ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಭಾರತದ ದಕ್ಷಿಣ ಭಾಗದಲ್ಲಿ ನೆಲೆಸಿರುವವರಿಗೆ ವರಮಹಾಲಕ್ಷ್ಮಿ ವೃತವು ಹೆಚ್ಚು ಮಹತ್ವಪೂರ್ಣ ಮತ್ತು ವಿಶೇಷ ಎಂದೆನಿಸಿದೆ. ಈ ದಿನಂದು ಲಕ್ಷ್ಮೀಯನ್ನು ಪೂಜಿಸುವುದರಿಂದ ಆಕೆ ನಮ್ಮ ಮನದ ಇಷ್ಟಾರ್ಥಗಳನ್ನು ಪೂರೈಸುತ್ತಾರೆ ಎಂಬ ನಂಬಿಕೆ ಇರುವುದರಿಂದ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ.ವರಮಹಾಲಕ್ಷ್ಮಿ ಹಬ್ಬ ಆಚರಣೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು, ಆಡಂಬರವಾಗಿ ಅಲ್ಲದಿದ್ದರೂ ಚಿಕ್ಕದಾದ ಲಕ್ಷ್ಮಿ ದೇವಿಯನ್ನು ಕೂರಿಸಿ ಆಚರಣೆ ಮಾಡಲು ಜನರು ಮುಂದಾಗುತ್ತಿದ್ದಾರೆ.
ಮಾರುಕಟ್ಟೆಯಲ್ಲಿ ಅತೀ ಕಡಿಮೆ ಬೆಲೆಯಿಂದ ಹಿಡಿದು ದುಬಾರಿ ಬೆಲೆಯವರೆಗೂ ಲಕ್ಷ್ಮಿ ಕೂರಿಸುವುದಕ್ಕೆ ಬೇಕಾದ ಎಲ್ಲಾ ವಸ್ತುಗಳು ದೊರೆಯುವುದುಂಟು.ಲಕ್ಷ್ಮಿ ಕೂರಿಸುವುದು ಕೇವಲ ಇತರರು ನೋಡುವುದಕ್ಕಾಗಿ ಅಲ್ಲ. ನಮ್ಮ ಇಷ್ಟಾರ್ಥಗಳನ್ನು ಈಡೇರಿಸುವ ಸಲುವಾಗಿ. ರೀತಿನೀತಿ ನಿಯಮಗಳ ಮೂಲಕ ಲಕ್ಷ್ಮಿಪೂಜೆಯನ್ನು ಮಾಡಬೇಕು.
ಪ್ರತಿಯೊಂದು ಪೂಜೆಗೂ ಒಂದಲ್ಲ ಒಂದು ರೀತಿಯ ನಿಯಮ ಹಾಗೂ ಪದ್ಧತಿ ಇರುತ್ತದೆ. ಹಾಗೆಯೇ ಲಕ್ಷ್ಮಿ ಪೂಜೆಗೂ ನಿಯಮಗಳಿದ್ದು, ಅವುಗಳನ್ನು ಪಾಲಿಸಿ ಪೂಜೆ ಮಾಡಿದರೆ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ.
ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಉದ್ಭವಿಸುತ್ತಾಳೆ ಲಕ್ಷ್ಮೀ.
ಲಕ್ಷ್ಮಿ ಪೂಜೆ ಮಾಡುವ ವಿಧಿ ವಿಧಾನಗಳ ಮಾಹಿತಿಯನ್ನು ತಿಳಿಯಲು ಮುಂದೆ ಓದಿ:-
ಅಲಂಕಾರವಾದ ಬಳಿಕ ಪೂಜೆಗೆ ಯಾವುದೇ ವಿಘ್ನಗಳು ಬಾರದಿರುವುದಕ್ಕೆ, ನಮ್ಮ ಕಾರ್ಯವನ್ನು ಸಿದ್ಧಿ ಮಾಡು ಎಂದು ವಿಘ್ನೇಶ್ವರನ ಬಳಿ ಪ್ರಾರ್ಥಿಸಬೇಕು.
ಗಣಪತಿಗೆ ಪೂಜೆ ಮಾಡುವಾಗ ಅಷ್ಟನಾಮ ಸಹಸ್ರ ನಾಮಾವಳಿಯನ್ನು ಮಾಡಬೇಕು. ಹೇಳಲು ಸಾಧ್ಯವಾಗದಿದ್ದರೆ ಮಾರುಕಟ್ಟೆಯಲ್ಲಿ ಗಣಪತಿಯ ಸಹಸ್ರ ನಾಮಾವಳಿಯ ಸಿಡಿಗಳು ಲಭ್ಯವಿದೆ ಇದನ್ನು ಹಾಕಬಹುದು.
ಗಣಪತಿ ಪೂಜೆಯ ಬಳಿಕ ಲಕ್ಷ್ಮಿಗೆ ಇಷ್ಟವಾಗುವ ಹಣ್ಣು, ತಿಂಡಿ, ತಿನಿಸುಗಳನ್ನು ದೇವಿಯ ಮುಂದೆ ಇಡಬೇಕು. ಮತ್ತೊಂದು ತಟ್ಟೆಯಲ್ಲಿ ಚಿಕ್ಕ ಕಳಶ, ಅರಿಶಿನದ ಕೊಂಬು, ಮರದ ಜೊತೆ / ಬಾಗಿನ, ಹಸಿರು ಬಳೆ, ಬಳೆ ಬಿಚ್ಚೋಲೆ, ಕನ್ನಡಿ, ಕಪ್ಪು, ಬಾಚಣಿಗೆ, ರವಿಕೆ ಬಟ್ಟೆ (ಬಾಗಿನದ ಸಾಮಾನು ಎಂದರೆ ಇದೀಗ ಮಾರುಕಟ್ಟೆಯ ಅಂಗಡಿಗಳಲ್ಲಿ ಸಿಗುತ್ತದೆ) ಇಡಬೇಕು.
ಲಕ್ಷ್ಮಿ ಪೂಜೆ ಮಾಡುವಾಗ ಪೂಜೆಯ ತಟ್ಟೆಯೊಂದರಲ್ಲಿ 9ಸುತ್ತಿನ ದಾರ ಇಟ್ಟಿರಬೇಕು. ಪೂಜೆಯಾದ ಬಳಿಕ ಈ ದಾರವನ್ನು ಮನೆಯಲ್ಲಿರುವವರು ತಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು.
ಲಕ್ಷ್ಮಿ ಪೂಜೆ ಮಾಡಿದ ಬಳಿಕ ಸುಮಂಗಲಿಯರನ್ನು ಮನೆಗೆ ಕರೆದು ದೇವಿಯ ಕಥಾ ಶ್ರವಣ ಮಾಡಬೇಕು. ನಂತರ ಸುಮಂಗಲಿಯರಿಗೆ ಅರಿಶಿನ, ಕುಂಕುಮ ರವಿಕೆ ಬಟ್ಟೆ ಹಾಗೂ ವೀಳ್ಯದೆಲೆ, ಅಡಿಕೆ, ಬಾಳೆಹಣ್ಣು ಕೊಟ್ಟು ಅವರನ್ನು ಸಂಸತದಿಂದ ಕಳುಹಿಸಿಕೊಡಬೇಕು. ಪೂಜೆಗೆ ಬಂದವರಿಗೆಲ್ಲಾ ದೇವಿಯನ್ನು ಆರಾಧನೆ ಮಾಡಿ ಆರತಿ ಕೊಡಬೇಕು.
ದೇವಿಯ ವಿಸರ್ಜನೆ…
ವರಮಹಾಲಕ್ಷ್ಮಿ ದಿನ ಮುಗಿಯಿತು….ಪೂಜೆ ಮಾಡಿ ಆಯಿತೆಂದು ಹೇಗೆಂದರೆ ಹಾಗೆ ದೇವಿಯನ್ನು ತೆಗೆದುಬಿಡುವುದಲ್ಲ…ಪ್ರಾಣಪ್ರತಿಷ್ಠಾಪನೆ ಹಾಗೂ ಕಳಶವನ್ನು ಹೇಗೆ ಶ್ರದ್ಧಾ ಭಕ್ತಿ, ನೀತಿ, ನಿಯಮಗಳಿಂದ ಮಾಡುತ್ತೇವೆಯೋ ಹಾಗೆಯೇ ದೇವಿಯ ಕಳಶ ವಿಸರ್ಜನೆಯನ್ನೂ ಕ್ರಮಬದ್ಧವಾಗಿ, ಪದ್ಧತಿಯಿಂದ ಮಾಡಬೇಕು. ಸಾಮಾನ್ಯವಾಗಿ ವರಲಕ್ಷ್ಮಿಯನ್ನು ಒಂದು, ಮೂರು ಹಾಗೂ ಐದು ದಿನಗಳ ಕಾಲ ಮನೆಯಲ್ಲಿಟ್ಟು ಪೂಜಿಸುವುದುಂಟು.
ದೇವಿಯ ವಿಸರ್ಜನೆ ಮಾಡುವಾಗ ಸುಮಂಗಲಿಯರು ಸಂಕಲ್ಪ ಮುದ್ರೆಯಲ್ಲಿ ಕುಳಿತುಕೊಂಡು ಕೈಯ ನಡುಬೆರಳಿನಿಂದ ನೆಲದಲ್ಲಿ ಬರೆದಿರುವ ಚೌಕದ ಗೆರೆಯನ್ನು ಭಿನ್ನಗೊಳಿಸಬೇಕು. ಪ್ರತಿಷ್ಠಾಪನೆ ಉತ್ತಾರಾಭಿಮುಖವಾಗಿದ್ದರೆ ಉತ್ತರದ ಗೆರೆಯನ್ನು ಭಿನ್ನ ಮಾಡಬೇಕು. ಪೂರ್ವಾಭಿಮುಖವಾಗಿದ್ದರೆ ಪೂರ್ವದ ಗೆರೆಯನ್ನು ಭಿನ್ನಗೊಳಿಸಬೇಕು. ನಂತರ ನಿಧಾನವಾಗಿ ಕಳಶವನ್ನು ಅಲುಗಾಡಿಬೇಕು.
ಇದೆಲ್ಲಾ ಆದ ಮೇಲೆ ಒಳ್ಳೆಯ ಸಮಯ ನೋಡಿ ದೇವಿಯ ಬಳಿಯಿರುವ ಎಲ್ಲಾ ಸಾಮಾಗ್ರಿಗಳನ್ನು ನಿಧಾನವಾಗಿ ತೆಗೆಯಬೇಕು. ಕಲಶ ಪಾತ್ರೆಯಲ್ಲಿರುವ ಅಕ್ಕಿ ಹಾಗೂ ತೆಂಗಿನ ಕಾಯಿಯನ್ನು ಸಿಹಿ ಅಡುಗೆಗೆ ಉಪಯೋಗಿಸಿ ಮಕ್ಕಳಿಗೆ ಹಂಚಬೇಕು.
ಚೌಕ ಹಾಗೂ ರಂಗೋಲಿ ಬರೆದ ಪುಡಿ, ಹೂವು, ಎಲ್ಲಾ ವಸ್ತುವನ್ನು ತೆಗೆದು ಎಲ್ಲೆಂದರಲ್ಲಿ ಬಿಸಾಡದೆ ಗಲೀಜು ಮಾಡದೆ ನದಿ ದಡದಲ್ಲಿ ಇಡಬೇಕು. ನದಿಗೆ ಎಸೆಯಬಾರದು. ನದಿಗೆ ಎಸೆದರೆ ದೋಷ ಉಂಟಾಗುತ್ತದೆ. ಪೂಜೆ ಮಾಡುವುದು ಎಷ್ಟು ಮುಖ್ಯವೋ ಪೂಜೆ ನಂತರವಿರುವ ಪದ್ಧತಿಗಳನ್ನೂ ಅನುಸರಿಸುವುದೂ ಸಹ ಅಷ್ಟೇ ಮುಖ್ಯ.
ಈ ವರಮಹಾಲಕ್ಷ್ಮಿ ಹಬ್ಬದ ಮತ್ತೊಂದು ವಿಶೇಷತೆಯೇನೆಂದರೆ ಜಾತಿ, ಮತ, ಭೇದವಿಲ್ಲದೆ ಹಿಂದೂ ಧರ್ಮದ ಎಲ್ಲರೂ ಆ ತಾಯಿಯನ್ನು ವಿವಿಧ ರೀತಿಯಲ್ಲಿ ಪೂಜಿಸಿ ಅವಳನ್ನು ಆರಾಧಿಸುತ್ತಾರೆ.
ಧನ, ಧಾನ್ಯಗಳೆಲ್ಲವೂ ಪ್ರಾಪ್ತಿಯಾಗುವುದೆಂಬ ನಂಬಿಕೆಯೂ ಇದೆ. ಎಷ್ಟೇ ಈ ನಮ್ಮ ಆಧುನಿಕ, ಪಾಶ್ಚಿಮಾತ್ಯ ಜೀವನ ನಮ್ಮನ್ನು ಆವರಿಸದರೂ ನಾವು ನಮ್ಮ ಸಂಪ್ರದಾಯ, ಪದ್ದತಿಗಳನ್ನು ಇನ್ನೂ ಉಳಿಸಿಕೊಂಡು ಬಂದಿದ್ದೇವೆ ಎನ್ನುವುದಕ್ಕೆ ಈ ವರಮಹಾಲಕ್ಷ್ಮಿ ಹಬ್ಬದ ಆಚರಣೆಯೇ ಸಾಕ್ಷಿ. ಎಲ್ಲರೂ ಹಬ್ಬವನ್ನು ಸಡಗರ, ಸಂಭ್ರಮದೊಂದಿಗೆ ಆಚರಿಸಿ, ವಿಷ್ಣುವಿನ ಹೃದಯವಾಸಿ ಲಕ್ಷ್ಮಿದೇವಿಯನ್ನು ಪೂಜಿಸಿ, ಶ್ರದ್ಧೆ ಭಕ್ತಿಯೊಂದಿಗೆ ಅವಳನ್ನು ಆರಾಧಿಸಿ ಅವಳ ಕೃಪೆಗೆ ಪಾತ್ರರಾಗಿ.
ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು…
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ 1 ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ವಶೀಕರಣವೆಂದರೆ ಒಬ್ಬ ವ್ಯಕ್ತಿ ನಮ್ಮನ್ನು ಇಷ್ಟಪಡುವ ರೀತಿಯಲ್ಲಿ ,…
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಸಾರ್ವಭೌಮ ಚಿತ್ರದ ಟಿ ಶರ್ಟ್
ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ
ಟೀಂ ಇಂಡಿಯಾ ಮಹಿಳಾ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಸದ್ಯದಲ್ಲೇ ಹಸೆಮಣೆ ಏರುತ್ತಿದ್ದಾರೆ.ಈ ವಿಚಾರವನ್ನು ಸ್ವತಃ ವೇದಾ ಅವರೇ ರಿವೀಲ್ ಮಾಡಿದ್ದಾರೆ. ಕನ್ನಡ ನಾಡಿನ ವೇದಾ ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರಿನವರಾಗಿದ್ದು ತಾವು ವಿವಾಹವಾಗುತ್ತಿರುವ ಲಲಿತ್ ಚೌಧರಿ ಎಂಬ ಯುವಕನ ಫೋಟೋವನ್ನು ಪೋಸ್ಟ್ ಮಾಡಿದ್ದರು. ವೇದಾ ಅವ್ರ ಪೋಸ್ಟ್ ಅನುಸಾರ ಅವರು ಲಲಿತ್ ಚೌಧರಿ ಎಂಬ ಯುವಕನನ್ನು ವರಿಸಲಿದ್ದಾರೆ. ಆದರೆ ಆ ಯುವಕನ ಕುರಿತಂತೆಯಾಗಲಿ, ವಿವಾಹದ ದಿನಾಂಕ ಸ್ಥಳದ ಮಾಹಿತಿಯಾಗಲಿ ಇನ್ನೂ ಲಭ್ಯವಾಗಿಲ್ಲ. ಶೀಘ್ರವೇ ಈ…
ಕೈಲಾಸ ಪರ್ವತವು ಟಿಬೆಟ್ ನ ಹಿಮಾಲಯ ಶ್ರೇಣಿಯ ಗಾಂಗ್ ಡೈಸ್ ಸರಣಿಯ ಒಂದು ಶಿಖರ. ಈ ಪರ್ವತಪ್ರದೇಶವು ಏಷ್ಯಾದ ಹಲವು ಮಹಾನದಿಗಳಿಗೆ ಮೂಲಸ್ಥಾನವಾಗಿದೆ. ಸಿಂಧೂ ನದಿ , ಸಟ್ಲೆಜ್ ನದಿ ಮತ್ತು ಬ್ರಹ್ಮಪುತ್ರ ಈ ಆಸುಪಾಸಿನಲ್ಲಿಯೇ ಉಗಮಿಸುತ್ತವೆ. ಕೈಲಾಸಪರ್ವತವು ಹಿಂದೂ ಬೌದ್ಧ, ಜೈನ ಮತ್ತು ಬಾನ್ಧರ್ಮೀಯರಿಗೆ ಪವಿತ್ರ ತಾಣವಾಗಿದೆ. ಹಿಂದೂ ನಂಬಿಕೆಗಳ ಪ್ರಕಾರ ಕೈಲಾಸಪರ್ವತವು ಪರಶಿವನ ನೆಲೆ. ಕೈಲಾಸಪರ್ವತವು ಟಿಬೆಟ್ ನಲ್ಲಿ ಮಾನಸಸರೋವರ ಮತ್ತು ರಾಕ್ಷಸ್ ತಾಲ್ ಗಳ ಮಗ್ಗುಲಲ್ಲಿದೆ. ಕೈಲಾಸಪರ್ವತದ ಆರೋಹಣವನ್ನು ಮಾಡಿದುದರ ಬಗೆಗೆ ಯಾವುದೇ ದಾಖಲೆಗಳಿಲ್ಲ. ಹಿಂದೂ ಮತ್ತು ಬೌದ್ಧ ಧರ್ಮೀಯರು ಕೈಲಾಸಪರ್ವತವನ್ನು ಅತಿ ಪವಿತ್ರ ತಾಣವಾಗಿ ಪರಿಗಣಿಸುವುದರಿಂದಾಗಿ ಈ…
ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…