News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ!ನಿಮ್ಗೆ ಗೊತ್ತಾ ಸಿನೆಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಇಲ್ಲಂದ್ರೆ ಏನಾಗುತ್ತೆ ಗೊತ್ತಾ?

2716

ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.

ಅಂದಿನಿಂದ ಜನವರಿ 26 1950 ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, 26, ಜನವರಿ, 1950 ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.

ತ್ರಿವರ್ಣ ಧ್ವಜದ ವೈಶಿಷ್ಟ್ಯ:-

  • ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳಿ ಬಣ್ಣ, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ. ದೇಶದ ವಿಭಿನ್ನ ಜಾತಿ, ಮತ, ಪಂಗಡ ಮತ್ತು ಸಂಸ್ಕೃತಿಯ ಜನರನ್ನು ಒಂದೇ ದ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರದ್ವಜ. ಈ ನಮ್ಮ ಸ್ವಾತಂತ್ರ್ಯ ದೇಶದ ಸಂಕೇತವಾಗಿರುವ ರಾಷ್ಟ್ರದ್ವಜದ ಅವಹೇಳನ ರಾಷ್ಟ್ರದ್ರೋಹವಾಗಿರುತ್ತದೆ.

  • ಅದರ ಉಳಿವಿಗಾಗಿ ಬಲಿದಾನವಾಗಲು ಸದಾ ಸಿದ್ದವಾಗಿರುವ ನಾವುಗಳು ಅದರ ಮೇಲಿರುವ ಭಕ್ತಿಯನ್ನೇ ದೇಶಭಕ್ತಿ ಎನ್ನುತ್ತೇವೆ. ಅಂದಿನ ಪ್ರಧಾನಿಯಾಗಿದ್ದ ಪಂಡಿತ್ ಜವಾಹರ್ ಲಾಲ್ ನೆಹರು 1947 ಜುಲೈ 22 ರಂದು ಅಸೆಂಬ್ಲಿಯಲ್ಲಿ ನಮ್ಮ ರಾಷ್ಟ್ರ ದ್ವಜವನ್ನು ದೇಶಕ್ಕೆ ಅರ್ಪಿಸಿದರು. ನಮ್ಮ ಸರಕಾರವು ದ್ವಜ ಕೇವಲ ಕೈ ನೆಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ ಮಾಡಲ್ಪಟ್ಟಿರಬೇಕು. ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ.

  • ಆದರೆ ಅದು ಕೈ ನೂಲು ಮತ್ತು ಕೈ ನೆಯ್ಗೆಯದೇ ಆಗಿರಬೇಕು. ಕೇಸರಿ- ಬಿಳಿ -ಹಸಿರು ಬಣ್ಣಗಳ ಅಳತೆ ಸಮ ಪ್ರಮಾಣದಲ್ಲಿ ಇದ್ದು ನೀಲಿಚಕ್ರವು ಹೆಚ್ಹು ಕಡಿಮೆ ಬಿಳಿ ಬಣ್ಣದ ಅಡ್ಡ ಗೆರೆಗಳಷ್ಟಿದ್ದು, ಅದರಲ್ಲಿ ಇಪ್ಪತ್ತು ನಾಲ್ಕು ರೇಖೆಗಳಿವೆ. ದ್ವಜದ ಉದ್ದ ಮತ್ತು ಅಗಲ 3:2 ಪ್ರಮಾಣದಲ್ಲಿರ ತಕ್ಕದ್ದು ಎಂದು ತಿಳಿಸಿದೆ.

  • ರಾಷ್ಟ್ರಧ್ವಜ ತಯಾರಿಸುವ ಹಕ್ಕು ಕರ್ನಾಟಕದ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ. ಉತ್ತರ ಕರ್ನಾಟಕದಾದ್ಯಂತ ಒಟ್ಟು 52 ಇಂತಹ ಘಟಕಗಳು ರಾಷ್ಟ್ರಧ್ವಜ ನಿರ್ಮಾಣದಲ್ಲಿ ತೊಡಗಿವೆ. ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು. ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕೃತವಾಗುತ್ತದೆ.

  • ನಮ್ಮ ಪವಿತ್ರ ಭಾರತಾಂಬೆಯ ಕೀರ್ತಿಯು ಮುಗಿಲೆತ್ತರಕ್ಕೆ ಏರಲಿ, ಎಲ್ಲಕ್ಕಿಂತ ಶ್ರೇಷ್ಠವಾದ ನಮ್ಮ ರಾಷ್ಟ್ರದ ಧ್ಯೇಯೋದ್ದೇಶಗಳು ಎಲ್ಲಕ್ಕಿಂತ ಎತ್ತರದಲ್ಲಿ ರಾರಾಜಿಸಲಿ, ಎಂಬ ಸಂಕೇತವನ್ನು ನಾಲ್ಕು ದಿಕ್ಕುಗಳಿಗೂ ತಿಳಿಯಪಡಿಸುವುದೇ ನಮ್ಮ ರಾಷ್ಟ್ರ ಧ್ವಜವನ್ನು ಮೇಲಕ್ಕೆ ಹಾರಿಸುವ ಉದ್ದೇಶ.

ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ:-

  • ಕೇಸರಿ:- ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆವ ಬಲಿದಾನಗಳ ಸಂಕೇತವಾಗಿದೆ.
  • ಬಿಳಿಬಣ್ಣ:-ಪವಿತ್ರ ಮನಸ್ಸಿನವರೊಂದಿಗೆ ನಿತ್ಯವೂ ಸತ್ಯ ಶಾಂತಿಗಳೊಂದಿಗೆ ನಮ್ಮನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತವಾಗಿದೆ.
  • ಹಸಿರು ಬಣ್ಣ:- ಪ್ರಕೃತಿಯೊಡನೆ ಮನುಷ್ಯನಿಗಿರಬೇಕಾದ ಅವಿನಾಭಾವ ಸಂಬಂಧವನ್ನು ತಿಳಿಸುತ್ತಾ, ಹಸಿರು ಜೀವರಾಶಿಗಳನ್ನು ಅವಲಂಬಿಸಿರುವ ಮನುಷ್ಯ ಮತ್ತು ಭೂಮಿಯ ಅನೂಹ್ಯ ಬಾಂಧವ್ಯಗಳ ಸಂಕೇತವಾಗಿದೆ. ರಾಷ್ಟ್ರಧ್ವಜವನ್ನು ಹಾರಿಸಿದ ನಂತರರಾಷ್ಟ್ರ ಗೀತೆ  ಜನಗಣ ಮನವನ್ನು ಹಾಡಲೇಬೇಕು.

ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು:-

  1. ದ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿದಾನಗತಿಯಲ್ಲಿ ಇಳಿಸಬೇಕು.
  2. ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು.
  3. ರಾಷ್ಟ್ರ ದ್ವಜವನ್ನು ಕೆಲವು ಕಡೆ ಎಲ್ಲ ದಿನಗಳಲ್ಲೂ, ಇನ್ನು ಕೆಲವು ಕಡೆ ಕೇವಲ ವಿಶೇಷ ದಿನಗಳಲ್ಲಿ ಮಾತ್ರ ಹಾರಿಸಲಾಗುತ್ತದೆ.
  4. ಸ್ವಾತಂತ್ರೋತ್ಸವ, ಗಣರಾಜ್ಯೋತ್ಸವ ಮತ್ತು ಗಾಂಧಿಜಯಂತಿ ಹಾಗೂ ರಾಷ್ಟ್ರೀಯ ವಿಶೇಷ ದಿನಗಳ ಜೊತೆಗೆ ಸರಕಾರದ ನಿರ್ದೇಶನದ ಮೇರೆಗೆ ರಾಷ್ಟ್ರಮಟ್ಟದ ಆಚರಣೆಯ ಸಂದರ್ಭಗಳಲ್ಲಿ ರಾಷ್ಟ್ರದ್ವಜವನ್ನು ಹಾರಿಸಬಹುದು.
  5. ದ್ವಜ ಏರಿಸುವಾಗ ದ್ವಜದ ಹಸಿರು ಬಣ್ಣ ಕೆಳಗೆ ಇರುವಂತೆ ಕೇಸರಿ ಬಣ್ಣ ಮೇಲೆ ಇರುವಂತೆ ಹಾರಿಸತಕ್ಕದ್ದು.
  6. ರಾಷ್ಟ್ರದ್ವಜವನ್ನು ಉರಿಸುವುದಾಗಲಿ, ಕೆಡಿಸುವುದಾಗಲಿ, ಕಾಲಡಿಯಲ್ಲಿ ಹಾಕುವುದಾಗಲಿ, ಹಾಳುಗೆಡುವುದಾಗಲಿ ಅಥವಾ ಅದಕ್ಕೆ ಯಾವುದೇ ತರಹದ ಅಗೌರವ ತೋರುವ ರೀತಿಯಲ್ಲಿ ನಡೆದು ಕೊಂಡರೆ, ಮಾತು, ಬರಹ ಅಥವಾ ಕೃತ್ಯದ ಮೂಲಕ ಅಗೌರವ ತೋರಿದರೆ ರಾಷ್ಟ್ರೀಯ ಗೌರವದ ಅವಮಾನ ವಿರೋಧಿ ಕಾಯ್ದೆಯಡಿಯಲ್ಲಿ ಶಿಕ್ಷೆಗೆ ಗುರಿ ಪಡಿಸಲಾಗುವುದು.
  7. ಹವಾಮಾನದ ವೈಪರೀತ್ಯದಿಂದ ಧ್ವಜವು ಹಾಳಾಗದಂತೆ ಹಾರುತ್ತಿರುವ ದ್ವಜವನ್ನು ಕಾಪಾಡಬೇಕು.
  8. ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಭಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ಧ್ವಜ ಕೋಲಿನಿಂದ ಅದನ್ನು ಹಾರಿಸತಕ್ಕದು
  9. ಸಮ್ಮೇಳನಗಳು ಇತರ ಕಾರ್ಯಕ್ರಮಗಳು ನಡೆಯುವಾಗ ವೇದಿಕೆಯ ಮೇಲಿರುವ ಅಧ್ಯಕ್ಷ ಸ್ಥಾನಕ್ಕಿಂತ ಎತ್ತರದಲ್ಲಿ ನಮ್ಮ ರಾಷ್ಟ್ರದ್ವಜ ಹಾರಾಡತಕ್ಕದ್ದು
  10. ಶಾಲೆ ಕಾಲೇಜುಗಳು, ಕ್ರೀಡಾ ಶಿಬಿರಗಳು, ಸ್ಕೌಟ್ಸ್ ಶಿಬಿರಗಳು ನಂತರ ವಿಶೇಷ ಸಂದರ್ಭಗಳಲ್ಲಿ ಮಕ್ಕಳ ಮನಸ್ಸಿನಲ್ಲಿ ವಿಶೇಷ ಗೌರವ ಮೂಡಿಸಲು ರಾಷ್ಟ್ರದ್ವಜ ಹಾರಿಸಬಹುದು.

ಸಿನಿಮಾದಲ್ಲಿ ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ.ಸಿನಿಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಬೇಕು:-

ಸಿನಿಮಾಗಳಲ್ಲಿ ಹೇಗೆ ಬೇಕೋ ಹಾಗೆ ರಾಷ್ಟ್ರಧ್ವಜವನ್ನು ಬಳಕೆ ಮಾಡುವಂತಿಲ್ಲ. ಬಳಸುವ ಮುನ್ನ, ಸಂಬಂಧಿಸಿದ ಇಲಾಖೆಯಿಂದ ಪರವಾನಗಿ ಪಡೆಯಬೇಕು. ಇಲ್ಲವಾದರೆ, ಮೂರು ವರ್ಷ ಜೈಲು!

ಹೌದು, ಸುಪ್ರೀಂಕೋರ್ಟ್‌ ಇಂಥದ್ದೊಂದು ಆದೇಶ ಹೊರಡಿಸಿದೆ. ಡಿಸೆಂಬರ್‌ 2016ರಲ್ಲಿ ಸುಪ್ರೀಂ ಕೋರ್ಟ್‌ ಈ ಆದೇಶ ಹೊರಡಿಸಿದ್ದು, ರಾಷ್ಟ್ರಧ್ವಜವನ್ನು ಕಮರ್ಷಿಯಲ್‌ ಸಿನಿಮಾಗಳಲ್ಲಿ ಹೇಗೆಂದರೆ ಹಾಗೆ, ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ.

ಒಂದು ವೇಳೆ ಬಳಸಿದ್ದೇ ಆದಲ್ಲಿ, ಕಾನೂನು ಪ್ರಕಾರ ಮೂರು ವರ್ಷ ಜೈಲುವಾಸ ಅನುಭವಿಸಬೇಕು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸುಧಾ ಮೂರ್ತಿ ದಂಪತಿಯ ಮಗನ ಮದುವೆ ಯಾವಾಗ,ಎಲ್ಲಿ,ಹೇಗೆ ಗೊತ್ತಾ?ನಿಮ್ಮ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ ನೋಡಿ..!

    ಇನ್ಫೋಸಿಸ್ ದಂಪತಿ ನಾರಾಯಣ ಮೂರ್ತಿ, ಸುಧಾ ಮೂರ್ತಿ ಅವರ ಮಗನ ಮದುವೆ ಡಿ. 2ರಂದು ಬೆಂಗಳೂರಿನ ಹೋಟೆಲಿನಲ್ಲಿ ಸರಳವಾಗಿ ನಡೆಯಲಿದೆ. ಸುಧಾಮೂರ್ತಿ ಅವರ ಮಗ ರೋಹನ್ ಮೂರ್ತಿ ಅವರು ಕೇರಳದ ಕೊಚ್ಚಿ ಮೂಲದ ಅರ್ಪಣಾ ಕೃಷ್ಣನ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಮದುವೆ ಸರಳವಾಗಿ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರಿಗೆ ಆಹ್ವಾನ ನೀಡಲಾಗಿದೆ. ರೋಹನ್ ಹಾಗೂ ಅರ್ಪಣಾ ಸ್ನೇಹಿತರೊಬ್ಬರ ಮೂಲಕ ಮೂರು ವರ್ಷಗಳಿಂದ ಪರಿಚಯವಾಗಿದ್ದರು. ಅರ್ಪಣಾ ನಿವೃತ್ತ ಎಸ್‍ಬಿಐ ಉದ್ಯೋಗಿ ಸಾವಿತ್ರಿ…

  • ಆರೋಗ್ಯ

    ಒಣಕೆಮ್ಮು ಸಮಸ್ಯೆಯಿಂದ ಬೇಸತ್ತಿದ್ದೀರಾ.? ಇಲ್ಲಿದೆ ಪರಿಹಾರ.

    ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್‌ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…

  • ಸುದ್ದಿ

    ಹೆಸರಿಗೆ ತಕ್ಕಂತೆ ಶ್ವೇತ ಸೌಂದರ್ಯ ತುಂಬಿಕೊಂಡ ಶ್ವೇತಾದ್ರಿ ಪರ್ವತ.! ಪ್ರವಾಸಿಗರಿಗೆ ಸುಂದರ ತಾಣ….

    ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…

  • ವಿಸ್ಮಯ ಜಗತ್ತು

    ಈ ಕಾಲದಲ್ಲೂ ಈ ಜನ ವರ್ಷ ಪೂರ್ತಿ ನೀರಿನಲ್ಲೇ ವಾಸ ಮಾಡುತ್ತಾರೆ!

    ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.

  • ಸುದ್ದಿ

    ಶಾಕಿಂಗ್ ನ್ಯೂಸ್!ಯಶ್ ಹತ್ಯೆಗೆ ಸಂಚು ರೂಪಿಸಿದ್ದ ಕಿಲ್ಲರ್ಸ್ ಅರೆಸ್ಟ್!ಸುಪಾರಿ ಕೊಟ್ಟದ್ದು ಯಾರು ಗೊತ್ತಾ..?

    ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ, ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ…

  • ಸುದ್ದಿ

    ಸೇತುವೆ ಮೇಲೆ ನಿಂತು ಮೂತ್ರ ವಿಸಾರ್ಜನೆ ಮಾಡಿದ ವ್ಯಕ್ತಿಯಿಂದಾಯ್ತು ಯಡವಟ್ಟು…..ಇದನ್ನು ಓಧಿ…

    ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…