ಉಪಯುಕ್ತ ಮಾಹಿತಿ

ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ!ನಿಮ್ಗೆ ಗೊತ್ತಾ ಸಿನೆಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಇಲ್ಲಂದ್ರೆ ಏನಾಗುತ್ತೆ ಗೊತ್ತಾ?

2224

ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.

ಅಂದಿನಿಂದ ಜನವರಿ 26 1950 ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, 26, ಜನವರಿ, 1950 ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.

ತ್ರಿವರ್ಣ ಧ್ವಜದ ವೈಶಿಷ್ಟ್ಯ:-

  • ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳಿ ಬಣ್ಣ, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ. ದೇಶದ ವಿಭಿನ್ನ ಜಾತಿ, ಮತ, ಪಂಗಡ ಮತ್ತು ಸಂಸ್ಕೃತಿಯ ಜನರನ್ನು ಒಂದೇ ದ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರದ್ವಜ. ಈ ನಮ್ಮ ಸ್ವಾತಂತ್ರ್ಯ ದೇಶದ ಸಂಕೇತವಾಗಿರುವ ರಾಷ್ಟ್ರದ್ವಜದ ಅವಹೇಳನ ರಾಷ್ಟ್ರದ್ರೋಹವಾಗಿರುತ್ತದೆ.

  • ಅದರ ಉಳಿವಿಗಾಗಿ ಬಲಿದಾನವಾಗಲು ಸದಾ ಸಿದ್ದವಾಗಿರುವ ನಾವುಗಳು ಅದರ ಮೇಲಿರುವ ಭಕ್ತಿಯನ್ನೇ ದೇಶಭಕ್ತಿ ಎನ್ನುತ್ತೇವೆ. ಅಂದಿನ ಪ್ರಧಾನಿಯಾಗಿದ್ದ ಪಂಡಿತ್ ಜವಾಹರ್ ಲಾಲ್ ನೆಹರು 1947 ಜುಲೈ 22 ರಂದು ಅಸೆಂಬ್ಲಿಯಲ್ಲಿ ನಮ್ಮ ರಾಷ್ಟ್ರ ದ್ವಜವನ್ನು ದೇಶಕ್ಕೆ ಅರ್ಪಿಸಿದರು. ನಮ್ಮ ಸರಕಾರವು ದ್ವಜ ಕೇವಲ ಕೈ ನೆಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ ಮಾಡಲ್ಪಟ್ಟಿರಬೇಕು. ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ.

  • ಆದರೆ ಅದು ಕೈ ನೂಲು ಮತ್ತು ಕೈ ನೆಯ್ಗೆಯದೇ ಆಗಿರಬೇಕು. ಕೇಸರಿ- ಬಿಳಿ -ಹಸಿರು ಬಣ್ಣಗಳ ಅಳತೆ ಸಮ ಪ್ರಮಾಣದಲ್ಲಿ ಇದ್ದು ನೀಲಿಚಕ್ರವು ಹೆಚ್ಹು ಕಡಿಮೆ ಬಿಳಿ ಬಣ್ಣದ ಅಡ್ಡ ಗೆರೆಗಳಷ್ಟಿದ್ದು, ಅದರಲ್ಲಿ ಇಪ್ಪತ್ತು ನಾಲ್ಕು ರೇಖೆಗಳಿವೆ. ದ್ವಜದ ಉದ್ದ ಮತ್ತು ಅಗಲ 3:2 ಪ್ರಮಾಣದಲ್ಲಿರ ತಕ್ಕದ್ದು ಎಂದು ತಿಳಿಸಿದೆ.

  • ರಾಷ್ಟ್ರಧ್ವಜ ತಯಾರಿಸುವ ಹಕ್ಕು ಕರ್ನಾಟಕದ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ. ಉತ್ತರ ಕರ್ನಾಟಕದಾದ್ಯಂತ ಒಟ್ಟು 52 ಇಂತಹ ಘಟಕಗಳು ರಾಷ್ಟ್ರಧ್ವಜ ನಿರ್ಮಾಣದಲ್ಲಿ ತೊಡಗಿವೆ. ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು. ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕೃತವಾಗುತ್ತದೆ.

  • ನಮ್ಮ ಪವಿತ್ರ ಭಾರತಾಂಬೆಯ ಕೀರ್ತಿಯು ಮುಗಿಲೆತ್ತರಕ್ಕೆ ಏರಲಿ, ಎಲ್ಲಕ್ಕಿಂತ ಶ್ರೇಷ್ಠವಾದ ನಮ್ಮ ರಾಷ್ಟ್ರದ ಧ್ಯೇಯೋದ್ದೇಶಗಳು ಎಲ್ಲಕ್ಕಿಂತ ಎತ್ತರದಲ್ಲಿ ರಾರಾಜಿಸಲಿ, ಎಂಬ ಸಂಕೇತವನ್ನು ನಾಲ್ಕು ದಿಕ್ಕುಗಳಿಗೂ ತಿಳಿಯಪಡಿಸುವುದೇ ನಮ್ಮ ರಾಷ್ಟ್ರ ಧ್ವಜವನ್ನು ಮೇಲಕ್ಕೆ ಹಾರಿಸುವ ಉದ್ದೇಶ.

ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ:-

  • ಕೇಸರಿ:- ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆವ ಬಲಿದಾನಗಳ ಸಂಕೇತವಾಗಿದೆ.
  • ಬಿಳಿಬಣ್ಣ:-ಪವಿತ್ರ ಮನಸ್ಸಿನವರೊಂದಿಗೆ ನಿತ್ಯವೂ ಸತ್ಯ ಶಾಂತಿಗಳೊಂದಿಗೆ ನಮ್ಮನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತವಾಗಿದೆ.
  • ಹಸಿರು ಬಣ್ಣ:- ಪ್ರಕೃತಿಯೊಡನೆ ಮನುಷ್ಯನಿಗಿರಬೇಕಾದ ಅವಿನಾಭಾವ ಸಂಬಂಧವನ್ನು ತಿಳಿಸುತ್ತಾ, ಹಸಿರು ಜೀವರಾಶಿಗಳನ್ನು ಅವಲಂಬಿಸಿರುವ ಮನುಷ್ಯ ಮತ್ತು ಭೂಮಿಯ ಅನೂಹ್ಯ ಬಾಂಧವ್ಯಗಳ ಸಂಕೇತವಾಗಿದೆ. ರಾಷ್ಟ್ರಧ್ವಜವನ್ನು ಹಾರಿಸಿದ ನಂತರರಾಷ್ಟ್ರ ಗೀತೆ  ಜನಗಣ ಮನವನ್ನು ಹಾಡಲೇಬೇಕು.

ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು:-

  1. ದ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿದಾನಗತಿಯಲ್ಲಿ ಇಳಿಸಬೇಕು.
  2. ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು.
  3. ರಾಷ್ಟ್ರ ದ್ವಜವನ್ನು ಕೆಲವು ಕಡೆ ಎಲ್ಲ ದಿನಗಳಲ್ಲೂ, ಇನ್ನು ಕೆಲವು ಕಡೆ ಕೇವಲ ವಿಶೇಷ ದಿನಗಳಲ್ಲಿ ಮಾತ್ರ ಹಾರಿಸಲಾಗುತ್ತದೆ.
  4. ಸ್ವಾತಂತ್ರೋತ್ಸವ, ಗಣರಾಜ್ಯೋತ್ಸವ ಮತ್ತು ಗಾಂಧಿಜಯಂತಿ ಹಾಗೂ ರಾಷ್ಟ್ರೀಯ ವಿಶೇಷ ದಿನಗಳ ಜೊತೆಗೆ ಸರಕಾರದ ನಿರ್ದೇಶನದ ಮೇರೆಗೆ ರಾಷ್ಟ್ರಮಟ್ಟದ ಆಚರಣೆಯ ಸಂದರ್ಭಗಳಲ್ಲಿ ರಾಷ್ಟ್ರದ್ವಜವನ್ನು ಹಾರಿಸಬಹುದು.
  5. ದ್ವಜ ಏರಿಸುವಾಗ ದ್ವಜದ ಹಸಿರು ಬಣ್ಣ ಕೆಳಗೆ ಇರುವಂತೆ ಕೇಸರಿ ಬಣ್ಣ ಮೇಲೆ ಇರುವಂತೆ ಹಾರಿಸತಕ್ಕದ್ದು.
  6. ರಾಷ್ಟ್ರದ್ವಜವನ್ನು ಉರಿಸುವುದಾಗಲಿ, ಕೆಡಿಸುವುದಾಗಲಿ, ಕಾಲಡಿಯಲ್ಲಿ ಹಾಕುವುದಾಗಲಿ, ಹಾಳುಗೆಡುವುದಾಗಲಿ ಅಥವಾ ಅದಕ್ಕೆ ಯಾವುದೇ ತರಹದ ಅಗೌರವ ತೋರುವ ರೀತಿಯಲ್ಲಿ ನಡೆದು ಕೊಂಡರೆ, ಮಾತು, ಬರಹ ಅಥವಾ ಕೃತ್ಯದ ಮೂಲಕ ಅಗೌರವ ತೋರಿದರೆ ರಾಷ್ಟ್ರೀಯ ಗೌರವದ ಅವಮಾನ ವಿರೋಧಿ ಕಾಯ್ದೆಯಡಿಯಲ್ಲಿ ಶಿಕ್ಷೆಗೆ ಗುರಿ ಪಡಿಸಲಾಗುವುದು.
  7. ಹವಾಮಾನದ ವೈಪರೀತ್ಯದಿಂದ ಧ್ವಜವು ಹಾಳಾಗದಂತೆ ಹಾರುತ್ತಿರುವ ದ್ವಜವನ್ನು ಕಾಪಾಡಬೇಕು.
  8. ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಭಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ಧ್ವಜ ಕೋಲಿನಿಂದ ಅದನ್ನು ಹಾರಿಸತಕ್ಕದು
  9. ಸಮ್ಮೇಳನಗಳು ಇತರ ಕಾರ್ಯಕ್ರಮಗಳು ನಡೆಯುವಾಗ ವೇದಿಕೆಯ ಮೇಲಿರುವ ಅಧ್ಯಕ್ಷ ಸ್ಥಾನಕ್ಕಿಂತ ಎತ್ತರದಲ್ಲಿ ನಮ್ಮ ರಾಷ್ಟ್ರದ್ವಜ ಹಾರಾಡತಕ್ಕದ್ದು
  10. ಶಾಲೆ ಕಾಲೇಜುಗಳು, ಕ್ರೀಡಾ ಶಿಬಿರಗಳು, ಸ್ಕೌಟ್ಸ್ ಶಿಬಿರಗಳು ನಂತರ ವಿಶೇಷ ಸಂದರ್ಭಗಳಲ್ಲಿ ಮಕ್ಕಳ ಮನಸ್ಸಿನಲ್ಲಿ ವಿಶೇಷ ಗೌರವ ಮೂಡಿಸಲು ರಾಷ್ಟ್ರದ್ವಜ ಹಾರಿಸಬಹುದು.

ಸಿನಿಮಾದಲ್ಲಿ ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ.ಸಿನಿಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಬೇಕು:-

ಸಿನಿಮಾಗಳಲ್ಲಿ ಹೇಗೆ ಬೇಕೋ ಹಾಗೆ ರಾಷ್ಟ್ರಧ್ವಜವನ್ನು ಬಳಕೆ ಮಾಡುವಂತಿಲ್ಲ. ಬಳಸುವ ಮುನ್ನ, ಸಂಬಂಧಿಸಿದ ಇಲಾಖೆಯಿಂದ ಪರವಾನಗಿ ಪಡೆಯಬೇಕು. ಇಲ್ಲವಾದರೆ, ಮೂರು ವರ್ಷ ಜೈಲು!

ಹೌದು, ಸುಪ್ರೀಂಕೋರ್ಟ್‌ ಇಂಥದ್ದೊಂದು ಆದೇಶ ಹೊರಡಿಸಿದೆ. ಡಿಸೆಂಬರ್‌ 2016ರಲ್ಲಿ ಸುಪ್ರೀಂ ಕೋರ್ಟ್‌ ಈ ಆದೇಶ ಹೊರಡಿಸಿದ್ದು, ರಾಷ್ಟ್ರಧ್ವಜವನ್ನು ಕಮರ್ಷಿಯಲ್‌ ಸಿನಿಮಾಗಳಲ್ಲಿ ಹೇಗೆಂದರೆ ಹಾಗೆ, ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ.

ಒಂದು ವೇಳೆ ಬಳಸಿದ್ದೇ ಆದಲ್ಲಿ, ಕಾನೂನು ಪ್ರಕಾರ ಮೂರು ವರ್ಷ ಜೈಲುವಾಸ ಅನುಭವಿಸಬೇಕು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಂಜಾಬ್‍ನಲ್ಲಿ ಮತ್ತೆರಡು ಪಾಕ್ ಡ್ರೋಣ್‍ಗಳ ಹಾರಾಟ..! ಇಷ್ಟಕ್ಕೂ ಏನಿದು ಗೊತ್ತಾ,.!!

    ಚಂಡೀಗಢ, ಅ.9-ಚೀನಾ ಡ್ರೋಣ್‍ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್‍ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್‍ಗಳು ಹಾರಾಟ ನಡೆಸಿವೆ.ಪಂಜಾಬ್‍ನ ಫಿರೋಜ್‍ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್‍ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…

  • ಜ್ಯೋತಿಷ್ಯ

    ಬರೋಬ್ಬರಿ 75 ವರ್ಷಗಳ ನಂತರ ಭೇಟಿಯಾದ ಪ್ರೇಮಿಗಳು….!

    75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್‍ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್‍ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್‍ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…

  • ಸುದ್ದಿ

    ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದಂತಹ ಘಟನೆ…!

    ಉತ್ತರ ಪ್ರದೇಶದ ಅಲಿಗಢದಲ್ಲಿ ದಂಗಾಗಿಸುವ ಘಟನೆ ನಡೆದಿದೆ. ಕೇವಲ 5 ಸಾವಿರಕ್ಕಾಗಿ ಎರಡುವರೆ ವರ್ಷದ ಬಾಲಕಿ ಹತ್ಯೆ ನಡೆದಿದೆ. ಸಾಮಾನ್ಯ ಜನರಿಂದ ಸಿನಿಮಾ ತಾರೆಯರವರೆಗೆ ಎಲ್ಲರೂ ಈ ಘಟನೆ ಕೇಳಿ ದಂಗಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗ್ತಿದೆ. ಮೇ.31ರಂದು ಅಲಿಗಢದಲ್ಲಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಳು. ಬಾಲಕಿ ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಐದು ದಿನಗಳ ನಂತ್ರ ಕಸದ ರಾಶಿಯಲ್ಲಿ ಮಗುವಿನ ಶವ ಪತ್ತೆಯಾಗಿದೆ. ಮಗುವಿನ ದೇಹ ಕೊಳೆತು ವಾಸನೆ ಬರುತ್ತಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಬಾಲಕಿ…

  • ಸುದ್ದಿ

    ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ: ತಿಂಗಳಿಗೆ 55 ಹೂಡಿಕೆ ಮಾಡಿ ಮಾಸಿಕ ಪಿಂಚಣಿ 3000 ಪಡೆಯುವುದು ಹೇಗೆ…?

    ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…

  • ಉಪಯುಕ್ತ ಮಾಹಿತಿ

    ಕೆಟ್ಟ ದೃಷ್ಟಿ ಇದ್ದರೆ ತಪ್ಪದೆ ವಿಳ್ಳೆದೆಲೆಯಿಂದ ಹೀಗೆ ಮಾಡಿ ಸಾಕು.

    ಮಕ್ಕಳು ಎಂದರೆ ಎಲ್ಲರಿಗೂ ಕೂಡ ಬಹಳನೇ ಪ್ರೀತಿ ಪ್ರತಿಯೊಬ್ಬರ ಮನೆಯಲ್ಲಿ ಕೂಡ ಸಣ್ಣ ಪುಟ್ಟ ಮಕ್ಕಳು ಇರುತ್ತಾರೆ ನಾವು ಬೆಳಿಗ್ಗೆ ಎದ್ದಾಗಿನಿಂದ ಹಿಡಿದು ಸಂಜೆವರೆಗೂ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿ ಆಯಾಸ ಬೇಜಾರು ಬೇಸರ ಇದರಲ್ಲಿ ಮುಳುಗಿ ಹೋಗಿರುತ್ತದೆ ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಪುಟ್ಟ ಮಕ್ಕಳು ಜೊತೆ ಒಂದಷ್ಟು ಸಮಯ ಕಳೆದರೆ ಆಯಾಸ ಹೋಗುತ್ತದೆ ಮನೆಯಲ್ಲಿರುವ ಮಕ್ಕಳು ದೇವರಿಗೆ ಸಮಾನ ಅವು ಯಾವಾಗಲೂ ನಗುನಗುತ್ತಾ ಖುಷಿಯಿಂದ ಇರಬೇಕು. ಆದರೆ ಸಾಮಾನ್ಯವಾಗಿ ಪುಟ್ಟಮಕ್ಕಳು ರಾತ್ರಿಯ ವೇಳೆ ಚಿಕ್ಕ ಪುಟ್ಟ…

  • Health, ಉಪಯುಕ್ತ ಮಾಹಿತಿ

    ಸೌತೆಕಾಯಿ ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್‌ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…