ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.
ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ಊರು ಗುಬ್ಬಿ ತಾಲ್ಲೂಕು ಮಾವಿನಹಳ್ಳಿ, ಸಮೀಪದ ಚೀರನಹಳ್ಳಿಯಲ್ಲಿ 20 ಜುಲೈ 1969ರಲ್ಲಿ ಜನಿಸಿದರು. ಅವರ ಪೂರ್ವಾಶ್ರಮದ ಹೆಸರು ಸಿ.ಎನ್.ನಾಗರಾಜ್. ತಂದೆ ನರಸೇಗೌಡ, ಈಗ ಅವರಿಲ್ಲ. ತಾಯಿ ನಂಜಮ್ಮ ಇದ್ದಾರೆ. ಆರು ಮಕ್ಕಳಲ್ಲಿ ನಾಗರಾಜ್ ನಾಲ್ಕನೇಯವರು. ಕುಟುಂಬದಲ್ಲಿ ಕಿತ್ತು ತಿನ್ನುವ ಬಡತನ, ಕೂಲಿ ಮಾಡಿ ಜೀವನ ಸಾಗಿಸುವ ಪರಿಸ್ಥಿತಿ. ಈಗಲೂ ಕುಟುಂಬದವರು ಕೂಲಿ ಮಾಡಿಯೇ ಜೀವನದ ನೊಗ ಹೊತ್ತಿದ್ದಾರೆ. ಸನ್ಯಾಸ ಸ್ವೀಕರಿಸಿದ ನಂತರ ಒಮ್ಮೆಯೂ ಊರಿನತ್ತ ಬಂದಿಲ್ಲ. ತಂದೆ ತೀರಿಕೊಂಡಾಗಲೂ ಊರಿನತ್ತ ಮುಖ ಮಾಡಿಲ್ಲ.
ಕೂಲಿ ಮಾಡುತ್ತಲೇ ಪ್ರಾಥಮಿಕ ಶಿಕ್ಷಣ- ಮಾವಿನಹಳ್ಳಿ ಸರ್ಕಾರಿ ಶಾಲೆಯಲ್ಲಿ, ಪ್ರೌ ಶಿಕ್ಷಣವನ್ನು ಮಾವಿನಹಳ್ಳಿ ಪ್ರಗತಿಪರ ವಿದ್ಯಾವರ್ಧಕ ಶಾಲೆಯಲ್ಲಿ ಪೂರ್ಣಗೊಳಿಸಿದರು.`ಪ್ರೌಢಶಾಲೆ ತರಗತಿಯಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಪಡೆದಿರುವ ಅಂಕಗಳ ದಾಖಲೆಯನ್ನು ಇಲ್ಲಿಯವರೆಗೂ ಈ ಶಾಲೆಯಲ್ಲಿ ಯಾರೂ ಮುರಿದಿಲ್ಲ’ ಎನ್ನುತ್ತದೆ ಶಾಲೆಯ ಆಡಳಿತ ಮಂಡಳಿ.
ಬಡತನದ ಕಾರಣ ಡಿಪ್ಲೊಮಾ ಪಾಲಿಟೆಕ್ನಿಕ್ ಅಧ್ಯಯನವನ್ನು ಒಂದು ವರ್ಷ ಮೊಟಕುಗೊಳಿಸಿದ್ದರು. ಆಗ ಅವರ ತಾತ, ಗುಬ್ಬಿ ಮಾಜಿ ಶಾಸಕ ಎನ್.ವೀರಣ್ಣಗೌಡರ ಬಳಿ ಕರೆದುಕೊಂಡು ಬಂದರು. ಅವರ ನೆರವಿನಿಂದ ಶಿಕ್ಷಣ ಮುಂದುವರಿಸಿದರು. ವೀರಣ್ಣಗೌಡರ ಮನೆ ಹಾಗೂ ತುಮಕೂರು ಬಿ.ಎಚ್.ರಸ್ತೆಯ ಸೈಕಲ್ ಮುದ್ದಣ್ಣ ಕಟ್ಟಡದಲ್ಲಿದ್ದ ವೀರಣ್ಣಗೌಡರ ಕಚೇರಿಯೇ ಅವರ ಆಶ್ರಯತಾಣವಾಗಿತ್ತು.
ತುಮಕೂರಿನಲ್ಲಿ ಡಿಪ್ಲೊಮಾ ಮುಗಿಸಿ ಬೆಂಗಳೂರಿನಲ್ಲಿ ಎಂಜಿನಿಯರಿಂಗ್ ಪದವಿಗೆ ಸೇರಿದ ಅವರು, ವಿಜಯನಗರದ ಆದಿಚುಂಚನಗಿರಿ ಮಠದ ವಿದ್ಯಾರ್ಥಿ ನಿಲಯದಲ್ಲಿ ಸೀಟಿಗೆ ಪರದಾಡಿದರು. ಆಗ ಸೀಟು ನಿರಾಕರಿಸಲಾಯಿತು. ವಿದ್ಯಾರ್ಥಿ ನಿಲಯದಲ್ಲಿ ಸೀಟು ಸಿಗದ ನೋವಿನಲ್ಲೇ ತೆರಳಿದ ನಾಗರಾಜ್ ಮುಂದೆ ವೀರಣ್ಣಗೌಡರ ಶಿಫಾರಸಿನ ಮೇಲೆ ಹಾಸ್ಟೆಲ್ಗೆ ಪ್ರವೇಶ ಗಿಟ್ಟಿಸಿಕೊಂಡರು.ಈಗ ಮಠದ ಪೀಠಾಧಿಪತಿಯಾಗುವವರೆಗೆ ಬೆಳೆದಿದ್ದು ಇತಿಹಾಸ.
ಎಂಜಿನಿಯರಿಂಗ್ ಬಳಿಕ ಐಐಟಿಯಲ್ಲಿ ಎಂ.ಟೆಕ್ ಪದವಿ ಪಡೆದು ಅಮೆರಿಕದಲ್ಲಿ ಕೈತುಂಬ ಸಂಬಳದ ಉದ್ಯೋಗದ ನಿರೀಕ್ಷೆಯಲ್ಲಿದ್ದರು. ಅಮೆರಿಕಕ್ಕೆ ಹೋಗುವ ಮುನ್ನ ಹಳೆ ಸ್ನೇಹಿತರನ್ನು ಮಾತನಾಡಿಸಿಕೊಂಡು ಬರಲು ವಿಜಯನಗರದ ಮಠದ ಹಾಸ್ಟೆಲ್ಗೆ ಬಂದಿದ್ದರು. ಅಲ್ಲಿಯವರೆಗೂ ಬಾಲಗಂಗಾಧರನಾಥ ಸ್ವಾಮೀಜಿ ಜತೆ ಸಣ್ಣ ಸಂಪರ್ಕ ಕೂಡ ಇರಲಿಲ್ಲ. ಮಠದ ಹಾಸ್ಟೆಲ್ ರಸ್ತೆಯಲ್ಲಿ ಹೋಗುತ್ತಿದ್ದ ಹುಡುಗನ್ನು (ನಾಗರಾಜ್) ಕಂಡ ಬಾಲಗಂಗಾಧರನಾಥ ಸ್ವಾಮೀಜಿ, ಆ ಹುಡುಗನನ್ನು ಚುಂಚನಗಿರಿಗೆ ಕರೆ ತರುವಂತೆ ಆದೇಶಿಸಿದ್ದರು. ನಿರ್ಮಲಾನಂದನಾಥರಿಗೆ ಆವರೆಗೂ ಸನ್ಯಾಸದ ಆಸಕ್ತಿಯೇ ಇರಲಿಲ್ಲ.
ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ಪದವಿ ಪಡೆದು, ಏಳನೇ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಕ್ಕಾಗಿ ಜಿಂದಾಲ್ ಸಂಸ್ಥೆ ನೀಡುವ ಸ್ಕಾಲರ್ ಶಿಪ್ ಪಡೆದುಕೊಂಡಿದ್ದರು.ಮುಂದೆ ಮೈಸೂರಿನ ಹಿಂದುಳಿದ ವರ್ಗದ ವಸತಿ ನಿಲಯದಲ್ಲಿದ್ದುಕೊಂಡು ಎಂಜಿನಿಯರಿಂಗ್ ಅಭ್ಯಾಸ ಮಾಡಿದರು. ಪುಣೆಯ ಭಾರತ ಸರ್ಕಾರದ ಸಂಶೋಧನಾ ಕೇಂದ್ರಕ್ಕೆ ವಿಜ್ಞಾನಿಯಾಗಿ ಆಯ್ಕೆಯಾಗಿದ್ದರು. ಆದರೆ, ಅಧ್ಯಾತ್ಮದ ಸೆಳೆತ ಅವರನ್ನು ಶ್ರೀಮಠಕ್ಕೆ ಕರೆದುಕೊಂಡು ಬಂದಿತು.ಶ್ರೀಮಠದ ಸಂಸ್ಕೃತ ವೇದಾಗಮ ಮಹಾವಿದ್ಯಾಲಯದಲ್ಲಿ ಅದ್ವೈತ ವೇದಾಂತ ವಿದ್ವುದುತ್ತಮ ಮತ್ತು ಶೈವಾಗಮದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡರು
ಸ್ವಾಮೀಜಿ ಬಳಿಗೆ ನಾಗರಾಜ್ ಅವರನ್ನು ಕರೆದುಕೊಂಡು ಹೋಗಬೇಕಾದರೆ ಆಗ ಮಠದ ಮ್ಯಾನೇಜರ್ ಆಗಿದ್ದ ಸಿದ್ದಲಿಂಗೇಗೌಡರು ಪಟ್ಟ ಪಾಡು ಅಷ್ಟಿಷ್ಟಲ್ಲ. ವಿಜಯನಗರದ ಕೊಠಡಿಯಲ್ಲಿ ಅವರನ್ನು ಇರಿಸಲಾಗಿತ್ತು. ಕೊಠಡಿಯಿಂದಲೇ ಕಾಣೆಯಾದ ನಾಗರಾಜ್ ಮಾರನೇ ದಿನ ಚುಂಚನಗಿರಿ ಮಠದಲ್ಲಿ ಪ್ರತ್ಯಕ್ಷವಾದುದ್ದು ಏಕೆ ಎಂದು ಇಲ್ಲಿವರೆಗೂ ಯಾರಿಗೂ ಗೊತ್ತಿಲ್ಲ.
`ಚುಂಚನಗಿರಿ ಮಠದಲ್ಲಿ ಸ್ವಾಮೀಜಿ ಎದುರು ನಾಗರಾಜ್ ಅವರನ್ನು ತಂದು ನಿಲ್ಲಿಸಿದಾಗ ನಾಳೆ ಗುರು ಪೂರ್ಣಿಮೆ, ನಿನಗೆ ದೀಕ್ಷೆ ಕೊಡುತ್ತೇನೆ’ ಎಂದು ಬಾಲಗಂಗಾಧರನಾಥ ಸ್ವಾಮೀಜಿ ಹೇಳಿದರು.
`ಸುಮ್ಮನೆ ತಲೆ ಅಲ್ಲಾಡಿಸಿದ ಅವರಿಗೆ ಮರುದಿನ ಇನ್ನಿತರರೊಂದಿಗೆ ದೀಕ್ಷೆ ನೀಡಿದ್ದು ಈಗಲೂ ಕಣ್ಣ ಮುಂದೆ ಕಟ್ಟಿದಂತಿದೆ’ ಎನ್ನುತ್ತಾರೆ ಸಿದ್ದಲಿಂಗೇಗೌಡ.
ಮೊದಲಿಗೆ ಬಿಳಿ ಬಟ್ಟೆ ತೊಟ್ಟು ಸನ್ಯಾಸ ದೀಕ್ಷೆ ಸ್ವೀಕರಿಸಿದ ನಂತರ ನಾಗರಾಜ್, ಹೆಸರನ್ನು ನಿರ್ಮಲಾನಂದನಾಥ ಸ್ವಾಮೀಜಿ ಎಂದು ನಾಮಕರಣ ಮಾಡಲಾಯಿತು.
ಪೂರ್ವಾಶ್ರಮ ತೊರೆದು ಮಠದ ದೀಕ್ಷೆ ತೊಟ್ಟ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಮೊದಲಿಗೆ ರಾಮನಗರ ಬಳಿಯ ಬಾನಂದೂರು (ಬಾಲಗಂಗಾಧರನಾಥ ಸ್ವಾಮೀಜಿ ಹುಟ್ಟೂರು) ಮಠಕ್ಕೆ ಕಳುಹಿಸಿಕೊಡಲಾಯಿತು.
ಕೆಲ ವರ್ಷಗಳ ಸೇವೆ ಬಳಿಕ ನಿರ್ಮಲಾನಂದನಾಥರಿಗೆ ಕಾವಿ ಬಟ್ಟೆ ನೀಡಿ ಚಿಕ್ಕಬಳ್ಳಾಪುರ ಶಾಖಾ ಮಠಕ್ಕೆ ಬಾಲಗಂಗಾಧರನಾಥ ಸ್ವಾಮೀಜಿ ನೇಮಿಸಿದರು. ಚಿಕ್ಕಬಳ್ಳಾಪುರದ ಮಠವನ್ನು ಸಾಕಷ್ಟು ಅಭಿವೃದ್ಧಿಗೊಳಿಸಿದ ಜೊತೆ ಜೊತೆಯಲ್ಲೇ ಬಾಲಗಂಗಾಧರನಾಥ ಸ್ವಾಮೀಜಿಗೆ ಅವರು ಅಚ್ಚುಮೆಚ್ಚಿನ ಶಿಷ್ಯರಾದರು. ಅದೀಗ ಅವರನ್ನು ಅತಿ ದೊಡ್ಡ ಮಠದ ಪೀಠಾಧಿಪತಿಯಾಗಿ ಮಾಡಿದೆ. ಅತ್ಯಂತ ಸರಳ, ಮೃದು ಮಾತಿನಿಂದಾಗಿ ನಿರ್ಮಲಾನಂದನಾಥ ಸ್ವಾಮೀಜಿ ಭಕ್ತರ ಮೆಚ್ಚುಗೆ ಗಳಿಸಿರುವುದು ಕೂಡ ನಿಜ.
ಮೃದು ಸ್ವಭಾವಿ, ಮೆದು ಮಾತಿನವರಾಗಿದ್ದು, ಅಧ್ಯಾತ್ಮದ ಚಿಂತನೆಯಲ್ಲಿ ತೊಡಗಿಸಿಕೊಂಡಿದ್ದಾರೆ.ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡೇ ಮಠದ ಅಭಿವೃದ್ಧಿ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಧರ್ಮ ಮತ್ತು ವಿಜ್ಞಾನದ ನಡುವೆ ಅಂತರ ಇರಬಾರದು ಎಂಬುದು ಶ್ರೀಗಳ ನಿಲುವಾಗಿದೆ. ಹಾಗಾಗಿ ಭಕ್ತಾದಿಗಳಿಗೆಂದು ಮಠದ ಆವರಣದಲ್ಲಿ ಉಚಿತ ವೈ-ಫೈ ಸೇವೆ ಒದಗಿಸುವ ಮೂಲಕ ಧರ್ಮ ಮತ್ತು ವಿಜ್ಞಾನದ ಸಂಯೋಜನೆ ಮಾಡುವುದರ ಮೂಲಕ “ಉಚಿತ ಅಂತರ್ಜಾಲ ವ್ಯವಸ್ಥೆ” ಮಾಡಿರುವ ಭಾರತದ ಮೊದಲ ಮಠ ಎಂಬ ಖ್ಯಾತಿಗೆ ಆದಿಚುಂಚನಗಿರಿ ಶ್ರೀಕ್ಷೇತ್ರ ಪಾತ್ರವಾಗಲು ಕಾರಣರಾಗಿದ್ದಾರೆ.
ಕೃಪೆ: ಸಂಗ್ರಹ ಮಾಹಿತಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.
ಬಿಹಾರದ ಬಾಗಲ್ಪುರದ ಧ್ರುವಗಂಜ್ ಗ್ರಾಮದ 19 ವರ್ಷದ ಯುವಕ ಮೂರು ಬಾರಿ ನಾಸಾ ಆಫರ್ ತಿರಸ್ಕರಿಸಿದ್ದಾರೆ. ಅಲ್ಲದೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಆಹ್ವಾನಿಸಿದರೂ ಭಾರತದಲ್ಲೇ ರಿಸರ್ಚ್ ಮಾಡುತ್ತೇನೆ ಎಂದು ಹೇಳುವ ಮೂಲಕ ಯುವಕ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾರೆ. 19 ವರ್ಷದ ಯುವಕ ಗೋಪಾಲ್ ಪ್ರತಿ ವರ್ಷ ದೇಶದ 100 ಮಕ್ಕಳಿಗೆ ಸಹಾಯ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. 2019ರಲ್ಲಿ ಗೋಪಾಲ್ ಈ ಕೆಲಸ ಶುರು ಮಾಡಿದ್ದು, ಈಗ 8 ಮಕ್ಕಳ ಆವಿಷ್ಕಾರಕ್ಕಾಗಿ ತಾತ್ಕಾಲಿಕ ಪೇಟೆಂಟ್ ಕೂಡ ಪಡೆದಿದ್ದಾರೆ….
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಚಕ್ರವರ್ತಿ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಚಿತ್ರಮಂದಿರಕ್ಕೆ ಅಪ್ಪಳಿಸಲು ತಯಾರಾಗಿದೆ. ಈಗಾಗಲೇ ರಿಲೀಸ್ ಡೇಟ್ ಅನೌನ್ಸ್ ಮಾಡಿರುವ ‘ಚಕ್ರವರ್ತಿ’ ಅಭಿಮಾನಿಗಳಲ್ಲಿ ಈಗೊಂದು ಗೊಂದಲ ಕಾಡುತ್ತಿದೆ.[‘ಬಾಹುಬಲಿ’ ಮೀರಿಸಿದ ದರ್ಶನ್ ‘ಚಕ್ರವರ್ತಿ’] ಗಾಂಧಿನಗರದಲ್ಲಿ ‘ಚಕ್ರವರ್ತಿ’ ಚಿತ್ರಕ್ಕೆ ಯಾವುದು ಪ್ರಮುಖ ಚಿತ್ರಮಂದಿರವೆಂಬುದು ಈಗ ಪ್ರಶ್ನೆಯಾಗಿದೆ. ಸದ್ಯ, ದರ್ಶನ್ ಸಿನಿಮಾಗಳ ನೆಚ್ಚಿನ ಚಿತ್ರಮಂದಿರಗಳಲ್ಲಿ ಸುದೀಪ್ ಅಭಿನಯದ ‘ಹೆಬ್ಬುಲಿ’ ಮತ್ತು ಪುನೀತ್ ರಾಜ್ ಕುಮಾರ್ ಅಭಿನಯದ ‘ರಾಜಕುಮಾರ’ ಪ್ರದರ್ಶನವಾಗುತ್ತಿದೆ. ಹೀಗಿರುವಾಗ ‘ಚಕ್ರವರ್ತಿ’ಯ ಎಂಟ್ರಿ ಎಲ್ಲಿ ಎಂಬುದು ಕುತೂಹಲ…
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…
ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…
ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…