News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ವಯನಾಡಲ್ಲಿ 2ನೇ ದಿನ ರಾಹುಲ್ ರೋಡ್‍ಶೋ ಶುರು – ಶ್ರೀಲಂಕಾ ಹಾಗೂ ಮಾಲ್ಡೀವ್ಸ್ಗೆ ಮೋದಿ ಮೊದಲ ಪ್ರವಾಸ…..

58

ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್‍ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ.

ಮಾಲ್ಡೀವ್ಸ್‍ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ ಸರಣಿ ಬಾಂಬ್ ಸ್ಫೋಟದ ಬಳಿಕ ಆ ರಾಷ್ಟ್ರಕ್ಕೆ ಭೇಟಿ ನೀಡುತ್ತಿರುವ ವಿಶ್ವದ ಮೊದಲ ನಾಯಕ ಮೋದಿ. ಜಪಾನ್ ಜೊತೆಗೆ ಲಂಕಾದಲ್ಲಿ ಬಂದರು ಅಭಿವೃದ್ಧಿಗೆ ಭಾರತದ ಪಾಲುದಾರಿಕೆಗೆ ಸಹಿ ಹಾಕುವ ಸಾಧ್ಯತೆ ಇದೆ.ಹಿಂದೂ ಮಹಾಸಾಗರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಚೀನಾದ ಪ್ರಾಬಲ್ಯ ಕಡಿವಾಣದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯ ಚೊಚ್ಚಲ ವಿದೇಶ ಪ್ರವಾಸ ಮಹತ್ವ ಪಡೆದಿದೆ. ವಿದೇಶ ಪ್ರವಾಸಕ್ಕೂ ಮೊದಲು ಇಂದು ಬೆಳಗ್ಗೆ ಗುರುವಾಯೂರಲ್ಲಿರುವ ಪ್ರಸಿದ್ಧ ಶ್ರೀಕೃಷ್ಣನ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಿ,

ದೇವಸ್ಥಾನದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡೋದರ ಜೊತೆಗೆ ಹೆಲಿಪ್ಯಾಡ್‍ನ್ನು ಉದ್ಘಾಟಿಸಲಿದ್ದಾರೆ.ಇತ್ತ ಅಮೇಥಿಯಲ್ಲಿ ಸೋಲಿಸಿದರೂ ಅದ್ಭುತ ಗೆಲುವು ಕೊಟ್ಟ ಕೇರಳದಲ್ಲಿ ರಾಹುಲ್ ಇಂದು 2ನೇ ದಿನದ ಪ್ರವಾಸ ಕೈಗೊಳ್ಳಲಿದ್ದಾರೆ. ತಮ್ಮ ಹೊಸ ಕ್ಷೇತ್ರ ವಯನಾಡಲ್ಲಿ ರೋಡ್ ಶೋ ಜೊತೆಗೆ ಸನ್ಮಾನವನ್ನೂ ಸ್ವೀಕರಿಸಲಿದ್ದಾರೆ. ಸದ್ಯದ ಸ್ಥಿತಿಯಲ್ಲಿ ಅಧ್ಯಕ್ಷ ಸ್ಥಾನದಿಂದ ರಾಹುಲ್ ಗಾಂಧಿ ಇಳಿಯೋದು ಸರಿಯಲ್ಲ, ಬದಲಿಗೆ ಪಕ್ಷದಲ್ಲಿ ಎದ್ದಿರುವ ಬೆಂಕಿಯನ್ನ ಆರಿಸಬೇಕು ಎಂದು ಚಿಕ್ಕಬಳ್ಳಾಪುರ ಮಾಜಿ ಸಂಸದ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಹುದ್ದೆಯನ್ನ ಖಾಲಿ ಇಡಲು ಸಾಧ್ಯವಿಲ್ಲ. ಅಧ್ಯಕ್ಷರು ಕಾರ್ಯಪ್ರವೃತ್ತರಾಗಿ ಯುದ್ಧೋಪಾದಿಯಲ್ಲಿ ಪಕ್ಷದಲ್ಲಿ ಶಿಸ್ತು ತರಬೇಕು. ಒಂದು ವೇಳೆ ರಾಜೀನಾಮೆ ಕೊಡಬೇಕು ಎಂದು ಅನಿಸಿದರೂ ಅದಕ್ಕಿದು ಸಮಯವಲ್ಲ. ಸೋಲಿಗೆ ಕಾರಣವಾದ ರಾಜ್ಯ ನಾಯಕರ ಮೇಲೆ ಕ್ರಮಕೈಗೊಳ್ಳಬೇಕು. ಅದು ಅವರ ಕರ್ತವ್ಯ ಅಂತ ಮೊಯ್ಲಿ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಮಣ್ಣಿನ ಮಗ ಮಾಜಿ ಪ್ರಧಾನಿ “ಹೆಚ್.ಡಿ.ದೇವೇಗೌಡ”ರಿಗೆ “ರಾಷ್ಟ್ರಪತಿ” ಸ್ಥಾನಕ್ಕೆ ಸ್ಪರ್ಧಿಸುವಂತೆ ಆಹ್ವಾನ

    ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಹ್ವಾನ ನೀಡಿದ್ದಾರೆ.

  • ಮನರಂಜನೆ

    ಕಿಶನ್ ಕಣ್ಣೀರು ಹಾಕ್ತಿದ್ದಂತೆ, ವೇದಿಕೆ ಮೇಲೆ ಸ್ಪೆಷಲ್ ಗಿಫ್ಟ್ ನೀಡಿದ ಕಿಚ್ಚ.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್‍ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್‍ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್‍ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….

  • ಸುದ್ದಿ

    ವಿಜ್ಞಾನದ ಪ್ರಕಾರ ಈಕೆ ಜಗತ್ತಿನ ಅತ್ಯಂತ ಸುಂದರವಾದ ಮಹಿಳೆ,! ಯಾಕೆ ಗೊತ್ತಾ,.??

    ಸೌಂದರ್ಯ ಮತ್ತು ಸುಂದರವಾಗಿ  ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್‌ ಅಮೆರಿಕದ ಸೂಪರ್‌ ಮಾಡೆಲ್‌  ಆದ ಬೆಲ್ಲಾ ಹದೀದ್‌ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ  ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್‌ ಪದ್ಧತಿಯಾದ ‘ಗೋಲ್ಡನ್‌ ರೇಶ್ಯೋ ಆಫ್‌ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್‌ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…

  • ಸ್ಪೂರ್ತಿ

    ಮಸೀದಿಯಲ್ಲಿ ತಯಾರದ ಶಿವ ಭಂಡಾರಾದ ಅಡುಗೆ ……!

    ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್‌ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ರಾತ್ರಿ ಮಲಗುವ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ. ಮಲಗುವ ಮುನ್ನ ಎಚ್ಚರ.!

    ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…

  • ಗ್ಯಾಜೆಟ್

    ಟ್ರೂ ಕಾಲರ್ ಆ್ಯಪ್‍’ನ ಹಿಂದಿನ ಕರಾಳ ಸತ್ಯ ಗೊತ್ತಾ ನಿಮ್ಗೆ?

    ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್‍’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್‍ನಲ್ಲಿ ನಂಬರ್ ಸೇವ್‍ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್‍ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್‍ ಅನ್ನು ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡಿರುತ್ತೇವೆ.