ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಇವತ್ತು ಇಡೀ ಪ್ರಪಂಚದಲ್ಲೇ ವೇಗವಾಗಿ ಓಡೋನು ಅನುಸ್ಕೊಂಡಿರೋ ಉಸೇನ್ ಬೋಲ್ಟ್ ಸಹ, ಸೋತು, ಬಿದ್ದು ಎದ್ದು ಈಗ ಗೆಲ್ತಾ ಇರೋದು.. ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!

ಜೀವನ ಹೆಂಗಿರುತ್ತೆ ಗೊತ್ತಾ..? ಎಂತವರನ್ನೆ ಕೇಳಿ ನೋಡಿ, ಸಾಕಾಗಿದೆ ಅನ್ನೋ ಉತ್ತರ ಕೊಡ್ತಾರೆ.. ಅವನು ರಸ್ತೇಲಿ ಭಿಕ್ಷೆ ಬೇಡೋನಾದ್ರೂ ಅಷ್ಟೆ, ಆಡಿ ಕಾರಲ್ಲಿ ಜುಮ್ ಅಂತ ಹೋಗೋನಾದ್ರೂ ಅಷ್ಟೆ..! ಅವರವರಿಗೆ ಅವರವರ ಸಮಸ್ಯೆಗಳು.. ಹಂಗಂತ ಸಮಸ್ಯೆಗಳನ್ನ ತಲೆ ಮೇಲೆ ಹೊತ್ಕೊಂಡು ಕೂತ್ರೆ ಸಮಸ್ಯೆ ಕಮ್ಮಿ ಆಗೋದೇ ಇಲ್ಲ..! ಸಮಸ್ಯೆ ಬರೋಕೆ ಮುಂಚೇನೇ ಅದನ್ನ ಹೆದರಿಸಿ ಓಡ್ಸೋ ಪ್ರಯತ್ನ ಮಾಡಬೇಕು. ಸಾಧ್ಯ ಆಗಲೇ ಇಲ್ಲ, ಸಮಸ್ಯೆ ಆಗೇ ಹೋಯ್ತು ಅಂದಾಗ ಅದನ್ನು ಎದುರಿಸೋ ತಾಕತ್ತು ಇರಬೇಕು.. ಐಸ್ ಕ್ರೀಮ್ ತಿನ್ನಬೇಕಾದ್ರೆ ಎಂಜಾಯ್ ಮಾಡ್ಕೊಂಡು ತಿನ್ನೋರು ಶೀತ ಆದ್ರೆ ಮಾತ್ರೆ ತಿನ್ನೋಕೂ ರೆಡಿ ಇರಬೇಕು..! ಬರೀ ಐಸ್ ಕ್ರೀಂ ಬೇಕು, ಶೀತ ಬೇಡ ಅಂದ್ರೆ ಆಗಲ್ಲ.. ಹಾಗೇನೇ, ಬರೀ ಗೆಲುವೇ ಬೇಕು, ಸೋಲು ಬರಲೇಬಾರದು ಅಂದ್ರೆ ಸಾಧ್ಯವೇ ಇಲ್ಲ..! ಇವತ್ತು ಗೆದ್ದವರೆಲ್ಲಾ ಸೋತು ಸೋತು ಸೋತು ಗೆದ್ದವರು..! ಗೆಲುವಿನ ಹಿಂದೆ ಸೋಲಿನ ಸರಮಾಲೆಗಳಿರುತ್ತೆ.

ಕೆಲವರು ಏನೋ ಮಾಡ್ಬೇಕು ಅಂತ ಹೋಗ್ತಾರೆ, ಆದ್ರೆ ಕೈ ಸುಟ್ಟುಕೊಂಡು ಸುಮ್ಮನಾಗಿಬಿಡ್ತಾರೆ.. ಒಂದು ಇಡ್ಲಿ ಅಂಗಡಿ ಓಪನ್ ಮಾಡೋನು ಮೊದಲ ದಿನವೇ 1000 ಇಡ್ಲಿ ಸೇಲ್ ಆಗಬೇಕು ಅಂತ ಯೋಚನೆ ಮಾಡೋದ್ರಲ್ಲಿ ತಪ್ಪಿಲ್ಲ..! ಆದ್ರೆ ಆಗಿಲ್ಲ ಅಂತ ಮಾರನೇ ದಿನವೇ ಅಂಗಡಿ ಮುಚ್ಚಿದ್ರೆ ಹೇಗೆ..? ಇವತ್ತು ಇಡ್ಲಿ ತಿಂದ ಹತ್ತಾರು ಜನ ನಾಳೆ ನೂರಾರು ಜನರಿಗೆ ಹೇಳಬೇಕು. ಅವರು ನಿಮ್ಮ ಹೋಟೆಲ್ ಹುಡುಕಿ ಬರಬೇಕು.. ಅವರಿಗೆ ನೀವು ಕೊಟ್ಟ ಇಡ್ಲಿ ಇಷ್ಟ ಆಗಬೇಕು. ಮತ್ತೆ ಅವರು ಮತ್ತಷ್ಟು ಜನರಿಗೆ ಹೇಳಬೇಕು.. ಹೀಗೆ ಮಾಡಿದಾಗ ಮಾತ್ರ ಸಾವಿರ ಇಡ್ಲಿ ಮಾರಬೇಕು ಅನ್ಕೊಂಡೋರು ಎರಡು ಸಾವಿರ ಇಡ್ಲಿ ಮಾರೋಕೆ ಸಾಧ್ಯ..! ಮೊದಲ ದಿನ ಅನ್ಕೊಂಡಷ್ಟು ಆಗದೇ ಇರಬಹುದು, ಆದ್ರೆ ಮುಂದೊಂದು ದಿನ ಅನ್ಕೊಂಡಿದ್ದಕ್ಕಿಂತ ಜಾಸ್ತಿ ಆಗುತ್ತೆ..! ಅಲ್ಲಿ ತನಕ ಕಾಯೋ ತಾಳ್ಮೆ ಇರಬೇಕು. ಫಸ್ಟ್ ಡೇ ಆಗಿಲ್ಲ ಅಂದಮಾತ್ರಕ್ಕೆ ಅದು ಸೋಲಲ್ಲ..!

ನೆನಪಿಟ್ಕೊಳಿ ಸೋಲು ನಿಮಗೆ ನಿಮ್ಮವರು ಯಾರು ಅನ್ನೊದು ಪರಿಚಯಿಸುತ್ತೆ..! ಸೋತಾಗ ನಿಮ್ಮ ಜೊತೆಗೆ ಯಾರಿರ್ತಾರೋ ಅವರು ಮಾತ್ರ ಸಾಯೋ ತನಕ ಜೊತೆಗಿರ್ತಾರೆ.. ನೀವು ಸೋತು ಗೆದ್ದಾಗ ಮಾತ್ರ ಪ್ರಪಂಚ ಏನು ಅಂತ ನಿಮಗೆ ಅರ್ಥ ಆಗೋದು.. ಗೆಲುವು ಈಸಿಯಾಗಿ ಸಿಕ್ಕಿದ್ರೆ ಅಷ್ಟೆ ಬೇಗ ಅದು ನಿಮ್ಮ ಕೈ ಜಾರಿ ಹೋಗುತ್ತೆ.. ಸೋತು ಗೆದ್ದವನಿಗೆ ಮಾತ್ರ ಗೆಲುವು ಉಳಿಸ್ಕೊಳೋ ಐಡಿಯಾ ಇರುತ್ತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…
ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿ ನೀಡಿರುವ ಆರ್ಬಿಐ
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ…
ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.
ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್ .ಚೈತ್ರಾ ಕೋಟೂರ್ಗೆ ಈ ನವೆಂಬರ್ ಬಂದರೆ ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…