ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಇವತ್ತು ಇಡೀ ಪ್ರಪಂಚದಲ್ಲೇ ವೇಗವಾಗಿ ಓಡೋನು ಅನುಸ್ಕೊಂಡಿರೋ ಉಸೇನ್ ಬೋಲ್ಟ್ ಸಹ, ಸೋತು, ಬಿದ್ದು ಎದ್ದು ಈಗ ಗೆಲ್ತಾ ಇರೋದು.. ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!

ಜೀವನ ಹೆಂಗಿರುತ್ತೆ ಗೊತ್ತಾ..? ಎಂತವರನ್ನೆ ಕೇಳಿ ನೋಡಿ, ಸಾಕಾಗಿದೆ ಅನ್ನೋ ಉತ್ತರ ಕೊಡ್ತಾರೆ.. ಅವನು ರಸ್ತೇಲಿ ಭಿಕ್ಷೆ ಬೇಡೋನಾದ್ರೂ ಅಷ್ಟೆ, ಆಡಿ ಕಾರಲ್ಲಿ ಜುಮ್ ಅಂತ ಹೋಗೋನಾದ್ರೂ ಅಷ್ಟೆ..! ಅವರವರಿಗೆ ಅವರವರ ಸಮಸ್ಯೆಗಳು.. ಹಂಗಂತ ಸಮಸ್ಯೆಗಳನ್ನ ತಲೆ ಮೇಲೆ ಹೊತ್ಕೊಂಡು ಕೂತ್ರೆ ಸಮಸ್ಯೆ ಕಮ್ಮಿ ಆಗೋದೇ ಇಲ್ಲ..! ಸಮಸ್ಯೆ ಬರೋಕೆ ಮುಂಚೇನೇ ಅದನ್ನ ಹೆದರಿಸಿ ಓಡ್ಸೋ ಪ್ರಯತ್ನ ಮಾಡಬೇಕು. ಸಾಧ್ಯ ಆಗಲೇ ಇಲ್ಲ, ಸಮಸ್ಯೆ ಆಗೇ ಹೋಯ್ತು ಅಂದಾಗ ಅದನ್ನು ಎದುರಿಸೋ ತಾಕತ್ತು ಇರಬೇಕು.. ಐಸ್ ಕ್ರೀಮ್ ತಿನ್ನಬೇಕಾದ್ರೆ ಎಂಜಾಯ್ ಮಾಡ್ಕೊಂಡು ತಿನ್ನೋರು ಶೀತ ಆದ್ರೆ ಮಾತ್ರೆ ತಿನ್ನೋಕೂ ರೆಡಿ ಇರಬೇಕು..! ಬರೀ ಐಸ್ ಕ್ರೀಂ ಬೇಕು, ಶೀತ ಬೇಡ ಅಂದ್ರೆ ಆಗಲ್ಲ.. ಹಾಗೇನೇ, ಬರೀ ಗೆಲುವೇ ಬೇಕು, ಸೋಲು ಬರಲೇಬಾರದು ಅಂದ್ರೆ ಸಾಧ್ಯವೇ ಇಲ್ಲ..! ಇವತ್ತು ಗೆದ್ದವರೆಲ್ಲಾ ಸೋತು ಸೋತು ಸೋತು ಗೆದ್ದವರು..! ಗೆಲುವಿನ ಹಿಂದೆ ಸೋಲಿನ ಸರಮಾಲೆಗಳಿರುತ್ತೆ.

ಕೆಲವರು ಏನೋ ಮಾಡ್ಬೇಕು ಅಂತ ಹೋಗ್ತಾರೆ, ಆದ್ರೆ ಕೈ ಸುಟ್ಟುಕೊಂಡು ಸುಮ್ಮನಾಗಿಬಿಡ್ತಾರೆ.. ಒಂದು ಇಡ್ಲಿ ಅಂಗಡಿ ಓಪನ್ ಮಾಡೋನು ಮೊದಲ ದಿನವೇ 1000 ಇಡ್ಲಿ ಸೇಲ್ ಆಗಬೇಕು ಅಂತ ಯೋಚನೆ ಮಾಡೋದ್ರಲ್ಲಿ ತಪ್ಪಿಲ್ಲ..! ಆದ್ರೆ ಆಗಿಲ್ಲ ಅಂತ ಮಾರನೇ ದಿನವೇ ಅಂಗಡಿ ಮುಚ್ಚಿದ್ರೆ ಹೇಗೆ..? ಇವತ್ತು ಇಡ್ಲಿ ತಿಂದ ಹತ್ತಾರು ಜನ ನಾಳೆ ನೂರಾರು ಜನರಿಗೆ ಹೇಳಬೇಕು. ಅವರು ನಿಮ್ಮ ಹೋಟೆಲ್ ಹುಡುಕಿ ಬರಬೇಕು.. ಅವರಿಗೆ ನೀವು ಕೊಟ್ಟ ಇಡ್ಲಿ ಇಷ್ಟ ಆಗಬೇಕು. ಮತ್ತೆ ಅವರು ಮತ್ತಷ್ಟು ಜನರಿಗೆ ಹೇಳಬೇಕು.. ಹೀಗೆ ಮಾಡಿದಾಗ ಮಾತ್ರ ಸಾವಿರ ಇಡ್ಲಿ ಮಾರಬೇಕು ಅನ್ಕೊಂಡೋರು ಎರಡು ಸಾವಿರ ಇಡ್ಲಿ ಮಾರೋಕೆ ಸಾಧ್ಯ..! ಮೊದಲ ದಿನ ಅನ್ಕೊಂಡಷ್ಟು ಆಗದೇ ಇರಬಹುದು, ಆದ್ರೆ ಮುಂದೊಂದು ದಿನ ಅನ್ಕೊಂಡಿದ್ದಕ್ಕಿಂತ ಜಾಸ್ತಿ ಆಗುತ್ತೆ..! ಅಲ್ಲಿ ತನಕ ಕಾಯೋ ತಾಳ್ಮೆ ಇರಬೇಕು. ಫಸ್ಟ್ ಡೇ ಆಗಿಲ್ಲ ಅಂದಮಾತ್ರಕ್ಕೆ ಅದು ಸೋಲಲ್ಲ..!

ನೆನಪಿಟ್ಕೊಳಿ ಸೋಲು ನಿಮಗೆ ನಿಮ್ಮವರು ಯಾರು ಅನ್ನೊದು ಪರಿಚಯಿಸುತ್ತೆ..! ಸೋತಾಗ ನಿಮ್ಮ ಜೊತೆಗೆ ಯಾರಿರ್ತಾರೋ ಅವರು ಮಾತ್ರ ಸಾಯೋ ತನಕ ಜೊತೆಗಿರ್ತಾರೆ.. ನೀವು ಸೋತು ಗೆದ್ದಾಗ ಮಾತ್ರ ಪ್ರಪಂಚ ಏನು ಅಂತ ನಿಮಗೆ ಅರ್ಥ ಆಗೋದು.. ಗೆಲುವು ಈಸಿಯಾಗಿ ಸಿಕ್ಕಿದ್ರೆ ಅಷ್ಟೆ ಬೇಗ ಅದು ನಿಮ್ಮ ಕೈ ಜಾರಿ ಹೋಗುತ್ತೆ.. ಸೋತು ಗೆದ್ದವನಿಗೆ ಮಾತ್ರ ಗೆಲುವು ಉಳಿಸ್ಕೊಳೋ ಐಡಿಯಾ ಇರುತ್ತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಳಿಗಳು ಸಾಮನ್ಯವಾಗಿ ಒಂದು ದಿನದಲ್ಲಿ ಒಂದೆರಡು ಅಥವಾ ಹೆಚ್ಚೆಂದರೆ ಮೂರು ಮೊಟ್ಟೆ ಇಡುತ್ತವೆ. ಆದರೆ ಈ ಕೋಳಿ ಅದ್ಭುತವನ್ನು ಸೃಷ್ಟಿಸಿದೆ. ಜೈಪುರದ ಘಾಟ್ಗೇಟ್ನಲ್ಲಿರುವ ಹುಝೂರಿ ಛೋಟಾ ಪಾರ್ಕ್ನಲ್ಲಿ ಈ ಅದ್ಭುತ ಕಾಣಲು ಸಿಕ್ಕಿದೆ.
ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…
ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…
ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…
ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ. ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…
ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…