ಉಪಯುಕ್ತ ಮಾಹಿತಿ

ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ!ನಿಮ್ಗೆ ಗೊತ್ತಾ ಸಿನೆಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಇಲ್ಲಂದ್ರೆ ಏನಾಗುತ್ತೆ ಗೊತ್ತಾ?

2380

ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947 ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947 ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ.

ಅಂದಿನಿಂದ ಜನವರಿ 26 1950 ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, 26, ಜನವರಿ, 1950 ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.

ತ್ರಿವರ್ಣ ಧ್ವಜದ ವೈಶಿಷ್ಟ್ಯ:-

  • ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳಿ ಬಣ್ಣ, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ. ದೇಶದ ವಿಭಿನ್ನ ಜಾತಿ, ಮತ, ಪಂಗಡ ಮತ್ತು ಸಂಸ್ಕೃತಿಯ ಜನರನ್ನು ಒಂದೇ ದ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರದ್ವಜ. ಈ ನಮ್ಮ ಸ್ವಾತಂತ್ರ್ಯ ದೇಶದ ಸಂಕೇತವಾಗಿರುವ ರಾಷ್ಟ್ರದ್ವಜದ ಅವಹೇಳನ ರಾಷ್ಟ್ರದ್ರೋಹವಾಗಿರುತ್ತದೆ.

  • ಅದರ ಉಳಿವಿಗಾಗಿ ಬಲಿದಾನವಾಗಲು ಸದಾ ಸಿದ್ದವಾಗಿರುವ ನಾವುಗಳು ಅದರ ಮೇಲಿರುವ ಭಕ್ತಿಯನ್ನೇ ದೇಶಭಕ್ತಿ ಎನ್ನುತ್ತೇವೆ. ಅಂದಿನ ಪ್ರಧಾನಿಯಾಗಿದ್ದ ಪಂಡಿತ್ ಜವಾಹರ್ ಲಾಲ್ ನೆಹರು 1947 ಜುಲೈ 22 ರಂದು ಅಸೆಂಬ್ಲಿಯಲ್ಲಿ ನಮ್ಮ ರಾಷ್ಟ್ರ ದ್ವಜವನ್ನು ದೇಶಕ್ಕೆ ಅರ್ಪಿಸಿದರು. ನಮ್ಮ ಸರಕಾರವು ದ್ವಜ ಕೇವಲ ಕೈ ನೆಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ ಮಾಡಲ್ಪಟ್ಟಿರಬೇಕು. ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ.

  • ಆದರೆ ಅದು ಕೈ ನೂಲು ಮತ್ತು ಕೈ ನೆಯ್ಗೆಯದೇ ಆಗಿರಬೇಕು. ಕೇಸರಿ- ಬಿಳಿ -ಹಸಿರು ಬಣ್ಣಗಳ ಅಳತೆ ಸಮ ಪ್ರಮಾಣದಲ್ಲಿ ಇದ್ದು ನೀಲಿಚಕ್ರವು ಹೆಚ್ಹು ಕಡಿಮೆ ಬಿಳಿ ಬಣ್ಣದ ಅಡ್ಡ ಗೆರೆಗಳಷ್ಟಿದ್ದು, ಅದರಲ್ಲಿ ಇಪ್ಪತ್ತು ನಾಲ್ಕು ರೇಖೆಗಳಿವೆ. ದ್ವಜದ ಉದ್ದ ಮತ್ತು ಅಗಲ 3:2 ಪ್ರಮಾಣದಲ್ಲಿರ ತಕ್ಕದ್ದು ಎಂದು ತಿಳಿಸಿದೆ.

  • ರಾಷ್ಟ್ರಧ್ವಜ ತಯಾರಿಸುವ ಹಕ್ಕು ಕರ್ನಾಟಕದ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ. ಉತ್ತರ ಕರ್ನಾಟಕದಾದ್ಯಂತ ಒಟ್ಟು 52 ಇಂತಹ ಘಟಕಗಳು ರಾಷ್ಟ್ರಧ್ವಜ ನಿರ್ಮಾಣದಲ್ಲಿ ತೊಡಗಿವೆ. ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು. ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕೃತವಾಗುತ್ತದೆ.

  • ನಮ್ಮ ಪವಿತ್ರ ಭಾರತಾಂಬೆಯ ಕೀರ್ತಿಯು ಮುಗಿಲೆತ್ತರಕ್ಕೆ ಏರಲಿ, ಎಲ್ಲಕ್ಕಿಂತ ಶ್ರೇಷ್ಠವಾದ ನಮ್ಮ ರಾಷ್ಟ್ರದ ಧ್ಯೇಯೋದ್ದೇಶಗಳು ಎಲ್ಲಕ್ಕಿಂತ ಎತ್ತರದಲ್ಲಿ ರಾರಾಜಿಸಲಿ, ಎಂಬ ಸಂಕೇತವನ್ನು ನಾಲ್ಕು ದಿಕ್ಕುಗಳಿಗೂ ತಿಳಿಯಪಡಿಸುವುದೇ ನಮ್ಮ ರಾಷ್ಟ್ರ ಧ್ವಜವನ್ನು ಮೇಲಕ್ಕೆ ಹಾರಿಸುವ ಉದ್ದೇಶ.

ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ:-

  • ಕೇಸರಿ:- ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆವ ಬಲಿದಾನಗಳ ಸಂಕೇತವಾಗಿದೆ.
  • ಬಿಳಿಬಣ್ಣ:-ಪವಿತ್ರ ಮನಸ್ಸಿನವರೊಂದಿಗೆ ನಿತ್ಯವೂ ಸತ್ಯ ಶಾಂತಿಗಳೊಂದಿಗೆ ನಮ್ಮನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತವಾಗಿದೆ.
  • ಹಸಿರು ಬಣ್ಣ:- ಪ್ರಕೃತಿಯೊಡನೆ ಮನುಷ್ಯನಿಗಿರಬೇಕಾದ ಅವಿನಾಭಾವ ಸಂಬಂಧವನ್ನು ತಿಳಿಸುತ್ತಾ, ಹಸಿರು ಜೀವರಾಶಿಗಳನ್ನು ಅವಲಂಬಿಸಿರುವ ಮನುಷ್ಯ ಮತ್ತು ಭೂಮಿಯ ಅನೂಹ್ಯ ಬಾಂಧವ್ಯಗಳ ಸಂಕೇತವಾಗಿದೆ. ರಾಷ್ಟ್ರಧ್ವಜವನ್ನು ಹಾರಿಸಿದ ನಂತರರಾಷ್ಟ್ರ ಗೀತೆ  ಜನಗಣ ಮನವನ್ನು ಹಾಡಲೇಬೇಕು.

ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು:-

  1. ದ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿದಾನಗತಿಯಲ್ಲಿ ಇಳಿಸಬೇಕು.
  2. ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು.
  3. ರಾಷ್ಟ್ರ ದ್ವಜವನ್ನು ಕೆಲವು ಕಡೆ ಎಲ್ಲ ದಿನಗಳಲ್ಲೂ, ಇನ್ನು ಕೆಲವು ಕಡೆ ಕೇವಲ ವಿಶೇಷ ದಿನಗಳಲ್ಲಿ ಮಾತ್ರ ಹಾರಿಸಲಾಗುತ್ತದೆ.
  4. ಸ್ವಾತಂತ್ರೋತ್ಸವ, ಗಣರಾಜ್ಯೋತ್ಸವ ಮತ್ತು ಗಾಂಧಿಜಯಂತಿ ಹಾಗೂ ರಾಷ್ಟ್ರೀಯ ವಿಶೇಷ ದಿನಗಳ ಜೊತೆಗೆ ಸರಕಾರದ ನಿರ್ದೇಶನದ ಮೇರೆಗೆ ರಾಷ್ಟ್ರಮಟ್ಟದ ಆಚರಣೆಯ ಸಂದರ್ಭಗಳಲ್ಲಿ ರಾಷ್ಟ್ರದ್ವಜವನ್ನು ಹಾರಿಸಬಹುದು.
  5. ದ್ವಜ ಏರಿಸುವಾಗ ದ್ವಜದ ಹಸಿರು ಬಣ್ಣ ಕೆಳಗೆ ಇರುವಂತೆ ಕೇಸರಿ ಬಣ್ಣ ಮೇಲೆ ಇರುವಂತೆ ಹಾರಿಸತಕ್ಕದ್ದು.
  6. ರಾಷ್ಟ್ರದ್ವಜವನ್ನು ಉರಿಸುವುದಾಗಲಿ, ಕೆಡಿಸುವುದಾಗಲಿ, ಕಾಲಡಿಯಲ್ಲಿ ಹಾಕುವುದಾಗಲಿ, ಹಾಳುಗೆಡುವುದಾಗಲಿ ಅಥವಾ ಅದಕ್ಕೆ ಯಾವುದೇ ತರಹದ ಅಗೌರವ ತೋರುವ ರೀತಿಯಲ್ಲಿ ನಡೆದು ಕೊಂಡರೆ, ಮಾತು, ಬರಹ ಅಥವಾ ಕೃತ್ಯದ ಮೂಲಕ ಅಗೌರವ ತೋರಿದರೆ ರಾಷ್ಟ್ರೀಯ ಗೌರವದ ಅವಮಾನ ವಿರೋಧಿ ಕಾಯ್ದೆಯಡಿಯಲ್ಲಿ ಶಿಕ್ಷೆಗೆ ಗುರಿ ಪಡಿಸಲಾಗುವುದು.
  7. ಹವಾಮಾನದ ವೈಪರೀತ್ಯದಿಂದ ಧ್ವಜವು ಹಾಳಾಗದಂತೆ ಹಾರುತ್ತಿರುವ ದ್ವಜವನ್ನು ಕಾಪಾಡಬೇಕು.
  8. ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಭಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ಧ್ವಜ ಕೋಲಿನಿಂದ ಅದನ್ನು ಹಾರಿಸತಕ್ಕದು
  9. ಸಮ್ಮೇಳನಗಳು ಇತರ ಕಾರ್ಯಕ್ರಮಗಳು ನಡೆಯುವಾಗ ವೇದಿಕೆಯ ಮೇಲಿರುವ ಅಧ್ಯಕ್ಷ ಸ್ಥಾನಕ್ಕಿಂತ ಎತ್ತರದಲ್ಲಿ ನಮ್ಮ ರಾಷ್ಟ್ರದ್ವಜ ಹಾರಾಡತಕ್ಕದ್ದು
  10. ಶಾಲೆ ಕಾಲೇಜುಗಳು, ಕ್ರೀಡಾ ಶಿಬಿರಗಳು, ಸ್ಕೌಟ್ಸ್ ಶಿಬಿರಗಳು ನಂತರ ವಿಶೇಷ ಸಂದರ್ಭಗಳಲ್ಲಿ ಮಕ್ಕಳ ಮನಸ್ಸಿನಲ್ಲಿ ವಿಶೇಷ ಗೌರವ ಮೂಡಿಸಲು ರಾಷ್ಟ್ರದ್ವಜ ಹಾರಿಸಬಹುದು.

ಸಿನಿಮಾದಲ್ಲಿ ರಾಷ್ಟ್ರ ಧ್ವಜ ಹೇಗೆಂದ್ರೆ ಹಾಗೆ ಬಳಸುವಂತಿಲ್ಲ.ಸಿನಿಮಾದಲ್ಲಿ ರಾಷ್ಟ್ರ ಧ್ವಜ ಬಳಸಲು ಅನುಮತಿ ಬೇಕು:-

ಸಿನಿಮಾಗಳಲ್ಲಿ ಹೇಗೆ ಬೇಕೋ ಹಾಗೆ ರಾಷ್ಟ್ರಧ್ವಜವನ್ನು ಬಳಕೆ ಮಾಡುವಂತಿಲ್ಲ. ಬಳಸುವ ಮುನ್ನ, ಸಂಬಂಧಿಸಿದ ಇಲಾಖೆಯಿಂದ ಪರವಾನಗಿ ಪಡೆಯಬೇಕು. ಇಲ್ಲವಾದರೆ, ಮೂರು ವರ್ಷ ಜೈಲು!

ಹೌದು, ಸುಪ್ರೀಂಕೋರ್ಟ್‌ ಇಂಥದ್ದೊಂದು ಆದೇಶ ಹೊರಡಿಸಿದೆ. ಡಿಸೆಂಬರ್‌ 2016ರಲ್ಲಿ ಸುಪ್ರೀಂ ಕೋರ್ಟ್‌ ಈ ಆದೇಶ ಹೊರಡಿಸಿದ್ದು, ರಾಷ್ಟ್ರಧ್ವಜವನ್ನು ಕಮರ್ಷಿಯಲ್‌ ಸಿನಿಮಾಗಳಲ್ಲಿ ಹೇಗೆಂದರೆ ಹಾಗೆ, ಬಳಕೆ ಮಾಡುವಂತಿಲ್ಲ ಎಂದು ಹೇಳಿದೆ.

ಒಂದು ವೇಳೆ ಬಳಸಿದ್ದೇ ಆದಲ್ಲಿ, ಕಾನೂನು ಪ್ರಕಾರ ಮೂರು ವರ್ಷ ಜೈಲುವಾಸ ಅನುಭವಿಸಬೇಕು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ದಿನ ಭವಿಷ್ಯ ಶುಕ್ರವಾರ, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…

  • ಸುದ್ದಿ

    ನಾಳೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ…..!

    ಏಪ್ರಿಲ್‍ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್‍ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ..ಈ ದಿನದ ನಿಮ್ಮ ರಾಶಿ ಭವಿಷ್ಯ ಶುಭವೋ ಅಶುಭವೋ ನೋಡಿ ತಿಳಿಯಿರಿ…ಶೇರ್ ಮಾಡಿ…

    ಮಂಗಳವಾರ, 10/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:12:17 ಸೂರ್ಯಾಸ್ತ18:44:31 ಹಗಲಿನ ಅವಧಿ12:32:14 ರಾತ್ರಿಯ ಅವಧಿ11:26:50 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ದಶಮಿ ನಕ್ಷತ್ರ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(8 ಫೆಬ್ರವರಿ, 2019) ನಿಮ್ಮ ಮನೆಗೆ ಸಂಬಂಧಿಸಿದ ಹೂಡಿಕೆ ಲಾಭದಾಯಕವಾಗಿರುತ್ತದೆ. ಹಳೆಯ ಸಂಪರ್ಕಗಳು ಮತ್ತು ಸಂಬಂಧಗಳಪುನಶ್ಚೇತನಕ್ಕೆ ಒಳ್ಳೆಯ…

  • ಕ್ರೀಡೆ

    ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಬಾಂಗ್ಲಾದೇಶದ ಕಿಡಿಗೇಡಿ ಕ್ರಿಕೆಟ್ ಅಭಿಮಾನಿಗಳು!ತಿಳಿಯಲು ಈ ಲೇಖನ ಓದಿ….

    ದೇಶದ ಕೆಲ ಕಿಡಿಗೇಡಿ ಅಭಿಮಾನಿಗಳು ಭಾರತದ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಚಿತ್ರವನ್ನು ಸಾಮಾಜಿಕ ಜಾಲತಾಣಕ್ಕೆ ಹರಿ ಬಿಟ್ಟಿದ್ದಾರೆ.

  • ಸಿನಿಮಾ

    ಐಟಿ ದಾಳಿಯ ಬಳಿಕ ಹುಬ್ಬಳ್ಳಿಯಲ್ಲಿ ನಡೆದ ನಟಸಾರ್ವಭೌಮ ಚಿತ್ರದ ಚಿತ್ರದ ಆಡಿಯೋ ರಿಲೀಸ್ ವೇಳೆ ಅಪ್ಪು ಹೇಳಿದ್ದೇನು ಗೊತ್ತೇ?

    ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ‌ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳ‌ಕಾಲ‌ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…