾದ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು ಹಾಗೂ ನವರಸ ನಾಯಕ ಜಗ್ಗೇಶ್ ಅವರು ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭ ಕೋರಿದ್ದಾರೆ….

ತೊಂದರೆಯಲ್ಲಿರುವವರಿಗೆ ಸಹಾಯಹಸ್ತ ಚಾಚುತ್ತಾ ಸದಾ ಒಂದಿಲ್ಲೊಂದು ಪ್ರತಿಭೆಗಳನ್ನು ಹೊರ ತರುತ್ತಿರುವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರಿಗೆ ಕನ್ನಡಿಗರ ಕಡೆಯಿಂದ ಧನ್ಯವಾದಗಳು..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಹಣ ಕಾಸು

    “ಪ್ರಧಾನ ಮಂತ್ರಿ ಅವಾಸ್ ಯೋಜನೆ”ಅಡಿಯಲ್ಲಿ ಸ್ವಂತ ಮನೆ ಪಡೆಯುವುದು ಹೇಗೆ?

    ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.

  • ಜ್ಯೋತಿಷ್ಯ

    ಆಂಜಿನೇಯ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ಏಕಕಾಲಕ್ಕೆ ಪಂಚಭಾಷೆಗಳಲ್ಲಿ ರಿಲೀಸ್ ಆಗಲಿರುವ ಶಿವರಾಜ್‌ ಕುಮಾರ್‌ ಭಜರಂಗಿ 2 ಚಿತ್ರ…!

    ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್‌ ಮಾಡಿದ್ದೇವೆ. ಸೆಪ್ಟೆಂಬರ್‌ 9ರಿಂದ ಶೂಟಿಂಗ್‌ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್‌ ಸಿನಿಮಾದ ಬಂದ ನಂತರ ಪ್ಯಾನ್‌ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್‌ ಸ್ಯಾಂಡಲ್‌ವುಡ್‌ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್‌ ಕುಮಾರ್‌ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…

  • ಮನರಂಜನೆ

    ಅನುಶ್ರೀಗೆ ಮರೆಯಲಾರದ ಗಿಫ್ಟ್ ಕೊಟ್ಟ ಹನುಮಂತಪ್ಪ..ಸಾರಿ ಕೇಳಿದ ಅನುಶ್ರೀ!

    ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…

  • ಸುದ್ದಿ

    ಮುಂಬೈನಲ್ಲಿ ಮೆಟ್ರೋ ಸಂಚಾರಕ್ಕೆ ನದಿ ಕೆಳಗಡೆ ಹೊಸ ಸಂಚಾರ ಮಾರ್ಗ….!

    ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್‌ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…

  • ಮನರಂಜನೆ, ಸುದ್ದಿ

    6 ವರ್ಷಗಳ ಪಯಣ ಮುಗಿಸಿದ ಎಲ್ಲರ ಮನಗೆದ್ದ ಅಗ್ನಿಸಾಕ್ಷಿ ಧಾರಾವಾಹಿ. ಈ ಧಾರಾವಾಹಿ ಹುಟ್ಟಿದ್ದು ಹೇಗೆ?

    2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…