News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಲೈಫಲ್ಲಿ ಹೇಗೆ ಗೆಲ್ಲಬೇಕು ಅನ್ನೋರು..! ಮಿಸ್ ಮಾಡದೇ ಈ ಲೇಖನ ಓದಿ…

1442

ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಇವತ್ತು ಇಡೀ ಪ್ರಪಂಚದಲ್ಲೇ ವೇಗವಾಗಿ ಓಡೋನು ಅನುಸ್ಕೊಂಡಿರೋ ಉಸೇನ್ ಬೋಲ್ಟ್ ಸಹ, ಸೋತು, ಬಿದ್ದು ಎದ್ದು ಈಗ ಗೆಲ್ತಾ ಇರೋದು.. ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!

ಜೀವನ ಹೆಂಗಿರುತ್ತೆ ಗೊತ್ತಾ..? ಎಂತವರನ್ನೆ ಕೇಳಿ ನೋಡಿ, ಸಾಕಾಗಿದೆ ಅನ್ನೋ ಉತ್ತರ ಕೊಡ್ತಾರೆ.. ಅವನು ರಸ್ತೇಲಿ ಭಿಕ್ಷೆ ಬೇಡೋನಾದ್ರೂ ಅಷ್ಟೆ, ಆಡಿ ಕಾರಲ್ಲಿ ಜುಮ್ ಅಂತ ಹೋಗೋನಾದ್ರೂ ಅಷ್ಟೆ..! ಅವರವರಿಗೆ ಅವರವರ ಸಮಸ್ಯೆಗಳು.. ಹಂಗಂತ ಸಮಸ್ಯೆಗಳನ್ನ ತಲೆ ಮೇಲೆ ಹೊತ್ಕೊಂಡು ಕೂತ್ರೆ ಸಮಸ್ಯೆ ಕಮ್ಮಿ ಆಗೋದೇ ಇಲ್ಲ..! ಸಮಸ್ಯೆ ಬರೋಕೆ ಮುಂಚೇನೇ ಅದನ್ನ ಹೆದರಿಸಿ ಓಡ್ಸೋ ಪ್ರಯತ್ನ ಮಾಡಬೇಕು. ಸಾಧ್ಯ ಆಗಲೇ ಇಲ್ಲ, ಸಮಸ್ಯೆ ಆಗೇ ಹೋಯ್ತು ಅಂದಾಗ ಅದನ್ನು ಎದುರಿಸೋ ತಾಕತ್ತು ಇರಬೇಕು.. ಐಸ್ ಕ್ರೀಮ್ ತಿನ್ನಬೇಕಾದ್ರೆ ಎಂಜಾಯ್ ಮಾಡ್ಕೊಂಡು ತಿನ್ನೋರು ಶೀತ ಆದ್ರೆ ಮಾತ್ರೆ ತಿನ್ನೋಕೂ ರೆಡಿ ಇರಬೇಕು..! ಬರೀ ಐಸ್ ಕ್ರೀಂ ಬೇಕು, ಶೀತ ಬೇಡ ಅಂದ್ರೆ ಆಗಲ್ಲ.. ಹಾಗೇನೇ, ಬರೀ ಗೆಲುವೇ ಬೇಕು, ಸೋಲು ಬರಲೇಬಾರದು ಅಂದ್ರೆ ಸಾಧ್ಯವೇ ಇಲ್ಲ..! ಇವತ್ತು ಗೆದ್ದವರೆಲ್ಲಾ ಸೋತು ಸೋತು ಸೋತು ಗೆದ್ದವರು..! ಗೆಲುವಿನ ಹಿಂದೆ ಸೋಲಿನ ಸರಮಾಲೆಗಳಿರುತ್ತೆ.

ಕೆಲವರು ಏನೋ ಮಾಡ್ಬೇಕು ಅಂತ ಹೋಗ್ತಾರೆ, ಆದ್ರೆ ಕೈ ಸುಟ್ಟುಕೊಂಡು ಸುಮ್ಮನಾಗಿಬಿಡ್ತಾರೆ.. ಒಂದು ಇಡ್ಲಿ ಅಂಗಡಿ ಓಪನ್ ಮಾಡೋನು ಮೊದಲ ದಿನವೇ 1000 ಇಡ್ಲಿ ಸೇಲ್ ಆಗಬೇಕು ಅಂತ ಯೋಚನೆ ಮಾಡೋದ್ರಲ್ಲಿ ತಪ್ಪಿಲ್ಲ..! ಆದ್ರೆ ಆಗಿಲ್ಲ ಅಂತ ಮಾರನೇ ದಿನವೇ ಅಂಗಡಿ ಮುಚ್ಚಿದ್ರೆ ಹೇಗೆ..? ಇವತ್ತು ಇಡ್ಲಿ ತಿಂದ ಹತ್ತಾರು ಜನ ನಾಳೆ ನೂರಾರು ಜನರಿಗೆ ಹೇಳಬೇಕು. ಅವರು ನಿಮ್ಮ ಹೋಟೆಲ್ ಹುಡುಕಿ ಬರಬೇಕು.. ಅವರಿಗೆ ನೀವು ಕೊಟ್ಟ ಇಡ್ಲಿ ಇಷ್ಟ ಆಗಬೇಕು. ಮತ್ತೆ ಅವರು ಮತ್ತಷ್ಟು ಜನರಿಗೆ ಹೇಳಬೇಕು.. ಹೀಗೆ ಮಾಡಿದಾಗ ಮಾತ್ರ ಸಾವಿರ ಇಡ್ಲಿ ಮಾರಬೇಕು ಅನ್ಕೊಂಡೋರು ಎರಡು ಸಾವಿರ ಇಡ್ಲಿ ಮಾರೋಕೆ ಸಾಧ್ಯ..! ಮೊದಲ ದಿನ ಅನ್ಕೊಂಡಷ್ಟು ಆಗದೇ ಇರಬಹುದು, ಆದ್ರೆ ಮುಂದೊಂದು ದಿನ ಅನ್ಕೊಂಡಿದ್ದಕ್ಕಿಂತ ಜಾಸ್ತಿ ಆಗುತ್ತೆ..! ಅಲ್ಲಿ ತನಕ ಕಾಯೋ ತಾಳ್ಮೆ ಇರಬೇಕು. ಫಸ್ಟ್ ಡೇ ಆಗಿಲ್ಲ ಅಂದಮಾತ್ರಕ್ಕೆ ಅದು ಸೋಲಲ್ಲ..!

ನೆನಪಿಟ್ಕೊಳಿ ಸೋಲು ನಿಮಗೆ ನಿಮ್ಮವರು ಯಾರು ಅನ್ನೊದು ಪರಿಚಯಿಸುತ್ತೆ..! ಸೋತಾಗ ನಿಮ್ಮ ಜೊತೆಗೆ ಯಾರಿರ್ತಾರೋ ಅವರು ಮಾತ್ರ ಸಾಯೋ ತನಕ ಜೊತೆಗಿರ್ತಾರೆ.. ನೀವು ಸೋತು ಗೆದ್ದಾಗ ಮಾತ್ರ ಪ್ರಪಂಚ ಏನು ಅಂತ ನಿಮಗೆ ಅರ್ಥ ಆಗೋದು.. ಗೆಲುವು ಈಸಿಯಾಗಿ ಸಿಕ್ಕಿದ್ರೆ ಅಷ್ಟೆ ಬೇಗ ಅದು ನಿಮ್ಮ ಕೈ ಜಾರಿ ಹೋಗುತ್ತೆ.. ಸೋತು ಗೆದ್ದವನಿಗೆ ಮಾತ್ರ ಗೆಲುವು ಉಳಿಸ್ಕೊಳೋ ಐಡಿಯಾ ಇರುತ್ತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ಮದುವೆ ಆಗಲಿದ್ದಾಳೆ ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿಯಾದ ಕನ್ನಡತಿ..ಹುಡುಗ ಯಾರು ಗೊತ್ತಾ?

    ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…

  • ಸುದ್ದಿ

    ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತಾಡಿದ್ದೇಕೆ.! ಶ್ರುತಿ ತಾಯಿ ಸಭೆಯಲ್ಲಿದ್ದ ಮಹಿಳೆಯರಿಗೆಳಿದ ಮಾತೇನು ಗೊತ್ತಾ?

    ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ಫೇಸ್‌ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…

  • ಸ್ಪೂರ್ತಿ

    ಆಟೋದಲ್ಲಿ ಸಿಕ್ಕ 80,000 ರೂಪಾಯಿಗಳನ್ನು ಮರಳಿಸಿದ್ದ ಡ್ರೈವರ್’ಗೆ ಆಕೆ ನೀಡಿದ್ದು ಏನು ಗೊತ್ತಾ..?ತಿಳಿಯಲು ಇದನ್ನು ಓದಿ…

    ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.

  • ಸುದ್ದಿ

    ಮಹಾಭಾರತ ನಡೆದೇ ಇಲ್ಲ ಎನ್ನುವ ಬುದ್ಧಿ ಜೀವಿಗಳಿಗೆ ಕಾದಿದೆ ಅಚ್ಚರಿ!! ಉತ್ತರಖಂಡದಲ್ಲಿದೆ ಮಹಾಭಾರತ ಕಾಲದ ವಿಸ್ಮಯಕಾರಿ ಕೋಟೆ…..

    ಭಾರತ ಎಂದರೆ ಪುಣ್ಯಭೂಮಿಯೇ ಸರಿ!! ಇಲ್ಲಿರುವ ಕೆಲವೊಂದು ನಿಗೂಢ ಸ್ಥಳಗಳು ಹಾಗೂ ಕೆಲವೊಂದು ವಿಚಾರಗಳು ಅಚ್ಚರಿಯನ್ನು ಮೂಡಿಸುತ್ತದೆ!! ಅದರ ಬಗ್ಗೆ ಎಷ್ಟೂ ಪರಿಶೀಲನೆ ನಡೆಸಿದರೂ ಏನೋ ದೈವೀ ಶಕ್ತಿ ಎಂಬುವುದನ್ನು ನಂಬಲೇ ಬೇಕಾಗುತ್ತದೆ!! ಇಂತಹ ಕೆಲವೊಂದು ಸಂಗತಿಗಳಿಗೂ ವಿಜ್ಞಾನಿಗಳಿಗೂ ಸವಾಲಾಗಿರುವುದಲ್ಲದೆ ಅಚ್ಚರಿಯನ್ನುಂಟು ಮಾಡಿಸುತ್ತದೆ.. ಈಗಾಗಲೇ ಭಾರತದಲ್ಲಿ ಹಲವಾರು ಕೋಟೆಗಳನ್ನು ನಾವು ಕಂಡಿದ್ದೇವೆ.. ಆದರೆ ಯಾವತ್ತಾದರೂ ತಲೆಕೆಳಗಾದ ರಹಸ್ಯ ಕೋಟೆಯ ಬಗ್ಗೆ ಯಾರಾದರೂ ಕೇಳಿದ್ದೀರಾ?! ತಲೆಕೆಳಗಾದ ಕೋಟೆ ಅಂದಾಗಲೇ ಅಚ್ಚರಿಯನ್ನುಂಟು ಮಾಡುತ್ತೆ ಅಲ್ವಾ?! ಹೌದು ಇಂತಹ ಕೋಟೆ ಉತ್ತರಖಂಡದ…

  • Cinema

    ದರ್ಶನ್, ಸುದೀಪ್ ಅಭಿಮಾನಿಗಳಿಗೆ ಸಿಹಿಸುದ್ದಿ – ಆಗಸ್ಟ್ 9ರ ಬದಲು 2ಕ್ಕೆ ಕುರುಕ್ಷೇತ್ರ ರಿಲೀಸ್

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್‍ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…

  • ಸುದ್ದಿ

    ಟಿಕ್‌ಟಾಕ್‌ಗೆ ಮತ್ತೊಂದು ಬಲಿ : ಕೋಲಾರದಲ್ಲಿ ಕೃಷಿ ಹೊಂಡದ ಬಳಿ ವಿಡಿಯೋ ಮಾಡಲು ಹೋಗಿ ವಿದ್ಯಾರ್ಥಿನಿ ಸಾವು…!

    ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್​​ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್​ಟಾಕ್​ ಆ್ಯಪ್​ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್​ಟಾಕ್​ ಕ್ರೇಜ್​​ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್​ಟಾಕ್​ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್​ಟಾಕ್​ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್​ಟಾಕ್​ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…