ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಇವತ್ತು ಇಡೀ ಪ್ರಪಂಚದಲ್ಲೇ ವೇಗವಾಗಿ ಓಡೋನು ಅನುಸ್ಕೊಂಡಿರೋ ಉಸೇನ್ ಬೋಲ್ಟ್ ಸಹ, ಸೋತು, ಬಿದ್ದು ಎದ್ದು ಈಗ ಗೆಲ್ತಾ ಇರೋದು.. ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!

ಜೀವನ ಹೆಂಗಿರುತ್ತೆ ಗೊತ್ತಾ..? ಎಂತವರನ್ನೆ ಕೇಳಿ ನೋಡಿ, ಸಾಕಾಗಿದೆ ಅನ್ನೋ ಉತ್ತರ ಕೊಡ್ತಾರೆ.. ಅವನು ರಸ್ತೇಲಿ ಭಿಕ್ಷೆ ಬೇಡೋನಾದ್ರೂ ಅಷ್ಟೆ, ಆಡಿ ಕಾರಲ್ಲಿ ಜುಮ್ ಅಂತ ಹೋಗೋನಾದ್ರೂ ಅಷ್ಟೆ..! ಅವರವರಿಗೆ ಅವರವರ ಸಮಸ್ಯೆಗಳು.. ಹಂಗಂತ ಸಮಸ್ಯೆಗಳನ್ನ ತಲೆ ಮೇಲೆ ಹೊತ್ಕೊಂಡು ಕೂತ್ರೆ ಸಮಸ್ಯೆ ಕಮ್ಮಿ ಆಗೋದೇ ಇಲ್ಲ..! ಸಮಸ್ಯೆ ಬರೋಕೆ ಮುಂಚೇನೇ ಅದನ್ನ ಹೆದರಿಸಿ ಓಡ್ಸೋ ಪ್ರಯತ್ನ ಮಾಡಬೇಕು. ಸಾಧ್ಯ ಆಗಲೇ ಇಲ್ಲ, ಸಮಸ್ಯೆ ಆಗೇ ಹೋಯ್ತು ಅಂದಾಗ ಅದನ್ನು ಎದುರಿಸೋ ತಾಕತ್ತು ಇರಬೇಕು.. ಐಸ್ ಕ್ರೀಮ್ ತಿನ್ನಬೇಕಾದ್ರೆ ಎಂಜಾಯ್ ಮಾಡ್ಕೊಂಡು ತಿನ್ನೋರು ಶೀತ ಆದ್ರೆ ಮಾತ್ರೆ ತಿನ್ನೋಕೂ ರೆಡಿ ಇರಬೇಕು..! ಬರೀ ಐಸ್ ಕ್ರೀಂ ಬೇಕು, ಶೀತ ಬೇಡ ಅಂದ್ರೆ ಆಗಲ್ಲ.. ಹಾಗೇನೇ, ಬರೀ ಗೆಲುವೇ ಬೇಕು, ಸೋಲು ಬರಲೇಬಾರದು ಅಂದ್ರೆ ಸಾಧ್ಯವೇ ಇಲ್ಲ..! ಇವತ್ತು ಗೆದ್ದವರೆಲ್ಲಾ ಸೋತು ಸೋತು ಸೋತು ಗೆದ್ದವರು..! ಗೆಲುವಿನ ಹಿಂದೆ ಸೋಲಿನ ಸರಮಾಲೆಗಳಿರುತ್ತೆ.

ಕೆಲವರು ಏನೋ ಮಾಡ್ಬೇಕು ಅಂತ ಹೋಗ್ತಾರೆ, ಆದ್ರೆ ಕೈ ಸುಟ್ಟುಕೊಂಡು ಸುಮ್ಮನಾಗಿಬಿಡ್ತಾರೆ.. ಒಂದು ಇಡ್ಲಿ ಅಂಗಡಿ ಓಪನ್ ಮಾಡೋನು ಮೊದಲ ದಿನವೇ 1000 ಇಡ್ಲಿ ಸೇಲ್ ಆಗಬೇಕು ಅಂತ ಯೋಚನೆ ಮಾಡೋದ್ರಲ್ಲಿ ತಪ್ಪಿಲ್ಲ..! ಆದ್ರೆ ಆಗಿಲ್ಲ ಅಂತ ಮಾರನೇ ದಿನವೇ ಅಂಗಡಿ ಮುಚ್ಚಿದ್ರೆ ಹೇಗೆ..? ಇವತ್ತು ಇಡ್ಲಿ ತಿಂದ ಹತ್ತಾರು ಜನ ನಾಳೆ ನೂರಾರು ಜನರಿಗೆ ಹೇಳಬೇಕು. ಅವರು ನಿಮ್ಮ ಹೋಟೆಲ್ ಹುಡುಕಿ ಬರಬೇಕು.. ಅವರಿಗೆ ನೀವು ಕೊಟ್ಟ ಇಡ್ಲಿ ಇಷ್ಟ ಆಗಬೇಕು. ಮತ್ತೆ ಅವರು ಮತ್ತಷ್ಟು ಜನರಿಗೆ ಹೇಳಬೇಕು.. ಹೀಗೆ ಮಾಡಿದಾಗ ಮಾತ್ರ ಸಾವಿರ ಇಡ್ಲಿ ಮಾರಬೇಕು ಅನ್ಕೊಂಡೋರು ಎರಡು ಸಾವಿರ ಇಡ್ಲಿ ಮಾರೋಕೆ ಸಾಧ್ಯ..! ಮೊದಲ ದಿನ ಅನ್ಕೊಂಡಷ್ಟು ಆಗದೇ ಇರಬಹುದು, ಆದ್ರೆ ಮುಂದೊಂದು ದಿನ ಅನ್ಕೊಂಡಿದ್ದಕ್ಕಿಂತ ಜಾಸ್ತಿ ಆಗುತ್ತೆ..! ಅಲ್ಲಿ ತನಕ ಕಾಯೋ ತಾಳ್ಮೆ ಇರಬೇಕು. ಫಸ್ಟ್ ಡೇ ಆಗಿಲ್ಲ ಅಂದಮಾತ್ರಕ್ಕೆ ಅದು ಸೋಲಲ್ಲ..!

ನೆನಪಿಟ್ಕೊಳಿ ಸೋಲು ನಿಮಗೆ ನಿಮ್ಮವರು ಯಾರು ಅನ್ನೊದು ಪರಿಚಯಿಸುತ್ತೆ..! ಸೋತಾಗ ನಿಮ್ಮ ಜೊತೆಗೆ ಯಾರಿರ್ತಾರೋ ಅವರು ಮಾತ್ರ ಸಾಯೋ ತನಕ ಜೊತೆಗಿರ್ತಾರೆ.. ನೀವು ಸೋತು ಗೆದ್ದಾಗ ಮಾತ್ರ ಪ್ರಪಂಚ ಏನು ಅಂತ ನಿಮಗೆ ಅರ್ಥ ಆಗೋದು.. ಗೆಲುವು ಈಸಿಯಾಗಿ ಸಿಕ್ಕಿದ್ರೆ ಅಷ್ಟೆ ಬೇಗ ಅದು ನಿಮ್ಮ ಕೈ ಜಾರಿ ಹೋಗುತ್ತೆ.. ಸೋತು ಗೆದ್ದವನಿಗೆ ಮಾತ್ರ ಗೆಲುವು ಉಳಿಸ್ಕೊಳೋ ಐಡಿಯಾ ಇರುತ್ತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…
9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….
ಶುಕ್ರವಾರ, 06/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ಇವರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ : 06:16 ಸೂರ್ಯಾಸ್ತ : 18:28 ಪಕ್ಷ : ಕೃಷ್ಣ ಪಕ್ಷ ತಿಥಿ : ಷಷ್ಠೀ ನಕ್ಷತ್ರ : ಜ್ಯೆಷ್ಟ್ಯ ಯೋಗ : ವರಿಯಾನ್ ಪ್ರಥಮ ಕರಣ :…
ಒಂದು ರಾತ್ರಿ ಕಾಂಪ್ರಮೈಸ್ ಮಾಡಿಕೋ ಎಂದು ಹೇಳಿದ ನಿರ್ಮಾಪಕನಿಗೆ ಮರಾಠಿ ಚಿತ್ರದ ನಟಿ ಶ್ರುತಿ ಮರಾಠೆ ಜಾಣತನದ ಉತ್ತರ ನೀಡಿದ್ದು, ಈಗ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹ್ಯುಮನ್ಸ್ ಆಫ್ ಮುಂಬೈ ಬಗ್ಗೆ ಮಾತನಾಡಿದ ನಟಿ ಶ್ರುತಿ, ಚಿತ್ರಕ್ಕೆ ಆಡಿಶನ್ ಮಾಡುವಾಗ ಆದಂತಹ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿಕೊಂಡಿದ್ದಾರೆ. ನಿರ್ಮಾಪಕ ಮಾಡಿದ ಇಂಟರ್ ವ್ಯೂವ್ ನಲ್ಲಿ ಶ್ರುತಿ ಭಾಗವಹಿಸಿದ್ದರು. ಈ ವೇಳೆ ನಿರ್ಮಾಪಕ, “ಕಾಂಪ್ರಮೈಸ್”, ಹಾಗೂ “ಒಂದು ರಾತ್ರಿ” ಎಂಬ ಪದಗಳನ್ನು ಬಳಸಲು ಶುರು ಮಾಡಿದ್ದರು. ನಿರ್ಮಾಪಕನ ಮಾತನ್ನು…
ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ ನಡೆದ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…