ಸ್ಪೂರ್ತಿ

ವಯಾಗ್ರಾಕ್ಕಾಗಿ ಎರಡು ಗ್ರಾಮಗಳ ನಡುವೆ ಜಗಳ- ಹಿಮಾಲಯದ ಪರ್ವತದಲ್ಲಿ ನಿಷೇಧಾಜ್ಞೆ ಜಾರಿ….!

271

ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್‍ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ.


ಪಿತೋರ್‌ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು ಮುನ್ಸಿಯರಿ ಜನರು ಸಂಗ್ರಹಿಸುತ್ತಾರೆ. ಕೀಡಾ ಜಾಡಿ ಅಥವಾ ಹಿಮಾಲಯದ ವಯಾಗ್ರಾ ಸಸ್ಯ ಕಾಮೋತ್ತೇಜಕ ಮಾತ್ರೆಗಳ ರೀತಿಯಲ್ಲಿ ಕೆಲಸ ಮಾಡುತ್ತದೆ. ಹೀಗಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಒಂದು ಕೆಜಿ ‘ಕೀಡಾ ಜಾಡಿ’ಯ ಬೆಲೆ 18 ಲಕ್ಷ ರೂ. ಇದೆ. ಇದು ಬೇಸಿಗೆ ಕಾಲದಲ್ಲಿ ಮಾತ್ರ ಬೆಳೆಯುತ್ತದೆ.


ಬುಯಿ ಮತ್ತು ಪಾಟೋ ಗ್ರಾಮಗಳ ಜನರು ರಾಲಂ ಹುಲ್ಲುಗಾವಲು ಪ್ರದೇಶ ತಮಗೇ ಸೇರಿದ್ದು ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಅಷ್ಟೇ ಅಲ್ಲದೆ ವಯಾಗ್ರವನ್ನು ಯಾರೂ ಮುಟ್ಟದಂತೆ ಕಾವಲು ಕಾಯುತ್ತಿದ್ದಾರೆ. ಇದರಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪರಸ್ಪರ ಒಮ್ಮತದಿಂದ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಜಿಲ್ಲಾಡಳಿತವು ಎರಡೂ ಗ್ರಾಮದ ಜನರಿಗೆ ಸೂಚನೆ ನೀಡಿತ್ತು.


ಸ್ವತಃ ಜಿಲ್ಲಾಧಿಕಾರಿಗಳು ಎರಡೂ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮಸ್ಥರಿಗೆ ಕಿತ್ತಾಟ ನಿಲ್ಲಿಸುವಂತೆ ಸೂಚನೆ ನೀಡಿದ್ದರು. ಆದರೆ ಗ್ರಾಮಸ್ಥರ ಮಧ್ಯೆ ಸಮಸ್ಯೆ ಇತ್ಯರ್ಥವಾಗದ ಹಿನ್ನಲೆಯಲ್ಲಿ ಹಿಮಾಲಯದ ಗುಡ್ಡಾಗಾಡು ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ವರದಿಯಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…

  • inspirational

    ಮಂಗಳ ಗ್ರಹ

    ಮಂಗಳ ಮಂಗಳ ಗ್ರಹವು ಸೊರ್ಯನಿಂದ ನಾಲ್ಕನೇ ಗ್ರಹವಾಗಿದ್ದು , ನಮ್ಮ ಸೌರಮಂಡಲದ ಎರಡನೆಯ ಅತಿ ಚಿಕ್ಕ ಗ್ರಹವಾಗಿದೆ ಮರಕ್ಯೊರಿಯ ನಂತರ. ಇಂಗ್ಲೀಷ್ ನಲ್ಲಿ ಇದನ್ನು ಮಾರ್ಸ್ ಎಂದು ಕರೆಯಲಾಗುತ್ತದೆ. ಮಾರ್ಸ ಇದು ರೋಮನ್ನರ್ ದೇವರ ಯುಧದ್ದ ದೇವತೆ ಮಾಡಿದೆ.ಇದನ್ನು ಕೆಂಪು ಗ್ರಹ ಎಂದು ಕರೆಯಲಾಗುತ್ತದೆ.[ಭೂಮಿ]]ಗಿಂತ ದೂರದಲ್ಲಿದ್ದು, ಗುರು ಗ್ರಹಕ್ಕಿಂತ ಹತ್ತಿರದಲ್ಲಿದೆ.ಆಂಗ್ಲ ಭಾಷೆಯಲ್ಲಿ ‘ಮಾರ್ಸ್'(Mars) ಎಂದು ಕರೆಯುತ್ತಾರೆ. ಸುಮಾರು ಭೂಮಿಯ ಅರ್ಧದಷ್ಟು ವ್ಯಾಸವುಳ್ಳ ಈ ಗ್ರಹ ತನ್ನ ಅಕ್ಷವನ್ನು ಸುಮಾರು ೨೪ ಘಂಟೆಗಳಲ್ಲಿ ಸುತ್ತುತ್ತದೆ. ಆದರೆ ಸೂರ್ಯನ ಸುತ್ತ ಪ್ರದಕ್ಷಿಣೆ ಹಾಕಲು…

  • ಸಿನಿಮಾ

    ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ತಂದ ನಟ ಅರುಣ್ ಸಾಗರ್ ಪುತ್ರ..

    ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್‍ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್‍ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…

  • ಸುದ್ದಿ

    ಶಾಕಿಂಗ್ ನ್ಯೂಸ್!ಯಶ್ ಹತ್ಯೆಗೆ ಸಂಚು ರೂಪಿಸಿದ್ದ ಕಿಲ್ಲರ್ಸ್ ಅರೆಸ್ಟ್!ಸುಪಾರಿ ಕೊಟ್ಟದ್ದು ಯಾರು ಗೊತ್ತಾ..?

    ಕನ್ನಡದ ಪ್ರಸಿದ್ದ ನಟರೊಬ್ಬರನ್ನ ಹತ್ಯೆ ಮಾಡಲು ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೇಷಾದ್ರಿಪುರಂನ ನಿತೇಶ್, ನಿತ್ಯಾನಂದ, ವಿಜಯನಗರದ ಮಧು ಹಾಗೂ ಪಿಜಿಹಳ್ಳಿಯ ಪೃಥ್ವಿ ಬಂಧಿತ ಆರೋಪಿಗಳು. ಸಿಸಿಬಿ ಪೊಲೀಸರು ಶೇಷಾದ್ರಿಪುರಂ ಠಾಣೆಯ ಬಿಡಿಎ ಕಚೇರಿ ಬಳಿ ಆರೋಪಿಗಳನ್ನ ಬಂಧಿಸಿದ್ದಾರೆ, ಮಾರ್ಚ್ 7 ರಂದು ಎಸಿಪಿ ಬಾಲರಾಜ್ ನೇತೃತ್ವದಲ್ಲಿ ಸಿಸಿಬಿ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದರು. ಬಂಧಿತ ನಾಲ್ವರ ಬಳಿಯೂ ಲಾಂಗು ಮತ್ತು ಡ್ರಾಗರ್ ಸೇರಿ ಮಾರಕಾಸ್ತ್ರಗಳು ಪತ್ತೆಯಾಗಿವೆ. ಸಿಸಿಬಿ ದಾಳಿ ವೇಳೆ ಐದು ಮಂದಿ…

  • inspirational, ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ

    ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….

  • inspirational, ಉಪಯುಕ್ತ ಮಾಹಿತಿ

    ಅಮ್ಮ ಸತ್ತು 1.5 ವರ್ಷ ನಂತರ ಭಾರತಕ್ಕೆ ಬಂದ ಮಗ ಇಂತಹ ಪರಿಸ್ಥಿತಿ ಯಾರಿಗೂ ಬೇಡ

    ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.