ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಭಾರತದ ದಕ್ಷಿಣ ಭಾಗದಲ್ಲಿ ನೆಲೆಸಿರುವವರಿಗೆ ವರಮಹಾಲಕ್ಷ್ಮಿ ವೃತವು ಹೆಚ್ಚು ಮಹತ್ವಪೂರ್ಣ ಮತ್ತು ವಿಶೇಷ ಎಂದೆನಿಸಿದೆ. ಈ ದಿನಂದು ಲಕ್ಷ್ಮೀಯನ್ನು ಪೂಜಿಸುವುದರಿಂದ ಆಕೆ ನಮ್ಮ ಮನದ ಇಷ್ಟಾರ್ಥಗಳನ್ನು ಪೂರೈಸುತ್ತಾರೆ ಎಂಬ ನಂಬಿಕೆ ಇರುವುದರಿಂದ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ.ವರಮಹಾಲಕ್ಷ್ಮಿ ಹಬ್ಬ ಆಚರಣೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು, ಆಡಂಬರವಾಗಿ ಅಲ್ಲದಿದ್ದರೂ ಚಿಕ್ಕದಾದ ಲಕ್ಷ್ಮಿ ದೇವಿಯನ್ನು ಕೂರಿಸಿ ಆಚರಣೆ ಮಾಡಲು ಜನರು ಮುಂದಾಗುತ್ತಿದ್ದಾರೆ.
ಮಾರುಕಟ್ಟೆಯಲ್ಲಿ ಅತೀ ಕಡಿಮೆ ಬೆಲೆಯಿಂದ ಹಿಡಿದು ದುಬಾರಿ ಬೆಲೆಯವರೆಗೂ ಲಕ್ಷ್ಮಿ ಕೂರಿಸುವುದಕ್ಕೆ ಬೇಕಾದ ಎಲ್ಲಾ ವಸ್ತುಗಳು ದೊರೆಯುವುದುಂಟು.ಲಕ್ಷ್ಮಿ ಕೂರಿಸುವುದು ಕೇವಲ ಇತರರು ನೋಡುವುದಕ್ಕಾಗಿ ಅಲ್ಲ. ನಮ್ಮ ಇಷ್ಟಾರ್ಥಗಳನ್ನು ಈಡೇರಿಸುವ ಸಲುವಾಗಿ. ರೀತಿನೀತಿ ನಿಯಮಗಳ ಮೂಲಕ ಲಕ್ಷ್ಮಿಪೂಜೆಯನ್ನು ಮಾಡಬೇಕು.
ಪ್ರತಿಯೊಂದು ಪೂಜೆಗೂ ಒಂದಲ್ಲ ಒಂದು ರೀತಿಯ ನಿಯಮ ಹಾಗೂ ಪದ್ಧತಿ ಇರುತ್ತದೆ. ಹಾಗೆಯೇ ಲಕ್ಷ್ಮಿ ಪೂಜೆಗೂ ನಿಯಮಗಳಿದ್ದು, ಅವುಗಳನ್ನು ಪಾಲಿಸಿ ಪೂಜೆ ಮಾಡಿದರೆ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ.
ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಉದ್ಭವಿಸುತ್ತಾಳೆ ಲಕ್ಷ್ಮೀ.
ಲಕ್ಷ್ಮಿ ಪೂಜೆ ಮಾಡುವ ವಿಧಿ ವಿಧಾನಗಳ ಮಾಹಿತಿಯನ್ನು ತಿಳಿಯಲು ಮುಂದೆ ಓದಿ:-
ಅಲಂಕಾರವಾದ ಬಳಿಕ ಪೂಜೆಗೆ ಯಾವುದೇ ವಿಘ್ನಗಳು ಬಾರದಿರುವುದಕ್ಕೆ, ನಮ್ಮ ಕಾರ್ಯವನ್ನು ಸಿದ್ಧಿ ಮಾಡು ಎಂದು ವಿಘ್ನೇಶ್ವರನ ಬಳಿ ಪ್ರಾರ್ಥಿಸಬೇಕು.
ಗಣಪತಿಗೆ ಪೂಜೆ ಮಾಡುವಾಗ ಅಷ್ಟನಾಮ ಸಹಸ್ರ ನಾಮಾವಳಿಯನ್ನು ಮಾಡಬೇಕು. ಹೇಳಲು ಸಾಧ್ಯವಾಗದಿದ್ದರೆ ಮಾರುಕಟ್ಟೆಯಲ್ಲಿ ಗಣಪತಿಯ ಸಹಸ್ರ ನಾಮಾವಳಿಯ ಸಿಡಿಗಳು ಲಭ್ಯವಿದೆ ಇದನ್ನು ಹಾಕಬಹುದು.
ಗಣಪತಿ ಪೂಜೆಯ ಬಳಿಕ ಲಕ್ಷ್ಮಿಗೆ ಇಷ್ಟವಾಗುವ ಹಣ್ಣು, ತಿಂಡಿ, ತಿನಿಸುಗಳನ್ನು ದೇವಿಯ ಮುಂದೆ ಇಡಬೇಕು. ಮತ್ತೊಂದು ತಟ್ಟೆಯಲ್ಲಿ ಚಿಕ್ಕ ಕಳಶ, ಅರಿಶಿನದ ಕೊಂಬು, ಮರದ ಜೊತೆ / ಬಾಗಿನ, ಹಸಿರು ಬಳೆ, ಬಳೆ ಬಿಚ್ಚೋಲೆ, ಕನ್ನಡಿ, ಕಪ್ಪು, ಬಾಚಣಿಗೆ, ರವಿಕೆ ಬಟ್ಟೆ (ಬಾಗಿನದ ಸಾಮಾನು ಎಂದರೆ ಇದೀಗ ಮಾರುಕಟ್ಟೆಯ ಅಂಗಡಿಗಳಲ್ಲಿ ಸಿಗುತ್ತದೆ) ಇಡಬೇಕು.
ಲಕ್ಷ್ಮಿ ಪೂಜೆ ಮಾಡುವಾಗ ಪೂಜೆಯ ತಟ್ಟೆಯೊಂದರಲ್ಲಿ 9ಸುತ್ತಿನ ದಾರ ಇಟ್ಟಿರಬೇಕು. ಪೂಜೆಯಾದ ಬಳಿಕ ಈ ದಾರವನ್ನು ಮನೆಯಲ್ಲಿರುವವರು ತಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು.
ಲಕ್ಷ್ಮಿ ಪೂಜೆ ಮಾಡಿದ ಬಳಿಕ ಸುಮಂಗಲಿಯರನ್ನು ಮನೆಗೆ ಕರೆದು ದೇವಿಯ ಕಥಾ ಶ್ರವಣ ಮಾಡಬೇಕು. ನಂತರ ಸುಮಂಗಲಿಯರಿಗೆ ಅರಿಶಿನ, ಕುಂಕುಮ ರವಿಕೆ ಬಟ್ಟೆ ಹಾಗೂ ವೀಳ್ಯದೆಲೆ, ಅಡಿಕೆ, ಬಾಳೆಹಣ್ಣು ಕೊಟ್ಟು ಅವರನ್ನು ಸಂಸತದಿಂದ ಕಳುಹಿಸಿಕೊಡಬೇಕು. ಪೂಜೆಗೆ ಬಂದವರಿಗೆಲ್ಲಾ ದೇವಿಯನ್ನು ಆರಾಧನೆ ಮಾಡಿ ಆರತಿ ಕೊಡಬೇಕು.
ದೇವಿಯ ವಿಸರ್ಜನೆ…
ವರಮಹಾಲಕ್ಷ್ಮಿ ದಿನ ಮುಗಿಯಿತು….ಪೂಜೆ ಮಾಡಿ ಆಯಿತೆಂದು ಹೇಗೆಂದರೆ ಹಾಗೆ ದೇವಿಯನ್ನು ತೆಗೆದುಬಿಡುವುದಲ್ಲ…ಪ್ರಾಣಪ್ರತಿಷ್ಠಾಪನೆ ಹಾಗೂ ಕಳಶವನ್ನು ಹೇಗೆ ಶ್ರದ್ಧಾ ಭಕ್ತಿ, ನೀತಿ, ನಿಯಮಗಳಿಂದ ಮಾಡುತ್ತೇವೆಯೋ ಹಾಗೆಯೇ ದೇವಿಯ ಕಳಶ ವಿಸರ್ಜನೆಯನ್ನೂ ಕ್ರಮಬದ್ಧವಾಗಿ, ಪದ್ಧತಿಯಿಂದ ಮಾಡಬೇಕು. ಸಾಮಾನ್ಯವಾಗಿ ವರಲಕ್ಷ್ಮಿಯನ್ನು ಒಂದು, ಮೂರು ಹಾಗೂ ಐದು ದಿನಗಳ ಕಾಲ ಮನೆಯಲ್ಲಿಟ್ಟು ಪೂಜಿಸುವುದುಂಟು.
ದೇವಿಯ ವಿಸರ್ಜನೆ ಮಾಡುವಾಗ ಸುಮಂಗಲಿಯರು ಸಂಕಲ್ಪ ಮುದ್ರೆಯಲ್ಲಿ ಕುಳಿತುಕೊಂಡು ಕೈಯ ನಡುಬೆರಳಿನಿಂದ ನೆಲದಲ್ಲಿ ಬರೆದಿರುವ ಚೌಕದ ಗೆರೆಯನ್ನು ಭಿನ್ನಗೊಳಿಸಬೇಕು. ಪ್ರತಿಷ್ಠಾಪನೆ ಉತ್ತಾರಾಭಿಮುಖವಾಗಿದ್ದರೆ ಉತ್ತರದ ಗೆರೆಯನ್ನು ಭಿನ್ನ ಮಾಡಬೇಕು. ಪೂರ್ವಾಭಿಮುಖವಾಗಿದ್ದರೆ ಪೂರ್ವದ ಗೆರೆಯನ್ನು ಭಿನ್ನಗೊಳಿಸಬೇಕು. ನಂತರ ನಿಧಾನವಾಗಿ ಕಳಶವನ್ನು ಅಲುಗಾಡಿಬೇಕು.
ಇದೆಲ್ಲಾ ಆದ ಮೇಲೆ ಒಳ್ಳೆಯ ಸಮಯ ನೋಡಿ ದೇವಿಯ ಬಳಿಯಿರುವ ಎಲ್ಲಾ ಸಾಮಾಗ್ರಿಗಳನ್ನು ನಿಧಾನವಾಗಿ ತೆಗೆಯಬೇಕು. ಕಲಶ ಪಾತ್ರೆಯಲ್ಲಿರುವ ಅಕ್ಕಿ ಹಾಗೂ ತೆಂಗಿನ ಕಾಯಿಯನ್ನು ಸಿಹಿ ಅಡುಗೆಗೆ ಉಪಯೋಗಿಸಿ ಮಕ್ಕಳಿಗೆ ಹಂಚಬೇಕು.
ಚೌಕ ಹಾಗೂ ರಂಗೋಲಿ ಬರೆದ ಪುಡಿ, ಹೂವು, ಎಲ್ಲಾ ವಸ್ತುವನ್ನು ತೆಗೆದು ಎಲ್ಲೆಂದರಲ್ಲಿ ಬಿಸಾಡದೆ ಗಲೀಜು ಮಾಡದೆ ನದಿ ದಡದಲ್ಲಿ ಇಡಬೇಕು. ನದಿಗೆ ಎಸೆಯಬಾರದು. ನದಿಗೆ ಎಸೆದರೆ ದೋಷ ಉಂಟಾಗುತ್ತದೆ. ಪೂಜೆ ಮಾಡುವುದು ಎಷ್ಟು ಮುಖ್ಯವೋ ಪೂಜೆ ನಂತರವಿರುವ ಪದ್ಧತಿಗಳನ್ನೂ ಅನುಸರಿಸುವುದೂ ಸಹ ಅಷ್ಟೇ ಮುಖ್ಯ.
ಈ ವರಮಹಾಲಕ್ಷ್ಮಿ ಹಬ್ಬದ ಮತ್ತೊಂದು ವಿಶೇಷತೆಯೇನೆಂದರೆ ಜಾತಿ, ಮತ, ಭೇದವಿಲ್ಲದೆ ಹಿಂದೂ ಧರ್ಮದ ಎಲ್ಲರೂ ಆ ತಾಯಿಯನ್ನು ವಿವಿಧ ರೀತಿಯಲ್ಲಿ ಪೂಜಿಸಿ ಅವಳನ್ನು ಆರಾಧಿಸುತ್ತಾರೆ.
ಧನ, ಧಾನ್ಯಗಳೆಲ್ಲವೂ ಪ್ರಾಪ್ತಿಯಾಗುವುದೆಂಬ ನಂಬಿಕೆಯೂ ಇದೆ. ಎಷ್ಟೇ ಈ ನಮ್ಮ ಆಧುನಿಕ, ಪಾಶ್ಚಿಮಾತ್ಯ ಜೀವನ ನಮ್ಮನ್ನು ಆವರಿಸದರೂ ನಾವು ನಮ್ಮ ಸಂಪ್ರದಾಯ, ಪದ್ದತಿಗಳನ್ನು ಇನ್ನೂ ಉಳಿಸಿಕೊಂಡು ಬಂದಿದ್ದೇವೆ ಎನ್ನುವುದಕ್ಕೆ ಈ ವರಮಹಾಲಕ್ಷ್ಮಿ ಹಬ್ಬದ ಆಚರಣೆಯೇ ಸಾಕ್ಷಿ. ಎಲ್ಲರೂ ಹಬ್ಬವನ್ನು ಸಡಗರ, ಸಂಭ್ರಮದೊಂದಿಗೆ ಆಚರಿಸಿ, ವಿಷ್ಣುವಿನ ಹೃದಯವಾಸಿ ಲಕ್ಷ್ಮಿದೇವಿಯನ್ನು ಪೂಜಿಸಿ, ಶ್ರದ್ಧೆ ಭಕ್ತಿಯೊಂದಿಗೆ ಅವಳನ್ನು ಆರಾಧಿಸಿ ಅವಳ ಕೃಪೆಗೆ ಪಾತ್ರರಾಗಿ.
ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು…
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…
ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.
‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ. ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು. ‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ…
ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…
ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…