ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.
ಭಾರತದ ದಕ್ಷಿಣ ಭಾಗದಲ್ಲಿ ನೆಲೆಸಿರುವವರಿಗೆ ವರಮಹಾಲಕ್ಷ್ಮಿ ವೃತವು ಹೆಚ್ಚು ಮಹತ್ವಪೂರ್ಣ ಮತ್ತು ವಿಶೇಷ ಎಂದೆನಿಸಿದೆ. ಈ ದಿನಂದು ಲಕ್ಷ್ಮೀಯನ್ನು ಪೂಜಿಸುವುದರಿಂದ ಆಕೆ ನಮ್ಮ ಮನದ ಇಷ್ಟಾರ್ಥಗಳನ್ನು ಪೂರೈಸುತ್ತಾರೆ ಎಂಬ ನಂಬಿಕೆ ಇರುವುದರಿಂದ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧೆ ಭಕ್ತಿಯಿಂದ ಆಚರಿಸುತ್ತಾರೆ.ವರಮಹಾಲಕ್ಷ್ಮಿ ಹಬ್ಬ ಆಚರಣೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು, ಆಡಂಬರವಾಗಿ ಅಲ್ಲದಿದ್ದರೂ ಚಿಕ್ಕದಾದ ಲಕ್ಷ್ಮಿ ದೇವಿಯನ್ನು ಕೂರಿಸಿ ಆಚರಣೆ ಮಾಡಲು ಜನರು ಮುಂದಾಗುತ್ತಿದ್ದಾರೆ.
ಮಾರುಕಟ್ಟೆಯಲ್ಲಿ ಅತೀ ಕಡಿಮೆ ಬೆಲೆಯಿಂದ ಹಿಡಿದು ದುಬಾರಿ ಬೆಲೆಯವರೆಗೂ ಲಕ್ಷ್ಮಿ ಕೂರಿಸುವುದಕ್ಕೆ ಬೇಕಾದ ಎಲ್ಲಾ ವಸ್ತುಗಳು ದೊರೆಯುವುದುಂಟು.ಲಕ್ಷ್ಮಿ ಕೂರಿಸುವುದು ಕೇವಲ ಇತರರು ನೋಡುವುದಕ್ಕಾಗಿ ಅಲ್ಲ. ನಮ್ಮ ಇಷ್ಟಾರ್ಥಗಳನ್ನು ಈಡೇರಿಸುವ ಸಲುವಾಗಿ. ರೀತಿನೀತಿ ನಿಯಮಗಳ ಮೂಲಕ ಲಕ್ಷ್ಮಿಪೂಜೆಯನ್ನು ಮಾಡಬೇಕು.
ಪ್ರತಿಯೊಂದು ಪೂಜೆಗೂ ಒಂದಲ್ಲ ಒಂದು ರೀತಿಯ ನಿಯಮ ಹಾಗೂ ಪದ್ಧತಿ ಇರುತ್ತದೆ. ಹಾಗೆಯೇ ಲಕ್ಷ್ಮಿ ಪೂಜೆಗೂ ನಿಯಮಗಳಿದ್ದು, ಅವುಗಳನ್ನು ಪಾಲಿಸಿ ಪೂಜೆ ಮಾಡಿದರೆ ಇಷ್ಟಾರ್ಥಗಳನ್ನು ಪೂರೈಸಿಕೊಳ್ಳಬಹುದು ಎಂದು ಹಿರಿಯರು ಹೇಳುತ್ತಾರೆ.
ರಾಕ್ಷಸರು ಹಾಗೂ ದೇವತೆಗಳು ಅಮೃತ ಪಡೆಯುವುದಕ್ಕಾಗಿ ವಾಸುಕಿಯ ಸಹಾಯದೊಂದಿಗೆ ಮಂದರ ಪರ್ವತವನ್ನು ಕಡೆಯುತ್ತಿರುವಾಗ ಕ್ಷೀರಸಾಗರದಲ್ಲಿ ಪರಿಶುದ್ಧವಾಗಿ ಶ್ವೇತವರ್ಣದಲ್ಲಿ ಉದ್ಭವಿಸುತ್ತಾಳೆ ಲಕ್ಷ್ಮೀ.
ಲಕ್ಷ್ಮಿ ಪೂಜೆ ಮಾಡುವ ವಿಧಿ ವಿಧಾನಗಳ ಮಾಹಿತಿಯನ್ನು ತಿಳಿಯಲು ಮುಂದೆ ಓದಿ:-
ಅಲಂಕಾರವಾದ ಬಳಿಕ ಪೂಜೆಗೆ ಯಾವುದೇ ವಿಘ್ನಗಳು ಬಾರದಿರುವುದಕ್ಕೆ, ನಮ್ಮ ಕಾರ್ಯವನ್ನು ಸಿದ್ಧಿ ಮಾಡು ಎಂದು ವಿಘ್ನೇಶ್ವರನ ಬಳಿ ಪ್ರಾರ್ಥಿಸಬೇಕು.
ಗಣಪತಿಗೆ ಪೂಜೆ ಮಾಡುವಾಗ ಅಷ್ಟನಾಮ ಸಹಸ್ರ ನಾಮಾವಳಿಯನ್ನು ಮಾಡಬೇಕು. ಹೇಳಲು ಸಾಧ್ಯವಾಗದಿದ್ದರೆ ಮಾರುಕಟ್ಟೆಯಲ್ಲಿ ಗಣಪತಿಯ ಸಹಸ್ರ ನಾಮಾವಳಿಯ ಸಿಡಿಗಳು ಲಭ್ಯವಿದೆ ಇದನ್ನು ಹಾಕಬಹುದು.
ಗಣಪತಿ ಪೂಜೆಯ ಬಳಿಕ ಲಕ್ಷ್ಮಿಗೆ ಇಷ್ಟವಾಗುವ ಹಣ್ಣು, ತಿಂಡಿ, ತಿನಿಸುಗಳನ್ನು ದೇವಿಯ ಮುಂದೆ ಇಡಬೇಕು. ಮತ್ತೊಂದು ತಟ್ಟೆಯಲ್ಲಿ ಚಿಕ್ಕ ಕಳಶ, ಅರಿಶಿನದ ಕೊಂಬು, ಮರದ ಜೊತೆ / ಬಾಗಿನ, ಹಸಿರು ಬಳೆ, ಬಳೆ ಬಿಚ್ಚೋಲೆ, ಕನ್ನಡಿ, ಕಪ್ಪು, ಬಾಚಣಿಗೆ, ರವಿಕೆ ಬಟ್ಟೆ (ಬಾಗಿನದ ಸಾಮಾನು ಎಂದರೆ ಇದೀಗ ಮಾರುಕಟ್ಟೆಯ ಅಂಗಡಿಗಳಲ್ಲಿ ಸಿಗುತ್ತದೆ) ಇಡಬೇಕು.
ಲಕ್ಷ್ಮಿ ಪೂಜೆ ಮಾಡುವಾಗ ಪೂಜೆಯ ತಟ್ಟೆಯೊಂದರಲ್ಲಿ 9ಸುತ್ತಿನ ದಾರ ಇಟ್ಟಿರಬೇಕು. ಪೂಜೆಯಾದ ಬಳಿಕ ಈ ದಾರವನ್ನು ಮನೆಯಲ್ಲಿರುವವರು ತಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು.
ಲಕ್ಷ್ಮಿ ಪೂಜೆ ಮಾಡಿದ ಬಳಿಕ ಸುಮಂಗಲಿಯರನ್ನು ಮನೆಗೆ ಕರೆದು ದೇವಿಯ ಕಥಾ ಶ್ರವಣ ಮಾಡಬೇಕು. ನಂತರ ಸುಮಂಗಲಿಯರಿಗೆ ಅರಿಶಿನ, ಕುಂಕುಮ ರವಿಕೆ ಬಟ್ಟೆ ಹಾಗೂ ವೀಳ್ಯದೆಲೆ, ಅಡಿಕೆ, ಬಾಳೆಹಣ್ಣು ಕೊಟ್ಟು ಅವರನ್ನು ಸಂಸತದಿಂದ ಕಳುಹಿಸಿಕೊಡಬೇಕು. ಪೂಜೆಗೆ ಬಂದವರಿಗೆಲ್ಲಾ ದೇವಿಯನ್ನು ಆರಾಧನೆ ಮಾಡಿ ಆರತಿ ಕೊಡಬೇಕು.
ದೇವಿಯ ವಿಸರ್ಜನೆ…
ವರಮಹಾಲಕ್ಷ್ಮಿ ದಿನ ಮುಗಿಯಿತು….ಪೂಜೆ ಮಾಡಿ ಆಯಿತೆಂದು ಹೇಗೆಂದರೆ ಹಾಗೆ ದೇವಿಯನ್ನು ತೆಗೆದುಬಿಡುವುದಲ್ಲ…ಪ್ರಾಣಪ್ರತಿಷ್ಠಾಪನೆ ಹಾಗೂ ಕಳಶವನ್ನು ಹೇಗೆ ಶ್ರದ್ಧಾ ಭಕ್ತಿ, ನೀತಿ, ನಿಯಮಗಳಿಂದ ಮಾಡುತ್ತೇವೆಯೋ ಹಾಗೆಯೇ ದೇವಿಯ ಕಳಶ ವಿಸರ್ಜನೆಯನ್ನೂ ಕ್ರಮಬದ್ಧವಾಗಿ, ಪದ್ಧತಿಯಿಂದ ಮಾಡಬೇಕು. ಸಾಮಾನ್ಯವಾಗಿ ವರಲಕ್ಷ್ಮಿಯನ್ನು ಒಂದು, ಮೂರು ಹಾಗೂ ಐದು ದಿನಗಳ ಕಾಲ ಮನೆಯಲ್ಲಿಟ್ಟು ಪೂಜಿಸುವುದುಂಟು.
ದೇವಿಯ ವಿಸರ್ಜನೆ ಮಾಡುವಾಗ ಸುಮಂಗಲಿಯರು ಸಂಕಲ್ಪ ಮುದ್ರೆಯಲ್ಲಿ ಕುಳಿತುಕೊಂಡು ಕೈಯ ನಡುಬೆರಳಿನಿಂದ ನೆಲದಲ್ಲಿ ಬರೆದಿರುವ ಚೌಕದ ಗೆರೆಯನ್ನು ಭಿನ್ನಗೊಳಿಸಬೇಕು. ಪ್ರತಿಷ್ಠಾಪನೆ ಉತ್ತಾರಾಭಿಮುಖವಾಗಿದ್ದರೆ ಉತ್ತರದ ಗೆರೆಯನ್ನು ಭಿನ್ನ ಮಾಡಬೇಕು. ಪೂರ್ವಾಭಿಮುಖವಾಗಿದ್ದರೆ ಪೂರ್ವದ ಗೆರೆಯನ್ನು ಭಿನ್ನಗೊಳಿಸಬೇಕು. ನಂತರ ನಿಧಾನವಾಗಿ ಕಳಶವನ್ನು ಅಲುಗಾಡಿಬೇಕು.
ಇದೆಲ್ಲಾ ಆದ ಮೇಲೆ ಒಳ್ಳೆಯ ಸಮಯ ನೋಡಿ ದೇವಿಯ ಬಳಿಯಿರುವ ಎಲ್ಲಾ ಸಾಮಾಗ್ರಿಗಳನ್ನು ನಿಧಾನವಾಗಿ ತೆಗೆಯಬೇಕು. ಕಲಶ ಪಾತ್ರೆಯಲ್ಲಿರುವ ಅಕ್ಕಿ ಹಾಗೂ ತೆಂಗಿನ ಕಾಯಿಯನ್ನು ಸಿಹಿ ಅಡುಗೆಗೆ ಉಪಯೋಗಿಸಿ ಮಕ್ಕಳಿಗೆ ಹಂಚಬೇಕು.
ಚೌಕ ಹಾಗೂ ರಂಗೋಲಿ ಬರೆದ ಪುಡಿ, ಹೂವು, ಎಲ್ಲಾ ವಸ್ತುವನ್ನು ತೆಗೆದು ಎಲ್ಲೆಂದರಲ್ಲಿ ಬಿಸಾಡದೆ ಗಲೀಜು ಮಾಡದೆ ನದಿ ದಡದಲ್ಲಿ ಇಡಬೇಕು. ನದಿಗೆ ಎಸೆಯಬಾರದು. ನದಿಗೆ ಎಸೆದರೆ ದೋಷ ಉಂಟಾಗುತ್ತದೆ. ಪೂಜೆ ಮಾಡುವುದು ಎಷ್ಟು ಮುಖ್ಯವೋ ಪೂಜೆ ನಂತರವಿರುವ ಪದ್ಧತಿಗಳನ್ನೂ ಅನುಸರಿಸುವುದೂ ಸಹ ಅಷ್ಟೇ ಮುಖ್ಯ.
ಈ ವರಮಹಾಲಕ್ಷ್ಮಿ ಹಬ್ಬದ ಮತ್ತೊಂದು ವಿಶೇಷತೆಯೇನೆಂದರೆ ಜಾತಿ, ಮತ, ಭೇದವಿಲ್ಲದೆ ಹಿಂದೂ ಧರ್ಮದ ಎಲ್ಲರೂ ಆ ತಾಯಿಯನ್ನು ವಿವಿಧ ರೀತಿಯಲ್ಲಿ ಪೂಜಿಸಿ ಅವಳನ್ನು ಆರಾಧಿಸುತ್ತಾರೆ.
ಧನ, ಧಾನ್ಯಗಳೆಲ್ಲವೂ ಪ್ರಾಪ್ತಿಯಾಗುವುದೆಂಬ ನಂಬಿಕೆಯೂ ಇದೆ. ಎಷ್ಟೇ ಈ ನಮ್ಮ ಆಧುನಿಕ, ಪಾಶ್ಚಿಮಾತ್ಯ ಜೀವನ ನಮ್ಮನ್ನು ಆವರಿಸದರೂ ನಾವು ನಮ್ಮ ಸಂಪ್ರದಾಯ, ಪದ್ದತಿಗಳನ್ನು ಇನ್ನೂ ಉಳಿಸಿಕೊಂಡು ಬಂದಿದ್ದೇವೆ ಎನ್ನುವುದಕ್ಕೆ ಈ ವರಮಹಾಲಕ್ಷ್ಮಿ ಹಬ್ಬದ ಆಚರಣೆಯೇ ಸಾಕ್ಷಿ. ಎಲ್ಲರೂ ಹಬ್ಬವನ್ನು ಸಡಗರ, ಸಂಭ್ರಮದೊಂದಿಗೆ ಆಚರಿಸಿ, ವಿಷ್ಣುವಿನ ಹೃದಯವಾಸಿ ಲಕ್ಷ್ಮಿದೇವಿಯನ್ನು ಪೂಜಿಸಿ, ಶ್ರದ್ಧೆ ಭಕ್ತಿಯೊಂದಿಗೆ ಅವಳನ್ನು ಆರಾಧಿಸಿ ಅವಳ ಕೃಪೆಗೆ ಪಾತ್ರರಾಗಿ.
ಎಲ್ಲರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು…
ನಮಸ್ತೇಸ್ತು ಮಹಾಮಾಯೆ ಶ್ರೀಪೀಠೆ ಸುರ ಪೂಜಿತೆ|
ಶಂಖಚಕ್ರ ಗಧಾಹಸ್ತೆ ಮಹಾಲಕ್ಷ್ಮಿ ನಮೋಸ್ತುತೆ||
ಮೂಲ:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…
ಪ್ರಸ್ತುತ ಬಹುತೇಕ ಅಗತ್ಯ ಕೆಲಸಗಳು ಸ್ಮಾರ್ಟ್ಫೋನ್ ಡಿವೈಸ್ ಮೂಲಕವೇ ಮಾಡಿಬಿಡಬಹುದಾಗಿದ್ದು, ಅದಕ್ಕೆ ಸಾಮಾಜಿಕ ಜಾಲತಾಣಗಳು ಮತ್ತು ಕೆಲವು ಆಪ್ಸ್ಗಳು ಅತ್ಯುತ್ತಮ ಸಾಥ್ ನೀಡುತ್ತಿವೆ. ಈ ನಿಟ್ಟಿನಲ್ಲಿ ಇದೀಗ ಜನಪ್ರಿಯ ಟಾಟಾಸ್ಕೈ ಡಿಟಿಎಚ್ ಸಂಸ್ಥೆಯು ವಾಟ್ಸಪ್ ಪ್ಲಾಟ್ಫಾರ್ಮ್ ಬಳಸಿಕಂಡು ತನ್ನ ಗ್ರಾಹಕರಿಗೆ ಅನುಕೂಲಕರ ಸೇವೆ ನೀಡಲು ಮುಂದಾಗಿದೆ , ಹೌದು, ಟಾಟಾಸ್ಕೈ ಸಂಸ್ಥೆಯು ಈಗ ವಾಟ್ಸಪ್ ಬ್ಯುಸಿನೆಸ್ ಅಕೌಂಟ್ ಅನ್ನು ತೆರೆದಿದ್ದು, ಈ ಮೂಲಕ ಗ್ರಾಹಕರಿಗೆ ತ್ವರಿತವಾಗಿ ಅಗತ್ಯ ಸೇವೆ ನೀಡಲು ಸಜ್ಜಾಗಿದೆ. ಗ್ರಾಹಕರು ತಮ್ಮ ಟಾಟಾಸ್ಕೈ ಅಕೌಂಟ್ನ…
ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.
ಉಪೇಂದ್ರ ಅಭಿಮಾನಿಗಳಿಗೆ ಸಿಹಿ ಸುದ್ದಿ. ಅವರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದರು. ಈಗ ಆ ಕಾಲ ಮುಗಿದಿದೆ.
ಹಿಂದೂ ಧರ್ಮದ ಹಲವಾರು ಆಚರಣೆಗಳು, ಸಂಪ್ರದಾಯಗಳನ್ನು ಮೂಢನಂಬಿಕೆಯೆಂದು ಜರಿಯುವವರು ಹಲವು. ಆದರೆ, ವಿಜ್ಞಾನ ಮುಂದುವರಿದಂತೆಲ್ಲ ಈ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆ ದೊರೆಯುತ್ತ ಹೋಗುತ್ತಿದೆ.ಈ ವೈಜ್ಞಾನಿಕ ಜ್ಞಾನವನ್ನೇ ಸಂಪ್ರದಾಯದ ಹೆಸರಿನಲ್ಲಿ ತಲೆಮಾರಿನಿಂದ ತಲೆಮಾರಿಗೆ ಹರಿಯಬಿಡಲಾಗಿದೆ ಸಾಮಾನ್ಯ ಜನರಿಗೆ ಈ ಆಚರಣೆಗಳ ಹಿಂದಿನ ವಿಜ್ಞಾನದ ಅರಿವು ಇಲ್ಲವಾದರೂ, ಅವರಿದನ್ನು ನಂಬಿಕೆಯ ತಳಹದಿ ಮೇಲೆ ಸಾವಿರಾರು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅಂಥ ಕೆಲವು ಆಚರಣೆಗಳು ಹಾಗೂ ಸಂಪ್ರದಾಯಗಳ ಹಿಂದಿನ ವೈಜ್ಞಾನಿಕ ವಿವರಣೆಗಳನ್ನಿಲ್ಲಿ ಕೊಡಲಾಗಿದೆ. ನಾಣ್ಯಗಳನ್ನು ನದಿಗೆಸೆಯುವುದು : ನಾಣ್ಯಗಳನ್ನುದೇವಸ್ಥಾನದ ಸಮೀಪದ…