News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ವಿಜ್ಞಾನಿಯಾಗಿ ಆಯ್ಕೆಆಗಿದ್ದ ಇವರು, ಆಧ್ಯಾತ್ಮಿಕ ಗುರುಗಳಾಗಿದ್ದರ ಹಿಂದೆ ಇದೆ ಒಂದು ರೋಚಕ ಕತೆ..!ತಿಳಿಯಲು ಈ ಲೇಖನ ಓದಿ…

10144

ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.

ಶ್ರೀಗಳ ಜನನ ಮತ್ತು ಬಾಲ್ಯ:-

ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ಊರು ಗುಬ್ಬಿ ತಾಲ್ಲೂಕು ಮಾವಿನಹಳ್ಳಿ, ಸಮೀಪದ ಚೀರನಹಳ್ಳಿಯಲ್ಲಿ 20 ಜುಲೈ 1969ರಲ್ಲಿ ಜನಿಸಿದರು. ಅವರ ಪೂರ್ವಾಶ್ರಮದ ಹೆಸರು ಸಿ.ಎನ್.ನಾಗರಾಜ್. ತಂದೆ ನರಸೇಗೌಡ, ಈಗ ಅವರಿಲ್ಲ. ತಾಯಿ ನಂಜಮ್ಮ ಇದ್ದಾರೆ. ಆರು ಮಕ್ಕಳಲ್ಲಿ ನಾಗರಾಜ್ ನಾಲ್ಕನೇಯವರು. ಕುಟುಂಬದಲ್ಲಿ ಕಿತ್ತು ತಿನ್ನುವ ಬಡತನ, ಕೂಲಿ ಮಾಡಿ ಜೀವನ ಸಾಗಿಸುವ ಪರಿಸ್ಥಿತಿ. ಈಗಲೂ ಕುಟುಂಬದವರು ಕೂಲಿ ಮಾಡಿಯೇ ಜೀವನದ ನೊಗ ಹೊತ್ತಿದ್ದಾರೆ. ಸನ್ಯಾಸ ಸ್ವೀಕರಿಸಿದ ನಂತರ ಒಮ್ಮೆಯೂ ಊರಿನತ್ತ ಬಂದಿಲ್ಲ. ತಂದೆ ತೀರಿಕೊಂಡಾಗಲೂ ಊರಿನತ್ತ ಮುಖ ಮಾಡಿಲ್ಲ.

ಶ್ರೀಗಳ ವಿದ್ಯಾಭ್ಯಾಸ:-

ಕೂಲಿ ಮಾಡುತ್ತಲೇ ಪ್ರಾಥಮಿಕ ಶಿಕ್ಷಣ- ಮಾವಿನಹಳ್ಳಿ ಸರ್ಕಾರಿ ಶಾಲೆಯಲ್ಲಿ, ಪ್ರೌ ಶಿಕ್ಷಣವನ್ನು ಮಾವಿನಹಳ್ಳಿ ಪ್ರಗತಿಪರ ವಿದ್ಯಾವರ್ಧಕ ಶಾಲೆಯಲ್ಲಿ ಪೂರ್ಣಗೊಳಿಸಿದರು.`ಪ್ರೌಢಶಾಲೆ ತರಗತಿಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಪಡೆದಿರುವ ಅಂಕಗಳ ದಾಖಲೆಯನ್ನು ಇಲ್ಲಿಯವರೆಗೂ ಈ ಶಾಲೆಯಲ್ಲಿ ಯಾರೂ ಮುರಿದಿಲ್ಲ’ ಎನ್ನುತ್ತದೆ ಶಾಲೆಯ ಆಡಳಿತ ಮಂಡಳಿ.

ಬಡತನದ ಕಾರಣ ಡಿಪ್ಲೊಮಾ ಪಾಲಿಟೆಕ್ನಿಕ್ ಅಧ್ಯಯನವನ್ನು ಒಂದು ವರ್ಷ ಮೊಟಕುಗೊಳಿಸಿದ್ದರು. ಆಗ ಅವರ ತಾತ, ಗುಬ್ಬಿ ಮಾಜಿ ಶಾಸಕ ಎನ್.ವೀರಣ್ಣಗೌಡರ ಬಳಿ ಕರೆದುಕೊಂಡು ಬಂದರು. ಅವರ ನೆರವಿನಿಂದ ಶಿಕ್ಷಣ ಮುಂದುವರಿಸಿದರು. ವೀರಣ್ಣಗೌಡರ ಮನೆ ಹಾಗೂ ತುಮಕೂರು ಬಿ.ಎಚ್.ರಸ್ತೆಯ ಸೈಕಲ್ ಮುದ್ದಣ್ಣ ಕಟ್ಟಡದಲ್ಲಿದ್ದ ವೀರಣ್ಣಗೌಡರ ಕಚೇರಿಯೇ ಅವರ ಆಶ್ರಯತಾಣವಾಗಿತ್ತು.

ಶ್ರೀಗಳ ಎಂಜಿನಿಯರಿಂಗ್ ಪದವಿ:-

ತುಮಕೂರಿನಲ್ಲಿ ಡಿಪ್ಲೊಮಾ ಮುಗಿಸಿ ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಪದವಿಗೆ ಸೇರಿದ ಅವರು, ವಿಜಯನಗರದ ಆದಿಚುಂಚನಗಿರಿ ಮಠದ ವಿದ್ಯಾರ್ಥಿ ನಿಲಯದಲ್ಲಿ ಸೀಟಿಗೆ ಪರದಾಡಿದರು. ಆಗ ಸೀಟು ನಿರಾಕರಿಸಲಾಯಿತು. ವಿದ್ಯಾರ್ಥಿ ನಿಲಯದಲ್ಲಿ ಸೀಟು ಸಿಗದ ನೋವಿನಲ್ಲೇ ತೆರಳಿದ ನಾಗರಾಜ್ ಮುಂದೆ ವೀರಣ್ಣಗೌಡರ ಶಿಫಾರಸಿನ ಮೇಲೆ ಹಾಸ್ಟೆಲ್‌ಗೆ ಪ್ರವೇಶ ಗಿಟ್ಟಿಸಿಕೊಂಡರು.ಈಗ ಮಠದ ಪೀಠಾಧಿಪತಿಯಾಗುವವರೆಗೆ ಬೆಳೆದಿದ್ದು ಇತಿಹಾಸ.

ಎಂಜಿನಿಯರಿಂಗ್ ಬಳಿಕ ಐಐಟಿಯಲ್ಲಿ ಎಂ.ಟೆಕ್ ಪದವಿ ಪಡೆದು ಅಮೆರಿಕದಲ್ಲಿ ಕೈತುಂಬ ಸಂಬಳದ ಉದ್ಯೋಗದ ನಿರೀಕ್ಷೆಯಲ್ಲಿದ್ದರು. ಅಮೆರಿಕಕ್ಕೆ ಹೋಗುವ ಮುನ್ನ ಹಳೆ ಸ್ನೇಹಿತರನ್ನು ಮಾತನಾಡಿಸಿಕೊಂಡು ಬರಲು ವಿಜಯನಗರದ ಮಠದ ಹಾಸ್ಟೆಲ್‌ಗೆ ಬಂದಿದ್ದರು. ಅಲ್ಲಿಯವರೆಗೂ ಬಾಲಗಂಗಾಧರನಾಥ ಸ್ವಾಮೀಜಿ ಜತೆ ಸಣ್ಣ ಸಂಪರ್ಕ ಕೂಡ ಇರಲಿಲ್ಲ. ಮಠದ ಹಾಸ್ಟೆಲ್ ರಸ್ತೆಯಲ್ಲಿ ಹೋಗುತ್ತಿದ್ದ ಹುಡುಗನ್ನು (ನಾಗರಾಜ್) ಕಂಡ ಬಾಲಗಂಗಾಧರನಾಥ ಸ್ವಾಮೀಜಿ, ಆ ಹುಡುಗನನ್ನು ಚುಂಚನಗಿರಿಗೆ ಕರೆ ತರುವಂತೆ ಆದೇಶಿಸಿದ್ದರು. ನಿರ್ಮಲಾನಂದನಾಥರಿಗೆ ಆವರೆಗೂ ಸನ್ಯಾಸದ ಆಸಕ್ತಿಯೇ ಇರಲಿಲ್ಲ.

ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ಪದವಿ ಪಡೆದು, ಏಳನೇ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಕ್ಕಾಗಿ ಜಿಂದಾಲ್ ಸಂಸ್ಥೆ ನೀಡುವ ಸ್ಕಾಲರ್ ಶಿಪ್ ಪಡೆದುಕೊಂಡಿದ್ದರು.ಮುಂದೆ ಮೈಸೂರಿನ ಹಿಂದುಳಿದ ವರ್ಗದ ವಸತಿ ನಿಲಯದಲ್ಲಿದ್ದುಕೊಂಡು ಎಂಜಿನಿಯರಿಂಗ್ ಅಭ್ಯಾಸ ಮಾಡಿದರು. ಪುಣೆಯ ಭಾರತ ಸರ್ಕಾರದ ಸಂಶೋಧನಾ ಕೇಂದ್ರಕ್ಕೆ ವಿಜ್ಞಾನಿಯಾಗಿ ಆಯ್ಕೆಯಾಗಿದ್ದರು. ಆದರೆ, ಅಧ್ಯಾತ್ಮದ ಸೆಳೆತ ಅವರನ್ನು ಶ್ರೀಮಠಕ್ಕೆ ಕರೆದುಕೊಂಡು ಬಂದಿತು.ಶ್ರೀಮಠದ ಸಂಸ್ಕೃತ ವೇದಾಗಮ ಮಹಾವಿದ್ಯಾಲಯದಲ್ಲಿ ಅದ್ವೈತ ವೇದಾಂತ ವಿದ್ವುದುತ್ತಮ ಮತ್ತು ಶೈವಾಗಮದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡರು

ಅಂದು ನಾಗರಾಜ್ ಕಾಣೆಯಾಗಿದ್ದು ಇಲ್ಲಿಯವರೆಗೂ ಯಾರಿಗೂ ಗೊತ್ತಿಲ್ಲ :-

ಸ್ವಾಮೀಜಿ ಬಳಿಗೆ ನಾಗರಾಜ್ ಅವರನ್ನು ಕರೆದುಕೊಂಡು ಹೋಗಬೇಕಾದರೆ ಆಗ ಮಠದ ಮ್ಯಾನೇಜರ್ ಆಗಿದ್ದ ಸಿದ್ದಲಿಂಗೇಗೌಡರು ಪಟ್ಟ ಪಾಡು ಅಷ್ಟಿಷ್ಟಲ್ಲ. ವಿಜಯನಗರದ ಕೊಠಡಿಯಲ್ಲಿ ಅವರನ್ನು ಇರಿಸಲಾಗಿತ್ತು. ಕೊಠಡಿಯಿಂದಲೇ ಕಾಣೆಯಾದ ನಾಗರಾಜ್ ಮಾರನೇ ದಿನ ಚುಂಚನಗಿರಿ ಮಠದಲ್ಲಿ ಪ್ರತ್ಯಕ್ಷವಾದುದ್ದು ಏಕೆ ಎಂದು ಇಲ್ಲಿವರೆಗೂ ಯಾರಿಗೂ ಗೊತ್ತಿಲ್ಲ.

ಬಾಲಗಂಗಾಧರನಾಥ ಸ್ವಾಮೀಜಿ ಹೇಳಿದ್ದು:-

`ಚುಂಚನಗಿರಿ ಮಠದಲ್ಲಿ ಸ್ವಾಮೀಜಿ ಎದುರು ನಾಗರಾಜ್ ಅವರನ್ನು ತಂದು ನಿಲ್ಲಿಸಿದಾಗ ನಾಳೆ ಗುರು ಪೂರ್ಣಿಮೆ, ನಿನಗೆ ದೀಕ್ಷೆ ಕೊಡುತ್ತೇನೆ’ ಎಂದು ಬಾಲಗಂಗಾಧರನಾಥ ಸ್ವಾಮೀಜಿ ಹೇಳಿದರು.

`ಸುಮ್ಮನೆ ತಲೆ ಅಲ್ಲಾಡಿಸಿದ ಅವರಿಗೆ ಮರುದಿನ ಇನ್ನಿತರರೊಂದಿಗೆ ದೀಕ್ಷೆ ನೀಡಿದ್ದು ಈಗಲೂ ಕಣ್ಣ ಮುಂದೆ ಕಟ್ಟಿದಂತಿದೆ’ ಎನ್ನುತ್ತಾರೆ ಸಿದ್ದಲಿಂಗೇಗೌಡ.

ನಾಗರಾಜ್ ಆದ್ರು ನಿರ್ಮಲಾನಂದನಾಥ ಸ್ವಾಮೀಜಿ:-

ಮೊದಲಿಗೆ ಬಿಳಿ ಬಟ್ಟೆ ತೊಟ್ಟು ಸನ್ಯಾಸ ದೀಕ್ಷೆ ಸ್ವೀಕರಿಸಿದ ನಂತರ ನಾಗರಾಜ್, ಹೆಸರನ್ನು ನಿರ್ಮಲಾನಂದನಾಥ ಸ್ವಾಮೀಜಿ ಎಂದು ನಾಮಕರಣ ಮಾಡಲಾಯಿತು.

ಪೂರ್ವಾಶ್ರಮ ತೊರೆದು ಮಠದ ದೀಕ್ಷೆ ತೊಟ್ಟ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಮೊದಲಿಗೆ ರಾಮನಗರ ಬಳಿಯ ಬಾನಂದೂರು (ಬಾಲಗಂಗಾಧರನಾಥ ಸ್ವಾಮೀಜಿ ಹುಟ್ಟೂರು) ಮಠಕ್ಕೆ ಕಳುಹಿಸಿಕೊಡಲಾಯಿತು.

ಕೆಲ ವರ್ಷಗಳ ಸೇವೆ ಬಳಿಕ ನಿರ್ಮಲಾನಂದನಾಥರಿಗೆ ಕಾವಿ ಬಟ್ಟೆ ನೀಡಿ ಚಿಕ್ಕಬಳ್ಳಾಪುರ ಶಾಖಾ ಮಠಕ್ಕೆ ಬಾಲಗಂಗಾಧರನಾಥ ಸ್ವಾಮೀಜಿ ನೇಮಿಸಿದರು. ಚಿಕ್ಕಬಳ್ಳಾಪುರದ ಮಠವನ್ನು ಸಾಕಷ್ಟು ಅಭಿವೃದ್ಧಿಗೊಳಿಸಿದ ಜೊತೆ ಜೊತೆಯಲ್ಲೇ ಬಾಲಗಂಗಾಧರನಾಥ ಸ್ವಾಮೀಜಿಗೆ ಅವರು ಅಚ್ಚುಮೆಚ್ಚಿನ ಶಿಷ್ಯರಾದರು. ಅದೀಗ ಅವರನ್ನು ಅತಿ ದೊಡ್ಡ ಮಠದ ಪೀಠಾಧಿಪತಿಯಾಗಿ ಮಾಡಿದೆ. ಅತ್ಯಂತ ಸರಳ, ಮೃದು ಮಾತಿನಿಂದಾಗಿ ನಿರ್ಮಲಾನಂದನಾಥ ಸ್ವಾಮೀಜಿ ಭಕ್ತರ ಮೆಚ್ಚುಗೆ ಗಳಿಸಿರುವುದು ಕೂಡ ನಿಜ.

ಶ್ರೀಗಳ ದಿನಚರಿ :-

ಮೃದು ಸ್ವಭಾವಿ, ಮೆದು ಮಾತಿನವರಾಗಿದ್ದು, ಅಧ್ಯಾತ್ಮದ ಚಿಂತನೆಯಲ್ಲಿ ತೊಡಗಿಸಿಕೊಂಡಿದ್ದಾರೆ.ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡೇ ಮಠದ ಅಭಿವೃದ್ಧಿ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಧರ್ಮ ಮತ್ತು ವಿಜ್ಞಾನದ ನಡುವೆ ಅಂತರ ಇರಬಾರದು ಎಂಬುದು ಶ್ರೀಗಳ ನಿಲುವಾಗಿದೆ. ಹಾಗಾಗಿ ಭಕ್ತಾದಿಗಳಿಗೆಂದು ಮಠದ ಆವರಣದಲ್ಲಿ ಉಚಿತ ವೈ-ಫೈ ಸೇವೆ ಒದಗಿಸುವ ಮೂಲಕ ಧರ್ಮ ಮತ್ತು ವಿಜ್ಞಾನದ ಸಂಯೋಜನೆ ಮಾಡುವುದರ ಮೂಲಕ “ಉಚಿತ ಅಂತರ್ಜಾಲ ವ್ಯವಸ್ಥೆ” ಮಾಡಿರುವ ಭಾರತದ ಮೊದಲ ಮಠ ಎಂಬ ಖ್ಯಾತಿಗೆ ಆದಿಚುಂಚನಗಿರಿ ಶ್ರೀಕ್ಷೇತ್ರ ಪಾತ್ರವಾಗಲು ಕಾರಣರಾಗಿದ್ದಾರೆ.

ಕೃಪೆ: ಸಂಗ್ರಹ ಮಾಹಿತಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ‘ಒಣ ದ್ರಾಕ್ಷಿ’ಯಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.

  • ಸಿನಿಮಾ

    ಯಶ್ ಚಿತ್ರ KGFಗೆ ಬ್ಯಾನರ್ ಹಾಕಿ ಬೆಂಬಲ ಕೊಟ್ಟ ಡಿ ಬಾಸ್ ಫ್ಯಾನ್ಸ್..ಕಡೆಗೂ ಒಂದಾದ್ರು ಯಶ್ ಮತ್ತು ದರ್ಶನ್ ಫ್ಯಾನ್ಸ್…

    ವಿಶ್ವಾದ್ಯಂತ ಸದ್ದು ಮಾಡಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ಇಂದು ಬಿಡುಗಡೆಯಾಗಿದೆ. ಕೆಜಿಎಫ್ ಚಿತ್ರಕ್ಕಾಗಿ ಅಣ್ತಮ್ಮಾಸ್ ಫ್ಯಾನ್ಸ್ ಒಂದಾಗಿದ್ದಾರೆ. ಚಂದನವನದ ಹೆಮ್ಮೆಯ ಸಿನಿಮಾ ಕೆಜಿಎಫ್ ಚಿತ್ರಕ್ಕೆ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಅಭಿಮಾನಿಗಳು ಯಶ್ ಚಿತ್ರಕ್ಕೆ ಶುಭ ಕೋರಿದ್ದಾರೆ. ನಗರದಾದ್ಯಂತ ಹಲವೆಡೆ ದರ್ಶನ್ ಅಭಿಮಾನಿಗಳು ಕೆಜಿಎಫ್ ಚಿತ್ರದ ಬ್ಯಾನರ್ ಹಾಕಿ ವಿಶೇಷವಾಗಿ ಬೆಂಬಲ ಸೂಚಿಸುತ್ತಿದ್ದಾರೆ. ಕೆಜೆಎಫ್ ಚಿತ್ರ ಸ್ಟಾರ್ ಅಭಿಮಾನಿಗಳ ಬಣವನ್ನು ಒಗ್ಗೂಡಿಸಿದ ಕನ್ನಡದ ಹೆಮ್ಮೆಯ ಚಿತ್ರ ಎಂದು ಹೇಳಲಾಗುತ್ತಿದೆ. ಕನ್ನಡದ ಚಿತ್ರ ವಿಶ್ವಾದ್ಯಂತ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ…

  • ಮನರಂಜನೆ

    ಆಫೀಸ್ ಗೆ ಸ್ಪೈಡರ್ ಮ್ಯಾನ್ ವೇಷದಲ್ಲಿ ಬಂದ ಭೂಪ..!ಆಮೇಲೆ ಏನಾಯ್ತು ಗೊತ್ತಾ?ಈ ವಿಡಿಯೋ ನೋಡಿ

    ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…

  • ಸಿನಿಮಾ

    ನಮ್ಮ ಸರ್ಕಾರ ಇದೆ ಎಂದು ಧಮಕಿ ಹಾಕಿದ ಶಾಸಕನಿಗೆ ತಿರುಗೇಟು ನೀಡಿದ ದರ್ಶನ್…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…

  • ಸುದ್ದಿ

    ಚಂಧನ್ ಶೆಟ್ಟಿ ಮತ್ತು ನಿವೇದಿತಾಗೆ ಕುಟುಂಬದವರಿಂದ ಭರ್ಜರಿ ಉಡುಗೊರೆ. ಕಾರಿನ ಬೆಲೆ ಎಷ್ಟು ಗೊತ್ತಾ.

    ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…