ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಇವತ್ತು ಇಡೀ ಪ್ರಪಂಚದಲ್ಲೇ ವೇಗವಾಗಿ ಓಡೋನು ಅನುಸ್ಕೊಂಡಿರೋ ಉಸೇನ್ ಬೋಲ್ಟ್ ಸಹ, ಸೋತು, ಬಿದ್ದು ಎದ್ದು ಈಗ ಗೆಲ್ತಾ ಇರೋದು.. ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!
ಜೀವನ ಹೆಂಗಿರುತ್ತೆ ಗೊತ್ತಾ..? ಎಂತವರನ್ನೆ ಕೇಳಿ ನೋಡಿ, ಸಾಕಾಗಿದೆ ಅನ್ನೋ ಉತ್ತರ ಕೊಡ್ತಾರೆ.. ಅವನು ರಸ್ತೇಲಿ ಭಿಕ್ಷೆ ಬೇಡೋನಾದ್ರೂ ಅಷ್ಟೆ, ಆಡಿ ಕಾರಲ್ಲಿ ಜುಮ್ ಅಂತ ಹೋಗೋನಾದ್ರೂ ಅಷ್ಟೆ..! ಅವರವರಿಗೆ ಅವರವರ ಸಮಸ್ಯೆಗಳು.. ಹಂಗಂತ ಸಮಸ್ಯೆಗಳನ್ನ ತಲೆ ಮೇಲೆ ಹೊತ್ಕೊಂಡು ಕೂತ್ರೆ ಸಮಸ್ಯೆ ಕಮ್ಮಿ ಆಗೋದೇ ಇಲ್ಲ..! ಸಮಸ್ಯೆ ಬರೋಕೆ ಮುಂಚೇನೇ ಅದನ್ನ ಹೆದರಿಸಿ ಓಡ್ಸೋ ಪ್ರಯತ್ನ ಮಾಡಬೇಕು. ಸಾಧ್ಯ ಆಗಲೇ ಇಲ್ಲ, ಸಮಸ್ಯೆ ಆಗೇ ಹೋಯ್ತು ಅಂದಾಗ ಅದನ್ನು ಎದುರಿಸೋ ತಾಕತ್ತು ಇರಬೇಕು.. ಐಸ್ ಕ್ರೀಮ್ ತಿನ್ನಬೇಕಾದ್ರೆ ಎಂಜಾಯ್ ಮಾಡ್ಕೊಂಡು ತಿನ್ನೋರು ಶೀತ ಆದ್ರೆ ಮಾತ್ರೆ ತಿನ್ನೋಕೂ ರೆಡಿ ಇರಬೇಕು..! ಬರೀ ಐಸ್ ಕ್ರೀಂ ಬೇಕು, ಶೀತ ಬೇಡ ಅಂದ್ರೆ ಆಗಲ್ಲ.. ಹಾಗೇನೇ, ಬರೀ ಗೆಲುವೇ ಬೇಕು, ಸೋಲು ಬರಲೇಬಾರದು ಅಂದ್ರೆ ಸಾಧ್ಯವೇ ಇಲ್ಲ..! ಇವತ್ತು ಗೆದ್ದವರೆಲ್ಲಾ ಸೋತು ಸೋತು ಸೋತು ಗೆದ್ದವರು..! ಗೆಲುವಿನ ಹಿಂದೆ ಸೋಲಿನ ಸರಮಾಲೆಗಳಿರುತ್ತೆ.
ಕೆಲವರು ಏನೋ ಮಾಡ್ಬೇಕು ಅಂತ ಹೋಗ್ತಾರೆ, ಆದ್ರೆ ಕೈ ಸುಟ್ಟುಕೊಂಡು ಸುಮ್ಮನಾಗಿಬಿಡ್ತಾರೆ.. ಒಂದು ಇಡ್ಲಿ ಅಂಗಡಿ ಓಪನ್ ಮಾಡೋನು ಮೊದಲ ದಿನವೇ 1000 ಇಡ್ಲಿ ಸೇಲ್ ಆಗಬೇಕು ಅಂತ ಯೋಚನೆ ಮಾಡೋದ್ರಲ್ಲಿ ತಪ್ಪಿಲ್ಲ..! ಆದ್ರೆ ಆಗಿಲ್ಲ ಅಂತ ಮಾರನೇ ದಿನವೇ ಅಂಗಡಿ ಮುಚ್ಚಿದ್ರೆ ಹೇಗೆ..? ಇವತ್ತು ಇಡ್ಲಿ ತಿಂದ ಹತ್ತಾರು ಜನ ನಾಳೆ ನೂರಾರು ಜನರಿಗೆ ಹೇಳಬೇಕು. ಅವರು ನಿಮ್ಮ ಹೋಟೆಲ್ ಹುಡುಕಿ ಬರಬೇಕು.. ಅವರಿಗೆ ನೀವು ಕೊಟ್ಟ ಇಡ್ಲಿ ಇಷ್ಟ ಆಗಬೇಕು. ಮತ್ತೆ ಅವರು ಮತ್ತಷ್ಟು ಜನರಿಗೆ ಹೇಳಬೇಕು.. ಹೀಗೆ ಮಾಡಿದಾಗ ಮಾತ್ರ ಸಾವಿರ ಇಡ್ಲಿ ಮಾರಬೇಕು ಅನ್ಕೊಂಡೋರು ಎರಡು ಸಾವಿರ ಇಡ್ಲಿ ಮಾರೋಕೆ ಸಾಧ್ಯ..! ಮೊದಲ ದಿನ ಅನ್ಕೊಂಡಷ್ಟು ಆಗದೇ ಇರಬಹುದು, ಆದ್ರೆ ಮುಂದೊಂದು ದಿನ ಅನ್ಕೊಂಡಿದ್ದಕ್ಕಿಂತ ಜಾಸ್ತಿ ಆಗುತ್ತೆ..! ಅಲ್ಲಿ ತನಕ ಕಾಯೋ ತಾಳ್ಮೆ ಇರಬೇಕು. ಫಸ್ಟ್ ಡೇ ಆಗಿಲ್ಲ ಅಂದಮಾತ್ರಕ್ಕೆ ಅದು ಸೋಲಲ್ಲ..!
ನೆನಪಿಟ್ಕೊಳಿ ಸೋಲು ನಿಮಗೆ ನಿಮ್ಮವರು ಯಾರು ಅನ್ನೊದು ಪರಿಚಯಿಸುತ್ತೆ..! ಸೋತಾಗ ನಿಮ್ಮ ಜೊತೆಗೆ ಯಾರಿರ್ತಾರೋ ಅವರು ಮಾತ್ರ ಸಾಯೋ ತನಕ ಜೊತೆಗಿರ್ತಾರೆ.. ನೀವು ಸೋತು ಗೆದ್ದಾಗ ಮಾತ್ರ ಪ್ರಪಂಚ ಏನು ಅಂತ ನಿಮಗೆ ಅರ್ಥ ಆಗೋದು.. ಗೆಲುವು ಈಸಿಯಾಗಿ ಸಿಕ್ಕಿದ್ರೆ ಅಷ್ಟೆ ಬೇಗ ಅದು ನಿಮ್ಮ ಕೈ ಜಾರಿ ಹೋಗುತ್ತೆ.. ಸೋತು ಗೆದ್ದವನಿಗೆ ಮಾತ್ರ ಗೆಲುವು ಉಳಿಸ್ಕೊಳೋ ಐಡಿಯಾ ಇರುತ್ತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.
ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್ ನ ಅಜಯ್ ರಾಯ್ ಕಣಕ್ಕಿಳಿಯುವುದು ಕನ್ಫರ್ಮ್ ಆಗಿದೆ. ಹಾಗಾದ್ರೆ ಈ ಅಜಯ್ ರಾಯ್ ಯಾರು ಅಂದ್ರಾ? ಇವರು ಕಾಂಗ್ರೆಸ್ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ…
ಅಭಿಮಾನಿಗಳೇ ಹಾಗೆ ತಮ್ಮ ನೆಚ್ಚನ ನಟನಿಗಾಗಿ ಏನಾದ್ರೂ ಮಾಡಲು ತಯಾರಿರುತ್ತಾರೆ.ತಮ್ಮ ನೆಚ್ಚಿನ ನಟನ ಚಿತ್ರಕಾಗಿ ಜಾತಕ ಪಕ್ಷಿಯಂತೆ ಕಾಯುತ್ತಿರುತ್ತಾರೆ. ಒಂದು ವೇಳೆ ತಮ್ಮ ನೆಚ್ಚಿನ ನಟನನ್ನು ಒಂದು ಬಾರಿ ಭೇಟಿ ಮಾಡಿಬಿಟ್ಟರೆ ಅವರ ಜೀವನ ಸಾರ್ಥಕ ಆದಂತೆ ಅನ್ನುವಷ್ಟು ಮಟ್ಟಿಗೆ ಇಷ್ಟಪಡುವವರಿದ್ದಾರೆ. ಆದರೆ ಆಂಧ್ರದ ವಿಜಯವಾಡದ ತಮ್ಮ ನೆಚ್ಚಿನ ನಟನ ಅಭಿಮಾನಿಯೊಬ್ಬ ನೆಚ್ಚಿನ ನಟನನ್ನು ಭೇಟಿ ಮಾಡಲು ಆಗಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿರುವ ಇದಕ್ಕೆ ಹುಚ್ಚು ಅಭಿಮಾನ ಅನ್ನಬೇಕೋ, ಅತಿರೇಕದ ಅಭಿಮಾನ ಅನ್ನಬೇಕೋ ಗೊತ್ತಿಲ್ಲ.ತಾವು ಪ್ರೀತಿಸೋ ಆರಾಧಿಸುವ ಸ್ಟಾರ್…
ಇಂದು ನೀವು ತೋರಿಸುತ್ತಿರುವ ಪ್ರೀತಿಗೆ ನಮ್ಮ ಮೈಯಲ್ಲಿರುವ ರಕ್ತವನ್ನು ತೆಗೆದು ನಿಮ್ಮ ಕಾಲನ್ನು ತೊಳೆದರೂ ಅದು ಕಡಿಮೆಯೇ ಎಂದು ನಟ ದರ್ಶನ್ ಅವರು ಅಭಿಮಾನಿಗಳಿಗೆ ಹೇಳಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸಿ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ದರ್ಶನ್ ನಮ್ಮ ಬಗ್ಗೆ ಏನೇ ಮಾತಾಡಿದ್ರೂ ನಾವು ಕೋಪ ಮಾಡ್ಕೊಳಲ್ಲ, ಬೇಜಾರಿಲ್ಲ, ನೊಂದುಕೊಳ್ಳಲ್ಲ. ನಾವು ಅಂಬರೀಶ್ ಅವರಿಗಾಗಿ, ಸುಮಲತಾ ಅಮ್ಮನಿಗಾಗಿ ಬಂದಿದ್ದೇವೆ ಎಂದು ನಟ ದರ್ಶನ ಹೇಳಿದರು. ಮಂಡ್ಯದ ಸಿಲ್ವರ್ ಜ್ಯುಬಿಲಿ ಪಾರ್ಕ್ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್,…