ಸ್ಪೂರ್ತಿ

ರಿಯಾಲಿಟಿ ಶೋನಲ್ಲಿ ಗೆದ್ದ ಹಣವನ್ನು ನೆರೆಪೀಡಿತರಿಗೆ ನೀಡಿದ ವಿಶೇಷ ಚೇತನ. ಸಿಎಂ ಜೊತೆ ಕಾಲಿನಿಂದಲೇ ಕ್ಲಿಕ್ಕಿಸಿಕೊಂಡ ಸೆಲ್ಫಿ ವೈರಲ್.

68

ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್‍ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ.

ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ ಕೇರಳ ನೆರ ಸಂತ್ರಸ್ತರ ನೆರವಿಗೆ ವಿಶೇಷ ಚೇತನ ಚಿತ್ರ ಕಲಾವಿದರೊಬ್ಬರು ಸ್ವಯಃ ಪೇರಿತರಾಗಿ ಮುಂದೆ ಬಂದಿದ್ದು, ರಿಯಾಲಿಟಿ ಶೋ ಒಂದರಲ್ಲಿ ಗೆದ್ದ ಸಂಪೂರ್ಣ ಹಣವನ್ನು ಕೇರಳ ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ಕೊಟ್ಟಿದ್ದಾರೆ.

ಅಲ್ಲದೆ ಇದೇ ವೇಳೆ ಪ್ರಣವ್ ಕಾಲಿನ ಬೆರಳಿಂದಲೇ ಸಿಎಂ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದರು. ಈ ಫೋಟೋ ಎಲ್ಲೆಡೆ ಸಖತ್ ವೈರಲ್ ಆಗಿದ್ದು, ವಿಶೇಷ ಚೇತನರಾಗಿದ್ದರೂ ಪ್ರಣವ್ ಬೇರೆಯವರಿಗೆ ಸಹಾಯ ಮಾಡುತ್ತಿರುವ ಗುಣ ಪಿಣರಾಯಿ ಅವರ ಮನಗೆದ್ದಿದೆ. ಹೀಗಾಗಿ ಪ್ರಣವ್ ಜೊತೆಗೆ ತಾವಿರುವ ಫೋಟೋಗಳನ್ನು ಪಿಣರಾಯಿ ಅವರು ಟ್ವೀಟ್ ಮಾಡಿ ಪ್ರಣವ್ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿ, ಅವರೊಂದಿಗೆ ಕಳೆದ ಕ್ಷಣದ ಬಗ್ಗೆ ಹಂಚಿಕೊಂಡಿದ್ದಾರೆ.

ಈ ಫೋಟೋಗಳು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಪ್ರಣವ್ ಸಹಾಯ ಗುಣಕ್ಕೆ ನೆಟ್ಟಿಗರು ಮನಸೋತ್ತಿದ್ದಾರೆ. ಎಲ್ಲವೂ ಸರಿಯಾಗಿದ್ದರು ಜನರು ಇನ್ನೊಬ್ಬರ ಸಹಾಯ ಮಾಡಲು ಹಿಂದೆ ಮುಂದೆ ನೋಡುತ್ತಾರೆ. ಅಂತಹದರಲ್ಲಿ ವಿಶೇಷ ಚೇತನರಾಗಿದ್ದರೂ ಬೇರೊಬ್ಬರ ನೆರವಿಗೆ ಬಂದ ಪ್ರಣವ್ ಅವರ ಗುಣವನ್ನು ನಿಜಕ್ಕೂ ಮೆಚ್ಚಲೇಬೇಕು. 

ಇಂದು (ಮಂಗಳವಾರ) ಬೆಳಗ್ಗೆ ನನಗೆ ಹೃದಯಸ್ಪರ್ಶಿ ಅನುಭವವಾಯಿತು. ಅಲತ್ತೂರಿನ ಚಿತ್ರ ಕಲಾವಿದ ಪ್ರಣವ್ ಕಚೇರಿಗೆ ಆಗಮಿಸಿ ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. ಹಾಗೆಯೇ
ನೆರೆ ಪೀಡಿತರಿಗೆ ನೆರವಾದ ಪ್ರಣವ್ ಅವರಿಗೆ ಸಲಾಂ ಎಂದು ಗೌರವ ಸಲ್ಲಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!

    ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…

  • ಸಿನಿಮಾ

    ಬಿಚ್ಚಮ್ಮ ಸನ್ನಿ ಲಿಯೋನ್ ಮೇಲೆ ಎಫ್‍ಐಆರ್!ಅಸಲಿ ಕಾರಣ ಏನು ಗೊತ್ತಾ?

    ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್‍ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್‍ಮೆಂಟ್ (ಪಿಎಚ್‍ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹೊಟ್ಟೆ ತೊಳಸಿಂದಂತೆ ಆಗುವುದು, ವಾಂತಿಯಂತಹ ಕಾಯಿಲೆಗಳಿಗೆ ತಕ್ಷಣದ ಪರಿಹಾರ…

    ಕೆಲವೊಮ್ಮೆ ನಮ್ಮ ದೇಹದ ಒಳಗೆ ಆಹಾರ ಅಥವಾ ನೀರಿನ ಮೂಲಕ ಸೇರಿಕೊಂಡ ಕಲ್ಮಶಗಳು ನಮಗೆ ಹೊಟ್ಟೆ, ತೊಳಸುವುದ, ವಾಂತಿಯಂತಹ ಕಾಯಿಲೆಗಳನ್ನು ತಂದೊಡ್ಡುತ್ತದೆ. ಮತ್ತು ಈ ಸಮಸ್ಯೆಗೆ ತಲೆ ನೋವಿನಂತಹ ಬೇರೆ ಕಾರಣಗಳೂ ಇರಬಹುದು. ಆದರೆ ನೀವು ಕೆಲವು ಉಪಾಯ ಅನುಸರಿಸಿ ಈ ಸಮಸ್ಯೆ ಇಂದ ಪಾರಾಗಬಹುದು… 1. ದೀರ್ಘವಾಗಿ ಉಸಿರಾಡುವುದು. ವಾಂತಿ ಹೊಟ್ಟೆಯಲ್ಲಿ ತೊಳಸಿದದಂತೆ ಆಗುವುದು ಈ ರೀತಿಯ ಸಮಸ್ಯೆ ಇರುವಾಗ ನೀವು ಮೊದಲು ಮಾಡಬೇಕಾಗಿರುವುದು ದೀರ್ಘವಾದ ಉಸಿರಾಟ. ಮೊದಲು ದೀರ್ಘವಾಗಿ ಒಳ್ಳೆಯ ಗಾಳಿಯನ್ನು( ಆಮ್ಲಜನಕವನ್ನು )…

  • ಉಪಯುಕ್ತ ಮಾಹಿತಿ, ವಿಧ್ಯಾಭ್ಯಾಸ

    ಮಕ್ಕಳು ಓದಿದ್ದ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಹೀಗೆ ಮಾಡಿದರೆ ಚೆನ್ನಾಗಿ ನೆನಪಿರುತ್ತದೆ..!ತಿಳಿಯಲು ಇದನ್ನು ಓದಿ ..

    ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್‌ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.

  • ಸುದ್ದಿ

    ಕನ್ನಡದ ಕೋಟ್ಯಧಿಪತಿಯಲ್ಲಿ ಪುನೀತ್ ಬದಲು ಬೇರೆ ನಿರೂಪಕಿ! ಯಾರು?

    ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್‌ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್‌ಸೀಟ್‌ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…