News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ!ನಿಮ್ಗೆ ಗೊತ್ತಾ ಸಿನೆಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಇಲ್ಲಂದ್ರೆ ಏನಾಗುತ್ತೆ ಗೊತ್ತಾ?

2716

ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.

ಅಂದಿನಿಂದ ಜನವರಿ 26 1950 ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, 26, ಜನವರಿ, 1950 ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.

ತ್ರಿವರ್ಣ ಧ್ವಜದ ವೈಶಿಷ್ಟ್ಯ:-

  • ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳಿ ಬಣ್ಣ, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ. ದೇಶದ ವಿಭಿನ್ನ ಜಾತಿ, ಮತ, ಪಂಗಡ ಮತ್ತು ಸಂಸ್ಕೃತಿಯ ಜನರನ್ನು ಒಂದೇ ದ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರದ್ವಜ. ಈ ನಮ್ಮ ಸ್ವಾತಂತ್ರ್ಯ ದೇಶದ ಸಂಕೇತವಾಗಿರುವ ರಾಷ್ಟ್ರದ್ವಜದ ಅವಹೇಳನ ರಾಷ್ಟ್ರದ್ರೋಹವಾಗಿರುತ್ತದೆ.

  • ಅದರ ಉಳಿವಿಗಾಗಿ ಬಲಿದಾನವಾಗಲು ಸದಾ ಸಿದ್ದವಾಗಿರುವ ನಾವುಗಳು ಅದರ ಮೇಲಿರುವ ಭಕ್ತಿಯನ್ನೇ ದೇಶಭಕ್ತಿ ಎನ್ನುತ್ತೇವೆ. ಅಂದಿನ ಪ್ರಧಾನಿಯಾಗಿದ್ದ ಪಂಡಿತ್ ಜವಾಹರ್ ಲಾಲ್ ನೆಹರು 1947 ಜುಲೈ 22 ರಂದು ಅಸೆಂಬ್ಲಿಯಲ್ಲಿ ನಮ್ಮ ರಾಷ್ಟ್ರ ದ್ವಜವನ್ನು ದೇಶಕ್ಕೆ ಅರ್ಪಿಸಿದರು. ನಮ್ಮ ಸರಕಾರವು ದ್ವಜ ಕೇವಲ ಕೈ ನೆಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ ಮಾಡಲ್ಪಟ್ಟಿರಬೇಕು. ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ.

  • ಆದರೆ ಅದು ಕೈ ನೂಲು ಮತ್ತು ಕೈ ನೆಯ್ಗೆಯದೇ ಆಗಿರಬೇಕು. ಕೇಸರಿ- ಬಿಳಿ -ಹಸಿರು ಬಣ್ಣಗಳ ಅಳತೆ ಸಮ ಪ್ರಮಾಣದಲ್ಲಿ ಇದ್ದು ನೀಲಿಚಕ್ರವು ಹೆಚ್ಹು ಕಡಿಮೆ ಬಿಳಿ ಬಣ್ಣದ ಅಡ್ಡ ಗೆರೆಗಳಷ್ಟಿದ್ದು, ಅದರಲ್ಲಿ ಇಪ್ಪತ್ತು ನಾಲ್ಕು ರೇಖೆಗಳಿವೆ. ದ್ವಜದ ಉದ್ದ ಮತ್ತು ಅಗಲ 3:2 ಪ್ರಮಾಣದಲ್ಲಿರ ತಕ್ಕದ್ದು ಎಂದು ತಿಳಿಸಿದೆ.

  • ರಾಷ್ಟ್ರಧ್ವಜ ತಯಾರಿಸುವ ಹಕ್ಕು ಕರ್ನಾಟಕದ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ. ಉತ್ತರ ಕರ್ನಾಟಕದಾದ್ಯಂತ ಒಟ್ಟು 52 ಇಂತಹ ಘಟಕಗಳು ರಾಷ್ಟ್ರಧ್ವಜ ನಿರ್ಮಾಣದಲ್ಲಿ ತೊಡಗಿವೆ. ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು. ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕೃತವಾಗುತ್ತದೆ.

  • ನಮ್ಮ ಪವಿತ್ರ ಭಾರತಾಂಬೆಯ ಕೀರ್ತಿಯು ಮುಗಿಲೆತ್ತರಕ್ಕೆ ಏರಲಿ, ಎಲ್ಲಕ್ಕಿಂತ ಶ್ರೇಷ್ಠವಾದ ನಮ್ಮ ರಾಷ್ಟ್ರದ ಧ್ಯೇಯೋದ್ದೇಶಗಳು ಎಲ್ಲಕ್ಕಿಂತ ಎತ್ತರದಲ್ಲಿ ರಾರಾಜಿಸಲಿ, ಎಂಬ ಸಂಕೇತವನ್ನು ನಾಲ್ಕು ದಿಕ್ಕುಗಳಿಗೂ ತಿಳಿಯಪಡಿಸುವುದೇ ನಮ್ಮ ರಾಷ್ಟ್ರ ಧ್ವಜವನ್ನು ಮೇಲಕ್ಕೆ ಹಾರಿಸುವ ಉದ್ದೇಶ.

ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ:-

  • ಕೇಸರಿ:- ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆವ ಬಲಿದಾನಗಳ ಸಂಕೇತವಾಗಿದೆ.
  • ಬಿಳಿಬಣ್ಣ:-ಪವಿತ್ರ ಮನಸ್ಸಿನವರೊಂದಿಗೆ ನಿತ್ಯವೂ ಸತ್ಯ ಶಾಂತಿಗಳೊಂದಿಗೆ ನಮ್ಮನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತವಾಗಿದೆ.
  • ಹಸಿರು ಬಣ್ಣ:- ಪ್ರಕೃತಿಯೊಡನೆ ಮನುಷ್ಯನಿಗಿರಬೇಕಾದ ಅವಿನಾಭಾವ ಸಂಬಂಧವನ್ನು ತಿಳಿಸುತ್ತಾ, ಹಸಿರು ಜೀವರಾಶಿಗಳನ್ನು ಅವಲಂಬಿಸಿರುವ ಮನುಷ್ಯ ಮತ್ತು ಭೂಮಿಯ ಅನೂಹ್ಯ ಬಾಂಧವ್ಯಗಳ ಸಂಕೇತವಾಗಿದೆ. ರಾಷ್ಟ್ರಧ್ವಜವನ್ನು ಹಾರಿಸಿದ ನಂತರರಾಷ್ಟ್ರ ಗೀತೆ  ಜನಗಣ ಮನವನ್ನು ಹಾಡಲೇಬೇಕು.

ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು:-

  1. ದ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿದಾನಗತಿಯಲ್ಲಿ ಇಳಿಸಬೇಕು.
  2. ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು.
  3. ರಾಷ್ಟ್ರ ದ್ವಜವನ್ನು ಕೆಲವು ಕಡೆ ಎಲ್ಲ ದಿನಗಳಲ್ಲೂ, ಇನ್ನು ಕೆಲವು ಕಡೆ ಕೇವಲ ವಿಶೇಷ ದಿನಗಳಲ್ಲಿ ಮಾತ್ರ ಹಾರಿಸಲಾಗುತ್ತದೆ.
  4. ಸ್ವಾತಂತ್ರೋತ್ಸವ, ಗಣರಾಜ್ಯೋತ್ಸವ ಮತ್ತು ಗಾಂಧಿಜಯಂತಿ ಹಾಗೂ ರಾಷ್ಟ್ರೀಯ ವಿಶೇಷ ದಿನಗಳ ಜೊತೆಗೆ ಸರಕಾರದ ನಿರ್ದೇಶನದ ಮೇರೆಗೆ ರಾಷ್ಟ್ರಮಟ್ಟದ ಆಚರಣೆಯ ಸಂದರ್ಭಗಳಲ್ಲಿ ರಾಷ್ಟ್ರದ್ವಜವನ್ನು ಹಾರಿಸಬಹುದು.
  5. ದ್ವಜ ಏರಿಸುವಾಗ ದ್ವಜದ ಹಸಿರು ಬಣ್ಣ ಕೆಳಗೆ ಇರುವಂತೆ ಕೇಸರಿ ಬಣ್ಣ ಮೇಲೆ ಇರುವಂತೆ ಹಾರಿಸತಕ್ಕದ್ದು.
  6. ರಾಷ್ಟ್ರದ್ವಜವನ್ನು ಉರಿಸುವುದಾಗಲಿ, ಕೆಡಿಸುವುದಾಗಲಿ, ಕಾಲಡಿಯಲ್ಲಿ ಹಾಕುವುದಾಗಲಿ, ಹಾಳುಗೆಡುವುದಾಗಲಿ ಅಥವಾ ಅದಕ್ಕೆ ಯಾವುದೇ ತರಹದ ಅಗೌರವ ತೋರುವ ರೀತಿಯಲ್ಲಿ ನಡೆದು ಕೊಂಡರೆ, ಮಾತು, ಬರಹ ಅಥವಾ ಕೃತ್ಯದ ಮೂಲಕ ಅಗೌರವ ತೋರಿದರೆ ರಾಷ್ಟ್ರೀಯ ಗೌರವದ ಅವಮಾನ ವಿರೋಧಿ ಕಾಯ್ದೆಯಡಿಯಲ್ಲಿ ಶಿಕ್ಷೆಗೆ ಗುರಿ ಪಡಿಸಲಾಗುವುದು.
  7. ಹವಾಮಾನದ ವೈಪರೀತ್ಯದಿಂದ ಧ್ವಜವು ಹಾಳಾಗದಂತೆ ಹಾರುತ್ತಿರುವ ದ್ವಜವನ್ನು ಕಾಪಾಡಬೇಕು.
  8. ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಭಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ಧ್ವಜ ಕೋಲಿನಿಂದ ಅದನ್ನು ಹಾರಿಸತಕ್ಕದು
  9. ಸಮ್ಮೇಳನಗಳು ಇತರ ಕಾರ್ಯಕ್ರಮಗಳು ನಡೆಯುವಾಗ ವೇದಿಕೆಯ ಮೇಲಿರುವ ಅಧ್ಯಕ್ಷ ಸ್ಥಾನಕ್ಕಿಂತ ಎತ್ತರದಲ್ಲಿ ನಮ್ಮ ರಾಷ್ಟ್ರದ್ವಜ ಹಾರಾಡತಕ್ಕದ್ದು
  10. ಶಾಲೆ ಕಾಲೇಜುಗಳು, ಕ್ರೀಡಾ ಶಿಬಿರಗಳು, ಸ್ಕೌಟ್ಸ್ ಶಿಬಿರಗಳು ನಂತರ ವಿಶೇಷ ಸಂದರ್ಭಗಳಲ್ಲಿ ಮಕ್ಕಳ ಮನಸ್ಸಿನಲ್ಲಿ ವಿಶೇಷ ಗೌರವ ಮೂಡಿಸಲು ರಾಷ್ಟ್ರದ್ವಜ ಹಾರಿಸಬಹುದು.

ಸಿನಿಮಾದಲ್ಲಿ ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ.ಸಿನಿಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಬೇಕು:-

ಸಿನಿಮಾಗಳಲ್ಲಿ ಹೇಗೆ ಬೇಕೋ ಹಾಗೆ ರಾಷ್ಟ್ರಧ್ವಜವನ್ನು ಬಳಕೆ ಮಾಡುವಂತಿಲ್ಲ. ಬಳಸುವ ಮುನ್ನ, ಸಂಬಂಧಿಸಿದ ಇಲಾಖೆಯಿಂದ ಪರವಾನಗಿ ಪಡೆಯಬೇಕು. ಇಲ್ಲವಾದರೆ, ಮೂರು ವರ್ಷ ಜೈಲು!

ಹೌದು, ಸುಪ್ರೀಂಕೋರ್ಟ್‌ ಇಂಥದ್ದೊಂದು ಆದೇಶ ಹೊರಡಿಸಿದೆ. ಡಿಸೆಂಬರ್‌ 2016ರಲ್ಲಿ ಸುಪ್ರೀಂ ಕೋರ್ಟ್‌ ಈ ಆದೇಶ ಹೊರಡಿಸಿದ್ದು, ರಾಷ್ಟ್ರಧ್ವಜವನ್ನು ಕಮರ್ಷಿಯಲ್‌ ಸಿನಿಮಾಗಳಲ್ಲಿ ಹೇಗೆಂದರೆ ಹಾಗೆ, ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ.

ಒಂದು ವೇಳೆ ಬಳಸಿದ್ದೇ ಆದಲ್ಲಿ, ಕಾನೂನು ಪ್ರಕಾರ ಮೂರು ವರ್ಷ ಜೈಲುವಾಸ ಅನುಭವಿಸಬೇಕು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಧೋನಿ ನಿವೃತ್ತಿಗೆ ಕೊಹ್ಲಿ ಪ್ರತಿಕ್ರಿಯೆ…..!

    ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….

  • ಆಧ್ಯಾತ್ಮ

    ಸತ್ತ ನಂತರ ಅತೃಪ್ತಿ ಆತ್ಮಗಳು ಹೋಗುವದಾದ್ರೂ ಎಲ್ಲಿಗೆ ಗೊತ್ತಾ ???

    ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ Tea & Coffee ಕುಡಿಯುತ್ತಿದ್ದರೆ 1 ನಿಮಿಷದಲ್ಲಿ ಈ ಲೇಖನವನ್ನ ತಪ್ಪದೇ ಓದಿ .

    ಪ್ರೀತಿಯ ಸ್ನೇಹಿತರೇ ಮನುಷ್ಯ ಪ್ರತಿಯೊಂದನ್ನು ಮಾಡಲು ಜೀವನದಲ್ಲಿ ಆರೋಗ್ಯಕರವಾಗಿ ಬದುಕಲು ಎಷ್ಟೊಂದು ಆಹಾರವನ್ನು ಪ್ರತಿನಿತ್ಯ ನಾವು ಸೇವಿಸುತ್ತಿರುತ್ತಾರೆ ಇಂತಹ ಆಹಾರದಲ್ಲಿ ದೇಹಕ್ಕೆ ಯಾವುದು ಒಳ್ಳೆಯದು ಯಾವುದು ಕೆಟ್ಟದ್ದು ಯಾವ ಸಮಯದಲ್ಲಿ ಯಾವ ಆಹಾರವನ್ನು ತೆಗೆದುಕೊಳ್ಳಬೇಕು ಎಂಬುದರ ಕನಿಷ್ಠ ಮಾಹಿತಿಯೂ ಕೂಡ ನಮಗೆ ಇರುವುದಿಲ್ಲ ಅಂಥದ್ದೇ ಒಂದು ಪಾನೀಯವಾದ ಟೀ ಕಾಫಿ ಇದು ದೇಹಕ್ಕೆ ಎಂತಹ ದುಷ್ಪರಿಣಾಮವನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಂಡರೆ ನೀಡುತ್ತೇನೆಂದರೆ ದೇಹವನ್ನು ಯಾವ ಮಟ್ಟಿಗೆ ಹಾಳು ಮಾಡುತ್ತದೆ ಎಂಬುದರ ಬಗ್ಗೆ ಒಂದು ಚಿಕ್ಕ ಮಾಹಿತಿಯನ್ನು ನಾನು…

  • ಸ್ಪೂರ್ತಿ

    ಶಿಕ್ಷಕರಿಲ್ಲದ ಈ ಶಾಲೆಯಲ್ಲಿ, ಈ ಐಎಎಸ್ ಅಧಿಕಾರಿ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.

  • ಸುದ್ದಿ

    ‘2020ರ ಮಾರ್ಚ್ ಒಳಗೆ ಏರ್ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಮಾರಾಟಕ್ಕೆಂದು ಕೇಂದ್ರ ಸರಕಾರದ ನಿರ್ಧಾರ..!

    ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….

  • ಆರೋಗ್ಯ, ಉಪಯುಕ್ತ ಮಾಹಿತಿ

    ಕ್ಯಾನ್ಸರ್ ಚಿಕಿತ್ಸೆಯಿಂದ ನಿಮ್ಮ ಕೂದಲು ಉದುರುತ್ತಿದಿಯೇ -ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.